Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇಮೇಲ್ ಮೂಲಕ ಕಿಡಿಗೇಡಿಗಳು ಬಾಮ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಕೋರ್ಟ್ನಲ್ಲಿ 12 ಆರ್ ಡಿ ಎಕ್ಸ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಬಾಂಬ್ ಬೆದರಿಕೆ ಸಂದೇಶ ಬಂದ ತಕ್ಷಣ ಕೋರ್ಟ್ ಹಾಲ್ನಲ್ಲಿ ಇದ್ದ ನ್ಯಾಯಾಧೀಶರು ವಕೀಲರು , ಕಕ್ಷಿದಾರರು ಹಾಗೂ ಸಿಬ್ಬಂದಿಗಳು ಹೊರಗಡೆ ಬಂದಿದ್ದಾರೆ. ಇಂದು ಒಂದೇ ದಿನ ಧಾರವಾಡ ಹೈಕೋರ್ಟ್ ಪೀಠ, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ ಜಿಲ್ಲಾ ಕೋರ್ಟ್ ಗಳಿಗೆ ಬೆದರಿಕೆ ಸಂದೇಶ ಬಂದಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಪವಿತ್ರ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಹೌದು ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಪವಿತ್ರ ಗೌಡಗೆ ಮಧ್ಯಂತರ ಜಾಮೀನು ನೀಡಲು ಇದೀಗ ಕೋರ್ಟ್ ನಿರಾಕರಿಸಿದೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಟ್ಟಡದ ಮೂರನೇ ಮಹಡಿನ ಬಿದ್ದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್, ವಾರ್ಡನ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ. ಮೃತ ವಿದ್ಯಾರ್ಥಿ ಕೊಟ್ರೇಶ್ ತಂದೆ ಗುರುಲಿಂಗಯ್ಯ ಅವರು ಈ ಆರೋಪ ಮಾಡಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಧಾರವಾಡ : ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಇ-ಮೇಲ್ ಮೂಲಕ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹೈಕೋರ್ಟ್ ಪೀಠದಿಂದ ವಕೀಲರು ಮತ್ತು ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗರಗ ಠಾಣೆ ಪೋಲಿಸರು ದೌಡಾಯಿಸಿದ್ದಾರೆ. ಒಂದು ತಿಂಗಳ ಹಿಂದೆ ಇದೇ ರೀತಿ ಸ್ಪೋಟಿಸುವುದಾಗಿ ಈ ಮೇಲ್ ಸಂದೇಶ ಬಂದಿತ್ತು. ಅದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದಿದೆ. RDX ಸ್ಪೋಟಿಸೋದಾಗಿ ಅಪರಿಚಿತ ವ್ಯಕ್ತಿಯಿಂದ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಮಧ್ಯಾಹ್ನ 12:30ಕ್ಕೆ RDX ಮುಖಾಂತರವಾಗಿ ಕಳುಹಿಸಿದ್ದಾರೆ ವಿಷಯ ತಿಳಿದು ಕೋರ್ಟ್ ಕಲಾಪವನ್ನು ಸಿಬ್ಬಂದಿಗಳು ಸ್ಥಗಿತಗೊಳಿಸಿ ಹೊರಬಂದಿದ್ದಾರೆ. ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಹಾಗೆ ಮಡಿಕೇರಿ ನ್ಯಾಯಾಲಯಕ್ಕೂ ಕೂಡ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಲಯದಲ್ಲಿ ಬಾಂಬ್ ಇಟ್ಟಿರುವುದಾಗಿ…
ಮಂಗಳೂರು : ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿಯಾಗಿ 7 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ ಕಾಪಿಕಾಡು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬಸ್ gs ಹಿಂದಿನಿಂದ ಮೀನು ಸಾಗಾಟದ ಕ್ಯಾಂಟರ್ ಡಿಕೆ ಹೊಡೆದಿದೆ. ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಬಸ್ ನಲ್ಲಿ ಇದ್ದಂತಹ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗೋವಾದಿಂದ ಕ್ಯಾಂಟರ್ ಕೇರಳದ ಕಡೆಗೆ ಹೊರಟಿತ್ತು. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಕ್ಯಾಂಟರ್ ಚಾಲಕ ಸಂಜೀವ್ ನಿದ್ದೆ ಮಂಪರಿನಲ್ಲಿ ಕ್ಯಾಂಟರ್ ಚಲಾಯಿಸುತ್ತಿದ್ದ. ಇವಳೆ ಮುಂದೆ ಇದ್ದ ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಹಲಗೆವಡೆಯರಹಳ್ಳಿ ಡನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಹೆಚ್ಡಿ ಕುಮಾರಸ್ವಾಮಿ ಗೈರಾಗಿದ್ದಾರೆ. ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್ಡಿ ಕುಮಾರಸ್ವಾಮಿ ಪರ ವಕೀಲರು ಅರ್ಜಿ ಸಲ್ಲಿಸಿದ್ದು ಕುಮಾರಸ್ವಾಮಿ ಪರ ವಕೀಲರ ಅರ್ಜಿಗೆ ಕೋರ್ಟ್ ಇದೀಗ ಅಸಮಾಧಾನ ಹೊರಹಾಕಿದೆ. ಫೆಬ್ರವರಿ 7ರ್ಲ್ ರಂದು ಸಭೆ ಇತ್ತು ಎಂದು ಸುಳ್ಳು ಕಾರಣ ನೀಡಿದ್ದೀರಿ ವಿಕಸಿತ್ ಭಾರತ ಸಭೆಗೆ ಹಾಜರಿ ಎಂದು ಕೋರ್ಟಿಗೆ ಸುಳ್ಳು ಹೇಳಿದ್ದೀರಿ. ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ನೈಜ ಕಾರಣ ನೀಡಿದರೆ ಪರಿಗಣಿಸುತ್ತೇವೆ, ಸುಳ್ಳು ದಾಖಲೆ ನೀಡಿದರೆ ಪರಿಶೀಲನೆಗೆ ಒಳಪಡಿಸುತ್ತೇನೆ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ ಗಜಾನನ ಭಟ್ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕ ಸಾವನಪ್ಪಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಯುವಕ ಮಹಮ್ಮದ್ ಇದೀಗ ಸಾವನಪ್ಪಿದ್ದಾನೆ. ಸ್ಪೀಡ್ ಬ್ರೇಕರ್ ಗಮನಿಸದೆ ಬೈಕ್ ಸವಾರ ಮಹಮ್ಮದ್ ವೇಗವಾಗಿ ಬಂದಿದ್ದ. ಬೈಕ್ ಸ್ಕಿಡ್ ಆಗಿ ಯುವಕ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದ. ಸವಳಂಗ ರಸ್ತೆ ಎಲ್ಬಿಎಸ್ ನಗರ ಬಳಿ ಈ ಒಂದು ಘಟನೆ ನಡೆದಿತ್ತು. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು ಫೆಬ್ರವರಿ 13 ರಂದು ಈ ಒಂದು ಘಟನೆ ನಡೆದಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮಹಮ್ಮದ್ ಸಾವನ್ನಪ್ಪಿದ್ದಾನೆ.
