Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರಿನಲ್ಲಿ ಇಂದು ಹಠಾತ್ತನೆ ವಾತಾವರಣ ಬದಲಾಗಿದ್ದು, ವರುಣನ ಅಬ್ಬರ ಜೋರಾಗಿದೆ. ನಗರದ ಪ್ರಮುಖ ಪ್ರದೇಶಗಳಾದ ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಬೆಳಗ್ಗಿನಿಂದಲೇ ಇದ್ದ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ಈ ಹಠಾತ್ ಮಳೆ ತಂಪೆರೆದಿದೆಯಾದರೂ, ಸಾರ್ವಜನಿಕರ ದೈನಂದಿನ ಜೀವನಕ್ಕೆ ಕೊಂಚ ಅಡ್ಡಿಪಡಿಸಿದೆ. ಮುನ್ಸೂಚನೆಯಿಲ್ಲದೆ ಸುರಿದ ಈ ಭಾರಿ ಮಳೆಯಿಂದಾಗಿ ನಗರದ ಹೃದಯಭಾಗದಲ್ಲಿರುವ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್, ಫ್ರೆಜರ್ ಟೌನ್ ಮತ್ತು ಲಿಂಗರಾಜಪುರ ಮುಂತಾದ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೇವಲ ಅರ್ಧ ಗಂಟೆಯ ಮಳೆಗೆ ರಸ್ತೆಗಳ ಇಕ್ಕೆಲಗಳಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ವಾಹನ ಸವಾರರು ಕಷ್ಟಪಟ್ಟು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯವಾಗಿ ಕಚೇರಿ ಕೆಲಸಗಳಿಗೆ ತೆರಳಿದ್ದವರು ಮತ್ತು ಭಾನುವಾರದ ರಜೆಯ ಹಿನ್ನೆಲೆಯಲ್ಲಿ ಹೊರಗಡೆ ಬಂದಿದ್ದ ಸಾರ್ವಜನಿಕರು ಮಳೆಯಲ್ಲಿ ಸಿಲುಕಿ ಪರದಾಡಿದರು. ರಸ್ತೆಗಳು ಕೆರೆಯಂತಾದ ಪರಿಣಾಮ ದ್ವಿಚಕ್ರ ವಾಹನ ಸವಾರರು ಬ್ರಿಡ್ಜ್‌ಗಳ ಕೆಳಗೆ ಮತ್ತು ಮೆಟ್ರೋ ನಿಲ್ದಾಣಗಳ ಆಶ್ರಯ…

Read More

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಯೇ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೂರುದಾರರೊಬ್ಬರಿಂದ ₹40,000 ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನ ಎಚ್‌ಎಎಲ್ (HAL) ಪೊಲೀಸ್ ಠಾಣೆಯ ಮೂವರು ಪೊಲೀಸರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ಅನಿತಾ ಹಾಗೂ ಹೆಡ್ ಕಾನ್ಸ್ಟೇಬಲ್‌ಗಳಾದ ಯತೀಶ್ ಕುಮಾರ್ ಮತ್ತು ಉಳುವಪ್ಪ ಎಂದು ಗುರುತಿಸಲಾಗಿದೆ. ಕರ್ತವ್ಯದ ನಿಮಿತ್ತ ಜೈಪುರಕ್ಕೆ ತೆರಳಿದ್ದ ಈ ಮೂವರು ಅಧಿಕಾರಿಗಳು ಅಲ್ಲಿಯೇ ಲಂಚದ ಜಾಲ ಹೆಣೆದು ಈಗ ಕಾನೂನಿನ ಕೈಗೆ ಸಿಲುಕಿದ್ದಾರೆ. ವರದಕ್ಷಿಣೆ ಪ್ರಕರಣದ ತನಿಖೆಗೆ ಹೋಗಿದ್ದ ತಂಡ ಮೂಲಗಳ ಪ್ರಕಾರ, ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಗಾಗಿ ಈ ಮೂವರು ಪೊಲೀಸರ ತಂಡ ಜೈಪುರಕ್ಕೆ ತೆರಳಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ ದೂರುದಾರರನ್ನು ಭೇಟಿಯಾಗಿದ್ದ ಪೊಲೀಸರು, ತನಿಖೆಯಲ್ಲಿ ರಿಯಾಯಿತಿ ನೀಡುವುದಾಗಿ ಮತ್ತು ಪ್ರಕರಣದಿಂದ…

