Subscribe to Updates
Get the latest creative news from FooBar about art, design and business.
Author: kannadanewsnow05
ಸಿನಿಮಾ ಪ್ರಿಯರಲ್ಲಿ ಭಾರಿ ಕುತೂಹಲ ಕೆರಳಿಸಿರುವ ‘ಲವ್ ಸೀಸನ್ಸ್’ ಚಿತ್ರದ ಸಂಗೀತ ಪಯಣ ಅಧಿಕೃತವಾಗಿ ಆರಂಭವಾಗಿದ್ದು, ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ “ಮಳೆಯಾಗೋ ಮೊದಲೇ” ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕೃತ್ವಿಕ್ ನಿರ್ದೇಶನದ ಈ ಚಿತ್ರವು ಒಂದು ಸುಂದರ ಪ್ರೇಮಕಥೆಯನ್ನು ಹೊತ್ತು ತರುತ್ತಿದ್ದು, ಆರಂಭದಲ್ಲೇ ತನ್ನ ಇಂಪಾದ ಸಂಗೀತದ ಮೂಲಕ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಹಾಡಿನ ವಿಶೇಷತೆಯೆಂದರೆ, ಇದಕ್ಕೆ ‘ಕಾಂತಾರ’ ಖ್ಯಾತಿಯ ಸಾಹಿತಿ ಪ್ರಮೋದ್ ಮರವಂತೆ ಅವರು ಅತ್ಯಂತ ಮೋಹಕವಾಗಿ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಬಾಲಿವುಡ್ನ ಸ್ಟಾರ್ ಗಾಯಕ ಅರ್ಮಾನ್ ಮಲಿಕ್ ಮತ್ತು ಸರೆಗಮಪ ಸೀಸನ್ 10ರ ಪ್ರತಿಭೆ ಪ್ರಜ್ಞಾ ಮರಾಠೆ ಧ್ವನಿಯಾಗಿದ್ದಾರೆ. ಸದ್ಯ ಈ ಹಾಡು ‘ಎನ್.ಆರ್ ಸ್ಟುಡಿಯೋ’ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಲಭ್ಯವಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ತಾರಾಗಣವೂ ಅಷ್ಟೇ ಸಮೃದ್ಧವಾಗಿದ್ದು, ನಾಯಕನಾಗಿ ಮುಕುಂದ ರಾಮಸ್ವಾಮಿ…
ಚಿಕ್ಕಮಗಳೂರು : ತೀವ್ರ ಗೊಂದಲ, ಹೈಡ್ರಾಮಾ ನಡುವೆ ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯಗೊಂಡಿದ್ದು, 2023ರಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ. ಹೀಗಾಗಿ, ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆ ಇದೀಗ 52 ಮತಗಳ ಮುನ್ನಡೆ ಸಿಕ್ಕಿದೆ. ಇಂದು ಡಿ.ಎನ್.ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರಿಸಿದರು. ಕಳೆದ 2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂದು ರಾಜೇಗೌಡರು ಇವಿಎಂ ಮತಗಳ ಎಣಿಕೆ ವೇಳೆ 324 ಮತಗಳ ಮುನ್ನಡೆ ಸಾಧಿಸಿದ್ದರು.ಆದರೆ, ಅಂಚೆ ಮತ ಪತ್ರದಲ್ಲಿ ಜೀವರಾಜ್ಗಿಂತ 123 ಮತಗಳ ಹಿನ್ನಡೆ ಉಂಟಾಗಿದ್ದರೂ ಒಟ್ಟಾರೆ 201 ಮತಗಳಿಂದ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ಗೆ ಅರ್ಜಿ…
ಬಾಗಲಕೋಟೆ : ಕರ್ನಾಟಕ ಉಪಚುನಾವಣೆಯಲ್ಲಿ ಇದೀಗ ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 20 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 14875 ಮತಗಳ ಅಂತರದಿಂದ ಜಯಗಳಿಸಿದರು. ವೀರಣ್ಣ ಚರಂತಿಮಠ ಅವರು ಈ ಒಂದು ಕ್ಷೇತ್ರದಲ್ಲಿ ಇದೀಗ ಸೋಲು ಅನುಭವಿಸಿದ್ದಾರೆ. ತೀವ್ರ ಹಣಾಹಣಿಯಲ್ಲಿ 21ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 