Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮಾದಕದ ಅಮಲಿನಲ್ಲಿದ್ದ ಪುಂಡರ ಗುಂಪೊಂದು ಸಾರ್ವಜನಿಕರ ಮೇಲೆ ಮಾರಕಾಸ್ತ್ರ ಬೀಸಿ ಹಣ ಹಾಗೂ ಮೊಬೈಲ್ ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೇ 5 ರಂದು ಜೆ.ಜೆ ನಗರ ವ್ಯಾಪ್ತಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರಕ ಆಯುಧಗಳನ್ನ ಹಿಡಿದು ಎಂಟ್ರಿ ಕೊಟ್ಟ ಐದಾರು ಯುವಕರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಮನಬಂದಂತೆ ಹಲ್ಲೆ ನಡೆಸಿದೆ. ಮಾದಕ ಪದಾರ್ಥಗಳನ್ನ ಸೇವಿಸಿ ಕಿಕ್ಕೇರಿಸಿಕೊಂಡಿದ್ದ ಆರೋಪಿಗಳು, ಸಾರ್ವಜನಿಕರಿಂದ ಬಲವಂತವಾಗಿ ಮೊಬೈಲ್ ಫೋನ್ಗಳು, ಹಣವನ್ನು ಕಿತ್ತುಕೊಂಡಿದ್ದಾರೆ. ಪುಂಡರು ಮಾರಕಾಸ್ತ್ರ ಬೀಸುತ್ತಿರುವ ದೃಶ್ಯಗಳು ಸ್ಥಳೀಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಜೆ.ಜೆ ನಗರ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಆದರೆ, ಘಟನೆ ನಡೆದು ಹಲವು ದಿನಗಳಾದರೂ ಪೊಲೀಸರು ಕೇವಲ ಒಬ್ಬಿಬ್ಬರನ್ನು ಬಂಧಿಸಿ ಕೈತೊಳೆದುಕೊಂಡಿದ್ದಾರೆ.
ಬೀದರ್ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೀದರ್ ಸಮೀಪದ ತೆಲಂಗಾಣ ಕರ್ನಾಟಕದ ಗಡಿಯ ಬಳಿ ಒಂದು ಅಪಘಾತ ಸಂಭವಿಸಿದೆ. ಬಂಗ್ಲಾ ಮರ್ಜಾಪುರದ ನರಸಿಂಹಲು (54) ಮತ್ತು ಅರುಣ್ (22) ಮೃತರು ಎಂದು ತಿಳಿದುಬಂದಿದೆ. ಮೃತರ ಗುರುತು: ಅಪಘಾತದಲ್ಲಿ ಮೃತಪಟ್ಟವರನ್ನು ಬಂಗ್ಲಾ ಮರ್ಜಾಪುರ ಗ್ರಾಮದ ನಿವಾಸಿಗಳಾದ ನರಸಿಂಹಲು (54) ಮತ್ತು ಅರುಣ್ (22) ಎಂದು ಗುರುತಿಸಲಾಗಿದೆ. ಇಬ್ಬರು ತಮ್ಮ ಕೆಲಸ ನಿಮಿತ್ತ ಬೈಕ್ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಸಾರಿಗೆ ಬಸ್ ಇವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ವಿವರ: ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಾರಿಗೆ ಬಸ್ ಅತೀ ವೇಗವಾಗಿ ಚಲಿಸುತ್ತಿದ್ದದ್ದೇ ಈ ಅನಾಹುತಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿದರಾದರೂ, ಸವಾರರು ಅಷ್ಟರಲ್ಲೇ…
ನವದೆಹಲಿ : ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇದೀಗ ರದ್ದುಗೊಳಿಸಿದೆ. ಮೇ 3ರಂದು ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಇದೀಗ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆಯಲ್ಲಿ ಏನೋ ಒಂದು ಅಕ್ರಮ ನಡೆದಿದೆ ಎನ್ನುವ ಅನುಮಾನದ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದೀಗ ಮತ್ತೆ ಪರೀಕ್ಷೆ ನಡೆಸಬೇಕಾಗಿದ್ದು ಅದಕ್ಕೆ ಮತ್ತೆ ದಿನಾಂಕವನ್ನು ನಿಗದಿಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮೇ 3ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಮುಗಿದ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಎನ್ಟಿಎ, ಪ್ರಶ್ನೆ ಪತ್ರಿಕೆಯ ಪಾವಿತ್ರ್ಯತೆಗೆ ಧಕ್ಕೆಯಾಗಿರುವ ಸಾಧ್ಯತೆಯನ್ನು ಮನಗಂಡು ಪರೀಕ್ಷೆಯನ್ನೇ ರದ್ದುಪಡಿಸುವ ಕಠಿಣ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾತ್ರವಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳು ನಡೆದಿರುವ…
ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣದ ಗೋಡೆ ಕುಸಿದು ಏಳು ಮಂದಿ ಅಮಾಯಕರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಜಗದೀಶ್ ಅವರು ಸರ್ಕಾರಕ್ಕೆ ಅಂತಿಮ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ದುರಂತದ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿರುವ ಜಿಲ್ಲಾಧಿಕಾರಿಗಳು, ಘಟನೆಗೆ ಕಾರಣವಾದ ಅಂಶಗಳನ್ನು ವರದಿಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಿರ್ಲಕ್ಷ್ಯವೇ ಮುಳುವಾಯ್ತು: ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಈ ವರದಿಯಲ್ಲಿ ಸಾವಿನ ಘಟನೆಗೆ ಮುಖ್ಯವಾಗಿ ಆರೋಗ್ಯ ಇಲಾಖೆಯ ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯೇ ನೇರ ಕಾರಣ ಎಂದು ಉಲ್ಲೇಖಿಸಲಾಗಿದೆ. ಗೋಡೆಯ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟದ ಕೊರತೆ ಇರುವುದು ಹಾಗೂ ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಆಡಳಿತ ಮಂಡಳಿಯ ವೈಫಲ್ಯ: ಕೇವಲ ಇಂಜಿನಿಯರ್ಗಳು ಮಾತ್ರವಲ್ಲದೆ, ಆಸ್ಪತ್ರೆಯ ಆಡಳಿತ ಮಂಡಳಿಯೂ ಈ ದುರಂತದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ವರದಿ ಹೇಳಿದೆ. ಹಳೆಯದಾಗಿದ್ದ ಗೋಡೆಯ ಸ್ಥಿತಿಗತಿಯ ಬಗ್ಗೆ ಗಮನಹರಿಸದ ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಈ…
ಅಸ್ಸಾಂ : ಅಸ್ಸಾಂನಲ್ಲಿ ಸತತ 2ನೇ ಬಾರಿಗೆ ಹಿಮಂತ್ ಬಿಸ್ವಾ ಶರ್ಮ ಅವರು ಮುಖ್ಯಮಂತ್ರಿ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಈ ಒಂದು ಕಾರ್ಯಕ್ರಮ ಗುವಾಹಟಿಯ ಪಶು ವೈದ್ಯಕೀಯ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಜಲಕ್ಬರಿ ವಿಧಾನಸಭಾ ಕ್ಷೇತ್ರದಿಂದ ಹಿಮಂತ ಜಯಗಳಿಸಿದ್ದರು. 2001 ರಿಂದ ಆ ಕ್ಷೇತ್ರದಿಂದ ಸತತವಾಗಿ ಗೆಲುವು ಸಾಧಿಸಿದ್ದು ಮೊದಲು ಅವರು ಕಾಂಗ್ರೆಸ್ ನಲ್ಲಿ ರಾಜಕೀಯ ಜೀವನ ಆರಂಭ ಮಾಡಿದ್ದರು. ಆಗಸ್ಟ್ 2015ರಲ್ಲಿ ಕಾಂಗ್ರೆಸ್ ತೆರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮೇ 10 2021 ರಂದು ಅಸ್ಸಾಂನ ಸಿಎಂ ಆಗಿ ಮೊದಲಬಾರಿ ಅಧಿಕಾರ ವಹಿಸಿದ್ದರು. ಈ ಹಿಂದೆ ಆರೋಗ್ಯ ಮತ್ತು ಶಿಕ್ಷಣ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಲ್ ಎಲ್ ಬಿ ಮತ್ತು ಪಿಎಚ್ಡಿ ಪಡೆದಿರುವ ಹಿಮಂತ್ ಗೌಹಾತಿಯ ಕಾಟನ್ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಪದವಿ ಪಡೆದಿದ್ದಾರೆ. ಜಲಕ್ಬರಿ ಕ್ಷೇತ್ರದ ಅಜೇಯ ನಾಯಕ ಹಿಮಂತ್ ಬಿಸ್ವಾ ಶರ್ಮ ಅವರು ಜಲಕ್ಬರಿ ವಿಧಾನಸಭಾ…