ಧಾರವಾಡ : ಧಾರವಾಡ ಹೈಕೋರ್ಟ್ ಪೀಠಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಇ-ಮೇಲ್ ಮೂಲಕ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹೈಕೋರ್ಟ್ ಪೀಠದಿಂದ ವಕೀಲರು ಮತ್ತು ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗರಗ ಠಾಣೆ ಪೋಲಿಸರು ದೌಡಾಯಿಸಿದ್ದಾರೆ. ಒಂದು ತಿಂಗಳ ಹಿಂದೆ ಇದೇ ರೀತಿ ಸ್ಪೋಟಿಸುವುದಾಗಿ ಈ ಮೇಲ್ ಸಂದೇಶ ಬಂದಿತ್ತು. ಅದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ಬಂದಿದೆ. RDX ಸ್ಪೋಟಿಸೋದಾಗಿ ಅಪರಿಚಿತ ವ್ಯಕ್ತಿಯಿಂದ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಧೀಶರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಮಧ್ಯಾಹ್ನ 12:30ಕ್ಕೆ RDX ಮುಖಾಂತರವಾಗಿ ಕಳುಹಿಸಿದ್ದಾರೆ ವಿಷಯ ತಿಳಿದು ಕೋರ್ಟ್ ಕಲಾಪವನ್ನು ಸಿಬ್ಬಂದಿಗಳು ಸ್ಥಗಿತಗೊಳಿಸಿ ಹೊರಬಂದಿದ್ದಾರೆ. ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಹಾಗೆ ಮಡಿಕೇರಿ ನ್ಯಾಯಾಲಯಕ್ಕೂ ಕೂಡ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ನ್ಯಾಯಲಯದಲ್ಲಿ ಬಾಂಬ್ ಇಟ್ಟಿರುವುದಾಗಿ…
ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ | ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ ತಲೆಮಾಡಿ ಮಲಗಿದರೆ ಆಯುಸ್ಸು ವೃದ್ಧಿಯಾಗುತ್ತದೆ. ಪಶ್ಚಿಮಕ್ಕೆ ತಲೆ ಇಟ್ಟು ಮಲಗಿದರೆ…
ಬೆಂಗಳೂರು : ಬೆಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ ಮಾಡಲಾಗಿದೆ. ಕಮಿಷನರ್ ಸೀಮಂತ ಕುಮಾರ್ ಸಿಂಗ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದೆ. ಗಣ್ಯರ ಜೊತೆಗೆ ಇರುವ ಫೋಟೋ ಪೋಸ್ಟ್ ಮಾಡಿ ನಕಲಿ ಖಾತೆ ಸೃಷ್ಟಿ ಮಾಡಿದ್ದು ಹಿಂದಿ ಭಾಷೆಯ ಹೆಸರು ಇರುವ ಖಾತೆ ರಚನೆ ಮಾಡಿ ವಂಚನೆಗೆ ಯತ್ನಿಸಿದ್ದಾರೆ. ತಪ್ಪು ಸಂದೇಶ ನೀಡುವ ಮೆಸೇಜ್ ಮಾಡಿ ವಂಚಕರು ದಾರಿ ತಪ್ಪಿಸುತ್ತಿದ್ದಾರೆ ಆಯುಕ್ತರೆ ಪೋಸ್ಟ್ ಮಾಡುತ್ತಿದ್ದಾರೆ ಎಂದು ನಂಬಿ ಜನರು ಅದಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮೊದಲು ನಂಬಿಸಿ ನಂತರ ಹಣ ದೋಚುವ ಉದ್ದೇಶದಿಂದ ಖಾತೆ ರಚನೆ ಮಾಡಿದ್ದಾರೆ ಈ ಹಿಂದೆ ಆಲೋಕ ಕುಮಾರ್ ಹಾಗು ಭೀಮಶಂಕರ ಹೆಸರಿನಲ್ಲಿ ಕೂಡ ಖಾತೆ ಸೃಷ್ಟಿ ಮಾಡಲಾಗಿದ್ದು ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಕಿಡಿಗೇಡಿಗಳು ವಂಚನೆಗೆ ಯತ್ನಿಸುತ್ತಿದ್ದಾರೆ ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.













