Author: kannadanewsnow05

ಕೊಪ್ಪಳ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಅದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ವಿಚಾರವಾಗಿ ಕೊಪ್ಪಳದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಬೇರೆ ಬೇರೆ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಿದೆ. ರಾಜ್ಯದಲ್ಲೂ ಕೂಡ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ ನೀಡಿದರು.

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಲು ಜೋರಾಗಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕುರ್ಚಿಗಾಗಿ ಜಟಪಟಿ ನಡೆಸುತ್ತಿದ್ದರೆ ಮತ್ತೊಂದು ಕಡೆ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ ಸದ್ಯ ರಾಜ್ಯದಲ್ಲಿ ಬದಲಾವಣೆಯ ಚರ್ಚೆ ಇಲ್ಲವೇ ಇಲ್ಲ. ಹೈಕಮಾಂಡ್ ಈ ವಿಚಾರವಾಗಿ ಎಲ್ಲವನ್ನು ನಿರ್ಧಾರ ಮಾಡುತ್ತೆ. ಇನ್ನು ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಡಿಸಿಎಂ ಡಿಕೆಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತೆ ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ.ಆದರೆ ಹೈಕಮಾಂಡ್ ಸಿದ್ದರಾಮಯ್ಯಗೆ ಅವಕಾಶ ಕೊಟ್ಟಿದೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ ಆ ವಿಚಾರವಾಗಿ ಬಂದಾಗ ಅದರ…

Read More

ವಿಜಯನಗರ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಹೋಗೋ ಪ್ರಶ್ನೆಯೇ ಇಲ್ಲ. ಅಲ್ಲದೆ ನಮಗೆ ಯಾವುದೇ ಆಫರ್ ಇಲ್ಲ. ಹಾಗಾಗಿ ಚುನಾವಣೆಗೆ ಹೋಗುವುದು ನಮ್ಮ ನಿಲುವು ಎಂದು ವಿಪಕ್ಷ ನಾಯಕ ಆರ್ ಅಶೋಕ ಸ್ಪಷ್ಟಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಕೆ ಶಿವಕುಮಾರ್ ಹಿಂದೆ ಯಾರಿದ್ದಾರೆ ಗೌಪ್ಯ ಮತದಾನ ಮಾಡಿ ಅಂತಿದ್ದಾರೆ ಗೌಪ್ಯ ಮತದಾನ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಕಾಂಗ್ರೆಸ್ ಪಕ್ಷ ಸತ್ತ ಹೆಣ ಇದ್ದಂತೆ ಸಿದ್ದರಾಮಯ್ಯ ಹಿಂದೆ ಡಿಕೆ ಶಿವಕುಮಾರ್ ಮುಂದೆ ಹೊತ್ತುಕೊಂಡು ಹೋಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಎಂದು ಯಾರು ಹೇಳಿದರು? ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ಪ್ರತಿಪಕ್ಷ ನಾಯಕ ಅಶೋಕ್ ಹೇಳಿಕೆ ನೀಡಿದರು.

Read More

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿಗೆ ಡಿಕೆ ಶಿವಕುಮಾರ್ ಅವರು ಆಫರ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಬ್ಬರ ನಡುವಿನ ಮಾತುಕತೆಯಲ್ಲಿ ಡಿ.ಕೆ ಶಿವಕುಮಾರ್‌ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಒಂದು ವೇಳೆ ನಾನು ಸಿಎಂ ಆದರೆ ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದನ್ನು ನಿರಾಕರಿಸಲ್ಲ, ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಹೇಳಿದ ಹಾಗೇ ಕೇಳುವೆ, ಹೈಕಮಾಂಡ್ ನಿಮ್ಮನ್ನು ಒಪ್ಪಿದರೆ ನಿಮ್ಮ ಪರವಾಗಿ ನಾವು ಇರುತ್ತೇವೆ ಅಂತ ಹೇಳಿದ್ದಾರೆ ಎನ್ನಲಾಗಿದೆ. ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಸಿಎಂ ಸಿದ್ದರಾಮಯ್ಯ ಅವರ ಪರವಾಗಿರುವ ನಾಯಕರ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಿಂಬಾಲಕರು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಹೋಗುವುದಿಲ್ಲ ಎನ್ನುವುದು ಡಿ.ಕೆ ಶಿವಕುಮಾರ್ ಚೆನ್ನಾಗಿ ಗೊತ್ತಿರುವ ಹಿನ್ನಲೆಯಲ್ಲಿ ಸದ್ಯ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ…

