Author: kannadanewsnow05

ಚಿಕ್ಕಬಳ್ಳಾಪುರ : ಬಿಜೆಪಿ ಸಂಸದ ಕೆ ಸುಧಾಕರ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿಯಾದ ರಾಧಾ ಮೋಹನ್ ದಾಸ್ ಅಗರ್ವಾವಾಲ್ ಅವರಿಗೆ ದೂರು ಸಲ್ಲಿಸಲಾಗಿದೆ. ಕೆ. ಸುಧಾಕರ್ ನಡೆಯ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದ ಸಿ.ಮುನಿರಾಜು ಅವರು ರಾಜ್ಯ ಬಿಜೆಪಿ ಉತ್ಸವ ರಾಧಾ ಮೋಹನ್ದಾಸ್ ಅವರ ಮುಂದೆ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾದ ಸಿ ಮುನಿರಾಜು ಬಾಗೇಪಲ್ಲಿ ಕ್ಷೇತ್ರಕ್ಕೆ ಸಂಸದ ಕೆ ಸುಧಾಕರ್ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಬೇರೆಯವರನ್ನು ಎನ್‌ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಸಮ್ಮುಖದಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ದೂರು ನೀಡಿದರು. ಈ ವೇಳೆ ರಾಧಾ ಮೋಹನ್ ದಾಸ್ ಅಗರ್ವಾಲ್ ಸಂಸದ ಕೆ. ಸುಧಾಕರ್ ಅವರ ಜೊತೆ ಮಾತನಾಡುವುದಾಗಿ ತಿಳಿಸಿದರು.

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆಗುತ್ತಿದ್ದು ಇನ್ನೂ ಹಲವು ಕಡೆ ವಿಪರೀತ ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಅಲ್ಲದೇ ರಾಜ್ಯಾದ್ಯಂತ ಇನ್ನೂ ಒಂದು ವಾರ ತಾಪಮಾನ ಏರಿಕೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೌದು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲ ಬೇಗೆಗೆ ಜನರು ಬಳಲಿ ಬೆಂಡಾಗಿದ್ದು, ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ತಲುಪಿದೆ. ಇನ್ನು ಬೆಂಗಳೂರಿನಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 40-42 ಡಿಗ್ರಿ ಉಷ್ಣಾಂಶ ದಾಖಲಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಾಪಮಾನ ಏರಿಕೆಯಾಗುತ್ತಲೇ ಇರುವುದರಿಂದ ಜನರು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡದಿರುವುದು ಉತ್ತಮ. ಉಷ್ಣಾಘಾತದಿಂದ ರಕ್ಷಿಸಿಕೊಳ್ಳಲು ನಿಯಮಿತವಾಗಿ ನೀರು, ತಂಪು ಪಾನೀಯಗಳನ್ನ ಸೇವಿಸಬೇಕು. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ…

Read More

ಬೆಂಗಳೂರು : ಬೆಂಗಳೂರಿನಲ್ಲಿ CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಈ ವಿಚಾರ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿಯಾಗಿದ್ದಾರೆ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದೆ ಡ್ರೆಸ್ ಕೋಡ್ ನಿಯಮದ ಕುರಿತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಇಂದು ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ರೀತಿ ಆಗಿದ್ದರೆ ಯಾರು ಜನಿವಾರ ತಿಳಿಸಿದ್ದಾರೋ ಆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ತಿಳಿಸಿದರು.

