Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಒಂದು ಕಡೆ ರಾಜ್ಯದ ಜನರು ಸಿಲಿಂಡರ್ ಸಿಗದೆ ಪರದಾಡುತ್ತಿದ್ದರೆ, ಮತ್ತೊಂದು ಕಡೆ ದಿನದಿಂದ ದಿನಕ್ಕೆ ಏರುತ್ತಿರುವ ತರಕಾರಿ ಬೆಲೆ ಜನರಿಗೆ ಸಂಕಷ್ಟ ಇನ್ನಷ್ಟು ಹೆಚ್ಚು ಮಾಡಿದೆ. ಕಳೆದ ಹದಿನೈದು ದಿನಕ್ಕೆ ಹೋಲಿಸಿದರೆ ಕೆಲವು ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಳವಾಗಿದೆ. ಬಿಸಿಲಿನ ತಾಪಕ್ಕೆ ತರಕಾರಿಗಳ ಹೂವು ಉದುರುತ್ತಿದ್ದು, ಇತ್ತೀಚೆಗೆ ಕೆಲವೆಡೆ ಸುರಿದ ಭಾರೀಮಳೆಯಿಂದಲೂ ಇಳುವರಿ ಕಡಿಮೆ ಆಗಿರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ವಿವಾಹ, ಊರ ಹಬ್ಬ, ಜಾತ್ರೆ, ರಥೋತ್ಸವಗಳ ಹಿನ್ನೆಲೆಯಲ್ಲಿ ತರಕಾರಿಗೆ ಬೇಡಿಕೆ ಹೆಚ್ಚಾಗಿದ್ದು ಪೂರೈಕೆಯ ಪ್ರಮಾಣ ಕಡಿಮೆ ಇರುವುದೂ ಸಹ ದರ ಹೆಚ್ಚಳಕ್ಕೆ ಕಾರಣವಾಗಿದೆ. 10 ದಿನದ ಹಿಂದೆ ಕೆಜಿ ಬೀನ್ಸ್ಗೆ 80 ರುಪಾಯಿ ಇದ್ದದ್ದು ಈಗ 200 ರು ತಲುಪಿದೆ. ಬೀನ್ಸ್ಗೆ ಡಿಮ್ಯಾಂಡ್ ಹೆಚ್ಚಾಗಿರುವುದರಿಂದ ಬೆಲೆ ಅಧಿಕವಾಗಿದೆ. ವಾರದ ಹಿಂದೆ ಕೆಜಿ ಕ್ಯಾರೆಟ್ಗೆ 30 ರು. ಇದ್ದದ್ದು ಈಗ 60 ರು. ಆಗಿದೆ. 120 ರು. ಇದ್ದ ಬಟಾಣಿ 360 ರು. ಆಗಿದೆ. 120 ರು.…
ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲದ ನಂತರ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ದ್ರಾವಿಡ ಪಕ್ಷಗಳ ಅಧಿಪತ್ಯವಿದ್ದ ರಾಜ್ಯದಲ್ಲಿ ಈಗ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ನಾಳೆ ಬೆಳಿಗ್ಗೆ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಬೆಳಿಗ್ಗೆ 10ಕ್ಕೆ ಪದಗ್ರಹಣ: ಮೇ 13ಕ್ಕೆ ವಿಶ್ವಾಸಮತ ರಾಜ್ಯಪಾಲರಿಂದ ಸರ್ಕಾರ ರಚನೆಯ ಅಧಿಕೃತ ಆಹ್ವಾನ ಪಡೆದಿರುವ ವಿಜಯ್ ಅವರು, ಮೇ 10ರಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರದ ಮೊದಲ ಸವಾಲಾಗಿ, ಮೇ 13ರಂದು ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆ ನಡೆಸಲಿದ್ದಾರೆ. https://twitter.com/ANI/status/2053139539175301389 VCK ಬೆಂಬಲದೊಂದಿಗೆ ‘ಮ್ಯಾಜಿಕ್ ನಂಬರ್’ ತಲುಪಿದ TVK ಚುನಾವಣಾ ಫಲಿತಾಂಶದ ನಂತರ ಉಂಟಾಗಿದ್ದ ಅತಂತ್ರ ಸ್ಥಿತಿಗೆ ಈಗ ಪೂರ್ಣವಿರಾಮ ಬಿದ್ದಿದೆ. ವಿಡುದಲೈ ಚಿರೂತೈಗಲ್ ಕಚ್ಚಿ (VCK) ಅಧ್ಯಕ್ಷ ತೊಲ್ ತಿರುಮಾವಳವನ್ ಅವರು…
