Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ದೇಶಾದ್ಯಂತ ಹಳದಿ ಲೋಹದ ಬೆಲೆಯಲ್ಲಿ ನಿರಂತರ ಏರಿಳಿತಗಳು ಮುಂದುವರಿದಿದ್ದು, ಇಂದು ಆಭರಣ ಪ್ರಿಯರಿಗೆ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಬೇಡಿಕೆಯಿಂದಾಗಿ ಚಿನ್ನದ ಬೆಲೆ ಮತ್ತೆ ಗಣನೀಯವಾಗಿ ಏರಿಕೆ ಕಂಡಿದೆ. ಮದುವೆ ಹಾಗೂ ಹಬ್ಬಗಳ ಸೀಸನ್ ಆರಂಭವಾಗುತ್ತಿರುವ ಬೆನ್ನಲ್ಲೇ ಈ ಬೆಲೆ ಏರಿಕೆಯು ಗ್ರಾಹಕರ ಜೇಬಿಗೆ ಕತ್ತರಿ ಹಾಕುವಂತೆ ಮಾಡಿದೆ. ಹತ್ತು ಗ್ರಾಂ ಬೆಲೆಯಲ್ಲಿ ಭಾರಿ ಜಿಗಿತ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಭಾರಿ ಏರಿಕೆ ದಾಖಲಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು 22 ಕ್ಯಾರೆಟ್‌ನ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,250 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ, ಅತ್ಯಂತ ಶುದ್ಧವಾದ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನದ ಬೆಲೆಯೂ ಸಹ ಇಂದು 2,450 ರೂಪಾಯಿಗಳಷ್ಟು ದುಬಾರಿಯಾಗಿದೆ. ಗ್ರಾಮ್ ಲೆಕ್ಕದಲ್ಲಿ 22 ಕ್ಯಾರೆಟ್ ಚಿನ್ನದ ದರ ಇಂದಿನ ಮಾರುಕಟ್ಟೆ ದರದ ಪ್ರಕಾರ, 22 ಕ್ಯಾರೆಟ್‌ನ ಒಂದು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಹಲ್ಲಿ ಬಿದ್ದ ನೀರು ಕುಡಿದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಗುಲ್ಬರ್ಗ ವಿಶ್ವವಿದ್ಯಾಲಯದ ಬಿಸಿಎಂ ಸ್ನಾತಕೋತ್ತರ ವಸತಿ ನಿಲಯದಲ್ಲಿ ನಡೆದಿದೆ. ಬೆಳಿಗ್ಗೆ ನೀರಿನ ಟ್ಯಾಂಕ್ ನಲ್ಲಿ ಹಲ್ಲಿ ಬಿದ್ದಿದ ನೀರನ್ನು ವಿದ್ಯಾರ್ಥಿಗಳು ಕುಡಿದಿದ್ದಾರೆ. ಆದರೆ ಹಲ್ಲಿ ಬಿದ್ದಿರುವ ನೀರನ್ನೆ ಬಳಸಿಕೊಂಡು ಸಿಬ್ಬಂದಿಗಳು ಇದೀಗ ಅಡುಗೆ ಮಾಡುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬಳ್ಳಾರಿ : ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಸಂಸದ ಇ ತುಕಾರಾಂ ಗರಂ ಆಗಿದ್ದು, ಅಶ್ಲೀಲ ಪದ ಬಳಸಿ ಸಂಸದ ತುಕಾರಾಂ ಜನರಿಗೆ ನಿಂದನೆ ಮಾಡಿದ್ದಾರೆ. ಕಳಪೆ ರಸ್ತೆ ಕಾಮಗಾರಿ ಪ್ರಶ್ನಿಸಿದವರಿಗೆ ಸಂಸದ ತುಕಾರಾಂ ಅಶ್ಲೀಲವಾಗಿ ಪದ ಬಳಕೆ ಮಾಡಿ ಬೈದಿದಾರೆ. ಸುಮಾರು 33 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವಂತಹ ರಸ್ತೆ ಮೇಲ್ಸೇತುವೆ ಮತ್ತು ಸರ್ವಿಸ್ ರಸ್ತೆಯ ಕಳಪೆ ಕಾಮಗಾರಿಯನ್ನು ಪ್ರಶ್ನೆ ಮಾಡಿದ್ದಾರೆ. ವಿಜಯನಗರದ ಹೊಸಪೇಟೆ ತಾಲೂಕಿನ ಡಾಣಾಪುರದಲ್ಲಿ ಈ ಒಂದು ಕಾಮಗರಿ ನಡೆದಿದ್ದು, ಕಳಪೆ ಗ್ರಾಮಗಾರಿ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಸದ ತುಕಾರಾಂ ಗರಂ ಆಗಿದ್ದು, ಅಶ್ಲೀಲವಾಗಿ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಹಾಗೂ ಬೈದಿದ್ದಾರೆ ಎಂದು ಸ್ಥಳೀಯರು ಸಂಸದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು GBA ಕಸದ ವಾಹನ ಹರಿದು ಬೈಕ್ ಸವಾರ ಸಾವನಪ್ಪಿದ್ದಾನೆ , ಬೆಂಗಳೂರಿನ ಶಿರಸಿ ಸರ್ಕಲ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ನಿಂದ ಆಯತಪ್ಪಿ 35 ವರ್ಷದ ವ್ಯಕ್ತಿ ರಸ್ತೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಜಿಬಿಎ ಕಸದ ಲಾರಿ ಆತನ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಮಿಳುನಾಡು ನೋಂದಣಿ ಸಂಖ್ಯೆಯ ಬೈಕ್ ಚಲಾಯಿಸುತ್ತಿದ್ದ ಸವಾರ ಎಂದು ತಿಳಿದು ಬಂದಿದ್ದು, ಆದರೆ ಮೃತ ಬೈಕ್ ಸವಾರ ಯಾರು ಎಂದು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More