Read More

ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಅಂತಹ ನಡೆದಿದ್ದು, ತಾಯಿ ಮೊಬೈಲ್ ಕೊಡದಿದ್ದಕ್ಕೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. ಸಮರ್ಥ (14) ಎಂಬ ಬಾಲಕ ತಾಯಿ ಮೊಬೈಲ್ ಕೊಡದಿದ್ದಕ್ಕೆ, ಆತ್ಮಹತ್ಯೆಗೆ ಶರಣಾಗಿದ್ದಾನೆ ಉದಯ ನಗರದಲ್ಲಿ ನೇಣು ಬಿಗಿದುಕೊಂಡು ಸಮರ್ಥಾತ್ಮತೆಗೆ ಶರಣಾಗಿದ್ದು ಸಮರ್ಥ್ ಆನ್ಲೈನ್ ಗೇಮ್ ಗೆ ಅಡಿಕ್ಟ್ ಆಗಿದ್ದ ನಿನ್ನೆ ರಾತ್ರಿ ಗೇಮ್ ಆಡಿದಂತೆ ತಾಯಿ ಸಮರ್ಥನಿಗೆ ಬುದ್ಧಿ ಮಾತು ಹೇಳಿದ್ದಾಳೆ ಇದರಿಂದ ಕೋಪಗೊಂಡು ಸಮರ್ಥ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹುಬ್ಬಳ್ಳಿಯ ಕೇಶವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವೇಕಾನಂದ ಎನ್ನುವ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೂಡಿಕೆದಾರರ ಒತ್ತಡದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ ಇನ್ ವಿಷನ್ ಬೆಂಗಳೂರು ಎಂಬ ಸಂಸ್ಥೆಯನ್ನು ವಿವೇಕಾನಂದ ನಡೆಸುತ್ತಿದ್ದರು. ವಿವಿಧ ಯೋಜನೆಗಳಲ್ಲಿ ವಿವೇಕಾನಂದ ಹಣ ಹೂಡಿಕೆ ಮಾಡುತ್ತಿದ್ದ ಜನರಿಂದ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿ ಹೂಡಿಕೆ ಮಾಡುತ್ತಿದ್ದರು. ಹಣವನ್ನು ಷೇರು ಮಾರುಕಟ್ಟೆಯಲ್ಲಿ ವಿವೇಕಾನಂದ ಹೂಡಿಕೆ ಮಾಡುತ್ತಿದ್ದ ಆದರೆ ಶೇರು ಮಾರುಕಟ್ಟೆಯಲ್ಲಿ ವಿವೇಕಾನಂದ ಗೆ ಲಾಸ್ ಆಗಿತ್ತು. ಹೂಡಿಕೆದಾರರು ತಮ್ಮ ಹಣವನ್ನು ಹಿಂದಿರುಗಿಸುವಂತೆ ಒತ್ತಡ ಸೇರಿದ್ದಾರೆ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಅರ್ಚನಾಶೆಟ್ಟಿ ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಮೃತ ವಿವೇಕಾನಂದ ಪತ್ನಿ ಅರ್ಚನಾ ಶೆಟ್ಟಿ ದೂರು ನೀಡಿದ್ದಾರೆ. ಅರ್ಚನಾ ಶೆಟ್ಟಿ ಅವರ ದೂರಿನ ಅನ್ವಯ ಸಂಪಿಗೆಹಳ್ಳಿ ಪೋಲಿಸ್…

