Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ಹಿನ್ನೆಲೆಯಲ್ಲಿ, ಇಂದು BPCL, HPCL, LOCL ಅಧಿಕಾರಿಗಳ ಜೊತೆಗೆ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಬಿ ನೆಡೆಸಿದರು ಬೆಂಗಳೂರಿನ ವಸಂತನಗರದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಭೆಯಲ್ಲಿ ಸಭೆ ನಡೆಸಿದರು ಸಿಲಿಂಡರ್ ಬಗ್ಗೆ ಮುನಿಯಪ್ಪ ಮಾಹಿತಿ ಪಡೆದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮುನಿಯಪ್ಪ 25ನೇ ದಿನದಂದು ಯಾರು ಸಿಲಿಂಡರ್ ಬುಕ್ ಮಾಡುತ್ತಾರೋ ಅವರಿಗೆ 26ನೇ ದಿನದಂದು ಸಿಲಿಂಡರ್ ಸಿಗಲೇಬೇಕು. ಯಾರು 45 ದಿನಕ್ಕೆ ಬುಕ್ ಮಾಡುತ್ತಾರೋ ಅವರಿಯೇ 46ನೇ ದಿನಕ್ಕೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗಲೇಬೇಕು ಯಾರಾದರೂ ದುಬಾರಿ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಹಜವಾಗಿ ಗ್ಯಾಸ್ ಏಜೆನ್ಸಿಗಳನ್ನು ಸೀಜ್ ಮಾಡಲಾಗುತ್ತದೆ. ಸಾರ್ವಜನಿಕರು ಕಷ್ಟದಲ್ಲಿ ಇರುವಾಗ ಡಿಸ್ಟ್ರಿಬ್ಯೂಟರ್ಸ್ ಈ ಸಂದರ್ಭದಲ್ಲಿ ಸಹಕರಿಸಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡಬಾರದು , ದರ ದುಬಾರಿ ಮಾಡಬಾರದು ಇವೆಲ್ಲ ಮಾಡಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಆಟೋ ಗ್ಯಾಸ್ ನಲ್ಲಿ…
ಆಂಧ್ರಪ್ರದೇಶ : ರಿಲ್ಸ್ ಹುಚ್ಚಾಟದಿಂದ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳು ನಡೆದಿವೆ. ಇದೀಗ ಮತ್ತೊಂದು ಘಟನೆ ನಡೆದಿದ್ದು ರೀಲ್ಸ್ ಹುಚ್ಚಾಟದಿಂದ ಘೋರ ದುರಂತ ಸಂಭವಿಸಿದ್ದು ಜಲಪಾತದಲ್ಲಿ ಈಜಾಡುತ್ತಿದ್ದ ಮೂವರು ಬಾಲಕಿಯರು ನೀರು ಪಾಲಾಗಿದ್ದಾರೆ. ಮೂವರು ಬಾಲಕಿಯರು ಜಲಸಮಾಧಿ ಆಗಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಬಾಲಕಿಯರು ನೀರು ಪಾಲಾಗುತ್ತಿರುವ ಭಯಾನಕ ದೃಶ್ಯ ಸೆರೆಯಾಗಿದೆ. ರೀಲ್ಸ್ ಹುಚ್ಚಾಟದಿಂದ ಈ ಒಂದು ದುರಂತ ಸಂಭವಿಸಿದೆ. ತ್ರಿಷಾ (17) ರತ್ನಕುಮಾರಿ (16) ಹಾಗೂ ಪವಿತ್ರ (16) ಈ ಮೂವರು ಅಪ್ರಾಪ್ತ ಬಾಲಕಿಯರು ನೀರು ಪಾಲಾಗಿರುವ ಘಟನೆ ಇದೀಗ ವರದಿಯಾಗಿದ್ದು ಈ ಒಂದು ಅಲ್ಲೂರಿ ಜಿಲ್ಲೆಯ ಜಲಪಾತದ ಬಳಿ ದುರಂತ ಸಂಭವಿಸಿದ್ದು, ನೀರಿನ ಆಳಕ್ಕೆ ಹೋಗುತ್ತಿದ್ದಂತೆ ಕ್ಷಣಮಾತ್ರದಲ್ಲಿ ಅಪ್ರಾಪ್ತ ಬಾಲಕಿಯರು ಜಲಸಮಾಧಿಯಾಗಿದ್ದಾರೆ. https://twitter.com/sirajnoorani/status/2042328367182332200?t=VLBJm6cKuxQWiuSyZ9MjjQ&s=19
ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ಹಿನ್ನೆಲೆಯಲ್ಲಿ, ಇಂದು BPCL, HPCL, LOCL ಅಧಿಕಾರಿಗಳ ಜೊತೆಗೆ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಬಿ ನೆಡೆಸಿದರು ಬೆಂಗಳೂರಿನ ವಸಂತನಗರದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಭೆಯಲ್ಲಿ ಸಭೆ ನಡೆಸಿದರು ಸಿಲಿಂಡರ್ ಬಗ್ಗೆ ಮುನಿಯಪ್ಪ ಮಾಹಿತಿ ಪಡೆದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮುನಿಯಪ್ಪ ಆಟೋ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ ಈ ವಿಚಾರವಾಗಿ ನಾವು ಸಹ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ವಾಣಿಜ್ಯ ಸಿಲಿಂಡರ್ ನಲ್ಲಿ ಸುಧಾರಣೆಯಾಗಿದೆ ಕೇಂದ್ರ ಜವಾಬ್ದಾರಿಯಿಂದ ನಿರ್ವಹಣೆ ಮಾಡಿಲ್ಲ. ಬೆಂಗಳೂರಿನಲ್ಲಿ ಒಂದು ಪಾಯಿಂಟ್ 60000 ಆಟೋ ಬಂಕ್ ಏಜೆನ್ಸಿಗಳಿವೆ, ಕರ್ನಾಟಕದಲ್ಲಿ ಅತಿ ಹೆಚ್ಚು ಆಟೋ ಗ್ಯಾಸ್ ಬಳಕೆ ಮಾಡಲಾಗುತ್ತದೆ ಕ್ರಮ ತೆಗೆದುಕೊಂಡು ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು. ಗೃಹ ಬಳಕೆ ಸಿಲಿಂಡರ್ 26ನೇ ದಿನ ಸಿಗುವಂತೆ ಮಾಡಬೇಕು 26ನೇ ದಿನಕ್ಕೆ ಬುಕ್ ಮಾಡಿದ ನಂತರ ಸಿಲಿಂಡರ್ ವಿತರಣೆ ಮಾಡಲಾಗುತ್ತದೆ ಮೊದಲು ಬುಕ್…
ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು. ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧ ತೆಗೆದುಕೊಂಡಿದ್ದ. ಹಾಗಾಗಿ ಆತನಿಗೆ ಅದರಿಂದ ಪರಿಣಾಮ ಆಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು. ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ಒಬ್ಬ ವೈರಲ್ ಮಾಡಿದ್ದ. ಈ ಕುರಿತಂತೆ ಬೆಂಗಳೂರಿನ ಬಾಗಲೂರು ಪೊಲೀಸರು ಹೇಮಂತ ಎಂಬತನನ್ನ…
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 16 ವರ್ಷದ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಬಾಲಕಿ ಗರ್ಭಧಾರಣೆ ಮಾಡಿದ ಬಳಿಕ ಶಿಕ್ಷಕನೇ ಗರ್ಭಪಾತ ಮಾಡಿಸಿರುವ ಆರೋಪ ಸಹ ಕೇಳಿಬಂದಿದೆ. ಈ ಒಂದು ಬೆಚ್ಚಿಬಿಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಒಂದು ಆರೋಪ ಬಂದಿದ್ದು, ಇದೀಗ ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು : ನೌಕರರ ರಾಜ್ಯ ವಿಮಾ ನಿಗಮ (ESIC)ದ ಅಡಿಯ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಒಂದು ವರ್ಷ ಕಡ್ಡಾಯವಾಗಿ ಇಎಸ್ಐಸಿಗಳಲ್ಲಿ ಸೇವೆ ಸಲ್ಲಿಸಬೇಕು. ಅಲ್ಲದೆ, 1 ವರ್ಷ ಕಡ್ಡಾಯ ಸೇವೆ ನೀಡುವುದಾಗಿ ವಿದ್ಯಾರ್ಥಿಗಳು ಬಾಂಡ್ ನೀಡಿದ್ದಾರೆ. ಕಡ್ಡಾಯ ಸೇವೆ ಮಾಡಲಾಗದವರು 5 ಲಕ್ಷ ರೂ. ಶುಲ್ಕ ನೀಡಲೂ ಅವಕಾಶವಿದೆ. ಬಾಂಡ್ ಪಡೆಯುವುದರಿಂದ ವಿದ್ಯಾರ್ಥಿಗಳ ಹಕ್ಕಿನ ಹರಣವಾಗಲಿದೆ ಎನ್ನಲಾಗುವುದಿಲ್ಲ ಎಂದು ಹೈಕೋರ್ಟ್ ಪೀಠ ತನ್ನ ಆದೇಶದಲ್ಲಿ ವಿವರಿಸಿದೆ. ಈ ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇಎಸ್ಐಸಿ ಸಲ್ಲಿಸಿದ್ದ ಮೇಲ್ಮನವಿ ಮಾನ್ಯ ಮಾಡಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದ್ದು, ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿದೆ.ಮೊದಲು 5 ವರ್ಷಗಳ ಬಾಂಡ್ ಇತ್ತು, ನಂತರ 2020ರಿಂದ 1 ವರ್ಷಕ್ಕೆ ಪರಿವರ್ತಿಸಲಾಗಿದ್ದು, ಇದು ಸಂವಿಧಾನದ ಕಲಂ 19(1)(ಜಿ) ಅನ್ವಯ ವೃತ್ತಿ ಆಯ್ಕೆಯ ಹಕ್ಕು ಅಥವಾ ಕಲಂ 23 ಜೀತ…
ಬೆಂಗಳೂರು : ಕನ್ನಡ ಹಿರಿಯ ಸಾಹಿತಿ, ಖ್ಯಾತ ಪತ್ರಕರ್ತ ಹಾಗೂ ಸಮಾಜ ಸೇವಕ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ (89) ಅವರು ಶುಕ್ರವಾರ ಬೆಳಗ್ಗೆ ನಗರದಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ರಾಷ್ಟೋತ್ಥಾನ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾಗಿದ್ದ ರಾಮಸ್ವಾಮಿ ಅವರು ಸಾಹಿತ್ಯ ಪತ್ರಿಕೋದ್ಯಮ ಮತ್ತು ಪರಿಸರ ಹೋರಾಟಗಳಲ್ಲಿ ದಶಕಗಳ ಕಾಲ ತಮ್ಮನ್ನು ತೊಡಗಿಸಿಕೊಂಡಿದ್ದರು. 1937ರಲ್ಲಿ ಜನಿಸಿದ ಎಸ್.ಆರ್. ರಾಮಸ್ವಾಮಿ ಅವರು ಕೇವಲ ಸಾಹಿತಿಯಷ್ಟೇ ಅಲ್ಲದೆ, ಕಲಾ ವಿಮರ್ಶಕರು, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. 