Read More

ಹೈದ್ರಾಬಾದ್: ಇಂದಿನ ಆಧುನಿಕ ಜಗತ್ತು ಅದೆಷ್ಟು ವೇಗವಾಗಿ ಮುಂದುವರಿದಿದೆ ಎಂದರೆ, ಜನರಿಗೆ ನೆಮ್ಮದಿಯಿಂದ ಕುಳಿತು ಸರಿಯಾದ ರೀತಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ತಂತ್ರಜ್ಞಾನ ಬೆಳೆದಂತೆಲ್ಲಾ ಮನುಷ್ಯನ ಜೀವನಶೈಲಿ ಸಂಪೂರ್ಣ ಬದಲಾಗಿದ್ದು, ಎಲ್ಲದರಲ್ಲೂ ಅವಸರವೇ ಎದ್ದು ಕಾಣುತ್ತಿದೆ. ಇದಕ್ಕೆ ಪೂರಕವೆಂಬಂತೆ, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬನ ಬೇಜವಾಬ್ದಾರಿತನದ ವಿಡಿಯೋವೊಂದು ಭಾರಿ ಚರ್ಚೆಗೆ ಗ್ರಾಸವಾಗಿದ್ದು, ನೆಟ್ಟಿಗರನ್ನು ಆಶ್ಚರ್ಯ ಹಾಗೂ ಆತಂಕಕ್ಕೆ ತಳ್ಳಿದೆ. ಬೈಕ್ ಮೇಲೆಯೇ ಕಚೇರಿ ಕೆಲಸ! ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ಚಲಿಸುತ್ತಿರುವ ಬೈಕ್‌ನ ಮುಂಭಾಗದಲ್ಲಿ (ಪೆಟ್ರೋಲ್ ಟ್ಯಾಂಕ್ ಮೇಲೆ) ತನ್ನ ಆಫೀಸ್ ಲ್ಯಾಪ್ಟಾಪ್ ಇಟ್ಟುಕೊಂಡಿದ್ದಾನೆ. ಒಂದು ಕೈಯಿಂದ ಬೈಕ್ ಹ್ಯಾಂಡಲ್ ಹಿಡಿದು ವಾಹನ ಚಲಾಯಿಸುತ್ತಾ, ಮತ್ತೊಂದು ಕೈಯಿಂದ ಲ್ಯಾಪ್ಟಾಪ್ ಕೀಬೋರ್ಡ್ ಬಳಸಿ ಆಫೀಸ್ ಕೆಲಸ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇರುವಾಗಲೇ ಈತ ಇಂತಹ ಅಪಾಯಕಾರಿ ಸಾಹಸಕ್ಕೆ ಕೈ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ ಸಾರ್ವಜನಿಕರು: ಈ ದೃಶ್ಯವನ್ನು ರಸ್ತೆಯಲ್ಲಿ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇಲಾಧಿಕಾರಿಯೊಬ್ಬರು ತನ್ನದೇ ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಕಾಮುಕ ಅಧಿಕಾರಿಯ ನಿರಂತರ ಕಿರುಕುಳದಿಂದ ಬೇಸತ್ತ ಮಹಿಳೆಯು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿ, ಇದೀಗ ಆರೋಪಿ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಗುತ್ತಿಗೆ ನೌಕರಳಿಗೆ ಲೈಂಗಿಕ ಕಿರುಕುಳ, ಬೆದರಿಕೆ: ಜಿಲ್ಲೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬಾತನೇ ಈ ಕೃತ್ಯ ಎಸಗಿರುವ ಆರೋಪಿ ಎಂದು ಗುರುತಿಸಲಾಗಿದೆ. ಈತನ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಚಂದ್ರಶೇಖರ್ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ಬಾಯಿಬಿಟ್ಟರೆ ತಕ್ಷಣವೇ ಕೆಲಸದಿಂದ ವಜಾ ಮಾಡುವುದಾಗಿ ಸಂತ್ರಸ್ತೆಗೆ ನೇರವಾಗಿಯೇ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ. ಮುಖಕ್ಕೆ ರಾಜೀನಾಮೆ ಬಿಸಾಕಿದ ಸಂತ್ರಸ್ತೆ: ಅಧಿಕಾರಿಯ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆಗಳಿಂದ ತೀವ್ರ ಮಾನಸಿಕ…

