Author: kannadanewsnow05

ಗದಗ : 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಬಿಜೆಪಿ ಶಾಸಕ ಚಂದ್ರುಲ ಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಶಾಸಕ ಸೇರಿದಂತೆ ಮೂವರು ಲೋಕಾಯುಕ್ತ ವಶಕ್ಕೆ ಪಡೆದಿದ್ದಾರೆ. ಸದ್ಯ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆ ಇಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ ಒಂದು ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರನಿಂದ 5 ಲಕ್ಷ ಕಮಿಷನ್ ಪಡೆಯುವಾಗ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಳಕೆ ಬಿದ್ದಿದ್ದಾರೆ. ರಸ್ತೆ ಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ, 1ಕೋಟಿ ರುಪಾಯಿ ಮೊತ್ತದ ಮಾಲ್ ನಿರ್ಮಾಣ ಮಾಡೋದಿತ್ತು. ಇದಕ್ಕೆ 12 ಪರ್ಸೆಂಟ್ ಕಮಿಷನ್ ಕೇಳಿದರು. ಇದೀಗ ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ ನಡೆಸಿದೆ.ಶಾಸಕ ಚಂದ್ರು ಉಲಮಾಣಿ ಪಿಎ…

Read More

ಸಾಮಾನ್ಯವಾಗಿ ದೊಡ್ಡವರೇ ಎಷ್ಟೋ ಬಾರಿ ಲಿಪ್ಟ್ ನಲ್ಲಿ ಸಿಲುಕಿ ಪರದಾಟ ನಟಿಸಿರುವ ಘಟನೆಗಳು ವರದಿಯಾಗಿವೆ. ಇದೀಗ ಸಮಾಜಿಕ ಜಾಲತಾಣದಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳನ್ನು ಓರ್ವ ಬಾಲಕಿ ದೃತಿಗೆಡದೆ ಧೈರ್ಯವಾಗಿ ರಕ್ಷಣೆ ಮಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಲಿಫ್ಟ್ ನಲ್ಲಿ ಮಕ್ಕಳಿದ್ದಾಗಲೇ ಏಕಾಏಕಿ ಡೋರ್ ಲಾಕ್ ಆಗಿದೆ. ಮಕ್ಕಳ ರಕ್ಷಣೆಗೆ ಪ್ರಯತ್ನ ಮಾಡಲಾಗಿದೆ. ಓರ್ವ ಬಾಲಕಿ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾಳೆ. ಬಾಲಕಿಯ ಪ್ರಯತ್ನಕ್ಕೆ ಸ್ಥಳೀಯ ನಿವಾಸಿಗಳು ನೆರವಾಗಿದ್ದಾರೆ. ಬಾಲಕಿ ಬಾಗಿಲಲ್ಲಿ ಸಿಲುಕಿದರೂ ಕೂಡ ಭಯಪಡದೆ ಮಕ್ಕಳನ್ನು ರಕ್ಷಣೆ ಮಾಡಿದ್ದಾಳೆ. ಬಾಲಕಿಯ ಸಮಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

Read More

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಎನ್ ರಾಜಣ್ಣ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಮಾಡಿದ್ದು ಕುತೂಹಕ್ಕೆ ಕಾರಣವಾಗಿತ್ತು . ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾಯಕತ್ವದ ಗೊಂದಲದ ನಿವಾರಣೆಯ ಬಗ್ಗೆ ಖರ್ಗೆ ಭರವಸೆ ನೀಡಿದ್ದಾರೆ. ಖರ್ಗೆ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ ಹಾಗಾಗಿ ಗೊಂದಲ ಬೇಗನೆ ನಿವಾರಣೆ ಮಾಡಿ ಅಂತ ಚರ್ಚಿಸಿದ್ದೇವೆ. ಆದಷ್ಟು ಬೇಗ ಗೊಂದಲ ನಿವಾರಣೆ ಮಾಡುತ್ತೇವೆ ಅಂದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.

