Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದ್ದಾರೆ ಎಂದು ಬಿಜೆಪಿ ದಾಖಲಿಸಿರುವ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಆರೋಪಿಯನ್ನಾಗಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಅವರ ಪರ ವಕೀಲರು ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ. ವಿಚಾರಣೆಯ ವೇಳೆ ರಾಹುಲ್ ಪರ ವಾದ ಮಂಡಿಸಿದ ವಕೀಲರು, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಒಂದು ಟ್ವೀಟ್ಗೆ ರಾಹುಲ್ ಗಾಂಧಿ ಅವರನ್ನು ತಳುಕು ಹಾಕಲು ಯಾವುದೇ ದಾಖಲೆ ಇಲ್ಲ. ಅರ್ಜಿದಾರರನ್ನು ಗುರಿಯಾಗಿಸಬಹುದಾದ ಟ್ವೀಟ್ ಇಲ್ಲವೇ, ಪ್ರಕಟಣೆ ಇಲ್ಲ. ಯಾರೋ ಜಾಹೀರಾತಿನ ಪ್ರಕಟಣೆ ನೀಡಿದ್ದರೂ ಅದು ಸರ್ಕಾರದ ಕುರಿತದ್ದಾಗಿದೆಯೇ ಹೊರತು ಬಿಜೆಪಿಯನ್ನು ಗುರಿಯಾಗಿಸಿಲ್ಲ. ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡುವಾಗ ಮ್ಯಾಜಿಸ್ಟ್ರೇಟ್ ವಿವೇಚನೆ ಬಳಸಿಲ್ಲ. ಜಾಹೀರಾತು ಪ್ರಕಟಿಸಲು ರಾಹುಲ್ ಗಾಂಧಿ ಅನುಮತಿಸಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ಇಲ್ಲ. ಒಮ್ಮೆ ಸರ್ಕಾರ…
ಬೆಳಗಾವಿ : ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಸುಲಭವಾಗಿ ಬಿಡುವುದಿಲ್ಲ ಬಿವೈ ವಿಜಯೇಂದ್ರ ಡಿಕೆ ಶಿವಕುಮಾರ್ ರನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದ. ಬಿಜೆಪಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ ಮುಂದೆ ಕೂಡ ಚರ್ಚೆ ಆಗಿತ್ತು. ಸಿಎಂ ಡಿಸಿಎಂ ಎಲ್ಲವು ವ್ಯಾಪಾರ ಆಗಿತ್ತು ಆದರೆ ಅಮಿತ್ ಶಾ ಒಪ್ಪಿಲ್ಲ ಎಂದು ಶಾಸಕ ಯತ್ನಾಳ್ ಸ್ಪೋಟಕ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಇವರ ಜೊತೆಗೆ ಡಿಕೆ ಶಿವಕುಮಾರ್ ಜೊತೆ ಸರ್ಕಾರ ಮಾಡುವುದು ಬೇಡ ಇದು ನಮ್ಮ ಬಿಜೆಪಿ ಸಂಸದರಿಂದ ಮಾಹಿತಿ ಬಂದಿರುವುದು. ಅಮಿತ್ ಶಾ ಅವರ ಮುಂದೆ ಈ ಕುರಿತು ಚರ್ಚೆಯಾಗಿದ್ದು ಅವರು ಒಪ್ಪಿಲ್ಲ. ದೆಹಲಿಯಲ್ಲಿ 28 ಕಿಲೋಮೀಟರ್ ದೂರದಲ್ಲಿ ನೋಯ್ಡಾ ರಸ್ತೆಯಲ್ಲಿ ಫೈವ್ ಸ್ಟಾರ್ ಹೋಟೆಲ್ನಲ್ಲಿ ಸಿಎಂ ಹಾಗೂ ಡಿಸಿಎಂ ಆಗುವ ವಿಚಾರವಾಗಿ ಚರ್ಚೆ ಮಾಡಿದರು. ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೆಂದ್ರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದ್ರು ಎಂದು ಪರೋಕ್ಷವಾಗಿ…
ಬೆಳಗಾವಿ : ರಾಜ್ಯದಲ್ಲಿ ಕುರ್ಚಿ ಕದನದ ನಡುವೆ ಡಿನ್ನರ್ ಪಾಲಿಟಿಕ್ಸ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದ್ದು, ಇದರ ಮಧ್ಯ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೀನಿ ವಾಪಸ್ ಬಿಜೆಪಿಗೆ ಬನ್ನಿ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಕರೆದಿದ್ದಾರೆ. ಅಮಿತ್ ಶಾ ಬಳಿ ನಿಯೋಗ ಹೋಗುವ ಬಗ್ಗೆ ಹೇಳಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.
