Subscribe to Updates
Get the latest creative news from FooBar about art, design and business.
Author: kannadanewsnow05
ತಿರುಪತಿ : ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಿದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವ ನಡುವೆಯೇ, 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. ಈ ಮೊದಲು ಕೂಡ ತಿರುಪತಿಯಲ್ಲಿ ಕಲಬರಿಕೆ ತುಪ್ಪ ಬೆಳೆಸಿ ಭಕ್ತರಿಗೆ ಲಡ್ಡು ವಿತರಣೆ ಮಾಡಿರುವ ಪ್ರಕರಣ ನಡೆದಿತ್ತು. ಅದರ ಬೆನ್ನಲ್ಲೆ ಇದೀಗ 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. 5 ವರ್ಷದಲ್ಲಿ ದೇಗುಲಕ್ಕೆ ದೈನಂದಿನ ಭಕ್ತರ ಭೇಟಿ, ತುಪ್ಪ ಖರೀದಿ, ಲಡ್ಡು…
ನವದೆಹಲಿ : ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಕೇಂದ್ರ ಸರ್ಕಾರದ ಪ್ರಸ್ತಾವವು ಪಂಜಾಬಿನಲ್ಲಿ ರಾಜಕೀಯ ಗದ್ದಲ ಸೃಷ್ಟಿಸಿದೆ. ಕೇಂದ್ರವು ಕೇವಲ ಶಾಸನ ಸರಳಗೊಳಿಸುವ ಬಗ್ಗೆ ಪರಿಶೀಲಿಸುತ್ತಿದೆ, ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಹೌದು ಕೇಂದ್ರ ಸರ್ಕಾರವು ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಪಂಜಾಬಿನಲ್ಲಿ ರಾಜಕೀಯ ಗದ್ದಲ ಹೆಚ್ಚಾಗಿದೆ.ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಯ ಅಡಿಯಲ್ಲಿ ತರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಆದರೆ ಇದುವರೆಗೂ ಯಾವುದೇ ಅಂತಿಮ ನಿರ್ಧಾವಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಪಂಜಾಬಿನ ರಾಜಧಾನಿಯನ್ನು ಕಬಳಿಸಲು ಸಂಚು ನಡೆಸುತ್ತಿದೆ. ಚಂಡೀಗಢವು ಪಂಜಾಬಿನ ಭಾಗವಾಗಿತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ ಎಂದು ಅವರು ಹೇಳಿದರು. ಈ ತಿದ್ದುಪಡಿಯನ್ನು ಅಂಗೀಕರಿಸಲು ರಾಜ್ಯವು ಬಿಡುವುದಿಲ್ಲ ಎಂದು ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಸ್ಪಷ್ಟನೆ ನೀಡಿದರು.
BREAKING : ಕಾಂಗ್ರೆಸ್ ನಲ್ಲಿ ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್ : ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಬಹುದೊಡ್ಡ ಬೆಳವಣಿಗೆಗಳು ಆಗುತ್ತಿದ್ದು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ ಇದರ ಮಧ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದ್ದು ಒಬ್ಬೊಬ್ಬ ಶಾಸಕನಿಗೆ 50 ಕೋಟಿ ಹಾಗೂ ಒಂದು ಫ್ಲಾಟ್ ಆಫರ್ ನೀಡಲಾಗಿದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರ ಬೆಂಬಲ ಸೂಚಿಸುವಂತೆ ಸಹಿ ಮಾಡಿಸಿಕೊಂಡಿರುವ ವಿಚಾರವಾಗಿ ಇಷ್ಟು ದಿನ ಕಾಂಗ್ರೆಸ್ ಬೇರೆ ಪಕ್ಷದಲ್ಲಿ ಕುದುರೆ ವ್ಯಾಪಾರ ಮಾಡುತ್ತಿದ್ದರು. ಇದೀಗ ತಮ್ಮ ಪಕ್ಷದಲ್ಲಿಯೇ ಕುದುರೆ ವ್ಯಾಪಾರ ಶುರು ಮಾಡಿದ್ದಾರೆ. ಕೆಲವೊಬ್ಬರು 75 ಕೋಟಿ 100 ಕೋಟಿ ಕೊಡಿ ಎಂದು ಡಿಮ್ಯಾಂಡ್ ಇಟ್ಟಿದ್ದಾರೆ ಎಂದರು. ಒಬ್ಬೊಬ್ಬ MLA ಗೆ 50 ಕೋಟಿ ಕೋಡುವುದಾಗಿ ಆಮಿಷವೊಡ್ಡಿದ್ದಾರಂತೆ. ಇನ್ನು ಕೆಲ ಶಾಸಕರಿಗೆ 50…
ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಒಂದು ಕಡೆ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದರೆ ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಸಿಎಂ ಸ್ಥಾನಕ್ಕಾಗಿ ಜಟಾಪಟಿ ನಡೆಸುತ್ತಿದ್ದಾರೆ. ಇದರ ಮಧ್ಯ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಕೆಶಿ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು, ಗಿಳಿ ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ.…
ಬೆಂಗಳೂರು : ಬೆಂಗಳೂರಲ್ಲಿ ATM ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ಹೈದರಾಬಾದ್ನ ಲಾಡ್ಜ್ವೊಂದರಲ್ಲಿದ್ದ ನವೀನ್, ನೆಲ್ಸನ್ ಹಾಗೂ ರವಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 70 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಆ ಮೂಲಕ ಪ್ರಕರಣದಲ್ಲಿ ಒಟ್ಟು 7 ಜನರನ್ನು ಬಂಧಿಸಲಾಗಿದ್ದು ಇಲ್ಲಿಯವರೆಗೆ 6.45 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ನವೆಂಬರ್ 19ರಂದು ಮಧ್ಯಾಹ್ನ ನಗರದ ಹೃದಯಭಾಗದಲ್ಲೇ ಆರೋಪಿಗಳು ದರೋಡೆ ನಡೆಸಿ ಪರಾರಿಯಾಗಿದ್ದರು. ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದ ಬೆಂಗಳೂರು ಪೊಲೀಸರು ಕೇವಲ ಮೂರೇ ದಿನದಲ್ಲಿ ಮೂವರನ್ನು ಬಂಧಿಸಿ 5.76 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ವಶಕ್ಕೆ ಪಡೆದ ಹಣದ ಮೊತ್ತ 6.45 ಕೋಟಿ ರೂಪಾಯಿ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೇಬಲ್…
ಬೆಂಗಳೂರು : ಬೆಂಗಳೂರಲ್ಲಿ ಏಳುಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಇದುವರೆಗೂ 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ ಕಾನ್ಸ್ಟೇಬಲ್ ಸೇರಿದಂತೆ ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಇದುವರೆಗೂ ಪೊಲೀಸರು ಹಲವಾರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಆದರೆ ಈ ಒಂದು ಇದು ಕೋಟಿ ಎಪ್ಪತ್ತು ಲಕ್ಷ ಹಣ ಎಲ್ಲಿ ದೊರೆಯಿತು? ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಆ ವಿಚಾರಕ್ಕೆ ಸಂಬಂಧಪಟ್ಟಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. 7 ಕೋಟಿ ದರೋಡೆ ಮಾಡಿ ಆರೋಪಿಗಳು ಹೊಸಕೋಟೆಯ ಬಳಿ ಪಾಳು ಬಿದ್ದ ಮನೆಯಲ್ಲಿ ಹಣ ಇಟ್ಟಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ತಾಳ ಬಿದ್ದ ಮನೆಯಲ್ಲಿ ದರೋಡೆಕೋರ ಗ್ಯಾಂಗ್ ಹಣ ಇಟ್ಟಿದ್ದರು ಅನುಮಾನದ ಮೇಲೆ ಪೊಲೀಸರು ಪಾಲುಬಿದ್ದ ಮನೆಯ ಬಳಿ ತೆರಳಿದ್ದಾರೆ. ಮನೆಯ ಬಾಗಿಲು ಒಡೆದು ಒಳ ಹೋಗಿ ಪರಿಶೀಲಿಸಿದಾಗ 5 ಕೋಟಿ…