21,866 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಒಟ್ಟು 97,841ಮತಗಳು ಬಂದಿದ್ದು ಇನ್ನು ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಂದಿವೆ. ಮತಗಳ ಅಂತರ ಮತ್ತು ಅಂಕಿ-ಅಂಶ: ಒಟ್ಟು 20 ಸುತ್ತುಗಳ ಸುದೀರ್ಘ ಮತ ಎಣಿಕೆಯ ನಂತರ, ಉಮೇಶ್ ಮೇಟಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ವೀರಣ್ಣ ಚರಂತಿಮಠ ಅವರಿಗಿಂತ 21,866 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ಚುನಾವಣಾ ಕಣದಲ್ಲಿ ಉಮೇಶ್ ಮೇಟಿ ಅವರು ಒಟ್ಟು 97,841 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಬಿಜೆಪಿಯ ವೀರಣ್ಣ…
ಬಾಗಲಕೋಟೆ : ಕರ್ನಾಟಕ ಉಪಚುನಾವಣೆಯಲ್ಲಿ ಇದೀಗ ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 20 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 14875 ಮತಗಳ ಅಂತರದಿಂದ ಜಯಗಳಿಸಿದರು. ವೀರಣ್ಣ ಚರಂತಿಮಠ ಅವರು ಈ ಒಂದು ಕ್ಷೇತ್ರದಲ್ಲಿ ಇದೀಗ ಸೋಲು ಅನುಭವಿಸಿದ್ದಾರೆ. ತೀವ್ರ ಹಣಾಹಣಿಯಲ್ಲಿ ಉಮೇಶ್ ಮೇಟಿಗೆ 78,482 ಮತ ಬಂದಿದ್ದು, ಮತ್ತು ವೀರಣ್ಣ ಚರಂತಿಮಠ ಅವರಿಗೆ 63607 ಮತಗಳು ಬಿದ್ದಿವೆ. ಇನ್ನು ಮೂರು ಸುತ್ತಿನ ಮತ ಎಣಿಕೆಗಳು ಮಾತ್ರ ಬಾಕಿ ಇದ್ದು,ಇನ್ನೇನು ಅಧಿಕೃತ ಫಲಿತಾಂಶ ಘೋಷಣೆ ಅಷ್ಟೇ ಬಾಕಿ ಇದೆ. ಮತಗಳ ಅಂತರ ಮತ್ತು ಅಂಕಿ-ಅಂಶ: ಒಟ್ಟು 20 ಸುತ್ತುಗಳ ಸುದೀರ್ಘ ಮತ ಎಣಿಕೆಯ ನಂತರ, ಉಮೇಶ್ ಮೇಟಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ವೀರಣ್ಣ ಚರಂತಿಮಠ ಅವರಿಗಿಂತ 17205 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ಚುನಾವಣಾ ಕಣದಲ್ಲಿ ಉಮೇಶ್ ಮೇಟಿ ಅವರು ಒಟ್ಟು 87624 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ,…
ಬೆಂಗಳೂರು : ಕರ್ನಾಟಕ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು ಆದರೆ ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಒಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು ಮುಸ್ಲಿಂ ಮತಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಈ ಮಾತನ್ನು ಹೇಳಿದ್ದು ನಮ್ಮ ಕಾರಣದಿಂದಲೇ ಸ್ವಲ್ಪ ಹಿನ್ನಡೆ ಆಗಬಹುದು ಅಂತರ ಕಡಿಮೆ ಆದರೂ ಕೂಡ ನಾವು ಅಲ್ಲಿ ಗೆಲ್ಲುತ್ತೇವೆ ಅಂತ ಸಿಎಂ ಸಿದ್ದರಾಮಯ್ಯ ವಿಶ್ವಾಸ ಕೂಡ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು : ಮೊದಲ ಯತ್ನದಲ್ಲೇ ತಮಿಳುನಾಡಿನಲ್ಲಿ ದಳಪತಿ ವಿಜಯ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದ್ದು ಇನ್ನೇನು