ಮಂಡ್ಯ : ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ ಪತ್ರ ಬರೆದಿದ್ದಾರೆ, ಸ್ವಾಗತ ಕೋರುತ್ತೇನೆ. ಇದು ಸುಮಲತಾ ಎಂಪಿ ಆಗಿದ್ದಾಗ ಬಂದಂತಹ ಕಾರ್ಯಕ್ರಮ. ಮಂಡ್ಯದ ಆಸ್ಪತ್ರೆಯ ಪಕ್ಕದಲ್ಲೇ ಜಾಗ ಕೊಡಲು ಸಿದ್ದ ಇದ್ದೇವೆ. ಕೇಂದ್ರ ಸರ್ಕಾರ ಕುಂಟುತ್ತಾ ಇದಕ್ಕೆ ಒಪ್ಪಲಿಲ್ಲ. ನೂರೆಂಟು ಸಬೂಬೂ ಹೇಳಿ ಸ್ಟಾಪ್ ಮಾಡಿದ್ರು. ನಮ್ಮ ಪ್ರಭಾವಿ ಕೇಂದ್ರ ಸಚಿವ ಹೆಚ್ಡಿಕೆ ಅವರು ಜಾಗ ಕೇಳಿದ್ದಾರೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ ಎಂದು ಗಣಿಗ ರವಿಕುಮಾರ್ ತಿಳಿಸಿದರು. ಕಳೆದ ಕೆಡಿಪಿ ಸಭೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಅನ್ನ ಮದ್ದೂರಿಗೆ ಶಾಸಕರು ಕೇಳಿದ್ರು. ಸಚಿವ ಚಲುವರಾಯಸ್ವಾಮಿ ಕೂಡ ಒಪ್ಪಿಗೆ ಸೂಚಿಸಿದ್ರು. ಆದ್ರೇ ಕೇಂದ್ರ ಸಚಿವರು ಮದ್ದೂರಿಗೆ ನಿರಾಕರಿಸಿದ್ರೆ ನಾವು ಜಾಗ ಕೊಡಲು ರೆಡಿ ಇದ್ದೇವೆ. ಟ್ರಾಮಾ ಕೇರ್ ಸೆಂಟರ್ ಗೆ ಡಿಎಚ್ಓ ಕಚೇರಿ ಜಾಗದಲ್ಲೇ ನಾವು ಜಾಗ ಕೊಡ್ತೇವೆ. ಕೇಂದ್ರ ಸಚಿವ ರಿಗೆ ಪತ್ರ ಬರೆದಿದ್ದೇನೆ.…
ಬೆಳಗಾವಿ : ರಾಜ್ಯದಲ್ಲಿ ಕುರ್ಚಿ ಕದನದ ನಡುವೆ ಡಿನ್ನರ್ ಪಾಲಿಟಿಕ್ಸ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದ್ದು, ಇದರ ಮಧ್ಯ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಡಿಸೆಂಬರ್ 19 ರಂದು ದೆಹಲಿಗೆ ಹೋಗುತ್ತೀರಾ ವರಿಷ್ಟರು ನಿಮಗೆ ಕರೆ ಮಾಡಿದ್ದಾರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಯಾರೂ ಕರೆದಿಲ್ಲ ಮಾಡಿಲ್ಲ ಯಾಕೆ ಸುಮ್ಮನೆ ಪ್ರಶ್ನೆ ಕೇಳುತ್ತೀರಾ? ನಿಮಗೆ ಹೇಳಿದ್ದಾರೆ ಹೇಳಿದ್ದಾರೆ ಏನ್ರಿ ಎಂದು ಮಾಧ್ಯಮದವರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದರು.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗಿದ್ದು, ಸಿದ್ದರಾಮಯ್ಯ ಪುತ್ರ ಯತೀಂದ್ರ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದರು. ಇಂದು ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಇದರ ಮಧ್ಯ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಡಿಕೆ ಶಿವಕುಮಾರ್ ಸಿಎಂ ಯಾಕೆ ಆಗಬಾರದು ಎಂದು ಡಿಕೆಶಿ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಡಿಸಿಎಂ ಡಿಕೆ ಶಿವಕುಮಾರ್, ಯಾಕೆ ಸಿಎಂ ಆಗಬಾರದು? ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ವಾ,? ಪಕ್ಷ ಗೋಸ್ಕರ ಶ್ರಮಪಟ್ಟಿಲ್ವಾ? ಶ್ರಮಕ್ಕೆ ಅವರು ಕೂಲಿ ಕೇಳುತ್ತಿದ್ದಾರೆ. ನನ್ನ ಹಣೆಯಲ್ಲಿ ಬಿಜೆಪಿಗೆ ಹೋಗಿ ಮಂತ್ರಿ ಆಗಬೇಕು ಅಂದು ಇತ್ತು. ಅದೇ ರೀತಿ ಡಿಕೆ ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗೇ ಆಗುತ್ತಾರೆ.…