ಚಿಕ್ಕಬಳ್ಳಾಪುರ: ಜಿಲ್ಲೆಯ ಖಾಸಗಿ ಕಾಲೇಜೊಂದರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಅಧಿಕಾರಿಗಳ ಮೇಲೆ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಗೆ ಸೇರಿದ ಎಎಸ್ಐ ಗಂಗರಾಜು ಹಾಗೂ ಓರ್ವ ಪೊಲೀಸ್ ಕಾನ್ಸ್ಟೇಬಲ್ ಈ ದಾಳಿಗೆ ಒಳಗಾದ ದುರ್ದೈವಿಗಳಾಗಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ವಿಡಿಯೋ ಹಂಚಿಕೊಂಡಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್ಐ ಗಂಗರಾಜು ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪುಂಡ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ. ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ಸಿನಿಮಾ ನಟ ನಟಿಯರು ಆಗಮಿಸಿದ್ದರು. ಭದ್ರತೆಗೆ ಪೊಲೀಸರು ಕಾಲೇಜಿನ ಗೇಟ್ ಬಳಿ ತೆರಳಿದ್ದರು. ಈ ವೇಳೆ ಹತ್ತಾರು ಮಂದಿ ವಿದ್ಯಾರ್ಥಿಗಳು ಸೈಲೆನ್ಸರ್ ಅಲ್ಟರ್ ಮಾಡಿಕೊಂಡಿದ್ದ ಬೈಕ್ಗಳಲ್ಲಿ ಕರ್ಕಶ ಶಬ್ಧ ಮಾಡಿಕೊಂಡು ಓಡಾಡಿದ್ದರು. ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ಹೇಳಿದ್ದರಂತೆ. ಈ ವೇಳೆ ಪೊಲೀಸರ…
ಚಿತ್ರದುರ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸಲು ಆಯೋಜಿಸಿದ್ದ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅದ್ದೂರಿ ಚಾಲನೆ ನೀಡಿದರು.ಸಮಾರಂಭದಲ್ಲಿ ಯಡಿಯೂರಪ್ಪ ಕುರಿತು ಎರಡು ಪುಸ್ತಕ ಬಿಡುಗಡೆ ಮಾಡಲಾಯಿತು. ಸನ್ಮಾನಕ್ಕೆ ಚೇರ್ ಬೇಡ ಅಂತ ಬಿಎಸ್ವೈ ಹೇಳಿದ್ರು. ಕೊನೆಗೆ ಯಡಿಯೂರಪ್ಪ ಕೈ ಹಿಡಿದು ಬಂದು ಅಮಿತ್ ಶಾ ಚೇರ್ ಮೇಲೆ ಕೂರಿಸಿದರು. ಬಿಎಸ್ವೈಗೆ ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಕೇಂದ್ರ ಗೃಹ ಸಚಿವ ಸನ್ಮಾನಿಸಿದರು. ಕೋಲ್ಕತ್ತಾದಿಂದ ನೇರವಾಗಿ ಚಿತ್ರದುರ್ಗಕ್ಕೆ ಅಮಿತ್ ಶಾ ಆಗಮಿಸಿದರು. ವೇದಿಕೆಗೆ ಬರುತ್ತಿದ್ದಂತೆ ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರನ್ನು ಅಮಿತ್ ಶಾ ಅಪ್ಪಿಕೊಂಡು ಅಭಿನಂದಿಸಿದರು. ಈ ವೇಳೆ ಕೈ ಮೇಲೆತ್ತಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಬಳಿಕ ದೀಪ ಬೆಳಗಿಸಿ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ಕೊಟ್ಟರು. ಈ ವೇಳೆ ಸ್ವಾಮೀಜಿಗಳು ಸಾಥ್ ನೀಡಿದರು. ನಂತರ ಬಿಎಸ್ವೈ…