Read More

ಈ ವರ್ಷ ಮಾರುಕಟ್ಟೆಯಲ್ಲಿ ಕಾಣುತ್ತಿರುವಷ್ಟು ನೇರಳೆ ಹಣ್ಣುಗಳನ್ನು ನಾನು ಕಳೆದ ಮೂರು ದಶಕಗಳಲ್ಲಿ ಎಂದೂ ನೋಡಿಲ್ಲ. ನೇರಳೆ ಹಣ್ಣುಗಳು ಅಕ್ಷರಶಃ ರಾಶಿ ರಾಶಿಯಾಗಿ ಬಿದ್ದಿವೆ. ಕಳೆದ ವರ್ಷ ತೀರಾ ಕಡಿಮೆ ಫಲ ಬಿಟ್ಟಿದ್ದ ಮರಗಳೂ ಈಗ ನೇರಳೆ ಹಣ್ಣಿನಿಂದ ತುಂಬಿ ನೆಲದ ಮೇಲೆ ಸುರಿಯುತ್ತಿವೆ. ಫಲ ಬಿಟ್ಟಿದ್ದ ಮರಗಳಲ್ಲಂತೂ ಹಣ್ಣಿನ ಸುರಿಮಳೆಯೇ ಆಗಿದೆ. ಇದು ನಿಖರವಾಗಿ ಏನಾಗುತ್ತಿದೆ? ನಮ್ಮ ಅಜ್ಜಿ ಯಾವಾಗಲೂ ಹೇಳುತ್ತಿದ್ದರು: “ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು ಹೀಗೆ ರಾಶಿ ರಾಶಿಯಾಗಿ ಬೀಳುತ್ತದೆಯೋ, ಆ ವರ್ಷ ಬರಗಾಲ ಇರುತ್ತದೆ” ಅಜ್ಜಿಯ ಪಾರಂಪರಿಕ ಜ್ಞಾನವು ಸಸ್ಯಶಾಸ್ತ್ರದ ವೈಜ್ಞಾನಿಕ ವಿಶ್ಲೇಷಣೆಯ ಪ್ರಕಾರ ಸಂಪೂರ್ಣ ಸರಿ ಮತ್ತು ನಿಖರವಾಗಿದೆ. ವಿಜ್ಞಾನದಲ್ಲಿ ಈ ರೋಚಕ ಮತ್ತು ಅಷ್ಟೇ ಆಘಾತಕಾರಿ ಪ್ರಕ್ರಿಯೆಗೆ “ಮಾಸ್ಟಿಂಗ್” (Masting) ಅಥವಾ “ಸ್ಟ್ರೆಸ್ ಫ್ರೂಟಿಂಗ್” (Stress Fruiting) ಎಂದು ಕರೆಯುತ್ತಾರೆ. ಮರಗಳು ತಮ್ಮನ್ನು ತಾವು ಮುಗಿಸಿಕೊಂಡು ಗರಿಷ್ಠ ಹಣ್ಣು ಕೊಡುವ ಈ ಕೊನೆಯ ಪ್ರಯತ್ನವನ್ನು ಕೆಲವೊಮ್ಮೆ “ಸೂಸೈಡ್ ಫ್ರೂಟಿಂಗ್” (Suicide Fruiting) ಅಥವಾ…

Read More

ಬಳ್ಳಾರಿ: ರಾಜ್ಯದಲ್ಲಿ ಮನಕಲಕುವ ಘೋರ ಘಟನೆಯೊಂದು ಸಂಭವಿಸಿದೆ. ಕೌಟುಂಬಿಕ ಸಮಸ್ಯೆಯಿಂದ ಜುಗುಪ್ಸೆಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಉಣಿಸಿ, ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಗಡಿಭಾಗವಾದ ಆಂಧ್ರಪ್ರದೇಶದ ಗೂಳ್ಯಂ ಬಳಿ ನಡೆದಿದೆ. ಒಂದೇ ಕುಟುಂಬದ ಮೂವರು ಹೀಗೆ ಧಾರುಣವಾಗಿ ಸಾವನ್ನಪ್ಪಿರುವುದು ಸ್ಥಳೀಯವಾಗಿ ತೀವ್ರ ಶೋಕವನ್ನು ಉಂಟುಮಾಡಿದೆ. ಮೃತರ ಗುರುತು ಪತ್ತೆ: ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ನಿವಾಸಿಯಾದ ಮಹೇಶ್ (37) ಎಂಬಾತನೇ ತನ್ನ ಮೂರನೇ ಪತ್ನಿ ಮತ್ತು ಮೂರು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮಹೇಶ್ ತನಗಿದ್ದ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಇಡೀ ಕುಟುಂಬ ಇಹಲೋಕ ತ್ಯಜಿಸುವಂತಾಗಿದೆ. ಘಟನೆಯ ಹಿನ್ನೆಲೆ: ಮೃತ ಮಹೇಶ್‌ನ ವೈವಾಹಿಕ ಜೀವನವು ಮೊದಲಿನಿಂದಲೂ ಸಾಕಷ್ಟು ಏರುಪೇರುಗಳಿಂದ ಕೂಡಿತ್ತು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ಈತ ಸುಮಾರು ಆರು ವರ್ಷಗಳ ಹಿಂದೆಯೇ ತನ್ನ ಮೊದಲ ಹಾಗೂ…

