Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲೆಯ ಸಾಗರದ ಎಸ್ ಎನ್ ನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಗಣೇಶ್ ಅವರ ಪುತ್ರ ಭವಿನ್ ಮೃತಪಟ್ಟ ಗಂಡು ಮಗು ಎಂದು ತಿಳಿದು ಬಂದಿದೆ. ರಜೆ ಹಿನ್ನಲೆಯಲ್ಲಿ ಕುಟುಂಬ ಅಜ್ಜಿ ಮನೆಗೆ ಬಂದಿದ್ದು,ಮನೆ ಮುಂದೆ ಆಟವಾಡುತ್ತಿದ್ದ ಮಗವಿನ ಕೈಗೆ ನಾಗರಹಾವು ಕಚ್ಚಿದೆ ಎನ್ನಲಾಗಿದೆ. ತಕ್ಷಣ ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ದಾ ಖಲಿಸಲಾಗಿತ್ತು.ಮಗು ಭವಿನ್ ಸಂಜೆ ವೇಳೆಗೆ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ 17 ಆರೋಪಗಳಿಗೆ ಶಿಕ್ಷ ಪ್ರಮಾಣ ಪ್ರಕಟಿಸಲಿದೆ. ಅಪರಾಧಿಗಳ ಹಾಜರಾತಿ ದಾಖಲಿಸಿಕೊಂಡು ಕೋರ್ಟ್ ಶಿಕ್ಷ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿತು. ಇನ್ನು ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಧಾರವಾಡ ಭಾಗದ ಶಾಸಕರು ಆಗಮಿಸಿದ್ದಾರೆ ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು ಶಾಸಕರಾದ ಕೋನರೆಡ್ಡಿ ಪ್ರಸಾದ ಅಬ್ಬಯ್ಯ ಆಗಮಿಸಿದ್ದಾರೆ.
ನವದೆಹಲಿ : ಲೋಕಸಭೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಮಂಡನೆ ಮಾಡಲಾಯಿತು .ದೇಶದ ರಾಜಕೀಯ ಭೂಪಟದಲ್ಲಿ ಮಹತ್ವದ ಬದಲಾವಣೆ ತರಬಲ್ಲ ‘ಕ್ಷೇತ್ರ ಮರುವಿಂಗಡಣೆ ಮಸೂದೆ’ಯನ್ನು (Delimitation Bill) ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಲೋಕಸಭೆಯಲ್ಲಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತು. ಮಸೂದೆ ಮಂಡನೆಗೆ ಕೆ ಸಿ ವೇಣುಗೋಪಾಲ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಸ್ಸಾಂ ಜಮ್ಮು ಕಾಶ್ಮೀರದ ಉದಾಹರಣೆ ನೀಡಿದ ವೇಣುಗೋಪಾಲ್ ನೀವು 2029 ರ ಚುನಾವಣೆಗೆ ಭಯಭೀತರಾಗಿದ್ದೀರಿ ಎಂದು ಕೆಸಿ ವೇಣುಗೋಪಾಲ್ ವಿರೋಧ ವ್ಯಕ್ತಪಡಿಸಿದರು. ಕಳೆದ ಕೆಲವು ಸಮಯದಿಂದ ತೀವ್ರ ಕುತೂಹಲ ಕೆರಳಿಸಿದ್ದ ಈ ಮಸೂದೆಯು, ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಗಡಿಗಳನ್ನು ಮರುನಿರ್ಧಾರ ಮಾಡುವ ಗುರಿಯನ್ನು ಹೊಂದಿದೆ. ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಅವರು ಸದನದ ಅನುಮತಿ ಪಡೆದು ಅಧಿಕೃತವಾಗಿ ಮಸೂದೆಯನ್ನು ಮಂಡಿಸಿದರು. ಉದ್ದೇಶ: ಬದಲಾಗುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪ್ರಜಾಪ್ರಭುತ್ವದ ಪ್ರಾತಿನಿಧ್ಯವನ್ನು…
