Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಜಾಮೀನು ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ. ಈ ಆದೇಶವು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಮುಂದಿನ ಒಂದು ವರ್ಷದ ಅವಧಿಯೊಳಗೆ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯ ಹಾಗೂ ತನಿಖಾ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಆದೇಶದ ಹಿನ್ನೆಲೆಯಲ್ಲಿ ನಟ ದರ್ಶನ್ ಕನಿಷ್ಠ ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲೇ ದಿನ ದೂಡುವುದು ಅನಿವಾರ್ಯವಾಗಿದೆ. ಸುಪ್ರೀಂ ಕೋರ್ಟ್‌ನ ಈ ಮಹತ್ವದ ಆದೇಶ ಹೊರಬೀಳುತ್ತಿದ್ದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ…

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಹಮ್ಮಿಕೊಂಡಿರುವ ಬಹುನಿರೀಕ್ಷಿತ ‘ಸಾಧನಾ ಸಮಾವೇಶ’ದ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಈ ಸಮಾವೇಶವನ್ನು ನಡೆಸಲು ಸದ್ಯ ತೀರ್ಮಾನಿಸಲಾಗಿದೆ. ಅಧಿಕೃತ ಮೂಲಗಳ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ ಈ ಸಮಾವೇಶವು ಮೇ 20 ರಂದು ನಡೆಯಬೇಕಾಗಿತ್ತು. ಆದರೆ, ಇದೀಗ ಪರಿಷ್ಕೃತ ವೇಳಾಪಟ್ಟಿಯಂತೆ ಮೇ 19 ರಂದೇ ಸಾಧನಾ ಸಮಾವೇಶವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಸೂಚನೆಯ ಮೇರೆಗೆ ಈ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಡಳಿತಾತ್ಮಕ ಕಾರಣಗಳು ಹಾಗೂ ಸಮಾವೇಶದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದು ದಿನ ಮುಂಚಿತವಾಗಿಯೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್…

Read More

ಬೆಳಗಾವಿ :ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಒಳಗೊಳಗೇ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ಮುಂದಿನ ಮುಖ್ಯಮಂತ್ರಿ’ ಎಂದು ಬಿಂಬಿಸುವ ಬ್ಯಾನರ್ ಸಂಸ್ಕೃತಿ ಈಗ ರಾಜಧಾನಿ ಬೆಂಗಳೂರಿನಿಂದ ಕುಂದಾನಗರಿ ಬೆಳಗಾವಿಗೂ ವಿಸ್ತರಿಸಿದೆ. ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಇಂತಹದ್ದೇ ಬ್ಯಾನರ್ ಹಾಕಿ ಗಮನ ಸೆಳೆದಿದ್ದರು. ಇದೀಗ ಬೆಳಗಾವಿ ನಗರದ ಪ್ರಮುಖ ವೃತ್ತಗಳಲ್ಲೂ ಡಿ.ಕೆ.ಶಿ ಮುಂದಿನ ಸಿಎಂ ಎಂಬ ಪೋಸ್ಟರ್‌ಗಳು ರಾರಾಜಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಮೃಣಾಲ್ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬ್ಯಾನರ್ ಅಳವಡಿಕೆ ವಿಶೇಷವೆಂದರೆ, ಈ ಬ್ಯಾನರ್‌ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಅಳವಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಬ್ಯಾನರ್‌ಗಳನ್ನು ಹಾಕಲಾಗಿದ್ದು, ಅದರಲ್ಲಿ “ಕರ್ನಾಟಕದ ಮುಂದಿನ ಮುಖ್ಯಮಂತ್ರಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಬರೆಯಲಾಗಿದೆ. ಬೆಳಗಾವಿಯ ಬಹುತೇಕ ಪ್ರಮುಖ…

