Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ನಾಳೆ ವಿವಿಧ ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್ ಗೆ ಕರೆ ನೀಡಲಾಗಿದೆ. ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಕಂಡಿಹಿಸಿ ಭಾರತ ಬಂದಿಗೆ ಕರೆ ನೀಡಲಾಗಿದೆ. ಸಿಐಟಿಯು, ಎಐಟಿಯುಸಿ, ಐಎನ್ ಟಿಯುಸಿ, ಹೆಚ್ಎಂಎಸ್, ಎಐಸಿಸಿಟಿಯು, ಎಲ್ಪಿಎಫ್, ಯುಟಿಯುಸಿ ಇಂದ ಬಂದ್ ಗೆ ಕರೆ ನೀಡಲಾಗಿದೆ. ಹೊಸದಾಗಿ ಪರಿಚಯಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದರಿಂದ ಕಾರ್ಮಿಕರ ಹಕ್ಕು ಮತ್ತು ಉದ್ಯೋಗ ಭದ್ರತೆ ಕಡಿಮೆ ಮಾಡಲಿವೆ ಕಾರ್ಮಿಕ ಸಂಸ್ಥೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ೩೦ ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸಬಹುದು ಎಂದು ಸಂಘಟಕರು ಹೇಳಿದ್ದಾರೆ. ಹತ್ತು ಕೇಂದ್ರ ಕಾರ್ಮಿಕ ಸಂಘಗಳನ್ನು ಪ್ರತಿನಿಧಿಸುವ ಜಂಟಿ ವೇದಿಕೆಯು ಮುಷ್ಕರವು ಯೋಜಿಸಿದಂತೆ ಮುಂದುವರಿಯುತ್ತದೆ ಎಂದು ದೃಢಪಡಿಸಿದೆ. ರೈತ ಸಂಘಟನೆಗಳ ಬೆಂಬಲವು ಪ್ರತಿಭಟನೆಯ ಪ್ರಮಾಣವನ್ನು ಬಲಪಡಿಸುವ ನಿರೀಕ್ಷೆಯಿದೆ. ಅಗತ್ಯ ಸೇವೆಗಳು ಅಡಚಣೆಗಳನ್ನು ಎದುರಿಸುವ ಸಾಧ್ಯತೆಯಿರುವುದರಿಂದ, ಅಧಿಕಾರಿಗಳು ಸಾರ್ವಜನಿಕ ಸೇವೆಗಳು ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಸಂಭವನೀಯ ಅಡಚಣೆಗಳಿಗೆ ತಯಾರಿ ನಡೆಸುತ್ತಿದ್ದಾರೆ.
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಇದರ ಬೆನ್ನಲ್ಲೇ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು ಸಿಐಡಿ ಪೋಲೀಸರು ಅವರ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಅವರಾಗಿಯೇ ಬಂದು ಸರೆಂಡರ್ ಆದರೆ ಒಳ್ಳೆಯದು ಇಲ್ಲದಿದ್ದರೆ ಪೊಲೀಸರು ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹುಡುಕುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ರಾಮನಗರದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯ ಮನೆಯ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನೋದ (34) ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮನೆಯ ಬಳಿ ಕೆಮ್ಮಿದ್ದಕ್ಕೆ ವಿನೋದ್ ಜೊತೆಗೆ ಹೊಂಬಯ್ಯ ಮತ್ತು ವಿಜಯ್ ಸೇರಿದಂತೆ ಇತರರು ಜಗಳ ತೆಗೆದು, ಹಲ್ಲೆ ಮಾಡಿದ್ದಾರೆ. ಮೂರು ದಿನಗಳ ಕೆಳಗೆ ವಿನೋದ್ ಮೇಲೆ ಹಲ್ಲೆ ಮಾಡಿದ್ದರು.ತೀವ್ರ ಹಲ್ಲೆಗೆ ಒಳಗದಂತಹ ವಿನೋದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಮೂಲದ ವಿನೋದ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಟೀಸರ್ ಬಿಡುಗಡೆ ಆದ ಬಳಿಕ, ಸಿನೆಮಾದಲ್ಲಿ ಅಶ್ಲೀಲತೆ ತೋರಿಸಲಾಗಿದೆ ಎಂದು ಚಿತ್ರತಂಡಕ್ಕೆ ಮೇಲಿಂದ ಮೇಲೆ ಸಂಕಷ್ಟ ಎದುರಾಗಿತ್ತು. ಇದೀಗ ಟಾಕ್ಸಿಕ್ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು ಸಲ್ಲಿಸಿವೆ. ಹೌದು ಕೆಲ ದಿನಗಳ ಹಿಂದಷ್ಟೇ ಟೀಸರ್ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತಿರುಗಿಬಿದ್ದಿದೆ.