Author: kannadanewsnow05

ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. “ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡುತ್ತೇನೆ” ಎಂದು ನಂಬಿಸಿ, ಲಿವ್-ಇನ್ ಸಂಬಂಧದಲ್ಲಿದ್ದ ಪ್ರಿಯಕರನ ಕೈಕಾಲು ಕಟ್ಟಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಅಲ್ಲದೇ ಪ್ರಿಯಕರ ಕಿರಣ್ ಕೊಂದ ಬಳಿಕ ಯುವತಿ ಪ್ರೇಮ ತಾನು ಆತ್ಮಹತ್ಯೆಗೆ ಪ್ಲಾನ್ ಮಾಡಿದ್ದಳು ಎಂದು ಪೋಲೀಸರ ಮುಂದೆ ಬಾಯಿ ಬಿಟ್ಟಿದ್ದಾಳೆ. ಘಟನೆಯ ಹಿನ್ನೆಲೆ: ಮೃತ ಯುವಕನನ್ನು ಕಿರಣ್ (27) ಎಂದು ಗುರುತಿಸಲಾಗಿದೆ. ಈತ ರಾಜಾಜಿನಗರದ ವಿಐ (VI) ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದನು. ಅಲ್ಲಿಯೇ ಸಹೋದ್ಯೋಗಿಯಾಗಿದ್ದ ಪ್ರೇಮಾ ಎಂಬಾಕೆಯ ಪರಿಚಯವಾಗಿ, ಅದು ಪ್ರೀತಿಗೆ ತಿರುಗಿತ್ತು. ಕಳೆದ ಕೆಲವು ತಿಂಗಳಿಂದ ಇಬ್ಬರೂ ಲಿವ್-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಹತ್ಯೆಗೆ ಕಾರಣವೇನು? ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದ ಕಿರಣ್ ಸರಿಯಾಗಿ ಸಮಯ ನೀಡುತ್ತಿಲ್ಲ ಮತ್ತು ತನ್ನನ್ನು ಕಡೆಗಣಿಸುತ್ತಿದ್ದಾನೆ (Avoid) ಎಂಬ ಸಿಟ್ಟು ಪ್ರೇಮಾಳಲ್ಲಿ ಮನೆ ಮಾಡಿತ್ತು. ಇದೇ ಕಾರಣಕ್ಕೆ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ವಿಮಾನ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದ್ದು, ಮತ್ತೆ FLY91 ವಿಮಾನ ಲ್ಯಾಂಡಿನಲ್ಲಿ ಸಮಸ್ಯೆ ಉಂಟಾಗಿದೆ. ಹೈದರಾಬಾದ್ ಫ್ಲೈಟ್ ಬಳಿಕ ಇದೀಗ ಬೆಂಗಳೂರು ಫ್ಲೈಟ್ ನಲ್ಲಿ ಸಮಸ್ಯೆ ಉಂಟಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಈ ಒಂದು ವಿಮಾನ ಬರುತ್ತಿತ್ತು. ಆಗಸದಲ್ಲಿ ಒಂದು ಗಂಟೆ ವಿಮಾನ ಹಾರಾಡಿದೆ. ಮೊನ್ನೆ ಆಕಾಶದಲ್ಲಿಯೇ ವಿಮಾನ ನಾಲ್ಕು ಗಂಟೆ ಆಕಾಶದಲ್ಲಿ ಸುತ್ತಾಡಿ ನಂತರ ಆಗಿತ್ತು. ಇದೀಗ ಮತ್ತೆ 91 ವಿಮಾನದಲ್ಲಿ ಸಮಸ್ಯೆ ಉಂಟಾಗಿದ್ದು ಇದೀಗ ಮತ್ತೆ ಒಂದು ಗಂಟೆ ಆಗಸದಲ್ಲಿ ಹಾರಾಟ ನಡೆಸಿ ಲ್ಯಾಂಡ್ ಆಗಿದೆ. ಹವಮಾನ ವೈಪರೀತ್ಯದಿಂದ ಈ ಒಂದು ವಿಮಾನ ಲ್ಯಾಂಡಿಂಗ್ ನಲ್ಲಿ ಸಮಸ್ಯೆ ಆಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ವಿಮಾನದಲ್ಲಿ 21 ಪ್ರಯಾಣಿಕರು ಇದ್ದರು ಅವರೆಲ್ಲರೂ ಸದ್ಯ ಸೇಫ್ ಆಗಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಅಕ್ರಮ ಸಂಬಂಧ ವಿವಾಹೇತರ ಸಂಬಂಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದು ಸಮಾಜದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮ ಬೀರುತ್ತದೆ. ಇದೀಗ ಬೆಂಗಳೂರಿನಲ್ಲಿ ಅಂತಹದ್ದೆ ಘಟನೆ ನಡೆದಿದ್ದು ಕಸ ಹಾಕಿ ಬರುತ್ತೇನೆ ಎಂದ ಮಹಿಳೆ ಗಂಡ ಮತ್ತು ತನ್ನ ಮಕ್ಕಳಿಗೆ ನಿದ್ರೆ ಮಾತ್ರ ಹಾಕಿ ಕಟಿಂಗ್ ಶಾಪ್ ದವನ ಜೊತೆಗೆ ಮಹಿಳೆ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ವಿವಾಹಿತ ಮಹಿಳೆಯೊಬ್ಬಳು, ಗಂಡ ಮಕ್ಕಳನ್ನು ಬಿಟ್ಟು ಕಟ್ಟಿಂಗ್ ಶಾಪ್ ಹೊಂದಿದ್ದ ವ್ಯಕ್ತಿ ಜೊತೆ ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾಳೆ. ಬೆಂಗಳೂರಿನ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯ ಮಾಡಿದ ಈ ಕಿತಾಪತಿಯಿಂದ ಆಕೆಯ ಗಂಡ ಮಕ್ಕಳು ಕಂಗಾಲಾಗಿದ್ದಾರೆ. ಪ್ರಿಯಾಂಕಾ ಎಂಬಾಕೆಯೇ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಮಹಿಳೆ ಎಂದು ತಿಳಿದುಬಂದಿದೆ. ರಾತ್ರಿ ಮನೆಯಲ್ಲಿದ್ದ ಕಸ ಎಸೆದು ಬರ್ತೀನಿ ಅಂತ ಹೇಳಿ ಪ್ರಿಯಾಂಕಾ ಮನೆಯಿಂದ ಹೊರಗೆ ಹೋಗಿದ್ದು, ಮತ್ತೆ ಆಕೆ ವಾಪಸ್ ಬಂದಿಲ್ಲ, ಹೋಗುವ…