ಬೆಂಗಳೂರು : ಮಧ್ಯ ಪ್ರಾಚ್ಯದ ಸಂಘರ್ಷ ಹಾಗೂ ಮಾರುಕಟ್ಟೆಯ ಏರಿಳಿತಗಳಿಂದಾಗಿ ಕಂಗೆಟ್ಟಿದ್ದ ರಾಜ್ಯದ ಟೊಮ್ಯಾಟೊ ಬೆಳೆಗಾರರ ಮೊಗದಲ್ಲಿ ಕೊನೆಗೂ ಮಂದಹಾಸ ಮೂಡಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಕುಸಿತ ಕಂಡಿದ್ದ ಟೊಮ್ಯಾಟೊ ದರವು ಇದೀಗ ದಿಢೀರ್ ಏರಿಕೆ ಕಾಣುತ್ತಿದ್ದು, ಮಾರುಕಟ್ಟೆಯಲ್ಲಿ ಗಣನೀಯ ಚೇತರಿಕೆ ದಾಖಲಿಸಿದೆ. ಇದರಿಂದಾಗಿ ಕೈಸುಟ್ಟುಕೊಳ್ಳುವ ಭೀತಿಯಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾ ಖಂಡದಲ್ಲೇ ಪ್ರಸಿದ್ಧ ಪಡೆದಿರುವ ಕೋಲಾರದ ಎಪಿಎಂಸಿ (APMC) ಮಾರುಕಟ್ಟೆಯಲ್ಲಿ ಟೊಮ್ಯಾಟೊಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಗುಣಮಟ್ಟದ ಟೊಮ್ಯಾಟೊ ಹೊಂದಿರುವ ಪ್ರತಿ 15 ಕೆಜಿಯ ಒಂದು ಬಾಕ್ಸ್‌ಗೆ 500 ರೂಪಾಯಿಯಿಂದ 550 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಈ ಉತ್ತಮ ಧಾರಣೆಯು ಮಾರುಕಟ್ಟೆಗೆ ಸ್ಥಿರತೆ ತಂದಿದ್ದು, ರೈತರಿಗೆ ನಿರೀಕ್ಷಿತ ಲಾಭ ತಂದುಕೊಡುತ್ತಿದೆ. ಕೆಲವು ವಾರಗಳ ಹಿಂದೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಉಂಟಾದ ಯುದ್ಧದ ಸನ್ನಿವೇಶ ಹಾಗೂ ರಫ್ತು ಪ್ರಕ್ರಿಯೆಯಲ್ಲಾದ ವ್ಯತ್ಯಯದಿಂದಾಗಿ ಟೊಮ್ಯಾಟೊ ಬೆಲೆ ತಳ ಮುಟ್ಟಿತ್ತು. ಸಾಗಣಿಕೆ ವೆಚ್ಚವೂ ಸಿಗದೆ ರೈತರು ಕಂಗಾಲಾಗಿದ್ದರು. ಆದರೆ ಈಗ ಪರಿಸ್ಥಿತಿ…