ಬೆಂಗಳೂರು : ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕ ಮೂರು ಪ್ರಕರಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದವು. ಆದರೆ ರಾಜ್ಯದಲ್ಲಿ ಈ ಒಂದು ಲವ್ ಜಿಹಾದ್ ಪ್ರಕರಣಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಏಕೆಂದರೆ ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಮಾಡೆಲ್ ಹಾಗೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋ ಯುವತಿ ಮದುವೆಗೆ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಜುಹೇದ್ ಎಂಬಾತ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಮದುವೆಯಾಗಲು ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,…
ಬೆಂಗಳೂರು : 2016 ಜೂನ್ 15 ರಂದು ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಕೋರ್ಟ್ ಶಿಕ್ಷ ಪ್ರಮಾಣ ಪ್ರಕಟಿಸಲಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಜನಪ್ರತಿನಿಧಿಗಳ ಕೋರ್ಟ್ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಆದೇಶಿಸಿದೆ. ಅದರಂತೆ ಪ್ರಕರಣ ಸಂಬಂಧ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ. ಆರೋಪಿಗಳಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯೋ ಅನ್ನೋದು ಕೋರ್ಟ್ ಆದೇಶದತ್ತ ಚಿತ್ತ ನೆಟ್ಟಿದೆ. ಇನ್ನು ನಿನ್ನೆ ಕೋರ್ಟ್ ನಲ್ಲಿ ಜಡ್ಜ್ ತೀರ್ಪು ಪ್ರಕಟಿಸುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ಹಾಗೂ ಅವರ ಮೂವರು ಮಕ್ಕಳು ಕೋರ್ಟ್ನಲ್ಲಿ ಕಣ್ಣೀರು ಹಾಕಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ…
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್ಇಎಬಿ) ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 2025-2026ನೇ ಸಾಲಿನ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಸರ್ಕಾರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ. ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್.ವಿ. ನಾಯ್ಕ್ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹೇಳಿಕೆ ನೀಡಿದ್ದಾರೆ. ಹಾಗೆಯೇ, ಯುಪಿಎಸ್ಸಿ ಸೇರಿದಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ಸ್ಪರ್ಧಾತ್ಮಕ…
ಬೆಂಗಳೂರು : ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಮಹಿಳೆಯರು ತಮ್ಮ ಮಾಸಿಕ ಋತುಚಕ್ರದ ಸಮಯದಲ್ಲಿ ಅನುಭವಿಸುವ ದೈಹಿಕ ಮತ್ತು ಮಾನಸಿಕ ಒತ್ತಡವನ್ನು ಪರಿಗಣಿಸಿ, ಅವರಿಗೆ ವೇತನ ಸಹಿತ ರಜೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಮಹಿಳೆಯರ ಆರೋಗ್ಯದ ಹಕ್ಕು ಮತ್ತು ಕೆಲಸದ ಸ್ಥಳದಲ್ಲಿನ ಘನತೆಯನ್ನು ಎತ್ತಿಹಿಡಿಯಲು ಈ ಕ್ರಮ ಅಗತ್ಯವೆಂದು ಅಭಿಪ್ರಾಯಪಟ್ಟಿದೆ. ಕರ್ನಾಟಕ ಗೆಜೆಟ್ನಲ್ಲಿ ಪ್ರಕಟಗೊಂಡಿರುವ ಹೊರತಾಗಿಯೂ ಋತುಚಕ್ರದ ರಜೆ ನೀತಿಯನ್ನು ಹೋಟೆಲ್ಗಳು ಮತ್ತಿತರ ಸಂಸ್ಥೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿಲ್ಲ ಎಂದು ಆಕ್ಷೇಪಿಸಿ ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿ ಚಂದ್ರವ್ವ ಹಣಮಂತ ಗೋಕಾವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿ ಅರ್ಜಿಯನ್ನು…