Read More

ಮೈಸೂರು : ಇತ್ತೀಚಿಗೆ ಕಾವೇರಿ ನದಿಯಲ್ಲಿ ದರ್ಗಾ ನೋಡಲು ಬಂದ ಆರು ಜನರು ನೀರಲ್ಲಿ ಮುಳುಗಿ ಸಾವನಪ್ಪಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ, ಪ್ರವಾಸಕ್ಕೆ ಬಂದಿದ್ದ ವೇಳೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ, ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ,(16 ) ಮೃತರು. ನೀರಿನಲ್ಲಿ ಮುಳುಗಿ ಗಂಭೀರ ಸ್ಥಿತಿಯಲ್ಲಿರುವ ಸುಚಿತ್ರಾಳನ್ನು ಮೈಸೂರಿನ ಕೆ.ಆರ್​. ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ತಲಕಾಡಿನ ನಿಸರ್ಗಧಾಮ ನೋಡಲು, ಬೆಂಗಳೂರಿನಿಂದ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 72 ವಿದ್ಯಾರ್ಥಿಗಳ ಪೈಕಿ, ಈ ಮೂವರು ತಲಕಾಡಿನ ಕಾವೇರಿ ನದಿಯ ನೀರಿನಲ್ಲಿ ಈಜಾಡುವಾಗ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರು ನೀರಿನಲ್ಲಿ ಮುಳುಗಿ ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಯಿತು. ಇಬ್ಬರು ವಿದ್ಯಾರ್ಥಿನಿಯರ ಸಾವಿನ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರದಿಂದ ಮಂಗಳವಾರದ ಮೂರು ದಿನದಲ್ಲಿ ಒಟ್ಟು 11 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

