Subscribe to Updates
Get the latest creative news from FooBar about art, design and business.
Author: kannadanewsnow05
ಜನರಿಂದ ಚಪ್ಲಿಲಿ ಹೊಡಸ್ತೀನಿ : ಬ್ಯಾನರ್ ತೆರವು ಮಾಡಿದಕ್ಕೆ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ!
ಚಿಕ್ಕಬಳ್ಳಾಪುರ : ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಆಯುಕ್ತೆಗೆ ಇದೀಗ ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ನಗರ ಸಭೆ ಆಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೇಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಧಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ ಹಿನ್ನೆಲೆಯಲ್ಲಿ ಅವಾಜ್ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ. ಚಪ್ಪಲಿಯಲ್ಲಿ ಹೊಡೆದು ದಂಗೆ ಎಬ್ಬಿಸುವುದಾಗಿ ಬೆದರಿಕೆ ಆರೋಪ ಕೇಳಿ ಬಂದಿದೆ ಶಾಸಕ ಬಿ.ಎನ್ ರವಿಕುಮಾರ್ ಕೂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಷ್ಟೆ ಅಲ್ಲದೆ ಪರೋಕ್ಷವಾಗಿ ಸಚಿವ ಡಾ.ಎಂಸಿ ಸುಧಾಕರ್ ಗು ನಿಂದನೆ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚಿರತೆಗಳ ಕಾಟ ಇದೀಗ ಮತ್ತೆ ಹೆಚ್ಚಾಗಿದ್ದು, ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲದಲ್ಲಿ ತಡರಾತ್ರಿ ನಾಯಿಯ ಮೇಲೆ ಚಿರತೆ ಒಂದು ದಾಳಿ ಮಾಡಿರುವ ಘಟನೆ ಇದೀಗ ವರದಿಯಾಗಿದೆ. ಹೌದು ನೆಲಮಂಗಲದಲ್ಲಿ ಚಿರತೆ ದಾಳಿ ಇದೀಗ ಮಿತಿಮೀರಿದ್ದು, ಹೇಮಗಂಗಾ ಬಡಾವಣೆ ಜನರಲ್ಲಿ ಆತಂಕ ಮನೆ ಮಾಡಿದೆ. ದೊಣ್ಣೆ ಹಿಡಿದು ಜನರು ರಾತ್ರಿ ಕಾವಲು ಕಾಯುತ್ತಿರುವ ಪರಿಸ್ಥಿತಿ ಬಂದಿದೆ. ರಕ್ಷಣೆಗಾಗಿ ಬಡಾವಣೆಯ ಜನರು ದೊಣ್ಣೆಗಳ ಮೊರೆ ಹೋಗಿದ್ದಾರೆ ಬಡಾವಣೆಯಲ್ಲಿರುವ ನಾಯಿಗಳ ಮೇಲೂ ಚಿರತೆಗಳು ದಾಳಿ ಮಾಡಿವೆ. ನಾಯಿಗಳನ್ನು ಚಿರತೆಯಿಂದ ರಕ್ಷಿಸಲು ಜನರು ಮುಂದಾಗಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯನ್ನು ಕೊಚ್ಚಿ ಕೊಂದಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೋಳೂರಿನಲ್ಲಿ ನಡೆದಿದೆ. ಕೊಡಲಿಂದ ಕೊಚ್ಚಿ ಕೊಂದಿದ್ದ ಆರೋಪಿ ವೀರಭದ್ರಯ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಳುರಿನಲ್ಲಿ ವೀರಭದ್ರಯ್ಯ (60) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕಳೆದ ಶನಿವಾರ ದಾಕ್ಷಾಯಿಣಮ್ಮ ಅವರನ್ನು ವೀರಭದ್ರಯ್ಯ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ. ಮಹಿಳೆಯನ್ನು ಕೊಂದ ಬಳಿಕ ವೀರಭದ್ರಯ್ಯ ಪರಾರಿಯಾಗಿದ್ದ. ಆರೋಪಿಗಾಗಿ ಪೊಲೀಸರು ಹುಡುಕಾಡಿದ್ದರು. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಪತ್ತೆಗೆ ಬೆಲೆ ಬೀಸಿದ್ದರು. ಇದೀಗ ವೀರಭದ್ರಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಮೇಲೆ ಹಲ್ಲೆ ಮಾಡಿ ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪದಡಿ ಪತಿಯನ್ನು DCRE (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಜೆಡ್ರೆಲಾ ಜಾಕೂಬ್ ಆರೂಪ್ ಬಂಧಿತ ಆರೋಪಿ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಆರೋಪಿಯು ದೂರುದಾರ ಯುವತಿಯನ್ನು ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ. ದಂಪತಿಗೆ 11 ತಿಂಗಳ ಮಗುವಿದೆ. ಇಬ್ಬರು ಅನೋನ್ಯವಾಗಿದ್ದಾಗಲೇ ಪತಿಗೆ ತನ್ನ ಕಂಪನಿಯಲ್ಲಿ ಪತ್ನಿ ಕೆಲಸ ಕೊಡಿಸಿದ್ದರು. ವೃತ್ತಿಗಾಗಿ ಬೆಂಗಳೂರಿಗೆ ಬಂದ ಬಳಿಕ ಆರೋಪಿಯು ಪರಸ್ತ್ರೀ ವ್ಯಾಮೋಹಕ್ಕೆ ಒಳಗಾಗಿ ಪತ್ನಿಯನ್ನು ಕಡೆಗಣಿಸಿದ್ದ. ಆರೋಪಿಯು ಭೂಪಾಲ್ ಮೂಲದ ಮಹಿಳೆಯನ್ನು ಪ್ರೀತಿಸಿದ್ದ. ಈ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಬಿಟಿಎಂ ಲೇಔಟ್ನಲ್ಲಿರುವ ಮನೆಯಲ್ಲಿ ಆರೋಪಿ ವಾಸ್ತವ್ಯ ಹೂಡಿದ್ದ. ಇದನ್ನು ಅರಿತ ಆರೋಪಿಯನ್ನು ಪತ್ನಿಯು ಪ್ರಶ್ನಿಸಿದಾಗ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದ. ಈ ಬಗ್ಗೆ ಪತಿ ವಿರುದ್ಧ ಜಾತಿನಿಂದನೆ ಹಾಗೂ ಹಲ್ಲೆ ಆರೋಪದಡಿ ಪತ್ನಿ ದೂರು ದಾಖಲಿಸಿದ್ದರು. ಜಾತಿನಿಂದನೆ ಆರೋಪ ಹಿನ್ನೆಲೆಯಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಘೋರ ದುರಂತ ಒಂದು ಸಂಭವಿಸಿದೆ. ಕಾಮಗಾರಿಯ ವೇಳೆ ಬೃಹತ್ ಕ್ರೇನ್ ಒಂದು ಆಯತಪ್ಪಿ ಬಿದ್ದಿದೆ. ಮೆಟ್ರೋ ಗರ್ಡರ್ ಜೋಡಿಸುವಾಗ ಈ ಒಂದು ಘಟನೆ ಸಂಭವಿಸಿದೆ. ಮೆಟ್ರೋ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಮಾರ್ಗದಲ್ಲಿ ನೀಲಿ ಮಾರ್ಗದಲ್ಲಿ ಕಾಮಗಾರಿ ನಡೆಯುವಾಗ ಈ ಒಂದು ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಇದೀಗ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ. ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಲೈನ್ ಹಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಅಲೈನ ಸಾವನ್ನಪ್ಪಿದ್ದಾಳೆ. ಸಾರ್ವಜನಿಕರೇ ಗಮನಿಸಿ : ನಾಯಿ ಕಚ್ಚಿದಲ್ಲಿ ಕೂಡಲೇ ರೇಬಿಸ್ ಲಸಿಕೆ ಹಾಕಿಸಿರಿ ಸಾಕಿದ ಅಥವಾ ಬೀದಿ ನಾಯಿ ಕಚ್ಚಿದಲ್ಲಿ, ಉಗುರಿನಿಂದ ಗಿರಿದರೆ, ನಮ್ಮ ಮೈಮೇಲೆ ಈಗಾಗಲೇ ಇರುವ ಗಾಯವನ್ನು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷ್ಯ ವಹಿಸದೇ ನಾಯಿ ಕಚ್ಚಿದ ಜಾಗವನ್ನು ಸೋಪು ಮತ್ತು ನೀರಿನಿಂದ ತೊಳೆದು, ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಮಾರಣಾಂತಿಕವಾದ ರೇಬಿಸ್ ರೋಗ ತಡೆಗಟ್ಟುವ…
ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಪ್ರವೀಣ್ (45) ಎಂದು ಗುರುತಿಸಲಾಗಿದೆ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಜ.12ರ ಸಂಜೆ ಅಂಗಡಿಯಲ್ಲಿ ವರ್ತಕರಿಗೆ ವಸ್ತುಗಳನ್ನು ನೀಡುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅಂಗಡಿಯಲ್ಲಿದ್ದ ಅವರ ಪುತ್ರ ಪ್ರವೀಣ್ ಅವರ ಎದೆಯನ್ನು ಒತ್ತಿದ್ದಾನೆ. ಆದರೆ ಪ್ರವೀಣ್ ತಮ್ಮ ಅಂಗಡಿಯಲ್ಲೇ ಉಸಿರು ಚೆಲ್ಲಿದ್ದಾರೆ.
