Author: kannadanewsnow05

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇದೀಗ ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಮಂತ್ (28) ಹಾಗೂ ನವನೀತ್ (26) ಬಂಧಿತ ಆರೋಪಿಗಳು ಎನ್ನಲಾಗಿದೆ. 15 ವರ್ಷದ ಬಾಲಕಿಯನ್ನು ಫಾಲ್ಸ್ ನೋಡಲು ಇಬ್ಬರು ಕೊರೆದೋಯ್ದು ಅತ್ಯಾಚಾರ ಎಸಗಿದ್ದಾರೆ. ಏಪ್ರಿಲ್ 16ರಂದು ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಬೆಂಗಳೂರಲ್ಲಿ ಉದ್ಯಮಿ ಕೃಪಲಾನಿ, ಪ್ರೀತಿ ಮತ್ತು ಮದುವೆಯ ನೆಪದಲ್ಲಿ ಸುಮಾರು 50 ಮಹಿಳೆಯರಿಗೆ ವಂಚಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಬೆದರಿಸುತ್ತಿದ್ದ ಈತನ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಉದ್ಯಮಿ ಕೃಪಲಾನಿ ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮಹಿಳೆಯರನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸುತ್ತಿದ್ದನು ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಕೃಪಲಾನಿ ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದನು. ಪರಿಚಯ ಮಾಡಿಕೊಂಡ ಅಧಿಕಾರಿಗಳಿಗೆ ಲಂಚ್, ಡಿನ್ನರ್ ಪಾರ್ಟಿಗೆ ಆಹ್ವಾನಿಸಿ ಸಲುಗೆ ಬೆಳೆಸಿಕೊಳ್ಳುತ್ತಿದ್ದನು. ಸಲುಗೆ ಬೆಳೆಯುತ್ತಿದ್ದಂತೆ ಪ್ರೀತಿ ಹೆಸರಿನ ಸುಳ್ಳು ಬಲೆಯನ್ನು ಬೀಸುತ್ತಿದ್ದನು. ನಂತರ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು ಎಂದು ವರದಿಯಾಗಿದೆ. ಪುಲಕೇಶಿ ನಗರ ಪೊಲೀಸರು ತಮ್ಮ ತನಿಖೆಯನ್ನು…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಒಂದು ಸ್ಫೋಟಗೊಂಡಿದ್ದು, ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳವು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಹಶೀಲ್ದಾರ್ ರೇಹಾನ್ ಪಾಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಗ್ರಾಮದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಕಾರು ಹಾಗು ಬಸ್ ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾನಪುರದ ಬಳಿ ಈ ಒಂದು ಭೀಕರ ಪಘಥ ಸಮವಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಸರಣಿ ಅಪಘಾತದ ಬಳಿಕ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ. ಡಿಕ್ಕಿಯ ಹೊಡೆದ ಬಳಿಕ ಸುಮಾರು 100 ಮೀಟರ್ ವರೆಗೂ ಕಾರನ್ನು ಎಳೆದೋಯ್ದಿದೆ. ಲಾರಿ ಚಾಲಕನ ಅಜಾರುಕತೆಯಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ ಪ್ರಿಯಕರಣ ಜೊತೆಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದಾಳೆ. ಹೌದು ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ. ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ…

