Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು: ಆರೋಪಗಳು ಎಷ್ಟೇ ಗಂಭೀರವಾಗಿದ್ದರೂ ಸಹ ವ್ಯಕ್ತಿಯೊಬ್ಬರ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕ ಮಾಹಿತಿಯಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯಪಟ್ಟಿದೆ. ಒಬ್ಬ ವ್ಯಕ್ತಿಯು ಸರ್ಕಾರಿ ಅಧಿಕಾರಿಯಾಗಿದ್ದ ಮಾತ್ರಕ್ಕೆ ಆತನ ವೈಯಕ್ತಿಕ ಆಸ್ತಿ ಮತ್ತು ಜವಾಬ್ದಾರಿಗಳ (ಹೊಣೆಗಾರಿಕೆಗಳು) ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಬಹಿರಂಗಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸೆಕ್ಷನ್ 8(1)(ಜೆ) ಅಡಿ ವಿನಾಯಿತಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದ ವೈಯಕ್ತಿಕ ಮಾಹಿತಿಗಳನ್ನು ಆರ್ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅಡಿಯಲ್ಲಿ ಬಹಿರಂಗಪಡಿಸುವಿಕೆಯಿಂದ ಮುಕ್ತಗೊಳಿಸಲಾಗಿದೆ ಎಂದು ನ್ಯಾಯಪೀಠ ನೆನಪಿಸಿದೆ. ಇಂತಹ ಖಾಸಗಿ ವಿವರಗಳನ್ನು ಒದಗಿಸುವಂತೆ ಒತ್ತಾಯಿಸುವುದಕ್ಕೆ ಕಾನೂನಿನ ರಕ್ಷಣೆ ಇಲ್ಲ ಎಂದು ತಿಳಿಸಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. ಬೆಂಗಳೂರಿನ ನಿವಾಸಿಯಾದ ಎಸ್ ಸಾವಿತ್ರಮ್ಮ ಎಂಬುವರು ಮಾಹಿತಿ ಆಯೋಗದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿದೆ. ವಂಚನೆ…
ಚಿಕ್ಕಮಗಳೂರು : ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನ್ಯಾಯಾಲಯದ ಎದುರು ಶರಣಾಗಿದ್ದಾನೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಬೇಲೂರು ಮೂಲದ ಯುವಕನೊಬ್ಬ ಅತ್ಯಾಚಾರ ನಡೆಸಿದ್ದ. ಈ ಸಂಬಂಧ ಆತನ ವಿರುದ್ಧ ಈ ಹಿಂದೆಯೇ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆತ ಜೈಲು ಸೇರಿದ್ದಾನೆ. ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ನಡುವೆ, ಜೈಲು ಸೇರಿರುವ ಯುವಕ ಹಾಗೂ ಅಪ್ರಾಪ್ತೆಯ ಫೋಟೋಗಳನ್ನು ಮೊಬೈಲ್ನಲ್ಲಿ ಸಂಗ್ರಹಿಸಿಕೊಂಡಿದ್ದ ಮೂಡಿಗೆರೆ ತಾಲೂಕಿನ ಗ್ರಾಮವೊಂದರ ಐವರು ಆರೋಪಿಗಳು, ಆ ಫೋಟೋಗಳನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆಯನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅಪ್ರಾಪ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಅಪ್ರಾಪ್ತೆ ನೀಡಿದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದಿದೆ. ಗೂಡ್ಸ ವಾಹನ ದಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಓರ್ವ ಮಹಿಳೆ ಹಾಗೂ ಪುರುಷ ಸಾವನ್ನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಬಿಸಿಎಂ) ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರೇ ಮದ್ಯ ಸೇವನೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಸ್ಟೆಲ್ ಕೊಠಡಿಯೊಳಗೆ ವಿದ್ಯಾರ್ಥಿನಿಯರು ಜತೆಯಾಗಿ ಕುಳಿತು ಮದ್ಯದ ಬಾಟಲಿ ಹಿಡಿದು