ಟಾಕ್ಸಿಕ್ ಸಿನಿಮಾ ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ, ಕ್ರೈಸ್ತರಿಗೆ ಮುಜುಗರ ತರಲಾಗಿದೆ ಎಂದು ಆರೋಪಿಸಿ, ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್ಗೆ ದೂರು ನೀಡಿದೆ. ಟಾಕ್ಸಿಕ್ ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಕಯೇಲ್ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್ಗಳನ್ನ ತೆಗೆಯಬೇಕು, ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ…
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ನಿನ್ನೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಅದರ ಬೆನ್ನಲ್ಲೇ, ಭೈರತಿ ಬಸವರಾಜ್ ತಲೆಮರಿಸಿಕೊಂಡಿದ್ದು ಅವರ ಬಂಧನಕ್ಕಾಗಿ ಸಿಐಡಿ ಪೋಲೀಸರು ಇದೀಗ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಕಾರಣೆ ಮಾಡಿದೆ. ನ್ಯಾಯಾಧೀಶರಾದ ಸುನೀಲ್ ದತ್ತು ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಇದರೊಂದಿಗೆ ಮತ್ತೆ . ಬಿಕ್ಲು ಶಿವು ಕೊಲೆಯಲ್ಲಿ ಅವರಿಗೆ ಬಂಧನದ ಭೀತಿ ಎದರುಆಗಿದೆ. ಪ್ರಕರಣ ಹಿನ್ನೆಲೆ? ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಫೆಬ್ರವರಿ 13 ರಿಂದ 18ರವರೆಗೆ ಬೈಕ ಹಾಗೂ ತ್ರಿಚಕ್ರ ವಾಹನಗಳಿಗೆ ಪ್ರವೇಶ ಇಲ್ಲ. ಮಹಾಶಿವರಾತ್ರಿ ಹಿನ್ನೆಲೆ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಕಿರಿದಾದ ರಸ್ತೆ ಹಾಗೂ ಕಾಡು ರಸ್ತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಿದೆ. ರಾಜ್ಯದ ವಿವಿಧಡೆ ಹಾಗೂ ಹೊರ ರಾಜ್ಯದಿಂದಲೂ ಕೂಡ ಭಕ್ತರು ಆಗಮಿಸುತ್ತಾರೆ.ಹಾಗಾಗಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 1 ಲಕ್ಷ ಲಂಚ ಪಡೆಯುತ್ತಿದ್ದ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿಯ ನಿವಾಸಿ ಮಹೇಶ್ ಹಲಗೇರಿ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಮಗಾರಿ ಬಿಲ್ ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಮಾಜ ಲೋಕಾಯುಕ್ತ ಪೊಲೀಸರಿಗೆ ಮಹೇಶ್ ದೂರು ನೀಡಿದ್ದ. ಲಂಚ ಪಡೆಯುತ್ತಿದ್ದ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಈ ವೇಳೆ ದಾಳಿ ನಡೆಸಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆಯಾಗಿ ಸೈಯ್ಯದ್ ಇಮ್ತಿಯಾಜ್ ಎಂಬ ಯುವಕ ಯುವತಿಗೆ ಕೈ ಕೊಟ್ಟಿದ್ದು, ಇದೀಗ ಯುವತಿ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ನ್ಯಾಯಕ್ಕಾಗಿ ಅಲೆದಾಡುತ್ತಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಹೆಣ್ಣು ಮಗು ಕೊಟ್ಟು ಸೈಯದ್ ಇಮ್ತಿಯಾಜ್ ಪರಾರಿಗಿದ್ದಾನೆ. ಬೆಂಗಳೂರಿನ ಬಿಟಿಎಂ ನಿವಾಸಿ ಆಗಿರುವ ಸೈಯದ್ ಇಮ್ತಿಯಾಜ್ ಪರಾರಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೊಲ್ಕತ್ತಾದ ಹಿಂದೂ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆ ಯುವತಿಯನ್ನು ಈತನೇ ಇಸ್ಲಾಮಿಗೆ ಪರಿವರ್ತನೆ ಮಾಡಿ ನಂತರ ಜೈನದ್ ಎಂದು ಮರು ನಾಮಕರಣ ಮಾಡಿದ್ದ. 2025 ಜುಲೈ 18 ತಾರೀಕು ಇಬ್ಬರು ರಿಜಿಸ್ಟರ್ ಮದುವೆ ಆಗಿದ್ದಾರೆ. 2025ರಲ್ಲಿ ಆಕೆಗೆ ಗರ್ಭಪಾತ ಮಾಡಿಸಿದ್ದು, ಬಳಿಕ ಯುವತಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಕೊಲ್ಕತ್ತಾದಲ್ಲಿ ತಾಯಿ ಮಗುವನ್ನು ಬಿಟ್ಟು ಸೈಯದ್ ಪರಾರಿ ಆಗಿದ್ದಾನೆ. ಈ ಕುರಿತು ಆತನ ವಿರುದ್ಧ ಯುವತಿ ದೂರು ದಾಖಲು ಮಾಡಿದ್ದು ನ್ಯಾಯಕ್ಕಾಗಿ…
ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಅನ್ಯಕೋಮಿನ ಯುವಕನ ಜೊತೆಗೆ ಹಿಂದೂ ಯುವತಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಮೊಹಮ್ಮದ್ ಮಿದ್ಲಾಜ್ ಎಂಬಾತನ ಜೊತೆಗೆ ವೈಶಾಲಿ (23) ಪರಾರಿ ಆಗಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಸೂರತ್ಕಲ್ ನ ಕಾಲೇಜಿನಲ್ಲಿ ವೈಶಾಲಿ ಓದುತ್ತಿದ್ದಳು ಕಾಸರಗೋಡು ಆರ್ಡಿ ನಗರದ ಮೀಪುಗರಿ ನಿವಾಸಿಯಾಗಿರುವ ವೈಶಾಲಿ ಜನವರಿ 31 ರಂದು ಮಿದ್ಲಾಜ್ ಜೊತೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾಳೆ. ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ಇಬ್ಬರು ಮದುವೆಯಾಗಿದ್ದಾರೆ. ವಿಷಯ ತಿಳಿದು ಪೋಷಕರು ಆಕೆ ಇದ್ದ ಬಿಜೆಪಿಗೆ ಬಂದು ವಿಚಾರಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಫೆಬ್ರವರಿ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸೆರೆಯಾಗಿದೆ ಮಗಳು ಸಂಪರ್ಕಕ್ಕೆ ಸಿಗದೇ ಇದ್ದಿದ್ದರಿಂದ ಸೂರತ್ಕಲ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ವೈಶಾಲಿ ಪೋಷಕರ ದೂರು ಆಧರಿಸಿ ಸೂರತ್ಕಲ್ ಠಾಣೆಯಲ್ಲಿ FIR ದಾಖಲಾಗಿದೆ.
ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಕೆಆರ್ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕರಿಗುಡ್ಡ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನ ಮಲ್ಲಪ್ಪ (60) ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನು ರಿಮ್ಸ್ ನಲ್ಲಿ ದಾಖಲಾಗಿದ್ದ ಮೋನಮ್ಮ (35) ಎನ್ನುವವರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದ್ದಾರೆ. ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದಿದೆ. ಆ ರಭಸಕ್ಕೆ ಆಟೋ ಪಲ್ಟಿಯಾಗಿ ಬಿದ್ದಿದೆ. ಆಟೋದಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋಗೆ ಡಿಕ್ಕಿ ಹೊಡೆಸಿ ಬಸ್ ಚಾಲಕ ಮುಂದೆ ತೆರಳುತ್ತಿದ್ದ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