ಬೆಂಗಳೂರು : ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರ ತಿಂಗಳಲ್ಲಿ ಬಗೆಹರಿಯುತ್ತದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಪುಟ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ತಿಂಗಳಲ್ಲಿ ಬಗೆಹರಿಯುತ್ತದೆ. ಮುಂದುವರಿಯುತ್ತಾರಾ?. ಬದಲಾಗುತ್ತಾರಾ ಅವರೇ ತಿಳಿಸುತ್ತಾರೆ ಎಂದು ಸ್ಪಷ್ಟಪಡಿಸಿದರು. ನಿನ್ನೆ ನಡೆದ ಎಸ್ಐಆರ್ ಸಂಬಂಧ ಸಿಎಂ ಸಭೆ ವಿಚಾರವಾಗಿ ಮಾತನಾಡಿ, ಇಡೀ ದೇಶದಲ್ಲಿ ಗೊಂದಲ ಇದೆ. ಸಂಘ ಸಂಸ್ಥೆಗಳ ಜೊತೆ ನಿನ್ನೆ ಸಭೆ ಆಗಿದೆ. ದುರುಪಯೋಗ, ತಡೆಗಟ್ಟುವಿಕೆ ಬಗ್ಗೆ ಚರ್ಚೆ ಆಯ್ತು. ಮತಗಳನ್ನು ತೆಗೆಯುವಂತದ್ದು ಇಡೀ ದೇಶದಲ್ಲಿ ಸಂಶಯಾಸ್ಪದ ಮೂಡಿಸುತ್ತದೆ. ಮತಪಟ್ಟಿ ಪರಿಷ್ಕರಣೆ ಆಗಲಿ, ಬೇಡ ಅನ್ನುವುದಿಲ್ಲ. ಬೇಕು ಅನ್ನೋರನ್ನು ಉಳಿಸುವುದು, ಬೇಡ ಅನ್ನೋರನ್ನು ತೆಗೆಯುವುದು ಆಗ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಆಗಲಿ. ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು. ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸರ್ಕಸ್ ವಿಚಾರವಾಗಿ ಮಾತನಾಡಿ, ಸರ್ಕಾರ ರಚನೆಗೆ ಅವಕಾಶ ಕೊಡಬೇಕು. ನಂತರ ಬಹುಮತ ಸಾಬೀತು ಪಡಿಸಬಹುದು. ರಾಜ್ಯಪಾಲರು ಅನುಮತಿ ಕೊಟ್ಟರೆ…
ಮೈಸೂರು : ಮೈಸೂರಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹಣದಾಸೆಗೆ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಹಾಕಿರುವ ಘಟನೆ ಮೈಸೂರಿನ ಕೆ.ಆರ್. ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಕೊಲೆಯಾದ ವೃದ್ಧೆ. ಅದೇ ಗ್ರಾಮದ ವೀರಭದ್ರ ಕೊಲೆ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ಕೊಲೆಯಾದ ವೃದ್ಧೆಗೆ ಮೂವರು ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದು, ಮೂವರು ಕೂಡ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ವೃದ್ಧೆ ಗೌರಮ್ಮಳಿಗೆ ವೀರಭದ್ರ ತೀರ ಪರಿಚಿತನಾಗಿದ್ದು, ಬಹಳಷ್ಟು ವಿಶ್ವಾಸ ಗಳಿಸಿದ್ದ. ಆದ್ದರಿಂದ ಗೌರಮ್ಮ ಅವರ ಬ್ಯಾಂಕ್ ಖಾತೆಯಲ್ಲಿನ ಹಣ ಡ್ರಾ ಮಾಡುವುದು, ಇತರೆ ಕೆಲಸವನ್ನು ಮಾಡಿಕೊಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 15 ದಿನಗಳ ಹಿಂದೆ ಗೌರಮ್ಮ ವೀರಭದ್ರನ ಜೊತೆ ಬ್ಯಾಂಕ್ಗೆ ಹೋಗಿ 75 ಸಾವಿರ ಹಣ ಡ್ರಾ ಮಾಡಿಕೊಂಡಿದ್ದರು. ಬಳಿಕ ತುರ್ತಾಗಿ ಹಣಬೇಕು ಕೊಡಿ ಎಂದು ಗೌರಮ್ಮರ ಬಳಿ ಇದ್ದ 75 ಸಾವಿರ ಹಣವನ್ನು ಆರೋಪಿ…