ವಿಜಯನಗರ : ವಿಶ್ವವಿಖ್ಯಾತ ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಹೋಂ ಸ್ಟೇ, ವಸತಿ ಗೃಹ, ಗೆಸ್ಟ್ ಹೌಸ್ ಮೇಲೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೋಮವಾರ ದಾಳಿ ನಡೆಸಿ, ತಕ್ಷಣವೇ ಬಂದ್ ಮಾಡುವಂತೆ ಸೂಚಿಸಿದೆ. ಹಂಪಿ, ಕಮಲಾಪುರ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಯ ಇತರೆ ಸ್ಥಳಗಳಲ್ಲಿ ಪ್ರವಾಸೋದ್ಯಮ ಇಲಾಖೆಯಡಿ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಹಂಪಿ ವಿಶ್ವ ಪರಂಪರೆ ನಿರ್ವಹಣಾ ಪ್ರಾಧಿಕಾರವು ಇತ್ತೀಚಿಗೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್ ಅವರ ನೇತೃತ್ವದಲ್ಲಿ ಹಂಪಿ ಮತ್ತು ಕಮಲಾಪುರ ಭಾಗದ ಹೋಂ ಸ್ಟೇ, ವಸತಿ ಗೃಹ, ಗೆಸ್ಟ್ ಹೌಸ್ಗಳ ಮೇಲೆ ದಾಳಿ ನಡೆಯಿತು. ಹಂಪಿಯ ಪಾವಿತ್ರ್ಯತೆ ಮತ್ತು ಐತಿಹಾಸಿಕ ಮಹತ್ವವನ್ನು ಉಳಿಸುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಮಾನ್ಯತೆ ಪಡೆಯದೆ ಹೋಂ ಸ್ಟೇ ನಡೆಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುವುದಲ್ಲದೆ, ಪ್ರವಾಸಿಗರ ಭದ್ರತೆಯ ಬಗ್ಗೆಯೂ ಆತಂಕವಿರುತ್ತದೆ. ಮುಂದಿನ ದಿನಗಳಲ್ಲಿಯೂ ಇಂತಹ…
ಬೆಂಗಳೂರು: ಬಹುದಿನಗಳಿಂದ ಬಾಕಿ ಉಳಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP/GBA) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮತ್ತೊಮ್ಮೆ ಕಾಲಾವಕಾಶ ಕೋರಿದೆ. ಜೂನ್ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ನ ಈ ಹಿಂದಿನ ಆದೇಶದ ನಡುವೆಯೂ, ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 3 ತಿಂಗಳ ಕಾಲಾವಕಾಶ ನೀಡುವಂತೆ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಪ್ರತ್ಯೇಕ ಅಫಿಡವಿಟ್ ಸಲ್ಲಿಕೆ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಪ್ರತ್ಯೇಕವಾಗಿ ಅಫಿಡವಿಟ್ಗಳನ್ನು ಸಲ್ಲಿಸಿವೆ. ಚುನಾವಣೆ ನಡೆಸಲು ಈಗಿನ ಪರಿಸ್ಥಿತಿಯಲ್ಲಿ ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿರುವುದರಿಂದ, ಜೂನ್ ಅಂತ್ಯದ ಗಡುವನ್ನು ವಿಸ್ತರಿಸಿ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಬೇಕು ಎಂಬುದು ಸರ್ಕಾರದ ಮುಖ್ಯ ಮನವಿಯಾಗಿದೆ. ವಿಳಂಬಕ್ಕೆ ಕಾರಣವೇನು? ರಾಜ್ಯ ಸರ್ಕಾರವು ತನ್ನ ಅಫಿಡವಿಟ್ನಲ್ಲಿ ಚುನಾವಣೆ ವಿಳಂಬಕ್ಕೆ ಪ್ರಮುಖ ಕಾರಣವೊಂದನ್ನು ನೀಡಿದೆ. ಪ್ರಸ್ತುತ ರಾಜ್ಯದ ಸರ್ಕಾರಿ ಸಿಬ್ಬಂದಿಗಳು ಜನಗಣತಿ ಕಾರ್ಯ ಹಾಗೂ ಎಸ್ಐಆರ್ (SIR) ಪ್ರಕ್ರಿಯೆಗಳಲ್ಲಿ ಸಂಪೂರ್ಣವಾಗಿ ನಿರತರಾಗಿದ್ದಾರೆ.…
ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ಭಾರತದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ನಿವಾರಣೆಗೆ ಮೋದಿ ಕೆಲ ಸಲಹೆ ಮತ್ತು ತ್ಯಾಗಗಳಿಗೆ ಕರೆ ನೀಡಿದ್ದಾರೆ. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕುಸಿತವಾಗಿದ್ದರೇ, ಅಕ್ಕಿ ದರ ಗಗನಕ್ಕೇರಿದೆ. ಹೌದು ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ ಮನವಿಗಳನ್ನು ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಗೃಹಿಣಿಯರಿಗೆ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅನ್ನೋದು ಸಹ ಒಂದಾಗಿದೆ. ಆರೋಗ್ಯ ಹಾಗೂ ಆರ್ಥಿಕತೆಯ ಉದ್ದೇಶದಿಂದ ಈ ಕರೆ ನೀಡಿದ್ದಾರೆ. ಅಡುಗೆ ಎಣ್ಣೆ ಬಳಕೆ ಮಿತಿಗೆ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕಡಿಮೆಯಾಗಿದೆ. ಎಲ್ಲಾ ಬ್ರ್ಯಾಂಡ್ನ ಅಡುಗೆ ಎಣ್ಣೆಗಳಲ್ಲೂ ಒಂದು ಲೀಟರ್ಗೆ ಮೂರು ರೂಪಾಯಿಯಿಂದ ಐದು ರೂಪಾಯಿವರೆಗೂ ಕಡಿಮೆಯಾಗಿದೆ. ಒಂದು ಟಿನ್…
BREAKING : ಪಂದ್ಯದ ವೇಳೆ ಅಸಭ್ಯ ವರ್ತನೆ : ‘RCB’ ತಂಡದ ದಾಂಡಿಗ ಟೀಮ್ ಡೇವಿಡ್ ಗೆ ಬಿತ್ತು ಭಾರಿ ದಂಡ | Watch Video
ರಾಯ್ಪುರ : ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಿಮ್ ಡೇವಿಡ್ಗೆ ಪಂದ್ಯದ ಸಂಭಾವನೆಯಲ್ಲಿ ಶೇ.30ರಷ್ಟು ದಂಡ ವಿಧಿಸಿಲಾಗಿದೆ. ಭಾನುವಾರ ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್ಸಿಬಿ ಇನಿಂಗ್ಸ್ನ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿತ್ತು. ಈ ವೇಳೆ ಪೆವಿಲಿಯನ್ನಲ್ಲಿ ಕೂತಿದ್ದ ಟಿಮ್ ಡೇವಿಡ್ ತನ್ನ ಎರಡೂ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಶಿಸ್ತು ಪ್ರದರ್ಶಿಸಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಐಪಿಲ್ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಟಿಮ್ ಡೇವಿಡ್ ಐಪಿಎಲ್ ನಿಯಮಗಳ ಪ್ರಕಾರ ಈ ರೀತಿಯ ಆಕ್ಷೇಪಾರ್ಹ ಸನ್ನೆ ಕೋಡ್ ಆಫ್ ಕಂಡಕ್ಟ್ ಆರ್ಟಿಕಲ್ 2.6 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ., ಟಿಮ್ ಡೇವಿಡ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಶೇ. 30 ದಂಡದ ಜೊತೆಗೆ ಡೇವಿಡ್ ಅವರಿಗೆ ಎರಡು ಡಿಮೆರಿಟ್ ಅಂಕಗಳನ್ನು…
ಮಂಡ್ಯ: ರಾಜ್ಯಾದ್ಯಂತ ಸೂರ್ಯನ ಪ್ರಖರತೆ ಹೆಚ್ಚಾಗಿದ್ದು, ಭೀಕರ ಬೇಸಿಗೆಗೆ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ಬೇಗೆಯಿಂದ ಹೈರಾಣಾಗಿರುವ ಮಂಡ್ಯ ಮತ್ತು ಮೈಸೂರು ಭಾಗದ ಜನತೆಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ ಕೇವಲ 90 ಅಡಿಗಳಿಗೆ ಬಂದು ತಲುಪಿದೆ. ಬೇಸಿಗೆಯ ಆರಂಭದಲ್ಲೇ ನೀರಿನ ಮಟ್ಟ ಇಷ್ಟು ವೇಗವಾಗಿ ಕುಸಿಯುತ್ತಿರುವುದು ಕೃಷಿ ಚಟುವಟಿಕೆಗಳ ಮೇಲೆ ಮಾತ್ರವಲ್ಲದೆ, ದೈನಂದಿನ ಜೀವನದ ಮೇಲೂ ಗಂಭೀರ ಪರಿಣಾಮ ಬೀರುವ ಮುನ್ಸೂಚನೆ ನೀಡುತ್ತಿದೆ. ಜಲಾಶಯದ ಒಟ್ಟು ನೀರಿನ ಸಂಗ್ರಹದ ಅಂಕಿ-ಅಂಶಗಳನ್ನು ಗಮನಿಸಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿರುವುದು ಕಂಡುಬರುತ್ತದೆ. ಸದ್ಯ ಡ್ಯಾಮ್ನಲ್ಲಿ ಇರುವುದು ಕೇವಲ 16 ಟಿಎಂಸಿ ನೀರು ಮಾತ್ರ. ಇದರಲ್ಲಿ ಹೂಳು ಮತ್ತು ತಾಂತ್ರಿಕ ಕಾರಣಗಳನ್ನು ಹೊರತುಪಡಿಸಿ,…














