Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ…
ಬೆಳಗಾವಿ: ಹಳ್ಳಿಯ ಮಣ್ಣಿನ ಪ್ರತಿಭೆಯೊಂದು ರಾಷ್ಟ್ರಮಟ್ಟದಲ್ಲಿ ಮಿಂಚಿದಾಗ ಆ ಸಂಭ್ರಮ ಇಡೀ ನಾಡಿಗೆ ಹರಡುತ್ತದೆ. ಅಂತಹದ್ದೇ ಒಂದು ಐತಿಹಾಸಿಕ ಸಾಧನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದ ಬಸವರಾಜ ಕೆಂಪವಾಡ ಮಾಡಿದ್ದಾರೆ. ಕೇಂದ್ರ ಲೋಕಸೇವಾ ಆಯೋಗವು (UPSC) ನಡೆಸಿದ 2025ನೇ ಸಾಲಿನ ಭಾರತೀಯ ಅರಣ್ಯ ಸೇವೆ (Indian Forest Service – IFS) ಪರೀಕ್ಷೆಯಲ್ಲಿ ಬಸವರಾಜ ಅವರು ಇಡೀ ದೇಶಕ್ಕೆ ಮೊದಲ ರ್ಯಾಂಕ್ (All India Rank 1) ಪಡೆಯುವ ಮೂಲಕ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಶುಕ್ರವಾರ ಪ್ರಕಟವಾದ ಫಲಿತಾಂಶವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಕೃಷಿ ಕುಟುಂಬದ ಹಿನ್ನೆಲೆ ಮತ್ತು ಬಾಲ್ಯದ ಶಿಸ್ತು ಬಸವರಾಜ ಕೆಂಪವಾಡ ಅವರು ಅತ್ಯಂತ ಸಾಧಾರಣ ಕೃಷಿ ಕುಟುಂಬದಿಂದ ಬಂದವರು. ಇವರ ತಂದೆ ಮತ್ತು ತಾಯಿ ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಹಗಲಿರುಳು ಶ್ರಮಿಸಿ ಕೃಷಿ ಮಾಡುತ್ತಾ ಮಕ್ಕಳ ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆರ್ಥಿಕ ಮುಗ್ಗಟ್ಟಿನ ನಡುವೆಯೂ ಶಿಕ್ಷಣಕ್ಕೆ…
ಚೈನ್ನೈ: ತಮಿಳುನಾಡಿನ ರಾಜಕೀಯ ರಂಗದಲ್ಲಿ ದಶಕಗಳ ಕಾಲದ ಸಿನೆಮಾ ವರ್ಚಸ್ಸಿನ ನಂತರ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ಅಧಿಕೃತವಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಸಾಕ್ಷಿ ಮತ್ತು ಪ್ರತಿಜ್ಞಾವಿಧಿ: ತಮಿಳುನಾಡಿನಲ್ಲಿ ಸುದೀರ್ಘ ರಾಜಕೀಯ ಕಸರತ್ತು ಮತ್ತು ತೀವ್ರ ಪೈಪೋಟಿಯ ನಂತರ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಅವರಿಗೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿಜಯ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಪೀಳಿಗೆಯ ನಾಯಕತ್ವಕ್ಕೆ ನಾಂದಿ ಹಾಡಿದ್ದಾರೆ. ಗಣ್ಯರ ಉಪಸ್ಥಿತಿ ಮತ್ತು ರಾಜಕೀಯ ಮಹತ್ವ: ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಷ್ಟ್ರಮಟ್ಟದ…
ಬೆಂಗಳೂರು : ಶ್ವಾಸಕೋಶ ಸೋಂಕಿನಿಂದ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ ಸುಧಾಕರ್ ಇಂದು ನಿಧನರಾಗಿದ್ದಾರೆ. ಸಚಿವ ಡಿ ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕರಾದ ಆರ್ ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು. ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು…