ಕೆಲವೇ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಮ್ಯಾಜಿಕ್ ನಂಬರ್ ದಾಟುವ ಸಾಧ್ಯತೆ ಇದೆ ಈಗಾಗಲೇ ತಮಿಳುನಾಡಿನಲ್ಲಿ ಟಿವಿಕೆ 113 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ ಅವರ ಮನೆಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಹೌದು ನಟ ದಳಪತಿ ವಿಜಯ್ ಅವರ ಮನೆಯಲ್ಲಿ ಈಗ ಅವರ ತಂದೆ ತಾಯಿ ಸೇರಿದಂತೆ ಕುಟುಂಬದ ಸದಸ್ಯರು ಎಲ್ಲರೂ ಕೂಡ ಭಾರೀ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ DMK ಹಾಗೂ AIDMK ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಸಿಎಂ ಸ್ಟಾಲಿನ್ ಅವರು ಸ್ಪರ್ಧಿಸಿದ ಕ್ಷೇತ್ರದಲ್ಲಿಯೇ ಅವರಿಗೆ ಹಿನ್ನಡೆ ಆಗಿದೆ. ಹಾಗಾಗಿ ತಮಿಳುನಾಡಿನಲ್ಲಿ ಮೊದಲ ಬಾರಿ ನಟ ವಿಜಯ್ ಅವರು ಇತಿಹಾಸ ನಿರ್ಮಿಸಲು ಮುಂದಾಗಿದ್ದು, ಟಿವಿಕೆ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದರೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಈಗಾಗಲೇ ಪಕ್ಷ ಘೋಷಣೆ ಮಾಡಿದೆ.
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಇಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ವಿಚಾರಣೆ ನಡೆಯಿತು. ಪ್ರಕರಣದ A2 ಆರೋಪಿ ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ವಿಚಾರಣೆಯ ವೇಳೆ ಆರೋಪಿ ದರ್ಶನಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸೌಲತ್ತನ್ನು ಸಹ ನೀಡುತ್ತಿಲ್ಲ. ಇದೆ ವೇಳೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, 57ನೇ ಸಿಸಿಎಚ್ ಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ದರ್ಶನ್ ಪ್ರಕರಣದ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ವರದಿ ಕೇಳಿದೆ ಇಲ್ಲಿಯವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಎಷ್ಟು ಸಾಕ್ಷಿಗಳ ವಿಚಾರಣೆ ಬಾಗಿ ಇದೆ? ವಿವರ ನೀಡಿ. ಸಾಕ್ಷಿ ವಿಚಾರಣೆ ಮುಗಿಯಲು ಎಷ್ಟು ಸಮಯ ಬೇಕು ಎಂದು ವರದಿ ನೀಡಿ. ಜೈಲಿನಲ್ಲಿ…
ಬಾಗಲಕೋಟೆ / ದಾವಣಗೆರೆ : ಕರ್ನಾಟಕ ಉಪಚುನಾವಣೆ ಹಿನ್ನೆಲೆ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು ಕೆಲವು ಮತ ಎಣಿಕೆ ಸುತ್ತಿನಲ್ಲಿ ಹಾವು ಏಣಿ ಆಟ ನಡೆಯುತ್ತಿದೆ. ಇದೀಗ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎರಡು ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ 7ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಕರಿಯಪ್ಪಗೆ ಹಿನ್ನಡೆಯಾಗಿದ್ದು, ಸಮರ್ಥ್ 4617 ಮತಗಳ ಮುನ್ನಡೆ ಪಡೆದಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಕೂಡ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 10ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮಟ್ಟಿಗೆ 11384 ಮತಗಳ ಮುನ್ನಡೆ ಇದ್ದು, ಇನ್ನೂ ಬಿಜೆಪಿ ಅಭ್ಯರ್ಥಿ ವೀರನ ಚರಂತಿಮಠ ಅವರಿಗೆ ಹಿನ್ನಡೆಯಾಗಿದೆ. ಉಮೇಶ್ ಮೇಟಿಗೆ ಇದುವರೆಗೂ 44,620…