Read More

ರಾಯಚೂರು : ರಾಯಚೂರಲ್ಲಿ ಘೋರ ದುರಂತ ಒಂದು ನಡೆದಿದ್ದು, ಸಾಸಲು ಮರಿ ಬ್ರಿಡ್ಜ್ ಬಳಿ ರೈಲಿನಿಂದ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಸಲಮರಿ ಬ್ರಿಡ್ಜ್ ಬಳಿ ಈ ಒಂದು ದುರಂತ ಸಂಭವಿಸಿದೆ. ಸ್ನೇಹಿತರ ಜೊತೆಗೆ ಟ್ರಿಪ್ ಗೆ ಹೋಗಿ ಹಿಂದಿರುಗುವಾಗ ದುರ್ಘಟನೆ ಸಭಾವಿಸಿದೆ. ಕಸಬಾ ಲಿಂಗಸುಗೂರು ನಿವಾಸಿ ಸುಮಂತ್ ಕುಮಾರ್ (18) ಎನ್ನುವ ಯುವಕ ಸಾವನಪ್ಪಿದ್ದಾನೆ. ಮೊನ್ನೆಯಷ್ಟೇ ಆರು ಜನ ಸ್ನೇಹಿತರ ಜೊತೆಗೆ ಸುಮಂತ್ರ ದಾಂಡೇಲಿಗೆ ಹೋಗಿದ್ದ ನಿನ್ನೆ ಹುಬ್ಬಳ್ಳಿಯಿಂದ ರೈಲಿನಲ್ಲಿ ಸಿಂಧನೂರಿಗೆ ಸ್ನೇಹಿತರ ಜೊತೆಗೆ ಬರುತ್ತಿದ್ದ. ಸಿಂಧನೂರಿಗೆ ಬಂದವಳಿಕೆ ಸ್ನೇಹಿತರೆ ಸಿಂಧನೂರಿನ 5 ಕಿ.ಮೀ ದೂರದ ಸಾಸಲಮರಿ ಕ್ಯಾಂಪ ಬಳಿ ಆತನ ಶವ ಪತ್ತೆಯಾಗಿದೆ. ರೈಲಿನಿಂದ ಸುಮಂತ್ ಕುಮಾರ್ ಹೇಗೆ ಕೆಳಗೆ ಬಿದ್ದ ಅನ್ನೋದೇ ನಿಗೂಢವಾಗಿದೆ. ಸ್ಥಳಕ್ಕೆ ರಾಯಚೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಹುಬ್ಬಳ್ಳಿ : ಇತ್ತೀಚಿಗೆ ರಾಜ್ಯದ ಹಿರಿಯ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ವಿಸ್ತರಣೆ ಮಾಡಿ ಎಂದು ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮನವಿ ಮಾಡಿದ್ದರು. ಈ ಒಂದು ಬೆಳವಣಿಗೆಯ ಮಧ್ಯೆ ಹುಬ್ಬಳ್ಳಿಯಲ್ಲಿ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸ್ಪೋಟಕ ಹೇಳಿಕೆ ನೀಡಿದ್ದು, ಮೇ 20ರ ಒಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮೇ 4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇಕಡ 50ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ ಆದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುವುದಿಲ್ಲ ಎಂದು ಪರಿಷತ್ ಸದಸ್ಯ ಸಲೀಂ ಅಹಮದ್ ಹೇಳಿಕೆ ನೀಡಿದರು.

Read More

ಚಿಕ್ಕಮಗಳೂರು : ಪ್ರೀತಿ ಅನ್ನೋದು ಎಲ್ಲಿ ಯಾವಾಗ ಹೇಗೆ ಹುಟ್ಟುತ್ತೆ ಎನ್ನುವುದನ್ನು ಹೇಳುವುದಕ್ಕೆ ಆಗಲ್ಲ ಇದೀಗ ಚಿಕ್ಕಮಂಗಳೂರಲ್ಲೂ ಕೂಡ ಅಂತಹದ್ದೇ ಘಟನೆ ನಡೆದಿದ್ದು, ಎಟಿಎಂ ಕೇಂದ್ರದಿಂದ ಶುರುವಾದ ಶುರುವಾದ ಇವರಿಬ್ಬರ ಪ್ರೀತಿ ಇದೀಗ ಜಾತಿಯನ್ನು ಮೀರಿ ಮದುವೆಯಾಗಿದ್ದಾರೆ. ಹೌದು ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದಿದ್ದಾರೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ ಸಾವಿತ್ರಿ ಹಾಗೂ ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂದು ಯುವತಿ ಸಾವಿತ್ರಿ ಹಣ ತೆಗೆದುಕೊಳ್ಳಲು ಎಟಿಎಂಗೆ ಆಗಮಿಸಿದ್ದರು. ಯುವಕ ಸಚಿನ್ ಕೂಡ ಇ-ಲಾಬಿಯಲ್ಲಿ ಖಾತೆಗೆ ಹಣ ಹಾಕಿಕೊಳ್ಳಲು ಬಂದಿದ್ದರು. ಇದೇ ವೇಳೆ ಸಾವಿತ್ರಿ ಅವರು ಹಣ ತೆಗೆಯಲು ಪರದಾಡುತ್ತಿದ್ದರು. ಆಗ ಸಚಿನ್ ಸಾವಿತ್ರಿಗೆ ಸಹಾಯ ಮಾಡಿದ್ದರು. ಇದೇ ಕಾರಣಕ್ಕೆ ಇಬ್ಬರು ನಂಬರ್ ಶೇರ್ ಮಾಡಿಕೊಂಡಿದ್ದರು. ಅಲ್ಲಿಂದ ಪರಿಚಯವಾಗಿ ಪ್ರೀತಿ ಶುರುವಾಗಿತ್ತು.ಇದೀಗ…

