Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಜೊತೆ ಸೇರಿ, ಕೂಲ್ಡ್ರಿಂಕ್ಸ್ ನಲ್ಲಿ ನಿದ್ರೆ ಮಾತ್ರೆ ಹಾಕಿ, ಸಿಲಿಂಡರ್ ನಿಂದ ತಲೆ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ಈ ಕೊಲೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್ನಿಂದ ತಲೆ ಮತ್ತು ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದರು ಎಂಬುದು ಗೊತ್ತಾಗಿದೆ. ಮಾರ್ಚ್ 6ರಂದು ಸಂಜೆ 4ಕ್ಕೆ ಮನೆಯಿಂದ ಅವಿನಾಶ್ ಕ್ಲಿನಿಕ್ಗೆ ಹೋಗಿದ್ದರು. ಈ ವೇಳೆ ಥೆರಪಿ ಮಾಡಿಸಿಕೊಳ್ಳಲೆಂದು ಆರೋಪಿ ಕೈಲಾಶ್ ಕೂಡ ಕ್ಲಿನಿಕ್ಗೆ ತೆರಳಿದ್ದ. ಹೋಗುವಾಗ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ…
ಬೆಂಗಳೂರು : ಇತ್ತೀಚಿಗೆ ಚಿಕ್ಕಮಗಳೂರಲ್ಲಿ ಕಂಡಕ್ಟರ್ ಪುರುಷ ಪ್ರಯಾಣಿಕ ನಿಗೆ ಪ್ರಯೋಜನ ಟಿಕೆಟ್ ನೀಡಿದ್ದು, ಭಾರಿ ಚರ್ಚೆಯಾಗಿತ್ತು. ಇದೀಗ ಬೆಂಗಳೂರಲ್ಲಿ ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ಬಿಎಂಟಿಸಿಗೆ ವಂಚಿಸುತ್ತಿದ್ದ ಐವರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಅಲ್ಲದೇ ಅಕೌಂಟ್ನಲ್ಲಿಯೂ ಸಾವಿರಾರು ರೂ. ಹಣ ಇರುವುದು ಪತ್ತೆಯಾಗಿದೆ. ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಕಂಡಕ್ಟರ್ಗಳ ವಂಚನೆ ಬಯಲಾಗಿದೆ. ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು, ಮೋಹನ್, ಹಾಗು ಎನ್.ಪ್ರಕಾಶ್ ಈ ಐವರನ್ನು ಸಸ್ಪೆಂಡ್ ಮಾಡಲಾಗಿದೆ. ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪ ಸಾಬೀತಾದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಲಕ್ಷಾಂತರ ರೂಪಾಯಿ ವಂಚನೆ ಬಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ದಕ್ಷಿಣಕನ್ನಡ : ವಿವಾಹದ ಮೆಹಂದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಿರ್ವಹಣೆ ಮಾಡಲು ಆರಂಭಿಸಿದ ಯುವಕನೋರ್ವ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ (32) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಸಂಬಂಧಿಕರ ಮದುವೆಯ ಮದರಂಗಿ ಕಾರ್ಯಕ್ರಮದ ಸಂಭ್ರಮ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಿರೂಪಣೆ ಮಾಡಲೆಂದು ವೇದಿಕೆಯನ್ನು ಏರಿದಾಗ ಅವರು ಹಠಾತ್ ಕುಸಿದುಬಿದ್ದಿದ್ದಾರೆ. ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ನಡೆದ ಈ ಘಟನೆಯಿಂದ ಆತಂಕಿತರಾದ ಮನೆಯವರು ಕೂಡಲೇ ಸಮೀಪದ ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅದಾಗಲೇ ಮೃತಪಟ್ಟಿರುವ ಕುರಿತು ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ಉಪ್ಪಿಟ್ಗಳ ಮುಂದುವರೆದಿದ್ದು ಇದೀಗ ಹಾಸನದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೀತಿನ ಮೇಲೆ ಏಕಾಏಕಿ ಕಾಡಾನೆ ಒಂದು ದಾಳಿ ಮಾಡಿದ್ದರಿಂದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ಸುಲಿಗೆ ಮಾಡಿದ್ದವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಳಗಾವಿಯಲ್ಲಿ ವೆಂಕದೂತ ಶರತ್ ನಾಯಕ್ ದೇಗಾವತ್ ಶ್ರೀಪಾದ್ ನಾಯಕ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಂತ ಹಂತವಾಗಿ 15.45 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದರು ಕೇಶ ದಾಖಲಿಸಿಕೊಂಡು ಸೈಬರ್ ಕಮಾಂಡ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಘಟನೆಯ ಬಗ್ಗೆ ಬೆಳಗಾವಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ವೆಂಕದೂತ ಶರತ್ ನಾಯಕ್ ಮತ್ತು ದೇಗಾವತ ಶ್ರೀಪಾದ ನಾಯಕರನ್ನು ಬಂಧಿಸಲಾಗಿದೆ ಬಂಧಿತ ಆರೋಪಿಗಳ ಬ್ಯಾಂಕ್ ಅಕೌಂಟ್ ನಿಂದ 2 ಕೋಟಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ ತನಿಖೆ ಮುಂದುವರೆದಿದೆ.
ಕಲಬುರ್ಗಿ : ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಎಂದು ಗುರುತಿಸಲಾಗಿದೆ. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಗೂರ ಸೇತುವೆ ಬಳಿ ಬೈಕ್ ನಿಲ್ಲಿಸಿ, ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಲಬುರಗಿ : ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ ಕಡಗಂಚಿ ವಜಾಗೊಂಡ ಸಿಬ್ಬಂದಿ ಎಂದು ತಿಳಿದುಬಂದಿದೆ. ಎಂ.ಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ, ಅಶ್ಲೀಲ ಪದಗಳಿಂದ ನಿಂದನೆ ಮಾಡುವುದು, ಜಾತಿಯನ್ನು ಗುರಿಯಾಗಿಸಿ ಹೀಯಾಳಿಸುವುದು ಹಾಗೂ ಜೀವ ಬೆದರಿಕೆ ಹಾಕಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ವಿದ್ಯಾರ್ಥಿನಿಯ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಆರೋಪಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ಕಳೆದ ಒಂದು ವರ್ಷದಿಂದ ಆರೋಪಿ ವಿಜಯಕುಮಾರ್ ನನ್ನ ಬಳಿ ಬಂದು ಮೈಗೆ ತಾಗಿಕೊಂಡು ನಿಲ್ಲುವುದು, ನನ್ನ ದೇಹದ ಬಗ್ಗೆ ಮಾತನಾಡುವುದು ಮಾಡುತ್ತಿದ್ದ. ನನಗೆ ಗೊತ್ತಿಲ್ಲದಂತೆ ವಿಡಿಯೊ ಮಾಡಿ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ತನ್ನ ಗಮನಕ್ಕೆ…
ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಭಾವದ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ನಲ್ಲಿ ಭೀಕರವಾದ ಬೆಂಕಿ ಅವಘಡ ಸಂಭವಿಸಿದೆ. ಬೆಂಗಳೂರು ನಗರದ ಚಿಕ್ಕಪೇಟೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಘಟನೆಯಲ್ಲಿ ದೋಸೆ ಹೋಟೆಲ್ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಪ್ರಣಾಪಾಯ ಸಂಭವಿಸಿಲ್ಲ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ಇಲ್ಲೊಬ್ಬ ಕಳ್ಳ ವಿಚಿತ್ರವಾಗಿ ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದಾನೆ. ಕಳ್ಳತನಕ್ಕು ಮೊದಲು ದೇವರಿಗೆ ಕೈಮುಗಿದು ಬಳಿಕ ಹಣೆಗೆ ಕುಂಕುಮ ಹಚ್ಚಿಕೊಂಡು ಅಲ್ಲಿಯೇ ಇದ್ದ ಹುಂಡಿಯ ಹಣ ಕದ್ದು ಖತರ್ನಾಕ್ ಕಳ್ಳ ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹೌದು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಶಕ್ತಿ ದೇವತೆ ಶ್ರೀ ಪಟ್ಟದರಾಣಿ ದೇವಾಲಯದ ಹುಂಡಿ ಹಣ ಕಳವಾಗಿದೆ. ಓರ್ವ ಕಳ್ಳ ದೇವರಿಗೆ ಕೈ ಮುಗಿದು ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದಿದ್ದಾನೆ. ಈ ಹಿಂದೆಯೂ ಹುಂಡಿ ಹಣ ಕಳ್ಳತನವಾಗಿದ್ದು, ನಂತರ ಸಿಸಿಟಿವಿ ಅಳವಡಿಸಲಾಗಿತ್ತು. ದೇಗುಲದ ಮುಖ್ಯ ಬಾಗಿಲಿಗೆ ನೇತು ಹಾಕಿದ್ದ ಹುಂಡಿಯ ಬೀಗ ಒಡೆದ ಕಳ್ಳ, ಹಣ ಎಗರಿಸಿದ್ದಾನೆ. ಬೆಡ್ಶೀಟ್ ಹೊದ್ದುಕೊಂಡು ಬಂದಿರುವ ಆತ, ಮೊದಲಿಗೆ ದೇವರಿಗೆ ಕೈ ಮುಗಿದು ಬಳಿಕ ಕುಂಕುಮ ಹಚ್ಚಿಕೊಂಡಿದ್ದಾನೆ. ನಂತರ, ಹುಂಡಿಯ ಬೀಗ ತೆರೆದು ನೋಟುಗಳನ್ನು ಕೈ ತುಂಬಾ ಹಿಡಿದು ಬ್ಯಾಗ್ಗೆ ತುಂಬಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉತ್ತರಕನ್ನಡ : ಆಸ್ತಿ ವಿಚಾರಕ್ಕೆ ಮಗನನ್ನೇ ಕೊಲೆ ಮಾಡಿದ ತಂದೆ ಹಾಗೂ ಇಬ್ಬರು ಸಂಬಂಧಿಕರು ಸೇರಿದಂತೆ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶಿರಸಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಹಳಿಯಾಳ ಪೊಲೀಸ್ ಠಾಣ ವ್ಯಾಪ್ತಿಯ ಬಿಡೊಳ್ಳಿ ಗ್ರಾಮದಲ್ಲಿ ಕೇಶವ ಎಂಬ ಯುವಕನ ಕೊಲೆ ನಡೆದಿತ್ತು. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದೆ. ಅಕ್ಷಯ್ ಅಲಿಯಾಸ್ ಆಕಾಶ್ ಕಿತ್ತೂರಕರ್, ಪಾಂಡುರಂಗ ಕಿತ್ತೂರಕರ್ ಹಾಗೂ ಲತಾ ಅಲಿಯಾಸ್ ತುಳಸಾಯಿ ಕಿತ್ತೂರಕರ್ ಎಂಬುವವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇವರಿಗೆ ಜೀವಾವಧಿ ಶಿಕ್ಷೆ ಸಹಿತ ತಲಾ 25 ರೂ.ಗಳ ದಂಡ ವಿಧಿಸಿ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಆದೇಶ ಹೊರಡಿಸಿದ್ದಾರೆ. ಪಾಂಡುರಂಗ ಕಿತ್ತೂರಕರ್ನ ಮೊದಲ ಹೆಂಡತಿಯ ಮಗನಾದ ಕೇಶವ ತನಗೆ ಬರಬೇಕಾದ ಆಸ್ತಿಯ ಪಾಲನ್ನು ಕೇಳಿದ್ದೇ ಆತನ ಪ್ರಾಣಕ್ಕೆ ಸಂಚಕಾರವಾಗಿತ್ತು. ಮಗನಿಗೆ ಆಸ್ತಿ ನೀಡುವುದನ್ನು…