Read More

ಚಾಮರಾಜನಗರ : ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬೂದಗಟ್ಟಿ ಅರಣ್ಯ ಪ್ರದೇಶದಲ್ಲಿ ಇದೀಗ ಮಾನವನ ಅಸ್ತಿ ಪಂಜರ ಪತ್ತೆಯಾಗಿದ್ದು, ಫಾರೆಸ್ಟ್ ವಾಚರ್ಸ್ ಬೀಟ್ಸ್ ಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೆರಿ ವ್ಯಾಪ್ತಿಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹೊರತುಪಡಿಸಿ ಸಾಮಾನ್ಯರಿಗೆ ತೆರಳಲು ಅನುಮತಿ ಇಲ್ಲ. ದುರ್ಗಮ ಕಾಡಿನ ಕಾವೇರಿ ನದಿಯ ತಟದ ಪಕ್ಕದಲ್ಲಿಯೇ ಮಾನವನ ಅಸ್ತಿ ಪಂಜರ ಪತ್ತೆಯಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಮತ್ತು ಸೊಕೊ ಟೀಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಅಸ್ತಿಪಂಜರ ಗುರುತು ಪತ್ತೆ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು, ನದಿಯಲ್ಲಿ ಈಜಲು ಹೋಗಿ ಮುಳುಗುತ್ತಿದ್ದ ಪುತ್ರನನ್ನು ರಕ್ಷಿಸಲು ಮುಂದಾದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸಂಕೇಶ್ವರ ಪಟ್ಟಣದ ನಿವಾಸಿ ಲಕ್ಷ್ಮೀ ಸುಧಾಕರ ಕುಟೋಳಿ (27) ಮೃತರು. ಅವರ 9 ವರ್ಷದ ಪುತ್ರ ಸುಪ್ರೀತ್ ಸಹ ನೀರಲ್ಲಿ ಕಾಣೆಯಾಗಿದ್ದು, ಅದೇ ಪೊಲೀಸರು ಆತನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಸಂಕೇಶ್ವರ ಪಟ್ಟಣದಲ್ಲಿರುವ ಶಂಕರಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನದ ಬಳಿಕ, ದೇವಸ್ಥಾನದ ಪಕ್ಕದಲ್ಲೇ ಹರಿಯುವ ಹಿರಣ್ಯಕೇಶಿ ನದಿಯ ಬಳಿ ತೆರಳಿದ್ದರು. ಈ ವೇಳೆ ಬಾಲಕ ಸುಪ್ರೀತ್ ನದಿಯಲ್ಲಿ ಈಜಲು ಇಳಿದಿದ್ದಾನೆ. ನದಿಯ ಆಳದ ಅರಿವಿಲ್ಲದೆ ನೀರಿನಲ್ಲಿ ಮುಳುಗುತ್ತಿದ್ದ. ಮಗನು ನೀರುಪಾಲಾಗುತ್ತಿರುವುದನ್ನು ಕಂಡು ಆತಂಕಗೊಂಡ ತಾಯಿ ಲಕ್ಷ್ಮೀ, ಆತನನ್ನು ರಕ್ಷಿಸಲು ತಕ್ಷಣವೇ ನದಿಗೆ ಹಾರಿದ್ದರು. ಆದರೆ, ದುರಾದೃಷ್ಟವಶಾತ್ ಈಜು ಬಾರದ…

Read More

ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮಾತು ಹತ್ಯೆ ಮಾಡಿಕೊಳ್ಳುವುದು ಕೊಲೆ ಮಾಡುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ ಇದೀಗ ಬೆಳಗಾವಿಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು, ಕೇವಲ ನೈಟಿ ಹಾಕ್ಕೊಂಡಿದ್ದಕ್ಕೆ ಹೆಂಡತಿಗೆ ಪಾಪಿ ಗಂಡನೊಬ್ಬ ಬೆಂಕಿ ಹಚ್ಚಿದ್ದಾನೆ. ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡದಲ್ಲಿ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ಕೃಷ್ಣಜಿ ಪಾಟೀಲ್ ಎಂಬ ಪತ್ನಿಗೆ ಬೆಂಕಿ ಹಚ್ಚಿರುವ ಕಿರಾತಕ ಎಂದು ತಿಳಿದು ಬಂದಿದ್ದು ಬೆಂಕಿಯಿಂದ ಗಂಭೀರವಾಗಿ ಗಾಯಗೊಂಡ ಪತ್ನಿ ಮಂಜುಳ ಇದೀಗ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 80% ದೇಹ ಸುಟ್ಟಿದ್ದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಕುಟುಂಬಸ್ಥರು ಗೋವಾಗೆ ಶಿಫ್ಟ್ ಮಾಡಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಕೃಷ್ಣಾಜಿ ಹಾಗು ಮಂಜುಳಾ ಇಬ್ಬರೂ ಮದುವೆಯಾಗಿದ್ದರು. ಆದರೆ ನಿನ್ನೆ ಕೇವಲ ನೈಟಿ ಹಾಕ್ಕೊಂಡಿದ್ದಕ್ಕೆ ಕೃಷ್ಣಾಜಿ ಪಾಟೀಲ್ ಮಂಜುಳಾ ನಡುವೆ ಗಲಾಟೆ ನಡೆದಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ, ನೈಟಿ ಹಾಕೊಂಡಿದ್ದಕ್ಕೆ ಬೆಂಕಿ ಹಚ್ಚಿ ಕೃತ್ಯ ಎಸಗಿದ್ದಾನೆ. ಘಟನಾ…

