Author: kannadanewsnow05

ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮೇಲಿಂದ ಬಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದ ಬಳಿ ನಡೆದಿದೆ. ಮೃತ ಯುವಕರನ್ನು ರಂಗನಾಥಪುರದ ಪ್ರತಾಪ್ (20) ವಸಂತ್ (22) ಎಂದು ತಿಳಿದುಬಂದಿದೆ. ರಂಗನಾಥಪುರದಿಂದ ತುಮಕೂರು ಕಡೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ರಕ್ತಸ್ರಾವ ಲ್ ಆಗಿ ಸ್ಥಳದಲ್ಲೇ ಪ್ರಸಾದ್ ವಸಂತ್ ಸಾವನ್ನಪ್ಪಿದ್ದರೆ. ಹೆಬ್ಬುರೂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಆರೋಪಿಗಳಿಗೆ ವಾಟ್ಸಪ್ ಮೂಲಕ ನೋಟಿಸ್ ಜಾರಿಯ ನಿಯಮವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಬಂಧನದಿಂದ ಬಿಡುಗಡೆ ಕೋರಿದ ವಂಚನೆ ಆರೋಪಿ ಅರ್ಜಿಯನ್ನು ಇದೇ ಸಂದರ್ಭದಲ್ಲಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೈ ಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದ್ದು, ಬಿಎನ್ಎಸ್ ಸೆಕ್ಷನ್ 35 ಪೊಲೀಸರಿಗೆ ಎಲೆಕ್ಟ್ರಾನಿಕ್ ನೋಟಿಸ್ ಜಾರಿಗೆ ಅವಕಾಶ ಇಲ್ಲ ಪೊಲೀಸ್ ವಿಚಾರಣೆಯ ನೋಟಿಸ್ ಖುದ್ದಾಗಿ ಜಾರಿಗೊಳಿಸಬೇಕು ನೋಟಿಸ್ ಜಾರಿಗೆ ಪೊಲೀಸರು ಯತ್ನಿಸಿದರು ಆರೋಪಿ ಸಿಕ್ಕಿಲ್ಲ. 40 ದಿನಗಳ ಕಾಲ ಪೊಲೀಸ್ ನೋಟಿಸ್ ಜಾರಿ ತಪ್ಪಿಸಿಕೊಂಡಿದ್ದಾನೆ. ಎಲೆಕ್ಟ್ರಾನಿಕ್ ನೋಟಿಸ್ ಜಾರಿಗೊಳಿಸಬಹುದು ಎಂಬ ವಾದ ಒಪ್ಪಲಾಗದು. ಬಂಧನದ ಕಾರಣಗಳನ್ನು ನೀಡಿ ಆರೋಪಿ ಬಂಧಿಸಲಾಗಿದೆ. ಹೀಗಾಗಿ ವಂಚನೆ ಬಿಡುಗಡೆ ಕೋರಿದ ಅರ್ಜಿಯನ್ನು ಹೈಕೋರ್ಟ್ ಮಜಾ ಗೊಳಿಸಿದೆ.

Read More

ಬೆಂಗಳೂರು : ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (86) ಬೆಂಗಳೂರಿನಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಮೂಲತಃ ಕನ್ನಡಿಗರಾದ ಪ್ರಕಾಶ್ ರಾಜ್ ಅವರು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ತಾಯಿಯ ಅಗಲಿಕೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ.

Read More

ಶಿವಮೊಗ್ಗ : ಇಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಏಕಾಏಕಿ ಕರಡಿ ಒಂದು ನುಗ್ಗಿದೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಕೆಲವೊಂದು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಏರ್ಪೋರ್ಟ್ ನಿಂದ ತಕ್ಷಣ ಸಿಬ್ಬಂದಿಗಳು ಕರಡಿಯನ್ನು ಹೊರಗಡೆ ಓಡಿಸಿದ್ದಾರೆ. ನಂತರ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಹಿಡಿದಿದ್ದಾರೆ. ಶಿವಮೊಗ್ಗ ಏರ್ಪೋರ್ಟ್, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