ತಮಿಳುನಾಡು : ಕಳೆದ ಐದು ದಿನಗಳಿಂದ ತಮಿಳುನಾಡು ರಾಜಕೀಯದಲ್ಲಿ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದ್ದು, ಇದೀಗ ಇಂದು ಅದಕ್ಕೆ ತೆರೆ ಬಿದ್ದಿದೆ. ಕೊನೆಗೂ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ವಿಸಿಕೆ ಬೆಂಬಲ ಸೂಚಿಸಿದ್ದು ತಮಿಳುನಾಡಲ್ಲಿ ಇನ್ಮುಂದೆ ದಳಪತಿ ವಿಜಯ್ ಸರ್ಕಾರ ಆಡಳಿತ ನಡೆಸಲಿದೆ. ಕಳೆದ 5 ದಿನಗಳಲ್ಲಿ ತಮಿಳುನಾಡಲ್ಲಿ ಟಿವಿಕೆ ಸರ್ಕಾರ ರಚನೆಗೆ ವಿಜಯ್ ಬಹಳಷ್ಟು ಕಸರತ್ತು ನಡೆಸಿದ್ದರು. ಮೂರು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಆದರೂ ಕೂಡ ವಿಜಯ್ ಗೆ ಮ್ಯಾಜಿಕ್ ನಂಬರ್ ತಲುಪಲು ಸಾಧ್ಯವಾಗಿರಲಿಲ್ಲ. ನಿನ್ನೆ ತಾನೇ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್ ಇಂದು ಉಲ್ಟಾ ಹೊಡೆದಿತ್ತು. ಆದರೆ ಇದೀಗ ಟೀವಿಕೆ ಪಕ್ಷಕ್ಕೆ ವಿಸಿಕೆ ಬೆಂಬಲ ಘೋಷಣೆ ಮಾಡಿದ್ದು, ಅಂತೂ ಇಂತೂ ವಿಜಯ್ 118 ಸ್ಥಾನ ತಲುಪುವಲ್ಲಿ ಸಕ್ಸಸ್ ಆಗಿದ್ದು, ಇಂದು ಮತ್ತೆ ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿ ಮಾಹಿತಿ ನೀಡಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಕಸರತ್ತು: ಚುನಾವಣಾ ಫಲಿತಾಂಶದ ನಂತರ ಸರ್ಕಾರ ರಚಿಸಲು ಅಗತ್ಯವಿದ್ದ ಮ್ಯಾಜಿಕ್…
ಬೆಂಗಳೂರು : ಬೆಂಗಳೂರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ರೀಲ್ಸ್ ಮಾಡುವ ಮಹಿಳೆಯ ಜೊತೆ ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವಿನ್ ರಿಲೇಷನ್ ಶಿಪ್ನಲ್ಲಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ರಾಜಗೋಪಾಲನಗರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್ಶಿಪ್ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ. ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