50ಕ್ಕೂ ಹೆಚ್ಚು ಕೃತಿಗಳನ್ನು ಹಾಗೂ 2,000ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅವರು, ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ (1972-79) ಮತ್ತು ದೀರ್ಘಕಾಲದವರೆಗೆ ಉತ್ಥಾನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನ ಪ್ರತಿಷ್ಠಿತ ಗೋಖಲೆ ಸಾರ್ವಜನಿಕ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ದಶಕಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದರು. ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರ ಪಾರ್ಥಿವ ಶರೀರವನ್ನು…
ಬಳ್ಳಾರಿ : 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಆಗದೆ ಕಳೆದ ಬಾರಿ 72 ಪ್ರತಿಶತ ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಈ ಬಾರಿ ದಾಖಲೆಯ 86 ಪ್ರತಿಶತ ವಿದ್ಯಾರ್ಥಿಗಳು ಸೇರ್ಗಡೆ ಆಗಿದ್ದು ದಾಖಲೆ ಮಟ್ಟದಲ್ಲಿ ಫಲಿತಾಂಶ ಏರಿಕೆ ಆಗಿದೆ. ಇದೀಗ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ(ಶೇಕಡಾ 80.1)ಯಲ್ಲಿ ಪಾಸ್ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಹೌದು ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹದಲ್ಲಿರುವ ಕೈದಿಯೊಬ್ಬರು ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಕಳೆದ 7 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ…
ಬೆಂಗಳೂರು : ಇಂದು ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು ದಾಖಲೆಯ ಶೇಕಡ 86% ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ನಂತರ ವಿದ್ಯಾರ್ಥಿಗಳ ಜೀವನದ ಅತ್ಯಂತ ಪ್ರಮುಖ ಘಟ್ಟ ಆರಂಭವಾಗುತ್ತದೆ. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಅವರದೇ ಆದ ವಿಭಿನ್ನ ಅವಕಾಶಗಳು ಕಾಯುತ್ತಿವೆ. ಆ ಆಯ್ಕೆಗಳ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ. 1. ವಿಜ್ಞಾನ ವಿಭಾಗ (Science Stream) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಅವಕಾಶಗಳಿವೆ. ವೈದ್ಯಕೀಯ ಕ್ಷೇತ್ರ: ಎಂಬಿಬಿಎಸ್ (MBBS), ಬಿಡಿಎಸ್ (BDS), ಆಯುರ್ವೇದ (BAMS), ಮತ್ತು ಹೋಮಿಯೋಪತಿ (BHMS). ಇದಕ್ಕೆ ‘ನೀಟ್’ (NEET) ಪರೀಕ್ಷೆ ಕಡ್ಡಾಯ. ತಾಂತ್ರಿಕ ಕ್ಷೇತ್ರ (Engineering): ಬಿ.ಇ ಅಥವಾ ಬಿ.ಟೆಕ್. ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಸಿವಿಲ್, ಮೆಕ್ಯಾನಿಕಲ್ ಸೇರಿದಂತೆ ಹಲವು ವಿಭಾಗಗಳಿವೆ. ಪ್ಯಾರಾ ಮೆಡಿಕಲ್: ನರ್ಸಿಂಗ್, ಫಾರ್ಮಸಿ (B.Pharma), ಫಿಸಿಯೋಥೆರಪಿ ಮತ್ತು ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ಗಳು. ಶುದ್ಧ ವಿಜ್ಞಾನ (B.Sc): ಕೃಷಿ…
ಬೆಂಗಳೂರು : ನಿನ್ನೆ ತಾನೇ ಬಾಗಲಕೋಟೆ ಜಿಲ್ಲೆಯಲ್ಲಿ ಕೇವಲ ಮನಸ್ತಾಪಕ್ಕೆ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಿಗ ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್ನಲ್ಲಿ ನಡೆದಿದೆ. ಅಭಿಷೇಕ್ (23) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ…