Read More

ಧಾರವಾಡ : ಜೈಲಿಗೆ ಹೋದರು ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾನೆ. ಧಾರವಾಡ ಸೆಂಟ್ರಲ್ ಜೈಲಿನಿಂದಲೇ ಯುವಕ ವಿಡಿಯೋ ಕಾಲ್ ಮಾಡಿದ್ದಾನೆ. ಹೌದು ಧಾರವಾಡ ಸೆಂಟ್ರಲ್ ಜಲದಿಂದ ಅನ್ಯಕೋಮಿನ ಯುವಕನೊಬ್ಬ ಹಿಂದೂ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ. ಸದ್ಯ ಪೋಕ್ಸೋ ಕೇಸ್ ನಲ್ಲಿ ಜೈಲಿನಲ್ಲಿರುವ ಆರೋಪಿ ಕೋರ್ಟ್ ನಲ್ಲಿ ನನ್ನ ಪರವಾಗಿ ಮಾತನಾಡುವಂತೆ ತಾಕತ್ತು ಮಾಡಿದ್ದಾನೆ ಅಲ್ಲದೇ ಕೈ ಮೇಲೆ ಸಂತ್ರಸ್ತೆಯ ಹೆಸರು ಬರೆದುಕೊಂಡಿದ್ದು, ಜೈವಿನಲ್ಲಿ ಈಗಲೂ ಮೊಬೈಲ್ ಗಳು ಇತರೆ ವಸ್ತುಗಳು ಕೈದಿಗಳಿಗೆ ಸುಲಭವಾಗಿ ಸಿಗುತ್ತಿವೆ ಎನ್ನುವುದಕ್ಕೆ ಇದೀಗ ಮತ್ತೊಂದು ಉದಾಹರಣೆ ದೊರೆತಿದೆ. ಜೈಲಾಧಿಕಾರಿಗಳು ಹಾಗೂ ಜೈಲಿನ ಸಿಬ್ಬಂದಿಗಳ ಸಹಕಾರ ಮತ್ತು ಸಹಾಯವಿಲ್ಲದೆ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದಿದ್ದಾರೆ. 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಭರತ್ ಹೆಗಡೆ ಟ್ರ್ಯಾಕ್ ಮಾಡಲಾಗಿದ್ದು, ದೂರುದಾರರಿಗೆ 60 ಲಕ್ಷ ಹಣ ಕಟ್ಟುವಂತೆ ಡಿಸಿ ಭರತ್ ಹೆಗಡೆ ನೋಟಿಸ್ ನೀಡಿದ್ದ. ಹಣ ಕಡಿಮೆ ಮಾಡಬೇಕು ಅಥವಾ ಕಟ್ಟದ ಹಾಗೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹತ್ತು ಲಕ್ಷ ಹಣ ನೀಡುವಂತೆ ಭರತ್ ಹೆಗಡೆ ಬೇಡಿಕೆ ಇಟ್ಟಿದ್ದ ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲಿಕನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಂಗಡವಾಗಿ 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ಭರತ್ ಹೆಗಡೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾನೆ.

Read More

ಬೆಂಗಳೂರು: ದೇಶಾದ್ಯಂತ ಉಂಟಾಗಿರುವ ಎಲ್‌ಪಿಜಿ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕಕ್ಕೆ ವಾಣಿಜ್ಯ ಎಲ್‌ಪಿಜಿ ಸಿಲಿಂಡ‌ರ್ ಪೂರೈಕೆಯನ್ನು ಶೇ.68ಕ್ಕೆ ಹೆಚ್ಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭಾನುವಾರ ಹೆಚ್ಚುವರಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಆದ್ಯತೆ ಅನುಸಾರವಾಗಿ ಹಂಚಿಕೆ ಪರಿಷ್ಕರಿಸಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು ಆಸ್ಪತ್ರೆ ಮತ್ತು ಇತರೆ ಅವಶ್ಯಕ ಸಂಸ್ಥೆಗಳಿಗೆ 4200 ಸಿಲಿಂಡರ್‌ಗಳು, ಸರ್ಕಾರ/ಪಿ.ಎಸ್.ಯು ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು, ಬಸ್‌ ನಿಲ್ದಾಣಗಳ ಕ್ಯಾಂಟೀನ್‌ಗಳಿಗೆ 1200, ಹೋಟೆಲ್, ಡಾಬಾ, ರೆಸ್ಟೋರೆಂಟ್, ಕಾರ್ಖಾನೆ, ಕೆಎಂಎಫ್., ಡೇರಿ, ಸಮುದಾಯ ಅಡುಗೆ ಕೇಂದ್ರಗಳು, ಪಿ.ಜಿ, ಕ್ಯಾಂಟೀನ್, ಕ್ರೀಡಾ ವಸತಿ ನಿಲಯಗಳಿಗೆ 17500, ಬೀಜ ಸಂಸ್ಕರಣೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು, ಔಷಧೋದ್ಯಮ, ಮೀನುಗಾರಿಕೆ, ಕೋಳಿ ಸಾಕಣೆ, ರೇಷ್ಮೆ ಹುಳು ಸಾಕಣೆಗೆ 6 ಸಾವಿರ, ಇತರ ಅವಶ್ಯಕತೆ ಆಧಾರದ ಮೇಲೆ 563 ಸಿಲಿಂಡ‌ರ್ ಸೇರಿದಂತೆ ಒಟ್ಟು 29463 ಸಿಲಿಂಡ‌ರ್ ಪ್ರತಿನಿತ್ಯ ಒದಗಿಸಲಾಗುವುದು ಎಂದು ಮುನಿಯಪ್ಪ ವಿವರಿಸಿದ್ದಾರೆ. ಹೆಚ್ಚು ದರ ವಸೂಲಿ…