Read More

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವವರ ಸರಣಿ ಮುಂದುವರಿದಿದೆ. ಹಳ್ಳ, ಕೊಳ್ಳ, ಕೆರೆಗಳಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಕೃಷಿ ಹೊಂಡಗಳು ಅಮಾಯಕರ ಪಾಲಿಗೆ ಮೃತ್ಯುಕೂಪಗಳಾಗುತ್ತಿವೆ. ಇಂತಹದ್ದೇ ಒಂದು ಘೋರ ದುರಂತ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಆಟವಾಡಲು ಹೋಗಿದ್ದಾಗ ಸಂಭವಿಸಿದ ದುರಂತ: ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಮೃತಪಟ್ಟ ದುರ್ದೈವಿ ಮಕ್ಕಳನ್ನು ದಕ್ಷಾ (11) ಮತ್ತು ಧನುಷ್ (4) ಎಂದು ಗುರುತಿಸಲಾಗಿದೆ. ಭಾನುವಾರ ಮನೆಯಲ್ಲಿ ಪೋಷಕರು ಇಲ್ಲದಿದ್ದ ಸಮಯದಲ್ಲಿ ಈ ಇಬ್ಬರು ಮಕ್ಕಳು ಆಟವಾಡುತ್ತಾ ಪಕ್ಕದ ಜಮೀನಿನ ಕಡೆಗೆ ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದಿದ್ದು, ನೀರಿನ ಆಳ ತಿಳಿಯದೇ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ, ಗ್ರಾಮದಲ್ಲಿ ನೀರವ ಮೌನ: ಮನೆಯ ಬೆಳಕಾಗಬೇಕಿದ್ದ ಇಬ್ಬರು ಕಂದಮ್ಮಗಳು ಏಕಕಾಲದಲ್ಲಿ ಜೀವ ಕಳೆದುಕೊಂಡಿರುವುದು ಇಡೀ ಗ್ರಾಮವನ್ನೇ…

Read More

ಬೆಂಗಳೂರು : ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಹೊಸಕೋಟೆ ಬಳಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದರೆ, ಇನ್ನೂ ಕೆಂಗೇರಿ ಬಳಿ ರಸ್ತೆ ಬದಿಯ ದಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅದೇ ರೀತಿಯಾಗಿ ಶಾಲಾ ಬಸ್ ಹರಿದು ಓರ್ವ ಮಹಿಳೆ ಸಾವನಪ್ಪಿದ್ದರೆ, ಇನ್ನೊಂದು ಘಟನೆಯಲ್ಲಿ ಇಕೋ ಕಾರು ಪಲ್ಟಿಯಾಗಿ ಇನ್ನೊರ್ವ ವ್ಯಕ್ತಿ ಸಾವನಪ್ಪಿದ್ದಾನೆ. ಬೆಂಜ್ ಕಾರು ಅಪಘಾತ : ಇಬ್ಬರು ಸಾವು ನಿನ್ನೆ ಹೊಸಕೋಟೆ ಬಳಿ ಬೆಂಜ್ ಕಾರು ಅಪಘಾತ ಸಂಭವಿಸಿ ಇಬ್ಬರು ಸಾವನಪ್ಪಿದ್ದಾರೆ, ಕಳೆದ ರಾತ್ರಿ ಚೆನ್ನೈ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿ ಓರ್ವ ಯುವತಿ ಹಾಗು ಕಾರು ಚಾಲಕ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಇದ್ದ 28 ವರ್ಷದ ಯುವತಿ ಶಹಜಾನ್ ಶೇಕ್ ಹಾಗು ಚಾಲಕ ರಿಜ್ವಾನ್ ಸಾವನಪ್ಪಿದ್ದಳು. ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದ ಕಾರು ಮತ್ತು ಚಾಲಕ ರಿಜ್ವನ್ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಅಪಘಾತದ ರಭಸಕ್ಕೆ ರಿಜ್ವಾನ್…