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದಿಂದಲೇ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಟಿ ವಿ ಕೆ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು, ರಾಜ್ಯದ ಎರಡು ಪ್ರಮುಖ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಗೆ ನಡುಕ ಹುಟ್ಟಿಸಿದ್ದಾರೆ. ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸ ಚುನಾವಣಾ ಟ್ರೆಂಡ್ ಬಗ್ಗೆ ಪ್ರತಿಕ್ರಿಯಿಸಿರುವ ಟಿ ವಿ ಕೆ ಪಕ್ಷದ ಹಿರಿಯ ಮುಖಂಡರು, ತಮಿಳುನಾಡಿನಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. “ನಾವು ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವುದು ಈಗ ಸ್ಪಷ್ಟವಾಗಿದೆ. ಯಾವುದೇ ಮೈತ್ರಿಯ ಹಂಗಿಲ್ಲದೆ ತಮಿಳುನಾಡಿನಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುತ್ತೇವೆ,” ಎಂದು ಪಕ್ಷದ ಮೂಲಗಳು ಅಧಿಕೃತವಾಗಿ ಘೋಷಣೆ ಮಾಡಿವೆ. ಈ ಘೋಷಣೆಯು ವಿಜಯ್ ಅಭಿಮಾನಿಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಪಕ್ಷವು ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆಯೇ…
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ಸದ್ಯದ ಟ್ರೆಂಡ್ಗಳ ಪ್ರಕಾರ, ರಾಜ್ಯದ ಒಟ್ಟು ಕ್ಷೇತ್ರಗಳ ಪೈಕಿ ಬರೋಬ್ಬರಿ 101 ಸ್ಥಾನಗಳಲ್ಲಿ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ನಡುಗಿಸಿದ್ದಾರೆ. ಚುನಾವಣಾ ಪ್ರಚಾರದ ಆರಂಭದಿಂದಲೂ ಯುವ ಸಮೂಹ ಮತ್ತು ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದ ವಿಜಯ್, ಈಗ ಮತ ಎಣಿಕೆಯಲ್ಲೂ ತಮ್ಮ ವರ್ಚಸ್ಸನ್ನು ಸಾಬೀತುಪಡಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳ ಅಧಿಪತ್ಯವಿದ್ದ ತಮಿಳುನಾಡಿನಲ್ಲಿ, ಮೂರನೇ ಪರ್ಯಾಯ ಶಕ್ತಿಯಾಗಿ ಟಿವಿಕೆ ಉದಯಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಜಯ್ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಕರೂರಿನಲ್ಲಿ ದುರಂತದ ನಡುವೆಯೂ ವಿಜಯದ ನಗು ಅತ್ಯಂತ ಕುತೂಹಲಕಾರಿ ಮತ್ತು ಭಾವನಾತ್ಮಕ ಬೆಳವಣಿಗೆಯೆಂದರೆ ಕರೂರು ವಿಧಾನಸಭಾ ಕ್ಷೇತ್ರ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರೂರಿನಲ್ಲಿ ವಿಜಯ್ ಅವರ ಸಮಾವೇಶದ ವೇಳೆ ಕಾಲ್ತುಳಿತ ಸಂಭವಿಸಿ…














