Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಚಿತ್ರದುರ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಎದೆಯಲ್ಲಿ ಉರಿ ಆಗುತ್ತಿದೆ ಎಂದಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ಎದೆ ಭಾಗದಲ್ಲಿ ಉರಿಯುತ್ತಿದೆ ಎಂದು ಬಾಲಕ ವೈಷ್ಣವ್ (4) ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆಸ್ಪತ್ರೆಗೆ ಸಾಗಿಸೋವಾಗ ಮಾರ್ಗಮಧ್ಯೆ ವೈಷ್ಣವ್ ಕೊನೆಯುಸೀರು ಎಳೆದಿದ್ದಾನೆ. ವೈದ್ಯರ ಮಾಹಿತಿಯ ಪ್ರಕಾರ ವೈಷ್ಣವ್ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಹಾಗೂ ಇತರ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಕಡ್ಡಾಯ ನಿರ್ದೇಶನ ನೀಡಿದೆ. ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರಾದ ಮಠದ್ ಶಿವಮೂರ್ತಿ ದಿವಾಕರ ಅವರು ಜೂನ್ 16, 2026 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹೊರಗುತ್ತಿಗೆ ನೌಕರರ ಹಿತರಕ್ಷಣೆಗಾಗಿ ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಕಾರ್ಮಿಕ ಇಲಾಖೆಯ ಅಧಿಸೂಚನೆ ಸಂಖ್ಯೆ KAE 106 LWA 2021 (ದಿನಾಂಕ: 28.07.2022) ಪ್ರಕಾರ, ದಿನಾಂಕ 01-04-2026 ರಿಂದ 31-03-2027 ರ ಅವಧಿಗೆ ನಿಗದಿಪಡಿಸಲಾದ ಕನಿಷ್ಠ ವೇತನ ದರಗಳಂತೆಯೇ ಹೊರಗುತ್ತಿಗೆ ಸಿಬ್ಬಂದಿಗಳಿಗೆ ವೇತನ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ದಾಖಲೆಗಳ ಪರಿಶೀಲನೆ: ಹೊರಗುತ್ತಿಗೆ ಪೂರೈಸುವ ಸಂಸ್ಥೆಗಳು (Agencies) ನೌಕರರಿಗೆ ನೇಮಕಾತಿ ಆದೇಶ ಪತ್ರ, ಗುರುತಿನ ಚೀಟಿ ಹಾಗೂ ವೇತನ ಪ್ರಮಾಣ ಪತ್ರವನ್ನು ನೀಡಿರುವುದನ್ನು ಖಚಿತಪಡಿಸಿಕೊಂಡ ನಂತರವೇ…

Read More

ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಕ್ಷುಲ್ಲಕ ಕಾರಣಕ್ಕೆ ಸ್ವಂತ ಸ್ನೇಹಿತನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಕನಿಗೆ ಮೊಬೈಲ್‌ನಲ್ಲಿ ಮೆಸೇಜ್ ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತನೊಬ್ಬ, ತನ್ನ ಗ್ಯಾಂಗ್ ಜೊತೆ ಸೇರಿ ಯುವಕನನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆಯು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಇಡೀ ಗ್ರಾಮ ಸದ್ಯ ಆತಂಕ ಮತ್ತು ದಿಗಿಲಿನಲ್ಲಿ ಮುಳುಗಿದೆ. ಮಹೇಶ್ ಎಂಬಾತನೇ ಕೊಲೆಯಾದ ದುರ್ದೈವಿ: ಭೀಮನಹಳ್ಳಿ ಗ್ರಾಮದ ನಿವಾಸಿಯಾದ ಮಹೇಶ್ (34) ಕೊಲೆಯಾದ ದುರ್ದೈವಿ. ಈತ ಸ್ಥಳೀಯವಾಗಿ ಯುವಕರ ತಂಡವೊಂದರ ಜೊತೆ ಆಪ್ತ ಒಡನಾಟ ಹೊಂದಿದ್ದನು. ಆರೋಪಿಗಳು ಮತ್ತು ಮಹೇಶ್ ಇಬ್ಬರೂ ಒಂದೇ ಸ್ನೇಹ ಬಳಗದಲ್ಲಿ ಗುರುತಿಸಿಕೊಂಡಿದ್ದರು. ದಿನನಿತ್ಯ ಜೊತೆಯಾಗಿಯೇ ಇರುತ್ತಿದ್ದ ಸ್ನೇಹಿತರೇ ಇಂದು ಮಹೇಶ್ ಪ್ರಾಣಪಕ್ಷಿ ಹಾರಲು ಕಾರಣರಾಗಿದ್ದಾರೆ. ಹತ್ಯೆಗೆ ಅಸಲಿ ಕಾರಣವೇನು?: ಕೊಲೆಯಾದ ಮಹೇಶ್, ತನ್ನದೇ ಸ್ನೇಹ ಬಳಗದಲ್ಲಿದ್ದ ಓರ್ವ ಸ್ನೇಹಿತನ ಅಕ್ಕನಿಗೆ…