Read More

ಕೊಡಗು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಕೊಡಗಿನ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ಈ ಒಂದು ಘನಗೋರ ಕೃತ್ಯ ನಡೆದಿದೆ.ಅಮೇರಿಕಾದ ವಾಷಿಂಗ್ಟನ್ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಏಪ್ರಿಲ್ 19ರಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ಈ ಒಂದು ಕೃತ್ಯ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಆರೋಪಿಯಾಗಿದ್ದು ಹೋಂಸ್ಟೇ ಮಾಲೀಕ ವಿಶಾಲ್ ಮತ್ತು ವೃಜೆಶ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಕೊಪ್ಪಳ : ರಾಜ್ಯದಲ್ಲಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಮತ್ತೆ ಕೆಲವು ಜಿಲ್ಲೆಗಳಲ್ಲಿ ಜನರು ತತ್ತರಿಸಿ ಹೋಗಿದ್ದಾರೆ.ಇದೀಗ ತುಂಗಭದ್ರಾ ಜಲಾಶಯ ಖಾಲಿಯಾಗುವ ಆತಂಕದಲ್ಲಿ ಸದ್ಯ ನಾಲ್ಕು ಜಿಲ್ಲೆಯ ಜನರು ಇದ್ದಾರೆ. ಹೌದು ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಮ್ ಸದ್ಯ ಖಾಲಿಯಾಗುವ ಸಾಧ್ಯತೆಗಳು ಇವೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಕೇವಲ 12tmc ಮಾತ್ರ ನೀರು ಸಂಗ್ರಹವಿದೆ. ತುಂಗಭದ್ರ ಡ್ಯಾಮ್ ನಲ್ಲಿ ನೀರು ಖಾಲಿ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳ ಜನರಲ್ಲಿ ಆತಂಕ ಶುರುವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯ ಜನರು ಆತಂಕದಲ್ಲಿ ಇದ್ದಾರೆ. 12 ಟಿಎಂಸಿ ನೀರಿನಲ್ಲಿ 2 ಟಿಎಂಸಿ ನೀರು ಜಲಚರಗಳಿಗೆ ಮೀಸಲು ಇಡಲಾಗಿದ್ದು, ಇನ್ನು ಉಳಿದ 10 ಟಿಎಂಸಿಯಲ್ಲಿ ಬೆಳೆಗಳು, ಕುಡಿಯುವ ನೀರಿಗೆ ಬಳಕೆ ಮಾಡಬೇಕು. ಹಾಗಾಗಿ ಕೇವಲ 10 ಟಿಎಂಸಿ ನೀರಿನಲ್ಲಿಯೇ ನಾಲ್ಕು ಜಿಲ್ಲೆಯ ಜನರು ಈಗ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.

Read More

ಬೆಂಗಳೂರು : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿರುವ 60 ಎಕರೆ 23 ಗುಂಟೆ ಜಮೀನನ್ನು 30 ದಿನಗಳೊಳಗೆ ತೆರವುಗೊಳಿಸಿ ಹಸ್ತಾಂತರಿಸಬೇಕೆಂದು ಮೇಲ್ಮನವಿ ಪ್ರಾಧಿಕಾರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ-ಬೆಂಗಳೂರು) ಮಾಡಿರುವ ಆದೇಶಕ್ಕೆ ಹೈಕೋರ್ಟ್, ಮಧ್ಯಂತರ ತಡೆ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಾರಂಭದಲ್ಲಿ ಸರ್ವೇ ಸೆಟಲ್ಮೆಂಟ್ ಆಗಿಲ್ಲ ಮತ್ತು ಅರಣ್ಯದ ಗಡಿಯೇ ನಿಗದಿಯಾಗಿಲ್ಲ. ಜತೆಗೆ ಎರಡು ಸರ್ವೇ ನಂಬರ್ ಸಂಬಂಧ ವಿವಾದವಿದೆ. ಸರ್ವೇ ನಂಬರ್ 1ಕ್ಕೂ ಅರ್ಜಿದಾರರಿಗೂ ಸಂಬಂಧವಿಲ್ಲ. ಸರ್ವೇ ನಂಬರ್ 2ರಲ್ಲಿಅರ್ಜಿದಾರರ ಭೂಮಿ ಇದೆ. ದಾಖಲೆಗಳ ಮೂಲದ ಪ್ರಕಾರ 113 ಎಕರೆ ಅರಣ್ಯ ಭೂಮಿ ಎನ್ನಲಾಗಿದೆ. ಆದರೆ,…

Read More