Read More

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ 5 ದಿನಗಳ ಕಾಲ ಅಂದರೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ACJM ಕೋರ್ಟ್ ಆದೇಶ ಹೊರಡಿಸಿದೆ. ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದರು. ಬಳಿಕ ಅವರಾಗಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಬಳಿಕ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಬೈರತಿ ಬಸವರಾಜ್ ಅವರನ್ನು ಕೋರ್ಟಿಗೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಭೈರತಿ ಬಸವರಾಜ್ ಗೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

Read More

ಕೊಪ್ಪಳ : ಬೀಗರು ತಂದಿದ್ದ ಉಪಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಬುತ್ತಿ ಊಟ ಸೇವಿಸಿ 50 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದಿದೆ. ವಧುವನ್ನು ಮನೆತೊಂಬಿಸಿಕೊಳ್ಳುವ ದಿನ ಬೀಗರು ಬುತ್ತಿ ತಂದಿದ್ದರು. ಈ ವೇಳೆ ಬುತ್ತಿ ಉಪಹಾರ ಸೇವಿಸಿ 50 ಕ್ಕು ಹೆಚ್ಚು ಜನ ಅಸ್ವಸ್ಥರಾಗಿದ್ದು, ಸದ್ಯ ಅಸ್ವಸ್ಥರನ್ನು ಗುನ್ನಾಳ ಮತ್ತು ಹಿರೇವಂಕಲಕುಂಟ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಬಳಿಕ ಗುಣಮುಖರಾಗಿ ಎಲ್ಲರೂ ಮನೆಗೆ ತೆರಳಿದ್ದಾರೆ ಎಂದು ಹಿರೇವಂಕಲಕುಂಟ ವೈದ್ಯಾಧಿಕಾರಿ ದಯಾನಂದ ಸ್ವಾಮಿ ಮಾಹಿತಿ ನೀಡಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರಿಸಿಕೊಂಡಿದ್ದ ಶಂಕಿತ ಉಗ್ರನನ್ನು ಇದೀಗ NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಹರ್ಷದ್ ಖಾನ್ ನನ್ನು NIA ಅರೆಸ್ಟ್ ಮಾಡಿದೆ. ಈ ಹಿಂದೆ ಅರ್ಷದ್ ಖಾನ್ ಅನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಗ್ರೀನೆಟ್ ಸಿಕ್ಕಿದ ಪ್ರಕರಣದಲ್ಲಿ ಹರ್ಷದ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು ಆತನ ಬಂಧನದ ಬಳಿಕ ಕೇಸ್ NIA ಗೆ ವರ್ಗಾವಣೆ ಮಾಡಲಾಗಿತ್ತು ಈ ವೇಳೆ ಜಾಮೀನು ಪಡೆದು ಅರ್ಷದ್ ಖಾನ್ ಜೈಲಿನಿಂದ ಬಿಡುಗಡೆಯಾಗಿದ್ದ. ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ. ನ್ಯಾಯಾಲಯವು ವಾರಂಟ್ ಮತ್ತು ಪ್ರಕ್ಲೊಮೇಷನ್ ಹೊರಡಿಸಿತ್ತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ವಿಧಿಗೆ ಬಂದಿಸಿದೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಾಕೊಲೇಟ್ ನೀಡುವುದಾಗಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ಆನೇಕಲ್ ಪೊಲೀಸ್ ಅಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದೇ 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಸಿದ ಆರೋಪ ಕೇಳಿ ಬಂದಿದೆ. ಹೌದು 9 ವಿದ್ಯಾರ್ಥಿಗಳಿಗೆಗಳ ಜೊತೆಗೆ ಅಸಭ್ಯವಾಗಿ ವರ್ತನೆ ಆರೋಪ ಕೇಳಿ ಬಂದಿದ್ದು, ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಕೃತ್ಯದ ಬಗ್ಗೆ ಪೋಷಕರ ಬಳಿ ಮಕ್ಕಳು ಎಲ್ಲ ವಿಚಾರ ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ಆರೋಪಿ ಕೃಷ್ಣ ಮೂರ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಾಗಲಕೋಟೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಅಲ್ಲಿ 8 ಜನರನ್ನು ಬಂಧಿಸಲಾಗಿದೆ ಸದ್ಯ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿದೆ. ಎಲೆಕ್ಷನ್ ಬರುತ್ತದೆಯಲ್ಲ ಆ ರೀತಿ ತಿಮ್ಮಾಪುರವರು ಆ ರೀತಿ ಹೇಳಿಕೆ ನೀಡಿರಬಹುದು ನಾವು ಕೂಡ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಬಿಜೆಪಿ ನಾಯಕರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ನಾಯಕರು ಅದನ್ನೇ ಹೇಳಬೇಕಲ್ಲ ಇನ್ನೇನ್ ಮಾಡೋಕಾಗುತ್ತೆ. ನಾವು ಒಂದು ವರ್ಗಕ್ಕೆ ಕಾನೂನು ಸೀಮಿತ ಮಾಡಲ್ಲ ಯಾರೇ ಇದ್ದರೂ ಕೂಡ ಕಾನೂನು ಎಲ್ಲರಿಗೂ ಒಂದೇ ಭಾರತೀಯ ಜನತಾ ಪಾರ್ಟಿಯವರಿಗೆ ಓಲೈಕೆ ಮಾಡುತ್ತಾರೆ ಮೈನಾರಿಟಿ, ದಲಿತ ವರ್ಗಕ್ಕೆ…