ಬೆಂಗಳೂರು : ಬೆಂಗಳೂರಲ್ಲಿ ಏಳುಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಇದುವರೆಗೂ 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ ಕಾನ್ಸ್ಟೇಬಲ್ ಸೇರಿದಂತೆ ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಇದುವರೆಗೂ ಪೊಲೀಸರು ಹಲವಾರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಆದರೆ ಈ ಒಂದು ಇದು ಕೋಟಿ ಎಪ್ಪತ್ತು ಲಕ್ಷ ಹಣ ಎಲ್ಲಿ ದೊರೆಯಿತು? ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಆ ವಿಚಾರಕ್ಕೆ ಸಂಬಂಧಪಟ್ಟಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. 7 ಕೋಟಿ ದರೋಡೆ ಮಾಡಿ ಆರೋಪಿಗಳು ಹೊಸಕೋಟೆಯ ಬಳಿ ಪಾಳು ಬಿದ್ದ ಮನೆಯಲ್ಲಿ ಹಣ ಇಟ್ಟಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ತಾಳ ಬಿದ್ದ ಮನೆಯಲ್ಲಿ ದರೋಡೆಕೋರ ಗ್ಯಾಂಗ್ ಹಣ ಇಟ್ಟಿದ್ದರು ಅನುಮಾನದ ಮೇಲೆ ಪೊಲೀಸರು ಪಾಲುಬಿದ್ದ ಮನೆಯ ಬಳಿ ತೆರಳಿದ್ದಾರೆ. ಮನೆಯ ಬಾಗಿಲು ಒಡೆದು ಒಳ ಹೋಗಿ ಪರಿಶೀಲಿಸಿದಾಗ 5 ಕೋಟಿ…
ಮಂಡ್ಯ : ಪೇಂಟ್ ತರಲು ಹೋದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಕಾರ್ಡಿಯಾ ಅಟ್ಯಾಕ್ ನಿಂದ ಪೇಂಟ್ ಅಂಗಡಿಯಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಲಗೂರು ಪಟ್ಟಣದಲ್ಲಿ ನಡೆದಿರುವ ಘಟನೆ ಇದಾಗಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರಲ್ಲಿ ಹುಲ್ಲಾಗಾಲ ಗ್ರಾಮದ ಈರಣ್ಣಯ್ಯ(58) ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಲಗೂರಿನ ಪೇಂಟ್ ಅಂಗಡಿಯೊಂದಕ್ಕೆ ತೆರಳಿದ್ದ ಈರಣ್ಣಯ್ಯ. ಈ ವೇಳೆ ಏಕಾಏಕಿ ನಿಂತಲ್ಲೆ ಕುಸಿದು ಬಿದ್ದಿದ್ದಾರೆ. ಅಂಗಡಿ ಮಾಲೀಕ ಈರಣ್ಣ ಅವರನ್ನ ಮೇಲೆತ್ತುವಷ್ಟರಲ್ಲಿ ಸ್ಥಳದಲ್ಲೆ ಈರಣ್ಣಯ್ಯ ಸಾವನ್ನಪ್ಪಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಅದರಲ್ಲೂ ಸಿ ಎಂ ಬದಲಾವಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಧ್ಯ ಪರೋಕ್ಷವಾಗಿ ಫೈಟ್ ನಡೆಯುತ್ತಿದೆ. ಇದರ ಮಧ್ಯ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾರೋ ಯಾರದೋ ಮನೆಗೆ ಊಟಕ್ಕೆ ಹೋದರು ತಪ್ಪಾ,…
ಚಾಮರಾಜನಗರ : ಬೆಂಗಳೂರು ರಾಬರಿ ಪ್ರಕರಣ ತನಿಖೆ ನಡೆಯುವ ಹೊತ್ತಲ್ಲೇ, ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಬರಿ ಪ್ರಕರಣ ನಡೆದಿದೆ. ಕಾರನ್ನು ಫಾಲೋ ಮಾಡಿಕೊಂಡು ಬಂದ ಕೇರಳ ಗ್ಯಾಂಗ್ ಒಂದು ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳಕ್ಕೆ ಹಾದು ಹೋಗುವ ರಸ್ತೆಯಲ್ಲಿ ಈ ದರೋಡೆ ನಡೆದಿದೆ. ಮೂರು ಕಾರಿನಿಂದ ಬಂದ ದರೋಡೆ ಗ್ಯಾಂಗ್ ಬ್ರಿಜಾ ಕಾರಿನಲ್ಲಿ ಚಿನ್ನ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನ ಹಿಂಭಾಗ ಹಾಗೂ ಮುಂಭಾಗಕ್ಕೆ ಡಿಕ್ಕಿ ಹೊಡೆದು ಕಾರು ನಿಲ್ಲಿಸಿ ಕಾರಿನ ಸೀಟು ಹರಿದು 1.3 ಕೆಜಿ ತೂಕದ ಚಿನ್ನದ ಗಟ್ಟಿಯನ್ನು ಹೊತ್ತೊಯ್ದಿದ್ದಾರೆ. ಕಾರಿನಲ್ಲಿದ್ದ ವಿನು ಹಾಗೂ ಸಮೀರ್ ಎಂಬ ಇಬ್ಬರಿಗೂ ಕೂಡ ಹಲ್ಲೆ ನಡೆಸಿ ಚಿನ್ನವನ್ನು ಹೊತ್ತು ಹೋಗಿದ್ದಾರೆ. ಅಲ್ಲದೇ ವಿನು ಹಾಗೂ ಕಾರು ಚಾಲಕ ಇಬ್ಬರನ್ನೂ ಕೂಡ ಕಾರಿನಲ್ಲಿ ಕಿಡ್ನಾಪ್…













