Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸರ್ಕಾರದಿಂದ ರಾಜ್ಯ ರಸ್ತೆ ಸುರಕ್ಷತಾ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹಾಗಾಗಿ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಿದೆ. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಜಾರಿಗೊಳಿಸಲಾಗಿದೆ.ಹಾಲಿ ಎಲ್ಲಾ ಮಾದರಿಯ ವಾಹನಗಳಿಗೆ ಕೇವಲ ರೂ.1000 ವಿಧಿಸಲಾಗಿದ್ದು ತಿದ್ದುಪಡಿ ಅನ್ವಯ ಕಾರಿನ ಬೆಲೆ ಆಧರಿಸಿ ಶೇಕಡಾವಾರು ಸೆಸ್ ಜಾರಿಗೊಳಿಸಲಾಗುತ್ತಿದೆ. ಯಾವ ಮಾದರಿ ಕಾರುಗಳಿಗೆ ಎಷ್ಟು ವಿಧಿಸುವ ಬಗ್ಗೆ ತೀರ್ಮಾನಿಸಲಾಗುತ್ತೆ. ಎಷ್ಟು ಚೆಸ್ ವಿಧಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ತುಮಕೂರು : ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಹಾಗೂ ಸಹಾಯಕ ಪ್ರಸಾದ್ 1.15 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕಚೇರಿಯ ಮುಂಭಾಗ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ಉದ್ಯಮಿದಾರರೊಬ್ಬರಿಗೆ ಸಹಾಯಧನ ನೀಡಲು ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಅರೆಸ್ಟ್ ಮಾಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದುಕೊಂಡು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭೆಯ ಚುನಾವಣೆಯ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಇಂದು ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಸರ್ಕಾರವನ್ನು ಟೀಕಿಸಿದರೆ ಬಿಜೆಪಿಯನ್ನು ಟೀಕೆಸಿದಂತಲ್ಲ. ದೂರುದಾರರ ವಿರುದ್ಧ ರಾಹುಲ್ ಗಾಂಧಿ ಟ್ವೀಟ್ ಮಾಡಿಲ್ಲ. ಪತ್ರಿಕೆಗಳಲ್ಲಿ ರಾಹುಲ್ ಗಾಂಧಿ ಜಾಹೀರಾತು ನೀಡಿಲ್ಲ. ರಾಹುಲ್ ಗಾಂಧಿ ಫೋಟೋ ಮಾತ್ರ ಜಾಹಿರಾತಿನಲ್ಲಿ ಬಳಸಿಕೊಳ್ಳಲಾಗಿದೆ. ಆಗ ರಾಹುಲ್ ಗಾಂಧಿ ಪಕ್ಷದ ಯಾವುದೇ ಹುದ್ದೆಯಲ್ಲಿ ಇರಲಿಲ್ಲ. ದೂರುದಾರರನ್ನು ಉಲ್ಲೇಖಿಸಿಲ್ಲವಾದ್ದರಿಂದ ಮಾನ ನಷ್ಟ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಾದಿಸಿದರು. ರಾಹುಲ್ ಗಾಂಧಿ ಪರ ವಕೀಲರ ವಾದಕ್ಕೆ ಬಿಜೆಪಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿಯೇ ಅಧಿಕಾರದಲ್ಲಿ ಇದುದ್ದರಿಂದಲೇ ಈ ರೀತಿ ಜಾಹೀರಾತು ನೀಡಲಾಗಿದೆ. ಜಾಹಿರಾತು ನಿಂದಾಗಿ 500 ರಿಂದ 1000 ಮತಗಳ ಅಂತರದಲ್ಲಿ 40 ಸ್ಥಾನ ಕಳೆದುಕೊಂಡಿದೆ ಎಂದು ದೂರುದಾರ ಭಾರತೀಯ ಜನತಾ ಪಕ್ಷದ ಪರ ವಕೀಲ ವಿನೋದ್ ಕುಮಾರ್…
ಬೆಳಗಾವಿ : ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ತಡೆ, ನಿಷೇಧ ಮತ್ತು ಪರಿಹಾರ ಮಸೂದೆ-2025 ಮಂಡಿಸಲಾಗಿದ್ದು, ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಮಸೂದೆಯಂತೆ ಇನ್ನು ಮುಂದೆ ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ ಹಾಗೂ ಪಂಚಾಯ್ತಿ ನಡೆಸಿದವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುವುದು. ಬಹಿಷ್ಕಾರಕ್ಕೆ ಒತ್ತಡ ಹೇರಿ ಪರೋಕ್ಷವಾಗಿ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು…
ನವದೆಹಲಿ : ರಾಜ್ಯದ ತೊಗರಿ ಬೆಳೆಗಾರರಿಗೆ ಇದೀಗ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅಸ್ತು ಎಂದಿದೆ. ಕನಿಷ್ಠ ಬೆಂಬಲ ಬೆಲೆ ಯಲ್ಲಿ ನಫೆಡ್ ಮತ್ತು ಎನ್ಸಿಸಿಎಫ್ ಮೂಲಕ ಆದ್ಯತೆ ಮೇಲೆ, ತೊಗರಿ ಖರೀದಿಗೆ ತ್ವರಿತ ಅನುಮೋದನೆ ನೀಡಲಾಗಿದೆ. ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಮುಂದಾಗುವಂತೆ ಡಿಸೆಂಬರ್ 4ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ತ್ವರಿತ ಸ್ಪಂದನೆ ನೀಡಿರುವ ಕೃಷಿ ಸಚಿವರು, ಐದಾರು ದಿನದಲ್ಲೇ ತೊಗರಿ ಖರೀದಿಗೆ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ಕ್ಕೆ ಅಂದಾಜು 12.60 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯೊಂದಿಗೆ ಕರ್ನಾಟಕ ಪ್ರಮುಖ ತೊಗರಿ ಬೆಳೆ ಉತ್ಪಾದಕ ರಾಜ್ಯವಾಗಿದೆ. ಮಾರುಕಟ್ಟೆಯಲ್ಲಿ ಮಾದರಿ ಬೆಲೆ ಕ್ವಿಂಟಾಲ್ಗೆ…