Read More

ಶಿವಮೊಗ್ಗ : ಇತ್ತೀಚಿಗೆ ಜೋಕಾಲಿ ಆಡುವಾಗ ಓರ್ವ ಬಾಲಕಿ ಹಾಗೂ ಬಾಲಕ ಕುಣಿಕೆ ಬಿಗಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗಳು ಮಾಸುವ ಮುನ್ನವೇ ಇದೀಗ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನಪ್ಪಿದ್ದಾಳೆ. ಹೌದು ಶಿವಮೊಗ್ಗದ ವಿದ್ಯಾನಗರದ 9 ವರ್ಷದ ಬಾಲಕಿ ಪ್ರಣಮ್ಯ ಸಾವನಪ್ಪಿದ್ದಾಳೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಣಮ್ಯ ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಶಿವಮೊಗ್ಗ ತಾಲೂಕಿನ ಲಕ್ಕಿನ ಕೊಪ್ಪದಲ್ಲಿದ್ದ ಚಿಕ್ಕಮ್ಮನ ಮನೆಗೆ ಹೋಗಿದ್ದಾಗ ಪಂಚೆಯಲ್ಲಿ ಜೋಕಾಲಿ ಮಾಡಿಕೊಂಡು ಆಡುತ್ತಿದ್ದಾಗ ಕುಣಿಕೆ ಬಿಗಿದು ಪ್ರಣಮ್ಯ ಸಾವನಪ್ಪಿದ್ದಾಳೆ. ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಛತ್ತೀಸ್ಗಡ : ಛತ್ತೀಸಘಡದಲ್ಲಿ ಬೆಚ್ಚಿಬಿಳಿಸುವ ಘಟನೆ ಒಂದು ನಡೆದಿದ್ದು, ಪಾಪಿ ಪತಿಯೊಬ್ಬ ಪತ್ನಿಯ ತಲೆಕೆಡಿದು ಸಾರ್ವಜನಿಕವಾಗಿ ಉಡಾಡಿರುವ ಘಟನೆ ಇದೀಗ ವರದಿಯಾಗಿದೆ. ಪತ್ನಿಯ ತಲೆಕತರಿಸಿ ಚೀಲದಲ್ಲಿ ಪತಿ ಪತ್ನಿಯ ತಲೆ ತಂದಿದ್ದಾನೆ. ಛತ್ತೀಸ್ಗಡದ ಕೋರ್ಬ ಜಿಲ್ಲೆಯಲ್ಲಿ ಈ ಒಂದು ಘಟನೆ ವರದಿಯಾಗಿದೆ ಮಕ್ಕಳ ಮುಂದೆಯೆ ಪತ್ನಿಯ ಶಿರಶ್ಚೇಧವಾಗಿದೆ. ಈ ಒಂದು ಘಟನೆಯಿಂದ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ. ಪತ್ನಿಯ ಶೀಲವನ್ನು ಶಂಕಿಸಿ ದುಷ್ಟ ಈ ರೀತಿ ಕೃತ್ಯ ಎಸಗಿದ್ದಾನೆ.ಮಕ್ಕಳ ಮುಂದೆ ತನ್ನ ಪತ್ನಿಯ ಕತ್ತರಿಸಿ ಆಕೆಯ ತುಂಡರಿಸಿದ ತಲೆಯೊಂದಿಗೆ ಸಾರ್ವಜನಿಕವಾಗಿ ಓಡಾಡಿ ಪ್ರದರ್ಶನ ಮಾಡಿದ್ದಾನೆ.

Read More