Author: kannadanewsnow05

ಉತ್ತರಪ್ರದೇಶ : ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಮಾನವೀಯತೆ ಕರುಣೆ ಅನ್ನೋದೇ ಸತ್ತುಹೋಗಿದೆ. ಇದಕ್ಕೆ ನಿದರ್ಶನವೆಂಬತ್ತೆ ಉತ್ತರ ಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟ್ರಕ್ ಒಂದು ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದರು, ಚಾಲಕ ರಕ್ಷಣೆಗೆ ಅಂಗಾಲಾಚಿದ್ದಾನೆ. ಆದರೆ ಜನರು ಆತನ ರಕ್ಷಣೆಗೆ ಮುಂದಾಗದೆ ನೋಡುತ್ತಾ ನಿಂತಿರುವ ಅಮಾನವೀಯ ಘಟನೆ ವರದಿಯಾಗಿದೆ. ಹೌದು ಉತ್ತರ ಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಅಪಘಾತದಿಂದ ಟ್ರಕ್ ಚಾಲಕ ಸಜೀವ ದಹನಗೊಂಡಿದ್ದಾನೆ. ರಕ್ಷಣೆಗೆ ಚಾಲಕ ಅಂಗಾಲಾಚಿದರೂ ಕೂಡ ಜನ ಅಮಾನವೀಯತೆಯಿಂದ ನೋಡುತ್ತಾ ನಿಂತಿದ್ದರೆ ಹೊರತು, ಯಾರು ಕೂಡ ಸಹಾಯಕ್ಕೆ ಮುಂದಾಗಲಿಲ್ಲ. ಚಾಲಕ ಸಾಯುತ್ತಿದ್ದರು ಜನರು ವಿಡಿಯೋ ಮಾಡುತ್ತ, ನೋಡುತ್ತಾ ನಿಂತಿದ್ದಾರೆ/ ಉತ್ತರ ಪ್ರದೇಶದ ಸೋನಾಭದ್ರದಲ್ಲಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಟ್ರಕ್ ಅಪಘಾತದಿಂದ ಹೊತ್ತಿ ಉರಿಯುತ್ತಿದ್ದರು ಹೊರತು ಚಾಲಕನ ರಕ್ಷಣೆಗೆ ಮುಂದಾಗಲಿಲ್ಲ. ಹೀಗಾಗಿ ಚಾಲಕ ಸಜೀವ ದಹನಗೊಂಡಿದ್ದಾನೆ.

