Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮೇ 31 ರಂದು ಭಾನುವಾರ ಚಿಕ್ಕಬಳ್ಳಾಪುರ ಕನ್ನಡ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಚಿಕ್ಕಬಳ್ಳಾಪುರ ಪತ್ರಿಕಾ ಭವನದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ. ಸಭೆಯಲ್ಲಿ ಮಾತನಾಡಿದ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮೋಕ್ಷಗುಂಡಂ ಸರ್.ಎಂ.ವಿಶೇಶ್ವರಯ್ಯ ಜನ್ಮ ಸ್ಥಳ, ನಂದಿ ಬೆಟ್ಟದ ಸೊಬಗು, ದ್ರಾಕ್ಷಿಯ ನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು. ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ರಾಜ್ಯ ಸಂಘದಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಇದು ರಾಜ್ಯ ಮಟ್ಟದ 6ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದಾಗಿದೆ ಎಂದರು. ಬೀದರ್ನಿಂದ ಚಾಮರಾಜಪೇಟೆಯವರೆಗೂ…
ಬೆಂಗಳೂರು : ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬಿಜೆಪಿ ಆಡಳಿತದಲ್ಲಿ ಇದ್ದಾಗ ಮಾಡಿದ ನಿಷೇಧವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಯಾವುದೇ ಸಾಂಪ್ರದಾಯಿಕ ಸಂಕೇತವನ್ನು ಧರಿಸಬಹುದು. ಅದು ಪೇಟ ಆಗಿರಲಿ, ಟರ್ಬನ್ ಆಗಿರಲಿ, ಜನಿವಾರ ಆಗಿರಲಿ, ಪವಿತ್ರದಾರ, ಶಿವಧಾರ, ರುದ್ರಾಕ್ಷಿ ಅಥವಾ ಹಿಜಾಬ್ ಅನ್ನು ಧರಿಸಿ ಬರುವುದಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕೆ ಇದೀಗ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇನ್ನು ಈ ವಿಚಾರವಾಗಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ಹಿತ ದೃಷ್ಟಿಯಿಂದ ಈ ಆದೇಶವನ್ನು ಹಿಂಪಡೆದಿದ್ದೇವೆ . ಪದೇ ಪದೇ ಯಾಕೆ ಹಿಜಾಬ್ ವಿಚಾರವಾಗಿ ಮಾತನಾಡುತ್ತೀರಿ? ಬಿಜೆಪಿಯವರು ಮಕ್ಕಳ ವಿದ್ಯಾಭ್ಯಾಸಕ್ಕೆ ಕೈ ಹಾಕಬಾರದು. ಜನಿವಾರ ಕಟ್ ಮಾಡಿದಾಗ ನಿಮಗೆ ಕಾಣಿಸಲಿಲ್ಲವೇ? ಏಕೆ ಪದೇ ಪದೇ ಹಿಜಾಬ್ ಬಗ್ಗೆ ಮಾತನಾಡುತ್ತೀರಿ? ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನಿಯಕ್ಕೆ ಮಾತನಾಡುತ್ತಿಲ್ಲ? ಶಿಕ್ಷಣವೇ ಧರ್ಮ…
ಬೆಂಗಳೂರು : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ. ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 🚨 ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಇದೇನಾ @INCKarnataka ಸರ್ಕಾರದ “ಗ್ಯಾರೆಂಟಿ” ಮಾದರಿ? ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ! ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ ವಾಸ್ತವವನ್ನು ಬಯಲಿಗೆಳೆದಿವೆ. ಇದು ಕೇವಲ ಅಂಕಿ-ಅಂಶಗಳ ವರದಿ ಅಲ್ಲ — ಸಾವಿರಾರು ಕುಟುಂಬಗಳ ಕಣ್ಣೀರು ಮತ್ತು ಆತಂಕದ ಕಥೆ. 