Read More

ಮೈಸೂರು : ಮೈಸೂರಲ್ಲಿ ಘೋರ ದುರಂತ ಒಂದು ನಡೆದಿದ್ದು, ಒಣಗಿದ ದಾಸವಾಳ ಹೂ ನುಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜುರು ಗ್ರಾಮದಲ್ಲಿ ಈ ಒಂದು ಮನಕಲಕುವ ಘಟನೆ ನಡೆದಿದೆ. ದಾಸವಾಳ ಹೂವು ನುಂಗಿದ್ದ ಆರುವರೆ ತಿಂಗಳ ಚಿನ್ಮಯಗೌಡ ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಎಂದು ಹೂವು ಇಟ್ಟಿದ್ದರು. ಈ ವೇಳೆ ಚಿನ್ಮಯ್ ಗೌಡ ಒಣಗಿದ ದಾಸವಾಳ ಹೂವನ್ನು ನುಂಗಿ ಅಸ್ವಸ್ಥಗೊಂಡಿತ್ತು. ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಚಿನ್ಮಯ್ ಗೌಡ ಮೃತಪಟ್ಟಿದೆ ಸುದರ್ಶನ್ ಮತ್ತು ನವ್ಯ ಎರಡನೇ ಪುತ್ರ ಚಿನ್ಮಯ್ ಗೌಡ ಎಂದು ತಿಳಿದುಬಂದಿದೆ.

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಸೈಬರ್ ವಂಚನೆ ಕೇಸ್ ಗಳು ಹೆಚ್ಚಿದ್ದು, ಇದೀಗ ಟ್ರೇಡಿಂಗ್​​ನಲ್ಲಿ ಹೆಚ್ಚು ಹಣ ಗಳಿಸುವ ಆಸೆ ಹುಟ್ಟಿಸಿ ಚಿಕ್ಕಮಗಳೂರಿನ ವ್ಯಕ್ತಿಗೆ ಕೋಟಿಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಗೆ ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ. ಟ್ರೇಡಿಂಗ್ ಮೂಲಕ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ವಂಚಕರು ಭರವಸೆ ನೀಡಿದ್ದರು. ಇದನ್ನು ನಂಬಿದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವ್ಯಕ್ತಿ ಹಣ ಹೂಡಿಕೆ ಮಾಡಿ ಬರೋಬ್ಬರಿ 1.28 ಕೋಟಿ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಕಡೂರು ತಾಲೂಕಿನ ನಿವಾಸಿ ಕಲ್ಲೇಗೌಡ ವಂಚನೆಗೊಳಗಾದವರು. ಫೇಸ್‌ಬುಕ್‌ನಲ್ಲಿ ಕಂಡುಬಂದ ‘FYERS’ ಎಂಬ ಟ್ರೇಡಿಂಗ್ ಲಿಂಕ್ ಅನ್ನು ಇವರು ಕ್ಲಿಕ್ ಮಾಡಿದ್ದರು. ಈ ಮೂಲಕ ಇವರು ‘F8-FYERS ಸೆಕ್ಯೂರಿಟಿ ಗ್ರೂಪ್’ ಎಂಬ ವಾಟ್ಸಾಪ್ ಗುಂಪಿಗೆ ಸೇರ್ಪಡೆಯಾಗಿದ್ದರು. ಬಳಿಕ ವಂಚಕರು ನೀಡಿದ ‘QIB-iPO’ ಟ್ರೇಡಿಂಗ್ ಲಿಂಕ್‌ನಲ್ಲಿ ಖಾತೆ ತೆರೆದಿದ್ದರು. ಆರಂಭದಲ್ಲಿ ಕಲ್ಲೇಗೌಡ ಅವರು 60 ಸಾವಿರ…

Read More

ಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಟೆಂಪೋನಿಂದ ಬಿದ್ದು ಕಾರ್ಮಿಕ ಮಹಿಳೆ ಒಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನಸೂಯಮ್ಮ (25) ಎಂದು ತಿಳಿದುಬಂದಿದೆ. ಮಲ್ಲಿಕಾ, ಗೀತಾ, ಅನಿತಾ ಎಂಬ ಮಹಿಳೆಯರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More