Read More

ಉತ್ತರಕನ್ನಡ: ತಂದೆ ಕಾಲೇಜು ಶುಲ್ಕ ಪಾವತಿಸಲು ನೀಡಿದ್ದ ಹಣವನ್ನು ನಂಬಿ ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಸಕಾಲಕ್ಕೆ ಮರಳಿ ಸಿಗದೆ, ಹಾಲ್‌ಟಿಕೆಟ್ ಕೂಡ ಕೈತಪ್ಪಿದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿನಿಯನ್ನು ಭಟ್ಕಳದ ಕಾಲೇಜೊಂದರಲ್ಲಿ ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಎಂದು ಗುರುತಿಸಲಾಗಿದೆ. ಸಾಲದ ರೂಪದಲ್ಲಿ ಹಣ ಪಡೆದಿದ್ದ ಪರಿಚಯಸ್ಥ ಮೃತ ಗಾಯತ್ರಿ ಅವರ ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಮಗಳ ಕಾಲೇಜು ಶುಲ್ಕವನ್ನು ಪಾವತಿಸುವಂತೆ 10 ಸಾವಿರ ರೂಪಾಯಿ ಹಣವನ್ನು ನೀಡಿದ್ದರು. ಆದರೆ ಇದೇ ಸಮಯದಲ್ಲಿ ಅದೇ ಊರಿನ ಪರಿಚಯಸ್ಥನಾಗಿದ್ದ ಸಂತೋಷ ಮಾಧೇವ ನಾಯ್ಕ ಎಂಬಾತ ಗಾಯತ್ರಿ ಬಳಿ ಬಂದು ತುರ್ತು ಅಗತ್ಯವಿದೆ ಎಂದು ಕೇಳಿದ್ದಲ್ಲದೆ, ನಿಗದಿತ ಸಮಯಕ್ಕೆ ಸರಿಯಾಗಿ ಹಣವನ್ನು ಮರಳಿ ನೀಡುವುದಾಗಿ ಭರವಸೆ ನೀಡಿದ್ದ. ಇದನ್ನು ನಂಬಿದ ವಿದ್ಯಾರ್ಥಿನಿ ತಂದೆ ನೀಡಿದ್ದ 10 ಸಾವಿರ ರೂಪಾಯಿಯನ್ನು ಆತನಿಗೆ…

Read More

ಮೈಸೂರು : ಜಿಲ್ಲೆಯ ಸಾಲಿಗ್ರಾಮದಲ್ಲಿ ತಾಯಿಯೊಬ್ಬಳು ತನ್ನಿಬ್ಬರು ಹಸುಗೂಸುಗಳನ್ನು ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಅತ್ಯಂತ ಹೃದಯವಿದ್ರಾವಕ ಮತ್ತು ಘೋರ ದುರಂತವೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಕಳವಳ ಹಾಗೂ ವಿಷಾದವನ್ನು ಉಂಟುಮಾಡಿದೆ. ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇವಲ ಮೂರು ವರ್ಷದ ಧೃತಿ ಹಾಗೂ ಒಂದೂವರೆ ವರ್ಷದ ದಿಶಾ ಎಂಬ ಎರಡು ಮುಗ್ಧ ಹೆಣ್ಣುಮಕ್ಕಳು ಹೆತ್ತ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಕಣ್ಣಿಗೆ ರೆಪ್ಪೆಯಂತೆ ಕಾಯಬೇಕಾದ ತಾಯಿಯೇ ಮಕ್ಕಳ ಪಾಲಿಗೆ ಯಮನಾದ ಈ ಘಟನೆ ಗ್ರಾಮಸ್ಥರನ್ನು ತೀವ್ರ ದಿಗ್ಭ್ರಮೆಗೊಳಿಸಿದೆ. ಘಟನೆಯ ವಿವರ: ವಿವರಗಳ ಪ್ರಕಾರ, ಆರೋಪಿ ತಾಯಿ ಪ್ರಿಯಾಂಕಾ ತನ್ನಿಬ್ಬರು ಹೆಣ್ಣುಮಕ್ಕಳಿಗೆ ನೇಣು ಬಿಗಿದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾಳೆ. ಕಂದಮ್ಮಗಳು ಪ್ರಾಣಬಿಟ್ಟಿದ್ದನ್ನು ಖಚಿತಪಡಿಸಿಕೊಂಡ ನಂತರ, ತಾನೂ ಕೂಡ ಅದೇ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ…

Read More