ಹಾಸನ : ಕಾವಾಡಿಗನ ಮೇಲೆ ಸಾಕಾನೆ ಒಂದು ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೊಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಆಹಾರ ನೀಡುವ ವೇಳೆ ದಂತದಿಂದ ಕಾವಾಡಿಗ ರಾಜುಗೆ ಸಾಕಾನೆ ಇರಿದಿದೆ. ಕಾಡಾನೆ ಸೆರೆ ಕಾರ್ಯಚರಣೆಗೆ ಸಾಕಾನೆ ಸುಗ್ರೀವ ಬಂದಿದ್ದ. ಈ ವೇಳೆ ಕಾವಾಡಿಗ ರಾಜು ಸುಗ್ರೀವನಿಗೆ ಆಹಾರ ನೀಡಲು ಮುಂದಾಗಿದ್ದಾನೆ. ಸುಗ್ರೀವ ರಾಜುಗೆ ತಿವಿದು ಗಾಯಗೊಳಿಸಿದ್ದಾನೆ. ತಕ್ಷಣ ರಾಜವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಈ ಒಂದು ಕೊಲೆ ಪ್ರಕರಣದಲ್ಲಿ ಒಳಸಂಚು ಆರೋಪದ ಹಿನ್ನೆಲೆ ಮನೆ ಕುಲಕರ್ಣಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು ಈ ಒಂದು ತೀರ್ಪು ಪ್ರಕಟಿಸಿದ್ದು ತೀರ್ಪು ಪ್ರಕಟ ಬೆನ್ನಲ್ಲೇ ಎಲ್ಲಾ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಳ್ಳಿ ಎಂದು ಕೋರ್ಟ್ ಸೂಚನೆ ನೀಡಿತು ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇದೀಗ ಮತ್ತೆ ಜೈಲು ಸೇರಿದ್ದು, ವಿನಯ್ ಕುಲಕರ್ಣಿ ಅಪರಾಧಿ ಎಂದು ಕೋರ್ಟು ತೀರ್ಪು ಪ್ರಕಟಿಸಿದೆ. ಕೊಲೆ ಪ್ರಕರಣದ ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಅಪರಾಧಿಗಳು ಎಂದು ಕೋರ್ಟು ತೀರ್ಪು ನೀಡಿದೆ. ನಾಳೆ ಶಿಕ್ಷಪ್ರಮಾಣದ ಬಗ್ಗೆ ವಾದಮಂಡನೆ…
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಇದೀಗ ತೀರ್ಪು ಪ್ರಕಟಿಸಿದ್ದು, ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿನ್ನೆಲೆ ವಿನಯ್ ಕುಲಕರ್ಣಿ ಇದೀಗ ಮತ್ತೆ ಜೈಲು ಸೇರಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇದೀಗ ಮತ್ತೆ ಜೈಲು ಸೇರಿದ್ದು, ವಿನಯ್ ಕುಲಕರ್ಣಿ ಅಪರಾಧಿ ಎಂದು ಕೋರ್ಟು ತೀರ್ಪು ಪ್ರಕಟಿಸಿದೆ. ಕೊಲೆ ಪ್ರಕರಣದ ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಅಪರಾಧಿಗಳು ಎಂದು ಕೋರ್ಟು ತೀರ್ಪು ನೀಡಿದೆ. ನಾಳೆ ಶಿಕ್ಷಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಈ ವೇಳೆ ಅಪರಾಧಿಗಳನ್ನು ಕಸ್ಟಡಿಗೆ ಪಡೆಯಿರಿ ಎಂದು ಸೂಚನೆ ನೀಡಿತು. ಇನ್ನು ಪ್ರಕರಣದ A20 ವಾಸುದೇವ್ ನೀಲೇಕೆಣೆ, ಹಾಗೂ A21 ಸೋಮಶೇಖರ್ ನ್ಯಾಮಗೌಡ ಇಬ್ಬರನ್ನು ಬಿಡುಗಡೆಗೆ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿತು. ಇವರಿಬ್ಬರನ್ನು…