ಹಂಸ ಮತ್ತು ಡಿಂಭಕ :- ಕೃಷ್ಣನು, ‘ದುಷ್ಟ ಸಂಹಾರ ಶಿಷ್ಟ ರಕ್ಷಣೆ’ ಮಾಡಿ ಭೂಭಾರ ಹರಣ ಮಾಡಲು ಅವ ತರಿಸಿದನು. ಪೂತನಿ, ಶಕಟಾಸುರ, ತೃಣಾ ವರ್ತ,ಬಕಾಸುರ ಇನ್ನೂ ಮುಂತಾದ ರಾಕ್ಷಸರ ಸಂಹಾರ, ಕಾಳಿಂಗ ಮರ್ದನ, ಕಂಸ, ಜರಾಸಂಧ, ಕಾಲಯವನ, ಹೀಗೆ ಇನ್ನೂ ಹಲವು ರಾಕ್ಷಸರನ್ನು ಉಪಾಯ ವಾಗಿ ಸಂಹಾರ ಮಾಡಿದನು.ಹಾಗೆ ಹಂಸ ಮತ್ತು ಡಿಂಭಕ ಎಂಬ ದುಷ್ಟರನ್ನು ಸಂಹಾ ರ ಮಾಡುತ್ತಾನೆ. ಸಾಲ್ವ ದೇಶದ ರಾಜ ಬ್ರಹ್ಮದತ್ತ. ಮಹಾಭಾರತದಲ್ಲಿ ಭೀಷ್ಮರು ತನ್ನ ಸಹೋದರ ವಿಚಿತ್ರವೀರ್ಯನಿಗೆ ಮದುವೆ ಮಾಡಿಸುವ ಸಲುವಾಗಿ ಕಾಶಿ ರಾಜನ ಮಕ್ಕಳ ಸ್ವಯಂವರಕ್ಕೆ ಬಂದು ರಾಜನ ಮಕ್ಕಳಾದ ಅಂಬೆ,ಅಂಬಿಕೆ, ಅಂಬಾಲಿಕೆ ಈ ಮೂರು ರಾಜಕುಮಾರಿ ಯರನ್ನು ತನ್ನ ಅರಮನೆಗೆ ತಂದು ತಾಯಿ ಸತ್ಯವತಿ ಮುಂದೆ ನಿಲ್ಲಿಸುತ್ತಾನೆ. ಆಗ ರಾಜಕುಮಾರಿ ಅಂಬೆ ಈ ಮದುವೆಗೆ ಒಪ್ಪುವುದಿಲ್ಲ. ನಾನು ಮತ್ತು ಸಾಳ್ವ ದೇಶ ದ ರಾಜ ಒಬ್ಬರನ್ನೊಬ್ಬರು ಪ್ರೀತಿಸಿದ್ಧೇವೆ ನಾನು ಅವನನ್ನು ವಿವಾಹವಾಗುತ್ತೇನೆ ಎಂದು ರಾಜ ಮಾತೆಗೆ ಹೇಳುತ್ತಾಳೆ. ರಾಜಮಾತೆ ಮತ್ತು ಭೀಷ್ಮರು…
ಕೋಲಾರ : ಕೋಲಾರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೂಸಂದ್ರ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ನಾಗರಾಜು (22) ಹಾಗೂ ಶೇಖರ್ (23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಈ ಹಿಂದೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಜೈಲುವಾಸ ಅನುಭವಿಸಿದ್ದರು. ಇದೀಗ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿರೋದು ಬಯಲಾಗಿದೆ. ಹೌದು ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸುಪ್ರೀಂಕೋರ್ಟ್ ಸಮಿತಿ ರಚಿಸಿತ್ತು. ತಿಂಗಳ ಹಿಂದೆ ಡ್ರೋನ್ ಸರ್ವೇ ನಡೆಸಿದ್ದ ಸಮಿತಿ ಸಲ್ಲಿಸಿರುವ ವಿಸ್ತೃತ ವರದಿಯಲ್ಲಿ ರೆಡ್ಡಿ ಅಕ್ರಮ ಉಲ್ಲೇಖಿಸಿದೆ. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಜನಾರ್ದನ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ್ಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಪಡೆದಿದ್ದ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ. ಕರ್ನಾಟಕ ಮತ್ತು ಆಂಧ್ರದ ನಡುವಿನ ಗಡಿನಾಶ ಪಡಿಸಿ, ಬಳ್ಳಾರಿ ಮೀಸಲು ಅರಣ್ಯ ಪ್ರದೇಶಗಳಾದ ವಿಠಲಾಪುರ, ತುಮಟಿ ಸೇರಿ ವಿವಿಧೆಡೆ ಅಕ್ರಮವಾಗಿ 28.90 ಲಕ್ಷ ಟನ್ ಅಕ್ರಮ ಅದಿರು…