Read More

ರಾಂಚಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿತ್ತು. ಈ ಆಘಾತಕಾರಿ ಘಟನೆಯ ನೆನಪು ಹಸಿಯಾಗಿರುವಾಗಲೇ, ಈಗ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿರುವ ಆರ್‌ಎಸ್ಎಸ್ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಮತ್ತೊಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ರಾಂಚಿಯ ಪ್ರಮುಖ ಪ್ರದೇಶದಲ್ಲಿರುವ ಆರ್‌ಎಸ್ಎಸ್ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಕಚೇರಿಯ ಆವರಣಕ್ಕೆ ಹಠಾತ್ ಆಗಿ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು, ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಸಿ ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ. ಕಾರು ಮತ್ತು ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪೊಲೀಸ್ ಮೂಲಗಳ ಪ್ರಕಾರ, ಈ ಕೃತ್ಯವನ್ನು ಎಸಗಲು ದುಷ್ಕರ್ಮಿಗಳು ಪಕ್ಕಾ ಪ್ಲಾನ್ ಮಾಡಿಕೊಂಡು ಬಂದಿದ್ದರು. ಒಂದು ಕಾರು ಹಾಗೂ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಭ್ರಷ್ಟಾಚಾರದ ಆರೋಪ ಸದ್ದು ಮಾಡುತ್ತಿದ್ದು, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ವಿರುದ್ಧ ಗಂಭೀರ ಸ್ವರೂಪದ ದೂರು ದಾಖಲಾಗಿದೆ. ಬೆಂಗಳೂರಿನ ನಿವಾಸಿಯೊಬ್ಬರು ಮಹದೇವಪ್ಪ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿ, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ನೇರವಾಗಿ ರಾಜ್ಯಪಾಲರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಹೆಚ್.ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಬಡವರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಾಗಿದ್ದ ಕಲ್ಯಾಣ ಯೋಜನೆಗಳ ನಿಧಿಗಳನ್ನು ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ದೂರುದಾರರು ಮಾಡಿದ್ದಾರೆ. ಈ ಹಗರಣದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (KREIS) ಪ್ರಮುಖವಾಗಿ ಭಾಗಿಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಸಚಿವರಾಗಿದ್ದ ಅವಧಿಯಲ್ಲಿ ಇಲಾಖೆಯ ಅಡಿಯಲ್ಲಿ ಬರುವ ಈ ಸಂಸ್ಥೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಲಾಗಿದೆ.…