ಪಾರ್ಟಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆದ ಬೆನ್ನಲ್ಲೇ, ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ವೈರಲ್ ವಿಡಿಯೋ ತಂದಿಟ್ಟ ಫಜೀತು: ಹಾಸ್ಟೆಲ್ನ ನಿಯಮಾವಳಿಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿನಿಯರು ಮದ್ಯದ ಬಾಟಲಿಗಳನ್ನು ರೂಮಿನೊಳಗೆ ತಂದಿಟ್ಟುಕೊಂಡಿದ್ದರು ಎನ್ನಲಾಗಿದೆ. ಕೇವಲ ಮದ್ಯ ಸೇವನೆ ಮಾಡುವುದಷ್ಟೇ ಅಲ್ಲದೆ, ಅದನ್ನು ತಮ್ಮದೇ ಮೊಬೈಲ್ ಫೋನ್ಗಳಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಳ್ಳುತ್ತಿದ್ದಂತೆ ಸಾರ್ವಜನಿಕರು ಮತ್ತು ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಲಾಖೆಯ ಹಾಸ್ಟೆಲ್ಗಳಲ್ಲಿ ಕಾವಲು ಮತ್ತು ಶಿಸ್ತು ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಂತಿತ್ತು. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಅಧಿಕಾರಿಗಳು: ಪ್ರಾಥಮಿಕ ಮೂಲಗಳ…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪವಾಡ ಒಂದು ನಡೆದಿದೆ. ಬರೋಬ್ಬರಿ 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಇದೀಗ ಮನೆಗೆ ವಾಪಸ್ ಆಗಿದ್ದಾನೆ 2000 ಇಸವಿಯಲ್ಲಿ 12 ವರ್ಷವಿದ್ದಾಗ ಸತೀಶ್ ಎನ್ನುವ ವ್ಯಕ್ತಿ ಮನೆ ಬಿಟ್ಟು ಹೋಗಿದ್ದ. ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದೊಂದಿಗೆ ಸತೀಶ್ ಹೊರಟು ಹೋಗಿದ್ದಾನೆ. ಇದೀಗ ಪವಾಡ ಎಂಬಂತೆ ಧರ್ಮಸ್ಥಳದಲ್ಲಿನ ಮನೆಗೆ ಸತೀಶ್ ವಾಪಸ್ ಆಗಿದ್ದಾನೆ ಬರೋಬ್ಬರಿ 26 ವರ್ಷಗಳ ಬಳಿಕ ಸತೀಶ್ ತನ್ನ ಕುಟುಂಬವನ್ನು ಸೇರಿದಾನೆ. ಮನೆ ಹಿರಿಯ ಮಗನ ನೋಡಿ ತಾಯಿ ಕಣ್ಣಲ್ಲಿ ಆನಂದಭಾಷ್ಪ. ಕುಟುಂಬಸ್ಥರು ಮನೆ ಮಗನನ್ನು ಸಂತಸದಿಂದ ಬರಮಾಡಿಕೊಂಡಿದ್ದಾರೆ. ತಾಯಿ ಮತ್ತು ಸಹೋದರನನ್ನು ಮಾತ್ರ ಸತೀಶ್ ಗುರುತು ಹಿಡಿದಿದ್ದಾನೆ. ಮನೆಯವರಿಗೆ ಹಿಂದಿ ಗೊತ್ತಿಲ್ಲ ಸತೀಶ್ಗೆ ತುಳು ಮತ್ತು ಕನ್ನಡ ಬರಲ್ಲ ಆದರೂ ಸಂತೋಷದಿಂದ ಕಾಲ ಕಳೆದು ಮಹಾರಾಷ್ಟ್ರಕ್ಕೆ ಸತೀಶ್ ವಾಪಸ್ ಆಗಿದ್ದಾನೆ. ಇತ್ತೀಚಿಗೆ ಮಗನನ್ನು ಕರೆತನ್ನಿ ಎಂದು ಮಕ್ಕಳ ಬಳಿ ತಾಯಿ ಕಣ್ಣೀರು ಹಾಕಿದ್ದರು.ಧರ್ಮಸ್ಥಳ…
ಹಾಸನ : ಹಲ್ಲಿ ಬಿದ್ದ ಊಟ ಮಾಡಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹಾಸನದ ಸಾರಾಪುರದ ಕೃಷಿ ವಿಜ್ಞಾನ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅದರಲ್ಲಿ 6 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಆ ವಿದ್ಯಾರ್ಥಿನಿಯರಿಗೆ ಹಾಸನದ ಹಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನಿನ್ನೆ ರಾತ್ರಿ ಊಟ ಮಾಡುವ ಸಂದರ್ಭದಲ್ಲಿ ಸಾಂಬರ್ ನಲ್ಲಿ ಹಲ್ಲಿ ಪತ್ತೆಯಾಗಿದೆ ಸಿಲಿಂಡರ್ ಕೊರತೆಯಿಂದ ಹೊರಗಡೆ ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಹಲ್ಲಿ ಸಾಂಬಾರಲ್ಲಿ ಬಿದ್ದಿರಬಹುದು ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.