Read More

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಏರುಪೇರಿನಿಂದ ಬಳಲುತ್ತಿದ್ದ ಅವರಿಗೆ, ತಪಾಸಣೆಯ ಬಳಿಕ ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಪ್ರಸಿದ್ಧ ವೈದೇಹಿ ಆಸ್ಪತ್ರೆಗೆ (ವಿಠ್ಠಲ್ ಮಲ್ಯ ರಸ್ತೆ) ಇಕ್ಬಾಲ್ ಹುಸೇನ್ ಅವರನ್ನು ದಾಖಲಿಸಲಾಗಿದ್ದು, ಸದ್ಯ ಅವರು ವೈದ್ಯರ ನಿಗಾದಲ್ಲಿದ್ದಾರೆ. ಶಾಸಕರಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಹಾಗೂ ರಾಮನಗರ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರು ಆಸ್ಪತ್ರೆಯತ್ತ ಧಾವಿಸಿದ್ದಾರೆ. ಪ್ರಸ್ತುತ ವೈದೇಹಿ ಆಸ್ಪತ್ರೆಯ ನುರಿತ ಹೃದ್ರೋಗ ತಜ್ಞರ ತಂಡವು ಇಕ್ಬಾಲ್ ಹುಸೇನ್ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಬ್ಲಾಕೇಜ್ ನಿವಾರಣೆಗೆ ಆಂಜಿಯೋಪ್ಲಾಸ್ಟಿ ಅಥವಾ ಅಗತ್ಯವಿರುವ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳ ಕುರಿತು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ…