Read More

ಕಲಬುರ್ಗಿ : ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಕೆಎಸ್ಆರ್ಪಿ ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಬಳಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಗೊಬ್ಬರ ಬಿ ಗ್ರಾಮದಲ್ಲಿ ಇಂದು ಕೆ ಎಸ್ ಆರ್ ಪಿ ಕಾನ್ಸ್ಟೇಬಲ್ ಧರೆಪ್ಪ (26) ದುರ್ಮರಣ ಹೊಂದಿದ್ದಾನೆ. ಧರೆಪ್ಪ ಕಲಬುರ್ಗಿಯಿಂದ ಶಿರವಾಳ ಗ್ರಾಮಕ್ಕೆ ಹೊರಟಿದ್ದು ಈ ವೇಳೆ ಆತನ ಬೈಕುಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನಪ್ಪಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ತಮ್ಮರಾಯ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಗಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯ ವೇಳೆ ಇದೀಗ ಹಲವು ವಿಚಾರಗಳು ಬಹಿರಂಗವಾಗಿದೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಶಾಸಕ ವಿನಯ್ ಕುಲಕರಣಿ ಹಾಗೂ ಮಾಫಿ ಸಾಕ್ಷಿ ಆಗಿದ್ದ ಬಸವರಾಜ್ ಮುಕ್ತಗಿ ಪರಸ್ಪರ 57 ಬಾರಿ ಮೊಬೈಲ್ ನಲ್ಲಿ ಮಾತನಾಡಿರುವುದು ಬೆಳಕಿಗೆ ಬಂದಿದೆ. ಹೌದು ಸಿಬಿಐ ಅಧಿಕಾರಿಗಳ ತನಿಖೆಯ ವೇಳೆ ಈ ಒಂದು ಅಂಶ ಬೆಳಕಿಗೆ ಬಂದಿದ್ದು ಬಸವರಾಜ್ ಮುತ್ತಿಗಿ ಜೊತೆಗೆ ಮಾತನಾಡಲು ಶಾಸಕ ಮನೆಯಲ್ಲಿ ಕುಲಕರಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದರು ಆ ಸಿಮ್ ಬಳಸಿ 94 ಬಾರಿ ಶಾಸಕ ವಿನಯ್ ಕುಲಕರಣಿ ಮುತ್ತಗಿ ಜೊತೆಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಯೋಗೇಶ್ ಗೌಡ ಕೊಲೆಯಾದ ನಂತರ ವಿನಯ್ ಕುಲಕರ್ಣಿ ಮತ್ತು ಬಸವರಾಜ್ ಮುತ್ತಗಿ 94 ಬಾರಿ ಪರಸ್ಪರ ಮಾತನಾಡಿದ್ದಾರೆ ಆರು ತಿಂಗಳಲ್ಲಿ ವಿನಯ್ ಹಾಗೂ ಮುತ್ತಗಿ 57 ಬಾರಿ ಪರಸ್ಪರ ಕರೆ ಮಾಡಿ ಮಾತನಾಡಿದರು. ಸಿಬಿಐ ಅಧಿಕಾರಿಗಳ ತನಿಖೆಯ ವೇಳೆ…

Read More

ಉತ್ತರಕನ್ನಡ : ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನ ಕೇಸ್ ಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ಒಂದು ಘಟನೆ ನಡೆದಿಡ್ಮತ್ತು. ಮೋಸ್ಟ್ ವಾಂಟೆಡ್ ಆರೋಪಿಯ ಕೊಲೆ ಮಾಡಿರುವುದು ಇದೀಗ ತನಿಖೆಯಲ್ಲಿ ಬಯಲಾಗಿದೆ. ಬೆಳಗಾವಿ ಮೂಲದ ನಿತೀಶ್ ಡಾಪಳೆ ಅನ್ನು ಆರೋಪಿಗಳು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣದ ಆರೋಪಿ ಯಾಗಿರುವ ನಿತೀಶ್ನನ್ನು ಕೊಲೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ನ ಸಹಚರರಿಂದಲೇ ನಿತೀಶ್ ಹತ್ಯೆಯಾಗಿದ್ದಾನೆ. ಕಾರಿನಲ್ಲಿ ನಿತೀಶ್ ಡಾಂಬಳೆ ಶವ ಅರಬೈಲ್ ಘಟ್ಟಕ್ಕೆ ತಂದಿದ್ದರು. ಕಾರಿಗೆ ಬೆಂಕಿ ಹಾಕಿ ಶವವನ್ನು ಸುಟ್ಟು ಹಾಕಿದ್ದರು. ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು ನಯಿಮ್ ಮೌಲ ದಾದಾಪೀರ್ ಹಾಗೂ ಸೋಯಬ್ ಎನ್ನುವವರನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತ ಮೂವರು ಆರೋಪಿಗಳು ಹುಬ್ಬಳ್ಳಿ ಮೂಲದವರು ಎನ್ನಲಾಗಿದೆ. ಇನ್ನುಳಿದ ಶಾನು,…