🚨 2022ರಲ್ಲಿ 1,110 ಇದ್ದ ಮಕ್ಕಳ ನಾಪತ್ತೆ ಪ್ರಕರಣಗಳು,…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡಗಳ ಸರಣಿ ಮುಂದುವರೆದಿದ್ದು, ಇಂದು ನಗರದ ನಾಯಂಡಹಳ್ಳಿಯಲ್ಲಿ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ಗೋದಾಮೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಜನವಸತಿ ಪ್ರದೇಶದ ಸಮೀಪದಲ್ಲೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕ್ಷಣಾರ್ಧದಲ್ಲಿ ಧಗಧಗನೆ ಉರಿಯಲಾರಂಭಿಸಿವೆ. ಘಟನೆಯ ತೀವ್ರತೆ ಎಷ್ಟಿತ್ತೆಂದರೆ, ಗೋದಾಮಿನಿಂದ ಹೊರಹೊಮ್ಮಿದ ದಟ್ಟವಾದ ಕಪ್ಪು ಹೊಗೆ ನಾಯಂಡಹಳ್ಳಿ ಸುತ್ತಮುತ್ತಲ ಕಿಲೋಮೀಟರ್ಗಟ್ಟಲೆ ಪ್ರದೇಶವನ್ನು ಆವರಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ಲಾಸ್ಟಿಕ್ ಮತ್ತು ಸ್ಕ್ರಾಪ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿಯನ್ನು ಹತೋಟಿಗೆ ತರುವುದು ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದೆ. ಬೆಂಕಿ ನಂದಿಸಲು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಪಕ್ಕದಲ್ಲೇ ಇತರೆ ಕಟ್ಟಡಗಳು ಮತ್ತು ಮರಗಳಿದ್ದರಿಂದ ಬೆಂಕಿ ಪಸರಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ನಿಂದ ಈ…
ಉತ್ತರಪ್ರದೇಶ : ಉತ್ತರ ಪ್ರದೇಶದ ಏಳು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಪ್ರಯಾಗ್ರಾಜ್ನಲ್ಲಿ ಅತಿ ಹೆಚ್ಚು (16) ಸಾವು ಸಂಭವಿಸಿದ್ದು, ನಂತರ ಭದೋಹಿ (15) ಮತ್ತು ಮಿರ್ಜಾಪುರ (10) ಸಾವು ಸಂಭವಿಸಿವೆ.ಬುಧವಾರ ಸಂಜೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಧೂಳು ಮತ್ತು ಬಲವಾದ ಗಾಳಿಯೊಂದಿಗೆ ಬೀಸಿದ ಪ್ರಬಲ ಚಂಡಮಾರುತವು ವ್ಯಾಪಕ ನಾಶನಷ್ಟಕ್ಕೆ ಕಾರಣವಾಗಿದ್ದು, ಕನಿಷ್ಠ 54 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತವು ಮರಗಳು ಉರುಳಿ, ಮನೆಗಳಿಗೆ ಹಾನಿಯಾಗಿದೆ, ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ ಮತ್ತು ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಮತ್ತು ಸಂವಹನ ಜಾಲಗಳ ಮೇಲೆ ಪರಿಣಾಮ ಬೀರಿದೆ, ಅಧಿಕಾರಿಗಳು ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಮುಂದುವರೆಸಿದ್ದಾರೆ. ಪ್ರಯಾಗ್ರಾಜ್ನಲ್ಲಿ, ಜಿಲ್ಲೆಯ ಹಲವಾರು ಭಾಗಗಳಲ್ಲಿ ಭಾರೀ ಧೂಳಿನ ಬಿರುಗಾಳಿ ಮತ್ತು ಬಲವಾದ ಗಾಳಿ ಬೀಸಿದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.ಅಲ್ಲದೇ ಭೀಕರ ಬೀರಿಗಳಿಗೆ ವ್ಯಕ್ತಿಯೊಬ್ಬ ಹಾರಿ ಹೋಗುತ್ತಿರುವ ದೃಶ್ಯ ಇದಿಗ ವೈರಲ್ ಆಗಿದೆ. ಬಲವಾದ ಗಾಳಿಯಿಂದಾಗಿ ಟಿನ್ ಶೆಡ್ಗಳು ಮತ್ತು ಸೌರ…
ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದಿದೆ. ರೆವೆನ್ಯೂ ಇನ್ಸ್ಪೆಕ್ಟರ್ (RI) ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ (VA) ಸಂತೋಷ್ ಲೋಕಾಯುಕ್ತ ದಾಳಿಗೆ ಸಿಕ್ಕಿಬಿದ್ದ ಅಧಿಕಾರಿಗಳಾಗಿದ್ದಾರೆ. ಘಟನೆಯ ಹಿನ್ನೆಲೆ: ತರೀಕೆರೆ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆ (Mutation) ಪ್ರಕ್ರಿಯೆಗಾಗಿ ಸಂಬಂಧಪಟ್ಟ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸವನ್ನು ನಿಯಮಾನುಸಾರ ಮಾಡಿಕೊಡಬೇಕಿದ್ದ ಅಧಿಕಾರಿಗಳು, ರೈತನಿಗೆ ಅನಗತ್ಯ ವಿಳಂಬದ ನೆಪವೊಡ್ಡಿ ಸತಾಯಿಸಿದ್ದರು. ಅಂತಿಮವಾಗಿ ಕೆಲಸವನ್ನು ಶೀಘ್ರವಾಗಿ ಮುಗಿಸಿಕೊಡಲು ಅಧಿಕಾರಿಗಳಾದ ರಮೇಶ್ ಮತ್ತು ಸಂತೋಷ್ ಅವರು ಒಟ್ಟು 30 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲೋಕಾಯುಕ್ತರಿಗೆ ದೂರು: ಅಧಿಕಾರಿಗಳ ಭ್ರಷ್ಟಾಚಾರದಿಂದ ಬೇಸತ್ತ ರೈತರು, ಕಷ್ಟಪಟ್ಟು ದುಡಿಯುವ ಹಣವನ್ನು ಲಂಚವಾಗಿ ನೀಡಲು ಮನಸ್ಸಿಲ್ಲದೆ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು. ರೈತ ನೀಡಿದ ದೂರಿನ…
ಬೆಂಗಳೂರು : ಪತ್ನಿಗೆ ನ್ಯಾಯಾಲಯ ನಿಗದಿಪಡಿಸಿದ ಜೀವನಾಂಶ ಪಾವತಿಸದ ಪತಿಯ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪತ್ನಿಗೆ ಜೀವನಾಂಶ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೈಲೇಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಕೆ.ಮನ್ಮಥ ರಾವ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣದಲ್ಲಿ ನ್ಯಾಯಾಲಯ ನಿಗದಿಪಡಿಸಿದ ಜೀವನಾಂಶದ ಹಣವನ್ನು ಪತ್ನಿಗೆ ಪಾವತಿಸಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಅರ್ಜಿದಾರರ ನಡೆಗೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನ್ಯಾಯಾಲಯದ ಆದೇಶ ಪಾಲಿಸದೆ ಇರುವ ಪತಿಯ ವರ್ತನೆ ಉದ್ದೇಶಪೂರ್ವಕ ಅವಿಧೇಯತೆ ಎಂದ ಪೀಠ, ನ್ಯಾಯಾಲಯದ ಆದೇಶ ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದನ್ನ ಪರಿಗಣಿಸಿ, ಮಂಗಳೂರಿನ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ವಾರಂಟ್ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ ಹಿನ್ನೆಲೆ: ಮಂಗಳೂರು ಮೂಲದ ಸೈಲೇಶ್ ಕುಮಾರ್ ಮತ್ತು ನಿಶಾ ಎಸ್. ಕುಮಾರ್ 1998ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.…
ಗದಗ: ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಈಗ ಹೊಸ ಸಂಕಷ್ಟವೊಂದು ಎದುರಾಗಿದೆ. ಅವರ ವಿರುದ್ಧ ಈಗ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೋಕ್ಸೋ (POCSO) ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಇದರಿಂದಾಗಿ ಶ್ರೀಗಳ ಸುತ್ತ ಕಾನೂನಿನ ಉರುಳು ಬಿಗಿಯಾದಂತಾಗಿದೆ. ದೂರು ಮತ್ತು ಎಫ್ಐಆರ್ ವಿವರ: ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನನ್ವಯ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಮೇ 7ರಂದು ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಬಾಲಕನ ಮೇಲೆ ಸ್ವಾಮೀಜಿಯವರು ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ. ಪ್ರಕರಣ ವರ್ಗಾವಣೆ ಮತ್ತು ನೋಟಿಸ್: ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ, ಲಕ್ಷ್ಮೇಶ್ವರ ಪೊಲೀಸರು ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಹರಿಹರ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ವಚನಾನಂದ ಸ್ವಾಮೀಜಿ ಅವರಿಗೆ ಈಗಾಗಲೇ ಅಧಿಕೃತ…