ಶಿವಮೊಗ್ಗ : ಮಹಿಳೆಗೆ ಬೆದರಿಸಲು ಬುರ್ಖಾ ಧರಿಸಿ ಬಂದಿದ್ದ ನಾಲ್ವರಿಗೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ. ಶಿವಮೊಗ್ಗದ ಕೆಆರ್ ಪುರಂ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಮೂವರು ಬುರ್ಖಾದಾರಿಗಳು ಪೊಲೀಸ್ ವಶಕ್ಕೆ ಮತ್ತೊರವ ಪರಾರಿಯಾಗಿದ್ದಾನೆ ಮಹಿಳೆಯನ್ನು ಹೆದರಿಸಲು ನಾಲ್ವರು ಬುರ್ಖಾದಾರಿಗಳು ಬಂದಿದ್ದರು. ತನ್ನ ಪತ್ನಿಗೆ ಬೆದರಿಕೆ ಹಾಕಲು ವಿಚಾರಣಾದೀನ ಕೈದಿ ನಾಲ್ವರನ್ನು ಕಳುಹಿಸಿದ್ದ ಎನ್ನಲಾಗಿದೆ. ಬೆದರಿಸಲು ಬಂದಿದ್ದ ನಾಲ್ವರು ಬುರ್ಖಾಧಾರಿಗಳಿಗೆ ಥಳಿಸಿ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೊಮ್ಮನಕಟ್ಟೆಯ ಅಸ್ಲಾಂ, ಮಹೇಶ್ ಮತ್ತು ದರ್ಶನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಮತ್ತೊಬ್ಬ ಆರೋಪಿ ಮುನ್ನ ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಶಿವಮೊಗ್ಗ ಜೈಲಲ್ಲಿ ಇರುವ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ತನ್ನ ಪತ್ನಿಗೆ ಬೆದರಿಕೆ ಹಾಕಲು ಕಳುಹಿಸಿದ್ದಾನೆ. ಶಿವಮೊಗ್ಗ ಕಾರಾಗೃಹದಲ್ಲಿರುವ ನನ್ನನ್ನು ನೋಡಲು ಬರುತ್ತಿಲ್ಲ, ಖರ್ಚಿಗೆ ಹಣ ನೀಡುತ್ತಿಲ್ಲ ಎಂದು ವಿಚಾರಣಾಧೀನ ಕೈದಿ ನೊಂದಿದ್ದಾನೆ. ಹಾಗಾಗಿ ಪತ್ನಿಗೆ ಹೆದರಿಸುವಂತೆ ಜೈಲಿನಲ್ಲಿ ಸಹಚರಿಗೆ ಸೂಚಿಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು…
ಬಳ್ಳಾರಿ: ವಿದ್ಯಾಕೇಂದ್ರವಾಗಬೇಕಿದ್ದ ವಿಶ್ವವಿದ್ಯಾಲಯವೊಂದು ಈಗ ಅಕ್ರಮದ ಅಡ್ಡಯಾಗಿ ಮಾರ್ಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿಯ ಪ್ರತಿಷ್ಠಿತ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ (VSKU) ಹಣ ಪಡೆದು ವಿದ್ಯಾರ್ಥಿಗಳನ್ನು ಪಾಸ್ ಮಾಡಿಸುವ ಬೃಹತ್ ದಂಧೆಯೊಂದು ಬಯಲಾಗಿದ್ದು, ಶೈಕ್ಷಣಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಒಂದು ವಿಷಯಕ್ಕೆ 6 ಸಾವಿರ ರೂಪಾಯಿ ಫಿಕ್ಸ್! ವಿಶ್ವವಿದ್ಯಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಈ ಒಂದು ‘ಪಾಸ್ ದಂಧೆ’ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಪರೀಕ್ಷೆಗಳಲ್ಲಿ ಫೇಲ್ ಆದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ಜಾಲ ಕೆಲಸ ಮಾಡುತ್ತಿತ್ತು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಒಂದು ವಿಷಯಕ್ಕೆ ಬರೋಬ್ಬರಿ 6,00ರುಪಾಯಿಗಳನ್ನು ವಸೂಲಿ ಮಾಡಿ, ಅವರನ್ನು ಅಕ್ರಮವಾಗಿ ಪಾಸ್ ಮಾಡಿಸಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಿಬ್ಬಂದಿಗಳ ಆಡಿಯೋ ಲೀಕ್: ಸಿಕ್ಕಿಬಿದ್ದ ಕಿಂಗ್ಪಿನ್ಗಳು ವಿಶ್ವವಿದ್ಯಾಲಯದ UCMC ವಿಭಾಗದ ಸಿಬ್ಬಂದಿಗಳೇ ಈ ದಂಧೆಯ ಮುಖ್ಯ ರೂವಾರಿಗಳು ಎನ್ನಲಾಗಿದೆ. ಈ ವಿಭಾಗದ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ ಹಾಗೂ ಉಮೇಶ್ ಎಂಬುವವರ ಮೇಲೆ ನೇರ…
ತುಮಕೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಹಾಗೂ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯಕ್ಕೆ ಯಾವುದೇ ರೀತಿಯ ರಾಜಕೀಯ ಕಂಟಕ ಎದುರಾಗುವುದಿಲ್ಲ ಎಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರವೃಷಭ ದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಿನ ಸಂಪೂರ್ಣ ಆಶೀರ್ವಾದವಿದೆ. ಹೀಗಾಗಿ ಅವರಿಗೆ ಯಾವುದೇ ರೀತಿಯ ತೊಂದರೆ ಅಥವಾ ರಾಜಕೀಯ ವಿಘ್ನಗಳು ಎದುರಾಗುವುದಿಲ್ಲ. ಒಂದು ವೇಳೆ ರಾಜಕೀಯವಾಗಿ ಸಣ್ಣಪುಟ್ಟ ಕಂಟಕಗಳು ಅಥವಾ ಅಡೆತಡೆಗಳು ಎದುರಾದರೂ ಸಹ, ಗುರುಕೃಪೆಯಿಂದ ಅವೆಲ್ಲವೂ ಅತ್ಯಂತ ಸುಲಭವಾಗಿ ನಿವಾರಣೆಯಾಗಲಿವೆ ಎಂದು ಸ್ವಾಮೀಜಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾತೆ ಹಂಚಿಕೆ ಹಾಗೂ ಪಕ್ಷದ ಆಂತರಿಕ ನಿರ್ಧಾರಗಳ ಕುರಿತು ಮಾತನಾಡಿದ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರು ಸದ್ಯ ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಖಾತೆಗಳ ವಿಚಾರದಲ್ಲಿ ಅವರು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಹೊಂದಿದ್ದಾರೆ. ಹೈಕಮಾಂಡ್…
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಕಿಡಿ ಹೊತ್ತಿಕೊಂಡಿದೆ. ಬಹರೈನ್ನಲ್ಲಿರುವ ಅಮೆರಿಕಾದ ಪ್ರಮುಖ ಸೇನಾ ನೆಲೆಯ ಮೇಲೆ ಭೀಕರ ಡ್ರೋನ್ ದಾಳಿ ನಡೆದಿದ್ದು, ಇರಾನ್ ನಡೆಸಿದ ಈ ದಿಢೀರ್ ವಾಯುದಾಳಿಗೆ ಅಮೆರಿಕ ಸೇನಾ ನೆಲೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಬಹರೈನ್ನ ಇಸಾ ಏರ್ಬೇಸ್ (Isa Air Base) ಅನ್ನು ಗುರಿಯಾಗಿಸಿಕೊಂಡು ಇರಾನ್ ಈ ಭೀಕರ ದಾಳಿಯನ್ನು ಸಂಘಟಿಸಿದೆ. ಪ್ರತಿದಾಳಿ ನಡೆಸಿದ ಇರಾನ್: ಇತ್ತೀಚೆಗಷ್ಟೇ ಇರಾನ್ನ ಕರಾಜ್ ಮತ್ತು ಹೊರ್ಮುಝ್ ಪ್ರದೇಶಗಳ ಮೇಲೆ ನಡೆದಿದ್ದ ದಾಳಿಗೆ ಪ್ರತಿಯಾಗಿ ಇರಾನ್ ಈ ಆಪರೇಷನ್ ಕೈಗೊಂಡಿದೆ ಎನ್ನಲಾಗಿದೆ. ತನ್ನ ದೇಶದ ಮೇಲಿನ ದಾಳಿಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದ ಇರಾನ್, ಅಮೆರಿಕಾದ ಮಿಲಿಟರಿ ತಾಣಗಳನ್ನೇ ಟಾರ್ಗೆಟ್ ಮಾಡಿ ಈ ಪ್ರತಿದಾಳಿ ನೆರವೇರಿಸಿದೆ. ಈ ದಾಳಿಯಿಂದಾಗಿ ಬಹರೈನ್ ವಾಯುನೆಲೆಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಹಾಗೂ ಹಾನಿ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಕುವೈತ್ ನೆಲೆಗಳ ಮೇಲೂ ಏಕಕಾಲಕ್ಕೆ ದಾಳಿ: ಇರಾನ್ನ ಆಕ್ರೋಶ ಕೇವಲ ಬಹರೈನ್ಗೆ ಮಾತ್ರ…