ಚೈನ್ನೈ : ಬಹಳ ಕಸರತ್ತು ನಡೆಸಿ ಕೊನೆಗೂ ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಇಂದು ಅವರು ಚೆನ್ನೈನ ಜವಾಹರ್ ಲಾಲ್ ನೆಹರು ಸ್ಟೇಡಿಯಂ ತಲುಪಿದ್ದು ಕೆಲವೇ ಕ್ಷಣಗಳಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ತಮಿಳುನಾಡಿನ ಚೆನ್ನೈನಲ್ಲಿರುವ ಜವಾಹರ್ ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ನಡೆದಿದ್ದು, ಅದಕ್ಕೂ ಮುನ್ನ ರಸ್ತೆ ಇಕ್ಕೆಲಗಳಲ್ಲಿ ದಳಪತಿ ವಿಜಯ್ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಘೋಷಣೆ ಕೂಗಿದರು. ವಿಜಯ ಪಟ್ಟಾಭಿಷೇಕಕ್ಕೆ ನೆಹರು ಸ್ಟೇಡಿಯಂ ಸಜ್ಜಾಗಿದ್ದು ಬಿಗಿ ಭದ್ರತೆಯಲ್ಲಿ ವಿಜಯ ಅವರು ಜವಾಹರ್ ಲಾಲ್ ನೆಹರು ಸ್ಟೇಡಿಯಂ ತೆರಳಿದರು. ತಮಿಳುನಾಡು ನೂತನ ಮುಖ್ಯಮಂತ್ರಿ ಆಗಿ ವಿಜಯ್ ಗದ್ದುಗೆ ಏರಲಿದ್ದಾರೆ. ಅಷ್ಟೆ ಅಲ್ಲದೇ ವಿಜಯ್ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ವಿಜಯ್ ಬಹುಕಾಲದ ಗೆಳತಿ ನಟಿ ತ್ರಿಷಾ ಕೂಡ ಭಾಗವಹಿಸಲಿದ್ದಾರೆ. ಈಗಾಗಲೇ ಚೆನ್ನೈನ ನೆಹರು ನಟಿ ತ್ರಿಶಾ ತಮ್ಮ ನಿವಾಸದಿಂದ ಹೊರಟಿದ್ದಾರೆ. ಇನ್ನು ಈ ಒಂದು ಕಾರ್ಯಕ್ರಮದಲ್ಲಿ ರಾಹುಲ್…
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಭಾರಿ ಏರಿಕೆ ಕಂಡಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಅಲಲ್ಲಿ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದಲ್ಲಿ ಬಿಸಿಲ ಝಳದ ಮಧ್ಯ ಮಳೆಯ ಸಿಂಚನವಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಸುರಿಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಇಂದು ಸಹ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಕೇರಳದ ಆಗ್ನೇಯ ಕರಾವಳಿ ಹೊಂದಿಕೊಂಡಂತೆ ಲಕ್ಷದ್ವೀಪದಲ್ಲಿ 1.5 ಕಿ.ಮೀ. ಎತ್ತರದಲ್ಲಿ ಹಾಗೂ ಕೊಮೊರಿನ್ ಪ್ರದೇಶದ ಮೇಲ್ಭಾಗದಲ್ಲಿ ಸುಮಾರು 5.8 ಕಿ.ಮೀ. ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಕೇರಳ ಕರಾವಳಿ, ಕರಾವಳಿ ಕರ್ನಾಟಕ, ಒಳನಾಡು ಕರ್ನಾಟಕದಿಂದ ಹಿಡಿದು ಮಹಾರಾಷ್ಟ್ರದವರೆಗೆ…
