Author: kannadanewsnow05

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ‌. ಡಾರ್ಕ್ ಹಾರ್ಸ್ ರೇಸ್‌ಗೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ಥರ ಮುಂದೆ ನಡೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ…

Read More

ಹಾಸನ : ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರ ಕಾರ್ಯಕ್ರಮಗಳ ಕುರಿತು ಹಾಸನದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದು ಸಚಿವರು ಅಧಿಕಾರಿಗಳಿಗೆ ಹಲವು ಸಲಹೆ ಮತ್ತು ಸೂಚನೆಗಳನ್ನು ನೀಡಿದರು. – ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನೂ ವ್ಯರ್ಥಗೊಳಿಸುವಂತಿಲ್ಲ. – ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು. – ಈಗಿನಿಂದಲೇ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ದಪಡಿಸಿಕೊಳ್ಳಬೇಕು. – ಕಳೆದ ಸರ್ಕಾರದ ಅವಧಿಯಲ್ಲಿ 94c ಹಾಗೂ 94d ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. – ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. – ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜನೀನನ್ನು…

Read More

ಬೆಂಗಳೂರು : ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು  ಮೆಕ್ಕೆ ಜೋಳ ಖರೀದಿ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ಮೂಲಕ 50 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧಾರಿಸಿದೆ. ಡಿ.1ರಿಂದ ರಾಜ್ಯದ ಐದು ಕಡೆ ಖರೀದಿ ಕೇಂದ್ರ ಓಪನ್ ಆಗಲಿದೆ. KMF ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದೆ. ತಲಾ ಒಬ್ಬ ರೈತನಿಂದ ಗರಿಷ್ಟ 25 ಟನ್ ಮೆಕ್ಕೆಜೋಳ ಖರೀದಿ ಮಾಡಲಿದೆ. ಪ್ರತಿ ಟನ್ 2,400 ರೂ. ದರ ನಿಗಧಿ ಮಾಡಿದ್ದು MSP ದರದಲ್ಲಿ ಮೆಕ್ಕೆ ಜೋಳ ಖರೀದಿಗೆ ಮುಂದಾಗಿದೆ. ಗುಣಮಟ್ಟದ ಹಿನ್ನೆಲೆ ದರ ವ್ಯತ್ಯಾಸ ಕಂಡುಬಂದಿದೆ. ಮೆಕ್ಕೆಜೋಳ ತೇವಾಂಶ 14 ಡಿಗ್ರಿ ಇದ್ರೆ ಖರೀದಿ ಮಾಡಲಾಗುತ್ತೆ. ಮೆಕ್ಕೆ ಜೋಳ ಮಾರಾಟ ಮಾಡುವ ರೈತರು ಮೊದಲು ನೊಂದಣಿ ಮಾಡಿಕೊಳ್ಳಬೇಕು.. ಕೃಷಿ ಇಲಾಖೆ, ಇ ಗರ್ವನೆನ್ಸ್, NIC ಮೂಲಕ ರೈತರು ನೋಂದಣಿ ಮಾಡಿಕೊಳ್ಳಬೇಕು. ರೈತರಿಗೆ ಖರೀದಿ ಕುರಿತು ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತೆ. ಆಗ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟ…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುರ್ಚಿ ಕಾದಾಟ ಜೋರಾಗಿ ನಡೆಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ಹೋಗುವುದು ಹೈಕಮಾಂಡವರನ್ನು ಭೇಟಿಯಾಗುವುದು, ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡೋದು ಇದೆಲ್ಲ ಇವತ್ತಿನವರೆಗೂ ನಡೆಯುತ್ತಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನನಗೆ ಏನೂ ಬೇಡ. ನನಗೇನು ಯಾವುದಕ್ಕೂ ಆತುರ ಇಲ್ಲ. ನನ್ನ ಪಕ್ಷ ಸಮಯಕ್ಕೆ ನಿರ್ಧಾರ ಮಾಡುತ್ತದೆ. ಒಂದು ಜಾತಿ ಆಧಾರದಲ್ಲಿ ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ನನ್ನ ಕಮ್ಯುನಿಟಿ. ನನ್ನ ಪ್ರೀತಿ ಎಲ್ಲಾ ಸಮುದಾಯದ ಮೇಲೆ ಇದೆ ಒಕ್ಕಲಿಗರು ಹಿಂದುಳಿದ ಜಾತಿಯವರು ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಇನ್ನು ಮಾಧ್ಯಮದವರು ದೆಹಲಿಗೆ ಹೋಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ದೆಹಲಿ ನಮಗೆ ದೇವಸ್ಥಾನ ಇದ್ದಂತೆ ದೆಹಲಿಗೆ ನಾವು ಹೋಗೆ ಹೋಗುತ್ತೇವೆ . ನಮ್ಮ ಪಕ್ಷದ ವರಿಷ್ಠರು ಒಂದು ವೇಳೆ ಕರೆದರೆ ದೆಹಲಿಗೆ ನಾನು ಮತ್ತು ಸಿದ್ದರಾಮಯ್ಯ ಹೋಗೆ…