Read More

ಬೆಂಗಳೂರು : ಬೆಂಗಳೂರಿನ ಕಾಡುಗೋಡಿಯಲ್ಲಿ ಆರು ವರ್ಷದ ಬಾಲಕಿ ವೆನಿಲ್ಲಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಕೇಸಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇನ್ಸ್ಪೆಕ್ಟರ್ ರಂಗಸ್ವಾಮಿ ಕಳ್ಳಾಟ ಇದೀಗ ಬಯಲಾಗಿದೆ. ಕೇಸ್ ಹಳ್ಳ ಹಿಡಿಸಲು ಇನ್ಸ್ಪೆಕ್ಟರ್ ರಂಗಸ್ವಾಮಿ ಮುಂದಾಗಿದ್ದ ಎಂದು ತಿಳಿದು ಬಂದಿದೆ. ರಿಯಲ್ ಎಸ್ಟೇಟ್ ಕಾರಣಕ್ಕೆ ಕೇಸ್ ಹಳ್ಳ ಹಿಡಿಸಲು ಇನ್ಸ್ಪೆಕ್ಟರ್ ರಂಗಸ್ವಾಮಿ ಮುಂದಾಗಿದ್ದಾನೆ. ರಿಯಲ್ ಎಸ್ಟೇಟ್ ಕಂಪನಿ ಹೊಂದಿರುವ ಆರೋಪಿ ಮೋಹನ್ ಕುಟುಂಬ, ಈತನ ಜೊತೆಗೆ ಇನ್ಸ್ಪೆಕ್ಟರ್ ರಂಗಸ್ವಾಮಿ ಅನೇಕ ವರ್ಷಗಳಿಂದ ದೋಸ್ತಿ ಇತ್ತು. ಈ ಹಿಂದೆ ಕೆಲಸ ಮಾಡಿದ ಜಾಗದಿಂದಲೂ ಇಬ್ಬರು ಸ್ನೇಹಿತರಾಗಿದ್ದರು. ಹಾಗಾಗಿ ಕೇಸ್ ಮುಚ್ಚಿ ಹಾಕಲು ಇನ್ಸ್ಪೆಕ್ಟರ್ ರಂಗಸ್ವಾಮಿ ಪ್ಲಾನ್ ಮಾಡಿದ್ದ ಎಂದು ಇದೀಗ ಬಯಲಾಗಿದೆ. ಮೋಹನ್ ಜೊತೆ ರಿಯಲ್ ಎಸ್ಟೇಟ್ ನಲ್ಲಿ ಇನ್ಸ್ಪೆಕ್ಟರ್ ರಂಗಸ್ವಾಮಿ ಭಾಗಿಯಾಗಿದ್ದಾನೆ. ಹಾಗಾಗಿ ಮೋಹನ್ ಜೊತೆಗೆ ಈತ ನಿಂತಿದ್ದಾನೆ. ಮೋಹನ್ಗಾಗಿಯೇ ಕೊಲೆ ಕೇಸ್ ದಾಖಲಿಸಲು ರಂಗಸ್ವಾಮಿ ಹಿಂದೆಟು ಹಾಕಿದ್ದಾನೆ. ಮೃತ ಬಾಲಕಿ ತಂದೆ ಭೇಟಿ ಮಾಡಿರಲಿಲ್ಲವಂತೆ ಇನ್ಸ್ಪೆಕ್ಟರ್,…

Read More

ಬೆಂಗಳೂರು: ರಾಜ್ಯದಲ್ಲಿ ಪರಿಷತ್ ಚುನಾವಣೆ ಕಾವು ಏರುತ್ತಿದ್ದಂತೆ, ರಾಜಕೀಯ ಪಕ್ಷಗಳಲ್ಲಿ ರೆಸಾರ್ಟ್ ರಾಜಕಾರಣದ ಸದ್ದು ಮತ್ತೆ ಜೋರಾಗಿದೆ. ಜೂನ್ 16 ರಿಂದಲೇ ಕಾಂಗ್ರೆಸ್ ನಾಯಕರ ಬಿಗಿ ಪಾರುಪತ್ಯದಲ್ಲಿ ‘ರೆಸಾರ್ಟ್ ಪಾಲಿಟಿಕ್ಸ್’ ಅಧಿಕೃತವಾಗಿ ಆರಂಭವಾಗಲಿದ್ದು, ಪಕ್ಷದ ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ನಾಳೆ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಕರೆಯಲಾಗಿದೆ. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬಿಡದಿಯ ಪ್ರಸಿದ್ಧ ವಂಡರ್ಲಾ ರೆಸಾರ್ಟ್‌ನಲ್ಲಿ ಈ ಹೈವೋಲ್ಟೇಜ್ ಸಭೆ ಆಯೋಜನೆಗೊಂಡಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಜುಗರ ತಪ್ಪಿಸಲು ಕಾಂಗ್ರೆಸ್ ನಾಯಕತ್ವ ಈ ರೆಸಾರ್ಟ್ ತಂತ್ರಕ್ಕೆ ಶರಣಾಗಿದೆ. ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುವವರೆಗೆ ಅಂದರೆ ಜೂನ್ 16 ಮತ್ತು 17 ರಂದು ಎರಡು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಶಾಸಕರು ಇದೇ ರೆಸಾರ್ಟ್‌ನಲ್ಲಿ ವಾಸ್ತವ್ಯ…