ಬೆಂಗಳೂರು : ಬೆಂಗಳೂರಿನಲ್ಲಿ ಕಿಯಾ ಸೆಲ್ಟೋಸ್ ಕಾರ್ ನಲ್ಲಿ ಬಂದು ವ್ಯಕ್ತಿ ಒಬ್ಬ ಕಸ ಸುರಿದಿದ್ದಾನೆ ಕಸ ಸುರಿದು ಹೋದ ವ್ಯಕ್ತಿಗೆ ಇದೀಗ ಪಾಲಿಕೆ ಸಿಬ್ಬಂದಿಗಳು 5000 ದಂಡ ವಿಧಿಸಿದ್ದಾರೆ. ವಾರ್ಡ್ ನಂಬರ್ 29ರಲ್ಲಿ ಪಾಲಿಕೆ ಸಿಬ್ಬಂದಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಕಾರ್ ನಲ್ಲಿ ವ್ಯಕ್ತಿಗಳಿಬ್ಬರು ಕಾರಿನ ಡಿಕ್ಕಿಯಲ್ಲಿ ಕಸ ತೆಗೆದುಕೊಂಡು ಬಂದು ಕಸ ಸುರಿದು ಹೋಗಿದ್ದಾನೆ ಈ ಒಂದು ವಿಡಿಯೋ ವೈರಲ್ ಆಗಿದ್ದು ವಿಡಿಯೋ ಆಧರಿಸಿ ವ್ಯಕ್ತಗೆ 5 ಸಾವಿರ ರೂಪಾಯಿ ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ. ಇನ್ನು ಈ ವಿಚಾರವಾಗಿ ಮಜೂಮ್ದಾರ್ ಶಾ ಆಕ್ರೋಶ ಅವರ ಹಾಕಿದ್ದು ಈ ದುಷ್ಕರ್ಮಿಗಳಿಗೆ 50,000 ತಂಡ ವಿಧಿಸಬೇಕಿತ್ತು ದಂಡ ಹೆಚ್ಚಿಲ್ಲದಿದ್ದರೆ ಯಾರು ತಲೆಕೆಡಿಸಿಕೊಳ್ಳಲ್ಲ ದಂಡ ಪಾವತಿಸುವವರಿಗೆ ವಾಹನ ಸೀಜ್ ಮಾಡಬೇಕಿತ್ತು ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳನ್ನು ಕೊಡ ಬಂದಿಸಬೇಕಿತ್ತು ಎಂದು ಕಿರಣ್ ಮಜುಮ್ದಾರ್ ಶಾ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. https://twitter.com/kiranshaw/status/1999120899782635752?t=IGgp0Jp-_7iebcuR5_fpIQ&s=19
ಬೆಂಗಳೂರು : ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಒಡೆತನದ ಕಾರು ಅಪಘಾತಗಿದ್ದು, ಹೆಚ್ ಎಂ ರೇವಣ್ಣ ಪುತ್ರನಿಗೆ ಸೇರಿದ ಕಾರು ಡಿಕ್ಕಿಯಾಗಿ 27 ವರ್ಷದ ಯುವಕ ಸಾವನಪ್ಪಿದ್ದಾನೆ . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡಿಮರನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. Hm ರೇವಣ್ಣ ಪುತ್ರ ಶಶಾಂಕ್ ಗೆ ಈ ಒಂದು ಕಾರು ಸೇರಿದೆ ತಡರಾತ್ರಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಾಜೇಶ್ (27) ಸಾವನಪಿದ್ದಾನೆ.ಮೃತ ಯುವಕ ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದ ಮಾಹಿತಿ ತಿಳಿದು ಬಂದಿದೆ. ಕಕಾ 51 MQ 0555 ನಂಬರ್ ಶಶಾಂಕ್ ಮಾಲೀಕತ್ವದ ಕಾರು ಎಂದು ತಿಳಿದು ಬಂದಿದೆ. ಮಾಗಡಿ ಇಂದ ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಇಂದು ಬೆಳಿಗ್ಗೆ ತಾನೇ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಕುದುರು ಪೊಲೀಸ್ ಠಾಣೆಯಲ್ಲಿ…