Read More

ಕೊಪ್ಪಳ : ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಳಿ ಕಾಲುವೆಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆಯಾಗಿವೆ. ರುದ್ರೇಶ್ ಗಂಗಾವತಿ (23) ಹಾಗೂ ರವಿರಾಮಣ್ಣ ತಟ್ಟಿ (22) ಮೃತ ದುರ್ಗವಿಗಳು ಹಾಕಲು ಆಗಿದಿದ್ದ ಕಾಲುವೆಯಲ್ಲಿ ಇಬ್ಬರು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಕುನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠಕ್ಕೆ ಕೋಟ್ಯಾಂತರ ರೂಪಾಯಿ ದೇಣಿಗೆ ಬರುತ್ತಿದ್ದು, ಹಾಗಾಗಿ ಪಂಚಮಸಾಲಿ ಗುರುಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ಶುರುವಾಗಿದೆ. ತಹಸೀಲ್ದಾರ್ ಮಠದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ದಾವಣಗೆರೆಯ ಹರಿಹರದಲ್ಲಿರುವ ಪಂಚಮಸಾಲಿ ಗುರುಪೀಠದಲ್ಲಿ ನಿಷೇಧಜ್ಞೆ ಜಾರಿ ಮಾಡಲಾಗಿದೆ. ಮಠದ ಗೇಟ್ ಬಳಿಗೆ ಪೊಲೀಸರು ಭಕ್ತರನ್ನು ತಡೆದಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗಿವಿನ ವಾತಾವರಣ ನಿರ್ಮಾಣವಾಗಿದೆ. ಭಕ್ತರು ಗೇಟ್ ಬಳಿ ಹೈಡ್ರಾಮಾ ಸೃಷ್ಟಿ ಮಾಡಿದ್ದು, ಮಠದ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಮಠದ ಒಳಗೆ ವಚನಾನಂದ ಸ್ವಾಮೀಜಿ ಇದ್ದಾರೆ. ಪಂಚಮಸಾಲಿ ಮಠದ ಟ್ರಸ್ಟ್ ಮತ್ತು ಮಠದ ಭಕ್ತರಿಂದ ಇಂದು ಪ್ರತ್ಯೇಕ ಸಭೆ ನಡೆಸಲಾಗಿದೆ. 15 ಜನ ಟ್ರಸ್ಟಿಗಳು 5 ಜನ ಪದನಿಮಿತ್ಯ ಸದಸ್ಯರು ಹಾಗೂ ಮೂವರು ಆಹ್ವಾನಿತರು ಒಳಗೊಂಡ ಸಭೆ ನಡೆಯುತ್ತಿದ್ದು, ಐವರು ಕಚೇರಿ ಸಹಾಯಕರು ಸೇರಿ 28 ಜನರಿಗೆ ಮಾತ್ರ ಮಠದಲ್ಲಿ ಪ್ರವೇಶ ನೀಡಲಾಗಿದೆ. ಜಿಲ್ಲಾಧಿಕಾರಿ ಗೆ ಟ್ರಸ್ಟ್ ಅಧ್ಯಕ್ಷ ಬಿಸಿ ಮಾಪತಿ ಮನವಿ ಮಾಡಿದ್ದಾರೆ.…

Read More

ಬೆಂಗಳೂರು : ಹೈಕಮಾಂಡ್ ಬೇಟಿಗೆ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರು ಸಮರ್ಥರಾಗಿದ್ದಾರೆ ಹಾಗಾಗಿ ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ. ಅದು ಗ್ಯಾಂಬ್ಲಿಂಗ್ ಅಲ್ಲ ಅರ್ಹತೆ ಇದೆ ಕೊಡಿ ಅನ್ನುವುದರಲ್ಲಿ ತಪ್ಪಿಲ್ಲ. ನಾಯಕತ್ವ ಬದಲಾವಣೆ ಸೇರಿ ಎಲ್ಲವನ್ನು ಹೈಕಮಾಂಡ್ ಮಾಡಬೇಕು. ಹೊರಗಿನ ಪಂಚಕ್ಕೆ ಮೌನಿಯಾಗಿದ್ದಾರೆ ಅನಿಸುತ್ತೆ. ಯಾವಾಗ ಸಚಿವ ಸಂಪುಟ ಪುನರಚನೆ ಮಾಡಬೇಕು ಅಂತ ಹೈಕಮಾಂಡ್ ಅವರಿಗೆ ಗೊತ್ತಿದೆ. ಶಾಸಕರು ಒಟ್ಟಾಗಿ ಮಂತ್ರಿ ಸ್ಥಾನ ಕೇಳಲು ಹೋಗಿದ್ದಾರೆ ಅಷ್ಟೇ, ಹಿಂದೆಯೂ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ಹೋಗಿದ್ದರು ಎಂದು ಜಿ ಪರಮೇಶ್ವರ್ ತಿಳಿಸಿದರು.

Read More

ವಿಜಯಪುರ : ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ. ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು…