ನವದೆಹಲಿ : ಪಾಕಿಸ್ತಾನದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ನೃತ್ಯಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ ಶೀಮಾ ಕಿರ್ಮಾನಿ ಅವರನ್ನು ಸಿಂಧ್ ಪೊಲೀಸರು ಬಂಧಿಸಿರುವುದು ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ದಶಕಗಳಿಂದ ಭರತನಾಟ್ಯ ಮತ್ತು ಕಥಕ್ ನೃತ್ಯ ಪ್ರಕಾರಗಳ ಮೂಲಕ ಶಾಂತಿ ಹಾಗೂ ಸ್ತ್ರೀವಾದದ ಸಂದೇಶ ಸಾರುತ್ತಿದ್ದ ಕಿರ್ಮಾನಿ ಅವರ ಮೇಲಿನ ಈ ಕ್ರಮವು, ಪಾಕಿಸ್ತಾನದಲ್ಲಿ ಸಾಂಸ್ಕೃತಿಕ ಸ್ವಾತಂತ್ರ್ಯದ ಸ್ಥಿತಿಗತಿಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ. ಭರತನಾಟ್ಯವು ವಿಶ್ವದಾದ್ಯಂತ ಗೌರವಿಸಲ್ಪಡುವ ಅತ್ಯುನ್ನತ ಹಿಂದೂ ಶಾಸ್ತ್ರೀಯ ಕಲಾ ಪ್ರಕಾರವಾಗಿದೆ. ಆದರೆ, ಪಾಕಿಸ್ತಾನದಲ್ಲಿ ಈ ಕಲೆಯನ್ನು ಅಭ್ಯಾಸ ಮಾಡುವ ಮತ್ತು ಪ್ರದರ್ಶಿಸುವ ಕಲಾವಿದರು ನಿರಂತರವಾಗಿ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅಲ್ಲಿನ ಮೂಲಭೂತವಾದಿ ಸಿದ್ಧಾಂತಗಳು ಭಾರತೀಯ ಮೂಲದ ಈ ನೃತ್ಯ ಪ್ರಕಾರಗಳನ್ನು ‘ಇಸ್ಲಾಮಿಕ್ ವಿರೋಧಿ’ ಎಂದು ಬಿಂಬಿಸುತ್ತಿರುವುದು ಕಲಾವಿದರ ಮೇಲೆ ಮಾನಸಿಕ ಮತ್ತು ದೈಹಿಕ ಬೆದರಿಕೆಗಳು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಮತ್ತು ಭಾರತೀಯ ಸಂಸ್ಕೃತಿಗೆ ಸಂಬಂಧಿಸಿದ ಕಲೆಗಳ ಮೇಲೆ ನಡೆಯುತ್ತಿರುವ ಈ ಕಿರುಕುಳವು ವ್ಯವಸ್ಥಿತ ತಾರತಮ್ಯದ…
ಬೆಂಗಳೂರು : ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಬಂಧಿತರಾಗಿರುವ ಅಭಿಚೆರ್ಲಿ ಅಲಿಯಾಸ್ ಅಭಿ ಎಂಬುವವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಿದೆ. ತಮ್ಮ ಮಗನನ್ನು ಬಂಧಿಸಿರುವ ಆದೇಶವನ್ನು ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್ನ ಮೇರಿ ಉಷಾ ಎಂಬುವರು ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ತಾರಾ ವಿತಸ್ತ ಗಂಜು ಅವರಿದ್ದ ಪೀಠ ಈ ಆದೇಶ ನೀಡಿದೆ. ಬಂಧಿತರು 2006ರ ಅಕ್ಟೋಬರ್ 8 ರಂದು ಜನಿಸಿದ್ದು, ಪ್ರಸ್ತುತ 19 ವರ್ಷ ವಯಸ್ಸಿನವರಾಗಿದ್ದಾರೆ. ಅವರ ವಿರುದ್ಧ 2025ರ ಡಿಸೆಂಬರ್ 11ರಂದು ಗೂಂಡಾ ಕಾಯಿದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ. ಅವರ ವಿರುದ್ಧದ ಆರೋಪಗಳು 2023, 24,25ರಲ್ಲಿ ನಡೆದಿರುವ ಘಟನೆಗಳಾಗಿವೆ. ಹೀಗಾಗಿ ಅವರನ್ನು ಬಂಧನಕ್ಕೆ ಆದೇಶ ಹೊರಡಿಸಿರುವುದು 18 ವರ್ಷಕ್ಕೂ ಕಡಿಮೆ ವಯಸ್ಸಿನಲ್ಲಿ ದಾಖಲಾಗಿರುವ ಪ್ರಕರಣಗಳನ್ನು…