Read More

ಬಳ್ಳಾರಿ : ಯೋಧರ ಪ್ಯಾರಾಚೂಟ್ ತರಬೇತಿ ಬೆಳೆ ಅವಗಡ ಸಂಭವಿಸಿದ್ದು, 50 ಅಡಿ ಅಂತರದಿಂದ ಜಿಗಿದ ಇಬ್ಬರ ಕಾಲುಗಳು ಮುರಿತ ಆಗಿರುವ ಘಟನೆ ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಭಾಗದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಯೋಧ ಚಿನ್ನ ರಾಜ್ ಅವರ ಕಾಲಿನ ಮೂಳೆಮುರಿತವಾಗಿದ್ದು ಮತ್ತೊಬ್ಬ ಯೋಧನಿಗೂ ಕಾಲಿನ ಮೂಳೆ ಮುರಿತವಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯಲಿ ಪ್ಯಾರಾಚೂಟ್ ತರಬೇತಿ ಟ್ರೇನಿಂಗನ್ನು ಕೊಡಲಾಗುತ್ತಿದೆ. ವಿಮಾನದಿಂದ ಯೋಧರು ಜಂಪ್ ಮಾಡಿದ್ದಾರೆ. ಈ ವೇಳೆ ಪ್ಯಾರಾಚೂಟ್ ಓಪನ್ ಆಗಿದೆ. ಬಳಿಕ ಲ್ಯಾಂಡಿಂಗ್ ಸಂದರ್ಭದಲ್ಲಿ ಸಮಸ್ಯೆ ಉಂಟಾಗಿ ಇಬ್ಬರು ಯೋಧರು ಹೊಲದಲ್ಲಿ ಬಿದ್ದಿದ್ದಾರೆ. ಈ ವೇಳೆ ಇಬ್ಬರ ಕಾಲುಗಳು ಮುರಿತವಾಗಿದ್ದು ತಕ್ಷಣ ಅವರನ್ನು ಏರ್ಲಿಫ್ಟ್ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ವಾಯು ಸೇನೆಯಿಂದ ಪ್ಯಾರಾಚೂಟ್ ತರಬೇತಿ ನೀಡಲಾಗುತ್ತಿತ್ತು. ನಿನ್ನೆ ಬೆಳಿಗ್ಗೆ 417 ಸೈನಿಕರಿಂದ ಪ್ಯಾರಾಚೂಟ್ ತರಬೇತಿ ನೀಡಲಾಗುತ್ತಿತ್ತು. ಸೇನಾ ವಿಮಾನದಿಂದ 50 ಅಡಿ ಎತ್ತರದಿಂದ ಜಿಗಿದಿದ್ದಾರೆ. ಪ್ಯಾರಾಚೂಟು ಸಹಿತ 417…

Read More

ರಾಯಚೂರು: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಎನ್ನುವ ಮಹಿಳೆಯ ಒಂದು ಕಾಲು ಕಟ್ ಆಗಿದ್ದು, ಪುತ್ರಿ ಲಕ್ಷ್ಮಿ ಎರಡು ಕಾಲುಗಳು ಸಹ ಕಟ್ ಆಗಿವೆ. ವಿಶಾಲಮ್ಮ (20) ಹಾಗೂ ಎಲ್ಲಮ್ಮ (4) ಎಂಬ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಬಯಲಾಟ ನೋಡುತ್ತಿದ್ದ ಗ್ರಾಮಸ್ಥರು, ಸಮುದಾಯ ಭವನದ ಕಟ್ಟೆಯ ಕೆಳಗೆ ಕೂತು ಬೈರಾಟ ವೀಕ್ಷಣೆ ಮಾಡುತ್ತಿದ್ದರು ಇವಳೆ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ದುರಂತ ಸಂಭವಿಸಿದೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ. ದುರಂತದ ಹಿನ್ನೆಲೆ: ಮಕ್ಕಳು ನಾಮಫಲಕದ ಬಳಿ ಇದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಗಾತ್ರದ ಸಿಮೆಂಟ್…

Read More