Read More

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು ವರದಕ್ಷಿಣೆ ಹಣಕ್ಕಾಗಿ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡನೊಬ್ಬ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾಕುವಿನಿಂದ ಇರಿದು ಪತ್ನಿ ರೋಜಾ ಕೊಲೆಗೆ ಪತಿ ಉಮೇಶ್ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಕೊಂಡ ರೋಜಾ ಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಉಮೇಶ್ ಅನ್ನು ಹಾಸನ ಮಹಿಳಾ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಂಜುಳಾ ಹಾಗೂ ಅತ್ತಿಗೆ ವೀಣಾ ವಿರುದ್ಧವು ಪ್ರಕರಣ ದಾಖಲಾಗಿದೆ. ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಆಗಿರುವ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟಲ್ಲಿ ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಉಳಿದ ಪ್ರಮುಖ ಆರೋಪಿಗಳ ವಿಚಾರಣೆಗೆ ಒಂದು ವರ್ಷ ಸಮಯ ನೀಡಿದ್ದು ಹಾಗಾಗಿ ನಟ ದರ್ಶನ್ ಇನ್ನೂ ಒಂದು ವರ್ಷ ಜೈಲಲ್ಲಿ ಕಾಲ ಕಳೆಯ ಬೇಕಾಗಿದೆ. ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ, ದರ್ಶನ್ ಅವರು ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿ ಕೊಂಡರ? ಎನ್ನಲಾಗುತ್ತಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ವಿಚಾರಣೆ ವೇಳೆ 272 ಸಾಕ್ಷಿಗಳಲ್ಲಿ 10 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದಾರೆ. 150 ಸಾಕ್ಷಿಗಳ ವಿಚಾರಣೆ ಮಾಡುತ್ತೇವೆ…

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಆಗಿರುವ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟಲ್ಲಿ ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ ಕಾಲಾವಕಾಶ ನೀಡಿದ್ದು, ಹಾಗಾಗಿ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲುವಾಸವೇ ಖಾಯಂ ಆಗಿದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ವಿಚಾರಣೆ ವೇಳೆ 272 ಸಾಕ್ಷಿಗಳಲ್ಲಿ 10 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದಾರೆ. 150 ಸಾಕ್ಷಿಗಳ ವಿಚಾರಣೆ ಮಾಡುತ್ತೇವೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಜೈಲಿನಲ್ಲಿ ದರ್ಶನ್ ಗೆ ಕನಿಷ್ಠ ಮೂಲ ಸವಲತ್ತು ಸಹ ನೀಡಿಲ್ಲ. ಈ ವೇಳೆ ನಿಮಗೆಲ್ಲಾ ಕನಿಷ್ಠ ಸವಲತ್ತು ನೀಡಲಾಗಿದೆ. ಪ್ರಮಾಣ ಪತ್ರದಲ್ಲಿ…

Read More

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ದೊಡ್ಡ ಯಶಸ್ಸು ಕಂಡಿದ್ದಾರೆ. ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಒಂದಾದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅನಿರೀಕ್ಷಿತ ದಾಳಿ ನಡೆಸಿದ ಪೊಲೀಸರು, ಭಾರಿ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೃಹತ್ ಪ್ರಮಾಣದ ಗಾಂಜಾ ಜಪ್ತಿ: ರೈಲ್ವೆ ನಿಲ್ದಾಣದ ಮೂಲಕ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸುಮಾರು 13.41 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮಾರುಕಟ್ಟೆ ಬೆಲೆ 25 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ರೈಲುಗಳ ಮೂಲಕ ನಗರಕ್ಕೆ ಗಾಂಜಾ ಸರಬರಾಜು ಮಾಡುವ ಜಾಲದ ಮೇಲೆ ಪೊಲೀಸರು ಈಗ ಕಣ್ಣಿಟ್ಟಿದ್ದಾರೆ. ಕಾರ್ಯಾಚರಣೆಯ ವಿವರ: ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಶಂಕಾಸ್ಪದ ವ್ಯಕ್ತಿಗಳು ಅಥವಾ ಲಗೇಜುಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು, ತಪಾಸಣೆ ನಡೆಸಿದಾಗ ಈ ಮಾದಕ ದ್ರವ್ಯ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದೆ. ಕಳೆದ ಹಲವು ತಿಂಗಳುಗಳಿಂದ ಜೈಲಿನಲ್ಲಿರುವ ದರ್ಶನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಸ್ಯಾಂಡಲ್‌ವುಡ್ ಸುಲ್ತಾನನ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಿಚಾರಣಾ ಪೀಠ ಮತ್ತು ವರದಿ ಸಲ್ಲಿಕೆ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಪ್ರಕರಣದ ತನಿಖೆ ಮತ್ತು ವಿಚಾರಣೆಯ ಸದ್ಯದ ಸ್ಥಿತಿಗತಿಯ ಬಗ್ಗೆ ನ್ಯಾಯಾಲಯವು ಮಾಹಿತಿ ಬಯಸಿದ್ದು, ಇಂದು ಆ ವರದಿಯ ಆಧಾರದ ಮೇಲೆ ಚರ್ಚೆಗಳು ನಡೆಯಲಿವೆ. ಕೋರ್ಟ್ ಕೇಳಿರುವ ಪ್ರಮುಖ ಅಂಶಗಳು: ಜಾಮೀನು ನೀಡುವ ಮುನ್ನ ಸುಪ್ರೀಂ ಕೋರ್ಟ್ ಕೆಲವು ತಾಂತ್ರಿಕ ವಿವರಗಳನ್ನು ಪರಿಶೀಲಿಸುತ್ತಿದೆ. ಈವರೆಗೂ ಎಷ್ಟು ಸಾಕ್ಷಿಗಳ…