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು.…

Read More

ಬೆಳಗಾವಿ : ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈರಮ್ಮ ಈರಪ್ಪ ಶೀಗಿಹಳ್ಳಿ (21) ಗರ್ಭಿಣಿ ಸಾವನಪ್ಪಿದ್ದು ಅಲ್ಲದೆ ಆಕೆಯ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವನಪ್ಪಿದೆ. ಇದೀಗ ಮತ ಈರಮ್ಮ ಕುಟುಂಬಸ್ಥರು ವೈದ್ಯರ ನಿರ್ಲಕ್ಷದಿಂದ ಈರಮ್ಮ ಸಾವನಪ್ಪಿದ್ದಾಳೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ತುರಮರಿ ಗ್ರಾಮದ ನಿವಾಸಿಯಾದ ಈರಮ್ಮ ಏಪ್ರಿಲ್ 10ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಗರ್ಭಿಣಿ ಕುಟುಂಬಸ್ಥರು ಆರೋಪಿಸಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಸಾವನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ. ತಡರಾತ್ರಿ ಆಸ್ಪತ್ರೆಯಲ್ಲಿ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಮಗು ಸಾವನಪ್ಪಿದೆ ಸಾವಿನ ಬಳಿಕ ಮದ್ಯ ರಾತ್ರಿ ಸಹಿ ಮಾಡಿಸಿಕೊಂಡು ಕಳುಹಿಸಲು ಸಿಬ್ಬಂದಿಗಳು ಯತ್ನಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಸದ್ಯ ಆಸ್ಪತ್ರೆಗೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೋಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಈತ ಎಂತಹ ಕಿಲಾಡಿ ಅಂದರೆ ಈಗಾಗಲೇ ಆತನಿಗೆ ಎರಡು ಮದುವೆಯಾಗಿದ್ದು, ಆದರೂ ಕೂಡ ಬೇರೆ ಹುಡುಗಿಯೊಂದಿಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಮೊದಲ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಬಂದು ಆತನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಹೌದು ಆನೇಕಲ್ ನಲ್ಲಿ ರವಿ ಎಂಬ ಖಿಲಾಡಿ ಕಾಮುಕನಿಗೆ ಇದೀಗ ಧರ್ಮದೇಟು ಬಿದ್ದಿದೆ. ಇಬ್ಬರ ಜೊತೆ ಮದುವೆಯಾಗಿದ್ದು ಅಲ್ಲದೆ ಮತ್ತೊಬ್ಬಳ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಳ್ಳಲು ಮುಂದಾಗಿದ್ದಾನೆ. ರವಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯರನ್ನು ಮದುವೆ ಆಗಿ ಪ್ರಗ್ನೆಂಟ್ ಮಾಡಿ ಅವರನ್ನು ಬಿಟ್ಟು ಬಿಡೋದೇ ಈತನ ಚಟವಾಗಿದೆ. ತುಮಕೂರು ಮೂಲದ ಆರೋಪಿ ರವಿಗೆ ಇದೀಗ ಹಿಗ್ಗಾಮುಗ್ಗ ಥಳಿಸಲಾಗಿದೆ. ಕಳೆದ 2024ರಲ್ಲಿ ಪಂಕಜ ಜೊತೆಗೆ ರವಿಗೆ ಮೊದಲ ಮದುವೆಯಾಗಿತ್ತು. ಮೊದಲ ಪತ್ನಿ ಗರ್ಭಣಿಯಾಗಿದ್ದಾಗ 2025ರಲ್ಲಿ ಎರಡನೇ ಮದುವೆ ಆಗಿದ್ದಾನೆ ಮದುವೆ ಆಗಿರುವ ವಿಷಯ ತಿಳಿದು ಆಗ ಮೊದಲ ಪತ್ನಿ ಗಲಾಟೆ ಮಾಡಿದ್ದಾಳೆ. ಮೊದಲ ಪತ್ತೆ…