ಚನ್ನೈ : ತಮಿಳುನಾಡಿನಲ್ಲಿ ಟಿಬಿಕೆ ಪಕ್ಷ ಸರ್ಕಾರ ರಚನೆ ಮಾಡಲು ತೀವ್ರ ಕಸರತ್ತು ನಡೆಸುತ್ತಿದ್ದು ನಿನ್ನೆ ಟಿವಿಕೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್ ಪಕ್ಷಗಳು ಇಂದು ಏಕಾಏಕಿ ಉಲ್ಟಾ ಪಡೆದಿದೆ ಪಕ್ಷಗಳ ಡಿಮ್ಯಾಂಡ್ಗಳನ್ನು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ಒಪ್ಪಿಕೊಂಡಿದ್ದು ಬಹುತೇಕ ತಮಿಳುನಾಡಿನಲ್ಲಿ ಸರ್ಕಾರ ರಚನೆ ಫಿಕ್ಸ್ ಎಂದು ಹೇಳಲಾಗುತ್ತಿದೆ. ಇದರ ಮಧ್ಯ ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ತಿರುಗು ಸಿಕ್ಕಿದ್ದು ಅಣ್ಣ ಡಿಎಂಕೆ ಮತ್ತು ಡಿಎಂಕೆ ನಡುವೆ ಮಾತುಕತೆ ಮುಂದುವರೆದಿದೆ. ವಿಸಿಕೆ ಮುಖ್ಯಸ್ಥನಿಗೆ ಸಿಎಂ ಹುದ್ದೆ ಆಫರ್ ನೀಡಲು AIADMK ರಣತಂತ್ರ ರೂಪಿಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಬರುತ್ತಿದೆ. ಹಾಗಾಗಿ ಇದೀಗ ತಮಿಳುನಾಡಿನಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಟಿವಿಕೆ ಸರ್ಕಾರ ರಚನೆಗೆ ಮುಸ್ಲಿಂ ಲೀಗ್ ಅಡ್ಡಗಾಲು? ಪಕ್ಷ ಸ್ಥಾಪಿಸಿದ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಗೆದ್ದು ದಾಖಲೆ ಬರೆದಿರುವ ವಿಜಯ್ ಅವರಿಗೆ ಸರ್ಕಾರ ರಚಿಸಲು ಇನ್ನು ಕೆಲವೇ ಶಾಸಕರ ಬೆಂಬಲದ…
ಬೆಂಗಳೂರು : ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಆಗುತ್ತಿಲ್ಲ. ಆದರೆ ವಾಣಿಜ್ಯ ಸಿಲಿಂಡರ್ ಸಮಸ್ಯೆ ಆಗ್ತಿದೆ. ಅಕಸ್ಮಾತ್ ಯಾರಾದ್ರೂ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದ್ರೆ ಕಠಿಣ ಕ್ರಮ ಕಗೊಳ್ಳಲಾಗುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಗೃಹ ಬಳಕೆಗೆ ಸಮಸ್ಯೆಯಿಲ್ಲ ರಾಜ್ಯದ ಜನತೆಗೆ ಭರವಸೆ ನೀಡಿದ ಸಚಿವರು, ಮನೆಗಳಲ್ಲಿ ಬಳಸುವ ಅಡುಗೆ ಅನಿಲ (LPG) ಸಿಲಿಂಡರ್ಗಳ ವಿತರಣೆ ಸುಗಮವಾಗಿ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಹೋಟೆಲ್, ಉದ್ದಿಮೆ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸುವ ಸಿಲಿಂಡರ್ಗಳ ಪೂರೈಕೆಯಲ್ಲಿ ತುಸು ಏರುಪೇರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದರು. ಕಾಳಸಂತೆ ವಿರುದ್ಧ ಕಠಿಣ ಕ್ರಮ ಸಿಲಿಂಡರ್ ಅಭಾವವನ್ನು ಬಂಡವಾಳ ಮಾಡಿಕೊಂಡು ಯಾರಾದರೂ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು…