ಬೆಳಗಾವಿ : ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಸ್ವಪಕ್ಷದ ಸಚಿವರು ಶಾಸಕರುಗಳೇ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ನಾನು ಏನು ಹೇಳಬೇಕು ಅದನ್ನು ಹೇಳಿ ಆಗಿದೆ ನನ್ನ ಹೇಳಿಕೆ ಕುರಿತು ಬೇರೆಯವರು ಏನು ಹೇಳುತ್ತಾರೋ ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮತ್ತೆ ತಮ್ಮ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೆ ವಿಚಾರವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರನ ಜೊತೆಗೆ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸುಮಾರು ಒಂದು ಗಂಟೆಗಳ ಸುದೀರ್ಘವಾಗಿ ಚರ್ಚೆ ನಡೆಸಿದರು. ಆ ರೀತಿ ಹೇಳಿಕೆ ನೀಡಬೇಡ ಅಂತ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಹೇಳಿದರು ಕೂಡ ಯತೀಂದ್ರ ಮಾತ್ರ ತಂದೆಯ ಮಾತಿಗೂ ಬಗ್ಗದೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಿತ್ತಾಟ ಜೋರಾಗಿತ್ತು ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ನಾವು ಸಹೋದರರು ಇದ್ದಂತೆ ಇದ್ದೇವೆ ಎಂದು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದರು. ಆದರೆ ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ಯಾವುದೇ ರೀತಿಯಾಗಿ ನಾಯಕತ್ವ ಬದಲಾವಣೆ ಇಲ್ಲ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಇವರ ಒಂದು ಹೇಳಿಕೆಗೆ ಸ್ವಪಕ್ಷದ ಹಲವು ಶಾಸಕರು ಸಚಿವರು ಯತೀಂದ್ರ ವಿರುದ್ಧ ಆಕ್ರಶ ಹೊರಹಾಕಿದ್ದು ನಾವು ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡಿದರೆ ನೋಟಿಸ್ ಕೊಡುತ್ತಾರೆ ಆದರೆ ಯತಿಂದ್ರ ವಿರುದ್ಧ ಯಾಕೆ ಇನ್ನು ನೋಟಿಸ್ ನೀಡುವ ಕ್ರಮ ಆಗಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಮಧ್ಯ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತ ಸಚಿವರು ಹಾಗೂ ಶಾಸಕರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದು…