Read More

ವಿಜಯಪುರ : ಕಳೆದ ಕೆಲ ತಿಂಗಳುಗಳ ಹಿಂದೆ ಬಳ್ಳಾರಿ ಸಿರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಣಿ ಬಾನಂತಿ ಸಾವು ಪ್ರಕರಣಗಳು ನಡೆದಿದ್ದವು ಇದೀಗ ವಿಜಯಪುರದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಒಬ್ಬರು ಸಾವನಪ್ಪಿದ್ದಾರೆ ಅಲ್ಲದೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಆಗ ತಾನೆ ಹುಟ್ಟಿದ ಮಗು ಕೂಡ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಢವಳಾರ ಗ್ರಾಮದ ನಿವಾಸಿ ಮೈತ್ರಾ ಸುಂಗಠಾಣ (30) ಮೃತ ಬಾಣಂತಿ. ಮೈತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಅವರನ್ನು ಕಾರಿನ ಮೂಲಕ ಮೊದಲು ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕಂಪ್ಲಿ ಕೋಟೆಯ ತುಂಗಭದ್ರಾ ನದಿ ಸೇತುವೆ ಬಳಿ ಕಬ್ಬಿಣದ ಸ್ವಾಗತ ಕಮಾನು ಅಳವಡಿಸುತ್ತಿದ್ದ ಸಂದರ್ಭದಲ್ಲಿ ಸಿಂಗಲ್ ಚೈನ್ ತುಂಡಾಗಿ ಕೆಳಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.ಕಂಪ್ಲಿಯ 4ನೇ ವಾರ್ಡ್ ನಿವಾಸಿ ವೆಲ್ಡಿಂಗ್‌ ಲೇಬ‌ರ್ ಶೇಕ್ಷಾವಲಿ (35) ಮೃತಪಟ್ಟ ದುರ್ದೈವಿ. ತುಂಗಭದ್ರಾ ನದಿ ಸೇತುವೆ ಹತ್ತಿರದಲ್ಲಿರುವ ಸ್ವಾಗತ ಕಮಾನು ನವೀಕರಣ ಕಾರ್ಯ ನಡೆದಿದೆ. ಮಧ್ಯಾಹ್ನದ ಸಮಯದಲ್ಲಿ ಕ್ರೇನ್​ನಿಂದ ಚೈನಿನ ಮೂಲಕ ಕಮಾನನ್ನು ಮೇಲೆತ್ತಿ ಕೂರಿಸುವ ವೇಳೆ ಚೈನ್ ಕಟ್ಟಾಗಿ ಕಮಾನು ಕೆಳಗೆ ಬಿದ್ದಿದೆ. ಕೆಳಗೆ ನಿಂತಿದ್ದ ಶೇಕ್ಷಾವಲಿ ಮೇಲೆ ಕಮಾನು ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇನಾಯತ್‌ಗೆ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರೀಂ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಂಪ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ…

Read More