ವಿಜಯಪುರ: ಐತಿಹಾಸಿಕ ನಗರ ವಿಜಯಪುರದ ಹೃದಯಭಾಗದಲ್ಲಿರುವ ಸರಾಫ ಬಜಾರ್ನಲ್ಲಿ ಇಂದು ಬೆಳಿಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಘಟನೆಯ ವಿವರ: ನಗರದ ಪ್ರಸಿದ್ಧ ಸರಾಫ ಬಜಾರ್ನಲ್ಲಿರುವ ಚಿನ್ನದ ಆಭರಣ ತಯಾರಿಕಾ ಘಟಕದಲ್ಲಿ (ಕುಲಮೆ) ಇಂದು ಬೆಳಿಗ್ಗೆ ಎಂದಿನಂತೆ ಕೆಲಸ ಸಾಗುತ್ತಿತ್ತು. ಆಭರಣಗಳನ್ನು ಕರಗಿಸಲು ಬಳಸುವ ಸಣ್ಣ ಸಿಲಿಂಡರ್ ಮೂಲಕ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಂಗಡಿಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಸುತ್ತಮುತ್ತಲಿನ ಅಂಗಡಿಗಳ ಮಾಲೀಕರು ಮತ್ತು ಗ್ರಾಹಕರು ಭಯಭೀತರಾಗಿ ಓಡಿದ್ದಾರೆ. ಗಾಯಾಳುಗಳ ಸ್ಥಿತಿ: ಈ ಅವಘಡದಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರಾದ ಬೀಜು (38) ಮತ್ತು ನಾನಾ ಹಕ್ಕಿಂ (40) ಎಂಬುವವರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿವೆ. ಸ್ಫೋಟ ಸಂಭವಿಸಿದ ತಕ್ಷಣ ಸ್ಥಳೀಯರು ಇವರನ್ನು ರಕ್ಷಿಸಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಇಬ್ಬರಿಗೂ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ…
ಬೆಂಗಳೂರು: ಕರ್ನಾಟಕದಲ್ಲಿ ಮದ್ಯ ಮಾರಾಟವು ಈ ವರ್ಷ ದಾಖಲೆ ಮಟ್ಟವನ್ನು ತಲುಪಿದ್ದು, ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷೆಗೂ ಮೀರಿದ ಆದಾಯ ಹರಿದುಬಂದಿದೆ. ಆದರೆ, ಈ ಆರ್ಥಿಕ ಲಾಭದ ಬೆನ್ನಲ್ಲೇ ಸಮಾಜದ ಕರಾಳ ಮುಖವೊಂದು ಅನಾವರಣಗೊಂಡಿದೆ. ಮದ್ಯದ ವ್ಯಸನದಿಂದಾಗಿ ಮಹಿಳೆಯರ ಮೇಲೆ ಪುರುಷರು ಎಸಗುತ್ತಿರುವ ದೈಹಿಕ ದೌರ್ಜನ್ಯಗಳ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ ಎಂದು ‘ಅಬಕಾರಿ ಸುಧಾರಣಾ-2026’ ವರದಿಯು ಆತಂಕಕಾರಿ ಅಂಶಗಳನ್ನು ಹೊರಹಾಕಿದೆ. ಅಬಕಾರಿ ಇಲಾಖೆಯ ಸುಧಾರಣಾ ವರದಿಯ ಪ್ರಕಾರ, ಮದ್ಯಪಾನದ ಚಟವು ಕೇವಲ ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ, ಕೌಟುಂಬಿಕ ಶಾಂತಿಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಕುಡಿತದ ಚಟವಿಲ್ಲದ ವಿವಾಹಿತ ಪುರುಷರಿಗೆ ಹೋಲಿಸಿದರೆ, ಮದ್ಯವ್ಯಸನಿಗಳು ತಮ್ಮ ಪತ್ನಿ ಹಾಗೂ ಕುಟುಂಬದ ಇತರೆ ಮಹಿಳಾ ಸದಸ್ಯರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ನಡೆಸುತ್ತಿರುವುದು ಅಂಕಿಅಂಶಗಳಿಂದ ಸಾಬೀತಾಗಿದೆ. ವರದಿಯಲ್ಲಿನ ಅಂಕಿಅಂಶಗಳು ಅತ್ಯಂತ ಭಯಾನಕವಾಗಿದ್ದು, ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬರುವ ಪತಿಯಂದಿರ ಪೈಕಿ ಶೇ. 71ರಷ್ಟು ಮಂದಿ ತಮ್ಮ ಪತ್ನಿಯರ ಮೇಲೆ…