Read More

ಬೆಂಗಳೂರು : ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಇಂದು ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲು ಆಗುವುದಿಲ್ಲ. ಒಟ್ಟಾರೆ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ ಹೇಳಿದ್ದೇನೆ. ಅದರಲ್ಲಿ ದೈಹಿಕ ಶಿಕ್ಷಕರೂ ಸೇರಿದ್ದಾರೆ. ಆದಷ್ಟು ಬೇಗ ಶಿಕ್ಷಕರನ್ನು ನೇಮಕಾತಿ‌ ಮಾಡಿಕೊಳ್ಳಲಾಗುವುದು ಎಂದರು. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ನೂರಾರು ವರ್ಷದ ಶಾಲೆ ಇದು. ಶೀಘ್ರವಾಗಿ ಶಿಕ್ಷಕರ ಕೊರತೆ ಪರಿಹರಿಸುವ ಕಾರ್ಯ ಮಾಡುತ್ತೇನೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಿಕ್ಷಣ ಇಲಾಖೆಯ ಎರಡು ಮಸೂದೆಳನ್ನು ಮಂಡಿಸಲಾಗುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು ಎಂದು ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಮುಖ್ಯಮಂತ್ರಿ  ಸಿದ್ದರಾಮಯ್ಯ ನವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ ಗೇಟ್ NO 01 ರಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಐಸಿಡಿಎಸ್ , ತಾಯಿ ಶಿಶು ಮರಣ…

Read More

ಬೆಂಗಳೂರು : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೊಬ್ಬಳು ತನ್ನ ಪತಿಗೆ ಚಟ್ಟ ಕಟ್ಟಿರುವ ಘಟನೆ ಇದೀಗ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿ ಓರ್ವನಾದ ವೀರಭದ್ರ ತಂದೆ ಬಳಿ ಈ ದಂಪತಿ ಗಾರೆ ಕೆಲಸ ಮಾಡಿಕೊಂಡಿದ್ದು, ವೀರಭದ್ರ ಕೆಲಸಗಾರರನ್ನು ನೋಡಿಕೊಳ್ಳುತ್ತಿದ್ದ. ಈ ವೇಳೆ ವೀರಭದ್ರ ಮತ್ತು ಶರಣಮ್ಮ ನಡುವೆ ಸಲುಗೆ ಬೆಳೆದಿದೆ. ಆ ಸಲುಗೆ ಅಕ್ರಮ ಸಂಬಂಧದ ವರೆಗೆ ಹೋಗಿದೆ. ಹೀಗಾಗಿ ನ.19ರಂದು ಮದ್ಯ ಸೇವಿಸಿ ಬಸವರಾಜು ಮಲಗಿದ್ದ ವೇಳೆ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಶರಣಮ್ಮ ಕೊಲ್ಲಿಸಿದ್ದಾಳೆ. ತಲೆ ಮೇಲೆ ಕಲ್ಲು ಎತ್ತಿಹಾಕಿ, ನಂತರ ನೇಣು ಬಿಗಿದು ಬರ್ಬರವಾಗಿ ಬಸವರಾಜು ಕೊಲೆ ಮಾಡಲಾಗಿದೆ. ಬಳಿಕ ಶವವನ್ನ ಗಂಗೊಂಡಹಳ್ಳಿ…