ಧಾರವಾಡ : ಧಾರವಾಡದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡದ ಕೊಪ್ಪದಕೇರಿ ಬಡಾವಣೆಯ ಪಾರ್ಕ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪಾರ್ಕ್ ನಲ್ಲಿ ಇರುವಂತಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾಕ್ಟರ ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ ಮಹೇಂದ್ರ ರೆಡ್ಡಿ ಅರ್ಜಿ ವಜಾ ಗೊಳಿಸಿದೆ. ಜಾಮೀನು ಅರ್ಜಿ ವಜಾ ಗೊಳಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಅನಸ್ತೇಶಿಯಾ ಖರೀದಿಗೆ ಪತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದಾನೆ. ನಂತರ ಮನೆಗೆ ಬಂದು ಪತ್ನಿ ಕೃತಿಕಾ ರೆಡ್ಡಿಗೆ ಅನೆಸ್ಥೆಶಿಯ ನೀಡಿದ್ದಾನೆ. ಮೃತಪಟ್ಟ ಬಳಿಕ ಮರಣೋತ್ತರ ಪರೀಕ್ಷೆಗೆ ವಿರೋಧಿಸಿದ್ದಾನೆ. ಪತ್ನಿ ಕೊಂದಿದ್ದಾಗಿ ಸ್ನೇಹಿತರಿಗೆ ಫೋನ್ ಪೇ ಸಂದೇಶ ನೀಡಿದ್ದಾನೆ ಎಂದು ವಾದ ಮಂಡಿಸಿದರು. ಬಳಿಕ ಕೋರ್ಟ್ ವಾದ ಆಲಿಸಿದ ನಂತರ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿ ಇಂದು ಭಾರಿ ಅನಾಹುತ ಒಂದು ತಪ್ಪಿದೆ. ಮೈಸೂರು ಅರಮನೆ ದ್ವಾರದ ಸೀಲಿಂಗ್ ಕುಸಿತವಾಗಿದೆ. ವರಾಹ ದ್ವಾರದ ಮೇಲ್ಚಾವಣಿ ಸೀಲಿಂಗ್ ಇದೀಗ ಕುಸಿತಕೊಂಡಿದೆ. ಹೌದು ಪ್ರವಾಸಿಕರು ಆಗಮಿಸುವ ಗೇಟ್ ಬಳಿಯೇ ಕುಸಿತತಗೊಂಡಿದೆ. ಜನರಿಲ್ಲದ ವೇಳೆ ಕುಸಿದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ ಸಿಬ್ಬಂದಿ ಬೈಕ್ ಮೇಲೆ ಸೀಲಿಂಗ್ ಸಿಮೆಂಟ್ ಬಿದ್ದಿದೆ ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ನವದೆಹಲಿ : ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್ ಗೆ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಿದ್ದಕ್ಕಾಗಿ ದೆಹಲಿ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ನೀಡಿದೆ. ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ಉಮರ್ ಖಾಲಿದ್ಗೆ ಡಿಸೆಂಬರ್ 16 ರಿಂದ ಡಿಸೆಂಬರ್ 29 ರವರೆಗೆ ಜಾಮೀನು ನೀಡಿದೆ. ಡಿಸೆಂಬರ್ 27 ರಂದು ನಡೆಯಲಿರುವ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ಖಾಲಿದ್ ಮಧ್ಯಂತರ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಡಿಸೆಂಬರ್ 27 ರಂದು ನಡೆಯಲಿರುವ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಜೆಎನ್ಯು ಮಾಜಿ ವಿದ್ಯಾರ್ಥಿ ಮತ್ತು ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಲಯದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೈ ಅವರು ಅವರ ಅರ್ಜಿಯನ್ನು ಆಲಿಸಿದರು, ತಾತ್ಕಾಲಿಕ ಪರಿಹಾರಕ್ಕಾಗಿ ಅವರ ಮನವಿಯನ್ನು ಪರಿಗಣಿಸಿದ ನಂತರ ಆದೇಶ ಹೊರಡಿಸಲಾಯಿತು. ದೆಹಲಿ ಗಲಭೆಗೆ ಸಂಬಂಧಿಸಿದ ದೊಡ್ಡ ಪಿತೂರಿ ಪ್ರಕರಣದಲ್ಲಿ ಖಾಲಿದ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ತಾಯಿಗೆ ಬೈಯ್ದಿದ್ದಕ್ಕೆ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಾರಬ್ ನಗರದಲ್ಲಿ ನಡೆದಿದೆ. ಮಹಮ್ಮದ್ ಮುಜಾಹಿದ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮುಜಾಹೀದ್ ತಮ್ಮ ಮೊಹಮ್ಮದ್ ಮುಸೆದ್ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ್ದಾನೆ. ತಾಯಿಗೆ ಬೈದ ಎನ್ನುವ ವಿಚಾರಕ್ಕೆ ಅಣ್ಣತಮ್ಮ ನಡುವೆ ಹೊಡೆದಾಟ ಆಗಿದೆ.ಮನೆಯಲ್ಲಿ ಇದ್ದಂತಹ ವಸ್ತುಗಳಿಂದ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಮುಜಾಹಿದ್ನನ್ನು ಮುಸೆದ್ ಹತ್ಯೆಗೈದಿದ್ದಾನೆ. ಗಾಯಗೊಂಡ ಮುಸೆದ್ ನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.