Read More

ಬೆಂಗಳೂರು: ದೇಶಾದ್ಯಂತ ಇಂಧನ ದರಗಳು ಮತ್ತೆ ಗಗನಕ್ಕೇರುತ್ತಿರುವುದನ್ನು ಖಂಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಆಡಳಿತ ವೈಖರಿಯೇ ಈ ಬೆಲೆ ಏರಿಕೆಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯರಿಗೆ ನೀಡಿದ ‘ಕೊಡುಗೆ’ ಎಂದು ಲೇವಡಿ ಮಾಡಿದರು. ಬೆಲೆ ಏರಿಕೆಯು ‘ಮೋದಿ ಕೊಡುಗೆ’ ಕೇಂದ್ರ ಸರ್ಕಾರವು ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್, ಇಂಧನ ದರ ಏರಿಕೆಯಿಂದಾಗಿ ದೇಶದ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದರು. “ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಏರುತ್ತಿರುವುದು ಪ್ರಧಾನಿ ಮೋದಿ ಅವರ ಆಡಳಿತದ ಫಲವಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ನೆರವಾಗುವ ಬದಲು ಕೇಂದ್ರ ಸರ್ಕಾರ ತೆರಿಗೆ ವಸೂಲಿಯಲ್ಲಿ ಮಗ್ನವಾಗಿದೆ,” ಎಂದು ಅವರು ವಾಗ್ದಾಳಿ ನಡೆಸಿದರು. ನೆರೆರಾಷ್ಟ್ರಗಳ ಸಂಬಂಧ ಮತ್ತು ಆರ್ಥಿಕ ಸ್ಥಿತಿ ಭಾರತದ ವಿದೇಶಾಂಗ ನೀತಿಯ…

Read More

ಬೆಂಗಳೂರು : ದೇಶದ ಜನತೆಗೆ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಏರಿಕೆಯಾದ ಬೆನ್ನಲ್ಲೇ ಈಗ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (CNG) ಬೆಲೆಯೂ ಗಗನಕ್ಕೇರಿದೆ. ಪ್ರತಿ ಕೆಜಿ ಸಿಎನ್‌ಜಿ ದರದಲ್ಲಿ 2 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದು ಮುಂಜಾನೆಯಿಂದಲೇ ಜಾರಿಗೆ ಬಂದಿವೆ. ಈ ದಿಢೀರ್ ಏರಿಕೆಯು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಬೆಂಗಳೂರಿನಲ್ಲಿ ಈ ಪರಿಷ್ಕೃತ ದರ ಜಾರಿಯಾದ ನಂತರ ಪ್ರತಿ ಕೆಜಿ ಸಿಎನ್‌ಜಿ ಬೆಲೆ 93 ರೂಪಾಯಿಗೆ ತಲುಪಿದೆ. ವಿವಿಧ ನಗರಗಳಲ್ಲಿ ಮತ್ತು ವಿತರಕರು ಒದಗಿಸುವ ಸೇವೆಗೆ ಅನುಗುಣವಾಗಿ ದರದಲ್ಲಿ 30 ಪೈಸೆಯಿಂದ 1 ರೂಪಾಯಿವರೆಗೆ ವ್ಯತ್ಯಾಸವಿರಬಹುದು ಎಂದು ಅಂದಾಜಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಸಿಎನ್‌ಜಿ ಬೆಲೆ ಏರಿಕೆ ಮತ್ತೊಂದು ಹೊಡೆತ ನೀಡಿದಂತಾಗಿದೆ. ಸಿಎನ್‌ಜಿ ದರ ಏರಿಕೆಯು ಪ್ರಮುಖವಾಗಿ ಸಾರಿಗೆ ಕ್ಷೇತ್ರದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. ನಗರ ಪ್ರದೇಶಗಳಲ್ಲಿ ವೆಚ್ಚ ಕಡಿಮೆ…

Read More