ಚಿತ್ರದುರ್ಗ : ತೀವ್ರ ಅನಾರೋಗ್ಯ ಹಾಗು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಸಚಿವ ಡಿ.ಸುಧಾಕರ್, ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ನಸುಕಿನ ಜಾವ 3 ಗಂಟೆ 15 ನಿಮಿಷಕ್ಕೆ ನಿಧನರಾಗಿದ್ದಾರೆ. ಇದೀಗ ಸಚಿವ ಡಿ ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ರಾಜಕೀಯ ಜೀವನ 1961 ಮಾರ್ಚ್ 28ರಂದು ಸಚಿವ ಡಿ ಸುಧಾಕರ್ ಎನ್ ದಶರಥ ಹಾಗೂ ಕಾಂಚನಮಾಲಮ್ಮ ಪುತ್ರರಾಗಿ ಜನಿಸುತ್ತಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಪೂರೈಸುತ್ತಾರೆ ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿಕಾಂ ಕಂಪ್ಲೀಟ್ ಮಾಡುತ್ತಾರೆ. ತಂದೆಯಿಂದ ಲಿಕ್ಕರ್ ಉದ್ಯಮ ಹಾಗೂ ಕೃಷಿ ಕೆಲಸ ಬಳುವಳಿಯಾಗಿ ಬಂದಿತ್ತು. 1978 ಮತ್ತು 1989 ರಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕರಾಗಿದ್ದ ಎಂ ಜಯಣ್ಣ ಅವರಿಂದ ರಾಜಕೀಯ ಪಾಠ ಕಲಿತ ಡಿ ಸುಧಾಕರ್, 2004ರಲ್ಲಿ ಚಳ್ಳಕೆರೆ…
ಹುಬ್ಬಳ್ಳಿ : ಹೆಂಡತಿಯು ತನ್ನ ಇಬ್ಬರು ತಂಗಿಯರ ಫೋಟೋ ತೆಗೆಯಬೇಡ ಎಂದು ಗಂಡನಿಗೆ ಹೇಳಿದಾಗ್ಯೂ ಧಿಕ್ಕರಿಸಿ ಫೋಟೋ ತೆಗೆದಿದ್ದಕ್ಕೆ ದಂಪತಿ ಮಧ್ಯೆ ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಸೇರಿ ಕುಟುಂಬಸ್ಥರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳದ ವಾಜಪೇಯಿ ನಗರದಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಮಗು ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಕೆಎಂಸಿಆರ್ಐಗೆ ದಾಖಲಿಸಲಾಗಿದೆ.ಸುರೇಶಬೈಲಪತ್ತಾರ (33), ಈತನ ಪತ್ನಿ ರಾಜೇಶ್ವರಿ ಬೈಲಪತ್ತಾರ (24), ಪತ್ನಿಯ ತಂಗಿಯರಾದ ಶ್ರುತಿ, ರೇಷ್ಮಾ ಹಾಗೂ 6 ತಿಂಗಳ ಮಗುವಿನ ಮೇಲೆ ಆ್ಯಸಿಡ್ ಬಿದ್ದು ಗಂಭೀರ ಗಾಯವಾಗಳಾಗಿವೆ. ಗಾಯಾಳುಗಳನ್ನು ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಿದ್ದು, ಸುರೇಶ ಬೈಲಪತ್ತಾರ ಹಾಗೂ ರಾಜೇಶ್ವರಿ ಅವರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಏನಿದು ಘಟನೆ?: ತಾರಿಹಾಳದ ವಾಜಪೇಯಿ ನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿರುವ ಸುರೇಶ ಬೈಲಪತ್ತಾರ ಹಿತ್ತಾಳೆ, ತಾಮ್ರದ ಕೆಲಸ ಮಾಡಿಕೊಂಡಿದ್ದಾನೆ. ನಾದಿನಿಯರ ವಿಚಾರವಾಗಿ ಸುರೇಶ ಮತ್ತವನ ಪತ್ನಿ ರಾಜೇಶ್ವರಿ ನಡುವೆ ಜಗಳ ನಡೆದಿದೆ.…