Read More

ಹಾಸನ: ವೀಕೆಂಡ್ ರಜೆಯ ಮೋಜು-ಮಸ್ತಿಗಾಗಿ ಪ್ರವಾಸಕ್ಕೆಂದು ಬಂದಿದ್ದ ಯುವಕರ ತಂಡವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಈಜಲು ನದಿಗೆ ಇಳಿದಿದ್ದ ಮೂವರು ಯುವಕರು ನೀರಿನ ಆಳ ತಿಳಿಯದೆ ನದಿ ಪಾಲಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಬಳಿಯ ಹೇಮಾವತಿ ನದಿ ಹಿನ್ನೀರಿನಲ್ಲಿ ನಡೆದಿದೆ. ಮೃತ ಯುವಕರನ್ನು ಬೆಂಗಳೂರು ಮೂಲದ ಚರಣ್ (20), ಮಿಲನ್ (23) ಮತ್ತು ಮಣಿಕಂಠ (20) ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆ ಬಂದಿದ್ದ 10 ಜನರ ತಂಡ: ಎರಡು ದಿನಗಳ ವಾರಾಂತ್ಯದ ರಜೆ ಇದ್ದ ಕಾರಣ ಬೆಂಗಳೂರಿನಿಂದ 10 ಯುವಕರ ತಂಡವೊಂದು ಟ್ರಾವೆಲರ್ (ಟಿಟಿ) ವಾಹನದಲ್ಲಿ ಪ್ರವಾಸಕ್ಕೆಂದು ಹೊರಟಿತ್ತು. ಇವರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು. ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೆಂಗಳೂರಿಗೆ ಮರಳಿ ಪ್ರಯಾಣ ಬೆಳೆಸುವಾಗ ಈ ದುರ್ಘಟನೆ ಸಂಭವಿಸಿದೆ. ಪ್ರೇಕ್ಷಣೀಯ ಸ್ಥಳ ವೀಕ್ಷಣೆ ವೇಳೆ ದುರಂತ: ಧರ್ಮಸ್ಥಳದಿಂದ ಮರಳುವಾಗ ಈ ಯುವಕರ ತಂಡ ನೇರವಾಗಿ ಬೆಂಗಳೂರಿಗೆ ಹೋಗದೆ,…

Read More

ಬೆಂಗಳೂರು: ರಾಜಧಾನಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 13.14 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 38.34 ಕೆಜಿ ತೂಕದ ಗಾಂಜಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದೆ. ಬ್ಯಾಂಕಾಕ್‌ನಿಂದ ಬಂದಿದ್ದ ಆಸಾಮಿಗಳು ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದಾಗ ಈ ಬೃಹತ್ ಮಾದಕ ದ್ರವ್ಯ ಜಾಲ ಪತ್ತೆಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಮಾದಕ ವಸ್ತುವನ್ನು ಬೆಂಗಳೂರಿಗೆ ಸಾಗಿಸಲು ಯತ್ನಿಸಲಾಗಿತ್ತು. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಗಾಂಜಾವನ್ನು ಸಂಪೂರ್ಣವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ ಗಾಂಜಾ ಪತ್ತೆ ವಿಮಾನ ನಿಲ್ದಾಣದ ಲಗೇಜ್ ಸ್ಕ್ಯಾನಿಂಗ್ ಹಾಗೂ ತಪಾಸಣೆ ವೇಳೆ ಅಧಿಕಾರಿಗಳಿಗೆ ಪ್ರಯಾಣಿಕರ ಬ್ಯಾಗ್‌ಗಳ ಮೇಲೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆರು ಜನ ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಬಟ್ಟೆಗಳ ನಡುವೆ ಅತ್ಯಂತ ಚಾಣಾಕ್ಷತನದಿಂದ…

Read More