Read More

ಬೆಂಗಳೂರು : ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ತಪ್ಪಿಲ್ಲ ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸರ್ವಜ್ಞನ ವಚನ ಉಲ್ಲೇಖಿಸಿ ಮಾತನಾಡಿದರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಸರ್ವಜ್ಞನ ವಚನ ದೊಂದಿಗೆ ಭಾಷಣ ಆರಂಭಿಸಿದರು. ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ಕಪ್ಪಿಲ್ಲ ದೇವರು ವರನೂ ಕೊಡಲ್ಲ ಶಾಪವೂ ಕೊಡಲ್ಲ ಆದರೆ ಅವಕಾಶ ಕೊಡುತ್ತಾನೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಭಾಷಣದಲ್ಲಿ ತಿಳಿಸಿದರು. ಇನ್ನು ನಿನ್ನೆಯೂ ಸಹ ಸಿಎಂ ಡಿಸಿಎಂ ನಡುವೆ ಟ್ವೀಟ್ ವಾರ್ ನಡೆದಿತ್ತು. ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ಜಡ್ಜ್ ಆಗಲಿ, ಅಧ್ಯಕ್ಷರಾಗಲಿ,…

Read More

ಚಿಕ್ಕಮಗಳೂರು : ಷೇರು ಮಾರುಕಟ್ಟೆ ಹೆಸರಿನಲ್ಲಿ 3ಕೋಟಿ 27 ಲಕ್ಷ ವಂಚನೆ ಎಸಗಲಾಗಿದ್ದು, ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ (ISRS) ಲೋಗೋ ನಂಬಿ ಚಿಕ್ಕಮಗಳೂರಿನ 72 ವರ್ಷದ ಶಂಕರ್ ನಟರಾಜನ್ ಎನ್ನುವವರು ಹಣ ಹೂಡಿಕೆ ಮಾಡಿದ್ದರು. ವಾಟ್ಸಪ್ ನಲ್ಲಿ ಬಂದ ಲೋಗವನ್ನು ಶಂಕರ ನಟರಾಜ ನಂಬಿದ್ದಾರೆ. ಬಳಿಕ ಹಂತ ಹಂತವಾಗಿ ಹಂತವಾಗಿ 3 ಕೋಟಿ 27 ಲಕ್ಷ ಹಣ ಹಾಕಿಸಿಕೊಂಡು ವಂಚನೆ ಎಸಗಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶಂಕರ ನಟರಾಜಗೆ ವಂಚನೆ ಎಸೆಗಲಾಗಿದೆ 72 ವರ್ಷದ ಶಂಕರ್ ನಟರಾಜನ್ ಹೂಡಿಕೆ ಹೆಸರಿನಲ್ಲಿ ಮೋಸ ಹೋಗಿದ್ದಾರೆ ನಿಮ್ಮ ಖಾತೆಯಲ್ಲಿ 9 ಕೋಟಿ ಹಣ ಇದ್ದು ಅದನ್ನು ಪಡೆಯಲು ಕಮಿಷನ್ 1 ಕೋಟಿ 9 ಲಕ್ಷ ಕಮಿಷನ್ ಹಾಕುವಂತೆ ವಂಚಕರು ಬೇಡಿಕೆ ಇಟ್ಟಿದ್ದರು. ಮಹಾರಾಷ್ಟ್ರದ ಐಎಸ್ಆರ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ವೇಳೆ ವಂಚನೆ ಬಯಲಾಗಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಿನಲ್ಲಿ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ ಶಂಕರ್ ನಟರಾಜನಿಗೆ 3.27…

Read More

ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಕೆಲವು ಕಾಲ ಎದ್ದು ಹೊರ ಹೋಗಿದ್ದರು. ಸಿಎಂ ಸಿದ್ದರಾಮಯ್ಯ ಎದ್ದು ಹೋದ ಬಳಿಕ ಆ ಚೇರ್ ಮೇಲೆ ಕುಳಿತು ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ ನಡೆಸಿದರು. ಮಾರ್ಗರೇಟ್ ಆಳ್ವ ಜೊತೆಗೆ ಶಿವಕುಮಾರ್ ಕೆಲ ಸಮ ಆಲೋಚನೆ ನಡೆಸಿದರು ಸಿಎಂ ಸಿದ್ದರಾಮಯ್ಯ ಕುಳಿತಿದ್ದ ಚೇರ್ನಲ್ಲಿ ಒಂದು ನಿಮಿಷ ಚರ್ಚೆ ನಡೆಸಿದ್ದಾರೆ ನಂತರ ತಾವು ಮೊದಲು ಕುಳಿತಿದ್ದ ಕುರ್ಚಿಗೆ ತೆರಳಿದರು ಅಷ್ಟರಲ್ಲಿ ಹೊರಹೋಗಿದ್ದ ಸಿಎಂ ಸಿದ್ದರಾಮಯ್ಯ ಮತ್ತೆ ಮರಳಿದರು.

Read More