Read More

ಕೊಪ್ಪಳ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಅದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ವಿಚಾರವಾಗಿ ಕೊಪ್ಪಳದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಬೇರೆ ಬೇರೆ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಿದೆ. ರಾಜ್ಯದಲ್ಲೂ ಕೂಡ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ. ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದಲ್ಲಿ ಗಂಡ, ಹೆಂಡತಿಯೇ ಕಿಂಗ್ ಪಿನ್ ಆಗಿದ್ದು, ಸಿಸಿಬಿ ಪೊಲೀಸರು ಇದೀಗ ದಂಪತಿ ಶಿವಕುಮಾರ್, ರಮ್ಯಾರನ್ನು ಬಂಧಿಸಿದ್ದಾರೆ. ಸದ್ಯ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯಾಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.  ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದರು.

Read More

ಕಲಬುರ್ಗಿ : ನಿನ್ನೆ ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಅಪಘಾತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಂತೇಶ ಸಂಬಂಧಿ ಬಸವರಾಜ್ ಅವರು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಠಾಣೆಗೆ ದೂರು ನೀಡಿದ್ದು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಮ ಮತ್ತು ಅತಿ ವೇಗದಿಂದ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ 281, 125,(A), 125 (B) 106 BNS ಸೆಕ್ಷನ್ ಅಡಿ ಕಾರ್ ಚಾಲಕ ಆರೋಕಿಯ ಅಂಥೋನಿ ರಾಜ್ ವಿರುದ್ಧ ದಾಖಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಳ್ಳಂ ಬೆಳಗ್ಗೆ ಯುವಕನ ಭೀಕರ ಕೊಲೆಯಾಗಿದೆ. ಗೆಳೆಯನನ್ನು ಯುವಕರು ಅಟ್ಟಾಡಿಸಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ನಗರದ ಶಾಂತಿನಗರದಲ್ಲಿ ಈ ಒಂದು ಹತ್ಯೆ ನಡೆದಿದೆ . ಚಾಕು ಇರಿದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಸುಕಿನ ಜಾವ 5.45 ಸುಮಾರಿಗೆ ಕೊಲೆಗೈದು ಹಂತಕರು ಪರಾರಿ ಆಗಿದ್ದಾರೆ. ಮೈಸೂರಿನ ಶಾಂತಿ ನಗರದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮೃತ ಯುವಕನನ್ನು ಸೈಯದ್ ಸೂಫಿಯಾನ್ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಇಬ್ಬರು ಸ್ನೇಹಿತರು ಭೀಕರವಾಗಿ ಕೊಲೆ ಮಾಡಿದ್ದಾರೆ. ಶಾಂತಿನಗರದಲ್ಲಿ ಶಾಹೀದ್ ಮತ್ತು ಜಹೀದ್ ಎನ್ನುವವರಿ ಗೆಳೆಯ ಸೈಯದ್ ಗೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಕೊಲೆ ಮಾಡಿದ ಬಳಿಕ ಇಬ್ಬರು ಸ್ಥಳದಿಂದ ಪರಾರಿ ಆಗಿದ್ದಾರೆ ತೀವ್ರ ರಕ್ತ ಸ್ರಾವದಿಂದ ಸಯ್ಯದ್ ನರಳಾಡಿ ಪ್ರಾಣ ಬಿಟ್ಟಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲೀಸಲಾಗಿತ್ತಾದರೂ ಅಷ್ಟರಲ್ಲೇ ಸೈಯದ್ ಸಾವನ್ನಪ್ಪಿದ್ದ.ಕೊಲೆಯ ಭೀಕರ…

Read More

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆದಿತ್ತು.ಇದೀಗ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅದರ ಬೆನ್ನಲ್ಲೇ ಇಂದು ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸಹ ಏರ್ಪಡಿಸಲಾಗಿತ್ತು. ಆದರೆ ಇದೀಗ ಸತೀಶ್ ಜಾರಕಿಹೊಳಿ ದಿಡೀರ್ ಎಂದು ಡಿನ್ನರ್ ಮೀಟಿಂಗ್ ರದ್ದುಪಡಿಸಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡೆ ತೀವ್ರ ಕುತೂಹಲ ಮೂಡಿಸಿದೆ.

Read More