Read More

ಕೋಲಾರ : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪಾಪಿ ಪತಿ ಒಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ಒಂದು ಕೊಲೆ ನಡೆದಿದೆ. ಕತ್ತು ಕೊಯ್ದು ಪತ್ನಿ ಯೋಗಿನಿ (21)ಳನ್ನು ಪತಿ ಗಣೇಶ್ ಭೀಕರವಾಗಿ ಕೊಲೆ ಮಾಡಿದ್ದಾನೆ, ಕೊಲೆಯಾದ ಯೋಗಿನಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ನಿವಾಸಿಯಾಗಿದ್ದು, ಇನ್ನೂ ಕೊಲೆ ಮಾಡಿರುವ ಗಣೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅವಳಹಳ್ಳಿ ತಾಲೂಕಿನವನಾಗಿದ್ದಾನೆ. ಕಳೆದ ಎರಡು ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಇತ್ತೀಚಿಗೆ ಪತ್ನಿಯ ಮೇಲೆ ಗಣೇಶ ಅನುಮಾನ ಪಟ್ಟು ಗಲಾಟೆ ಮಾಡುತ್ತಿದ್ದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಯೋಗಿನಿ ಕೆಲಸಕ್ಕೆ ಬರುತ್ತಿದ್ದಳು. ಈ ವೇಳೆ ಮಿಂಡಹಳ್ಳಿ ಕೆರೆಯ ಬಳಿ ಪತ್ನಿ ಕತ್ತು ಕೊಯ್ದು ಪತಿ ಕೊಂದಿದ್ದಾನೆ.ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ಮನೆಯಲ್ಲಿ ಗ್ರೈಂಡರ್ ನಿಂದ ವಿದ್ಯುತ್ ಹರಿದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಒಂದು ಘೋರ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಕಾಡಂಚಿನ ಗ್ರಾಮ ಕಲಿಗೌಡನಹಳ್ಳಿಯಲ್ಲಿ ನಡೆದಿದ್ದು, ಪುಟ್ಟಮ ಹಾಗೂ ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಅದ್ವಿತ ಮನೆಯಲ್ಲಿ ಗ್ರೈಂಡರ್ ಆನ್ ಇದ್ದಾಗ ವಿದ್ಯುತ್ ಹರಿದು ಸಾವನಪ್ಪಿದ್ದಾಳೆ. ತಮ್ಮ ಕಣ್ಣೆದುರೇ ಮಗಳ ಸಾವನ್ನು ಕಂಡು ಪೋಷಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ತೀವ್ರ ಸ್ವರೂಪದ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಮೇರೆಗೆ ಮಂಗಳವಾರ ರಾಜ್ಯಾದ್ಯಂತ ಒಟ್ಟು 8 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಬರೋಬ್ಬರಿ 31.11 ಕೋಟಿ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿಯನ್ನು ಪತ್ತೆ ಹಚ್ಚಲಾಗಿದೆ. ಈ ಕುರಿತು ಲೋಕಾಯುಕ್ತ ಉನ್ನತ ಅಧಿಕಾರಿಗಳು ಅಧಿಕೃತ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಬೆಂಗಳೂರು ಗ್ರಾಮಾಂತರ-1, ದಾವಣಗೆರೆ-3, ಕಲಬುರಗಿ-1 ಮತ್ತು ಚಿಕ್ಕಮಗಳೂರು ಲೋಕಾಯುಕ್ತ ಠಾಣಾ ವ್ಯಾಪ್ತಿಯಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಕಾನೂನುಬದ್ಧ ಆದಾಯದ ಮೂಲಗಳಿಗಿಂತ ಹೆಚ್ಚಿನ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಸಂಪಾದಿಸಿರುವ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ಒಟ್ಟು 8 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಅಧಿಕಾರಿಗಳು…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ವಿಶೇಷ ತನಿಖಾ ದಳದ (SIT) ಪೊಲೀಸ್ ವರಿಷ್ಠಾಧಿಕಾರಿ (SP) ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಧರ್ಮಸ್ಥಳದ ಇತ್ತೀಚಿನ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗಾಗಿ ರಚನೆಯಾಗಿರುವ ಎಸ್‌ಐಟಿ ತಂಡದ ಪ್ರಮುಖ ಅಧಿಕಾರಿಗಳು ಈ ವಾಹನದಲ್ಲಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಅಧಿಕಾರಿಗಳು ಸೇರಿದಂತೆ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣದ ಚರ್ಚೆಗೆ ತೆರಳುತ್ತಿದ್ದಾಗ ದುರ್ಘಟನೆ: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ತೇಲಿಗೆ ತರಲು ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ಹೈಪ್ರೊಫೈಲ್ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲು ಹಾಗೂ ಮುಂದಿನ ತನಿಖಾ ಕಾರ್ಯಸೂಚಿಯನ್ನು ಸಿದ್ಧಪಡಿಸಲು ಎಸ್‌ಐಟಿ ಅಧಿಕಾರಿಗಳು ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ದಾಯಮ್ಮ ಅವರನ್ನು ಭೇಟಿಯಾಗಿ ಪ್ರಕರಣದ ಲಿಂಕ್‌ಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಎಸ್ಪಿ ಸಿ.ಎ.…

Read More

ಬೆಂಗಳೂರು : ಬೆಂಗಳೂರlli ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ ಬೆಂಗಳೂರಿನ ಆರ್ ಟಿ ಓ ಕಚೇರಿಗಳನ್ನು ಸ್ಪೋಟಿಸುವುದಾಗಿ ಇಮೇಲ್ ಮೂಲಕ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಕಸ್ತೂರಿ ನಗರ, ಜ್ಞಾನಭಾರತಿ, ತಲಘಟ್ಟಪುರ, ಎಚ್ಎಸ್ಆರ್ ಲೇಔಟ್ ಸೇರಿದಂತೆ ಬೆಂಗಳೂರು ನಗರದ ಹಲವು ಆರ್‌ಟಿಓ ಕಚೇರಿಗಳಿಗೆ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸದು ಆರ್ ಟಿ ಓ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆ ವೇಳೆ ಯಾವ ಆರ್‌ಟಿಓ ಕಚೇರಿಗಳಲ್ಲೂ ಬಾಂಬ್ ಪತ್ತೆಯಾಗಿಲ್ಲ.ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಒಂದು ಇಮೇಲ್ ಸಂದೇಶ ಬಂದಿದೆ.

Read More