Read More

ಮುಂಬೈ : ಅಮೆರಿಕಾ ಇರಾನ್ ನಡುವಿನ ಸಂಧನ ಮಾತುಕತೆ ವಿಫಲ ಹಾಗೂ ಜಲಸಂಧಿ ಮೇಲಿನ ಅಮೆರಿಕ ದಿಗ್ಬಂಧನ ಹಿನ್ನೆಲೆಯಲ್ಲಿ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಇದೀಗ ಮತ್ತೆ ರಕ್ತಪಾತ ನಡೆದಿದೆ. ಹೌದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಮತ್ತೆ ರಕ್ತಪಾತ ಆಗಿದ್ದು, ಸನ್ಸೆಕ್ಸ್ 1,600 ಅಂಕಕ್ಕೆ ಕುಸಿದಿದ್ದು, 400ಕ್ಕೂ ಹೆಚ್ಚು ಪಾಯಿಂಟ್ ನಿಫ್ಟಿ ಕುಸಿತ ಕಂಡಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ ಮುಂಬೈ ಷೇರು ಮಾರುಕಟ್ಟೆ ತೀವ್ರ ಕುಸಿತಕ್ಕೆ ಸಾಕ್ಷಿಯಾಯಿತು. ಜಾಗತಿಕ ಮಾರುಕಟ್ಟೆಯಲ್ಲಿನ ನಕಾರಾತ್ಮಕ ಬೆಳವಣಿಗೆಗಳು, ಯುಎಸ್-ಇರಾನ್ ನಡುವಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯು ಹೂಡಿಕೆದಾರರಲ್ಲಿ ಭೀತಿ ಮೂಡಿಸಿದೆ. ಪರಿಣಾಮವಾಗಿ ಬಿಎಸ್‌ಇ (BSE) ಸೆನ್ಸೆಕ್ಸ್ 1,600ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು 72,000 ಮಟ್ಟಕ್ಕೆ ಕುಸಿದಿದೆ. ಬ್ಯಾಂಕಿಂಗ್, ಆಟೋ ಮತ್ತು ಐಟಿ ವಲಯದ ಷೇರುಗಳು ಭಾರಿ ನಷ್ಟ ಅನುಭವಿಸಿವೆ.

Read More

ಮುಂಬೈ : ಅಮೆರಿಕಾ ಇರಾನ್ ನಡುವಿನ ಸಂಧನ ಮಾತುಕತೆ ವಿಫಲ ಹಾಗೂ ಜಲಸಂಧಿ ಮೇಲಿನ ಅಮೆರಿಕ ದಿಗ್ಬಂಧನ ಹಿನ್ನೆಲೆಯಲ್ಲಿ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಇದೀಗ ಮತ್ತೆ ರಕ್ತಪಾತ ನಡೆದಿದೆ. ಹೌದು ಮುಂಬೈ ಷೇರು ಮಾರುಕಟ್ಟೆಯಲ್ಲಿ ಮತ್ತೆ ರಕ್ತಪಾತ ಆಗಿದ್ದು, ಸನ್ಸೆಕ್ಸ್ 1,500 ಅಂಕಕ್ಕೆ ಕುಸಿದಿದೆ. ಇಂದು ವಹಿವಾಟು ಆರಂಭವಾಗುತ್ತಿದ್ದಂತೆಯೇ ಮುಂಬೈ ಷೇರು ಮಾರುಕಟ್ಟೆ ತೀವ್ರ ಕುಸಿತಕ್ಕೆ ಸಾಕ್ಷಿಯಾಯಿತು. ಜಾಗತಿಕ ಮಾರುಕಟ್ಟೆಯಲ್ಲಿನ ನಕಾರಾತ್ಮಕ ಬೆಳವಣಿಗೆಗಳು, ಯುಎಸ್-ಇರಾನ್ ನಡುವಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯು ಹೂಡಿಕೆದಾರರಲ್ಲಿ ಭೀತಿ ಮೂಡಿಸಿದೆ. ಪರಿಣಾಮವಾಗಿ ಬಿಎಸ್‌ಇ (BSE) ಸೆನ್ಸೆಕ್ಸ್ 1,500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು 72,000 ಮಟ್ಟಕ್ಕೆ ಕುಸಿದಿದೆ. ಬ್ಯಾಂಕಿಂಗ್, ಆಟೋ ಮತ್ತು ಐಟಿ ವಲಯದ ಷೇರುಗಳು ಭಾರಿ ನಷ್ಟ ಅನುಭವಿಸಿವೆ.

Read More