Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ವಿಜೇತ ಮಹಿಳೆಗೆ ವ್ಯಕ್ತಿ ಒಬ್ಬ ವಂಚನೆ ಎಸಗಿದ್ದು ಬಾಳು ಕೊಡುವುದಾಗಿ ನಂಬಿಸಿ ಒಂದು ಮಗು ಕೂಡ ಮಾಡಿ ಮಹಿಳೆಯಿಂದ 36 ಲಕ್ಷ ಹಣ ಪಡೆದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ. ಮಹಿಳೆ ಮದುವೆಯಾದ ಬಳಿಕ ಹೊಸ ಮನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ಚಿಕ್ಕಸಂದ್ರ ದಲ್ಲಿ ನಿನ್ನೆ ಈ ಒಂದು ಘಟನೆ ಸಂಭವಿಸಿದೆ. ಅಂಶು ರಾಜ್ ಕುಮಾರ್, ಹುಸೇನ್ ಖಾನ್, ಆರ್ ಬೇಗ್ ಆಲಂ, ಮುಜಾಫಿರ್ ಹುಸೇನ್ ಹಾಗೂ ರೋಹಿತ್ ಚೌದರಿಗೆ ಗಂಭೀರವಾದ ಗಾಯಗಳಾಗಿದ್ದು, ಒಂದೇ ರೂಮ್ನಲ್ಲಿ ಬಿಹಾರ ಮೂಲದ ಕಾರ್ಮಿಕರು ಇದ್ದರು. ಗ್ಯಾಸ್ ಲೀಕ್ ಆಗಿದ್ದನ್ನು ಗಮನಿಸದೆ ಟೀ ಮಾಡುವ ಹೋದ ಸಂದರ್ಭದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದು. ಘಟನೆ ಸಂಭಂದ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಳ್ ಹೆಬ್ಬಾಳ್ಕರ್ ಕಾರು ಚಾಲಕ ಬಸವಂತಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಅದರ ಬೆನಲ್ಲೇ ಇದೀಗ ಮತ್ತೊಂದು ಚಾಕು ಇರಿತ ಪ್ರಕರಣ ವರದಿಯಾಗಿದೆ ಜಾಮೀನಿನ ಮೇಲೆ ಹೊರಬಂದಿದ್ದವನಿಂದ ಚೂರಿ ಇರಿಯಲಾಗಿದೆ. ಕಣ್ಣೆತ್ತಿ ನೋಡಿದ್ದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಬೆಳಗಾವಿಯ ನ್ಯೂ ಗಾಂಧಿನಗರದಲ್ಲಿ ಮಸೀದಿ ಮುಂದೆ ಈ ಒಂದು ಘಟನೆ ನಡೆದಿದ್ದು ಶುಕ್ರವಾರದ ನಮಾಜ್ ಮುಗಿಸಿ ಹೊರ ಬಂದಾಗ ಗಲಾಟೆ ಆಗಿದೆ. ಈ ವೇಳೆ ಜುಶಾನ್ ಎಂಬ ಯುವಕನಿಗೆ ಮುಜಾಮಿಲ್ ಚಾಕು ಇರದಿದ್ದಾನೆ. ಮುಂಜಾಮ್ಮಿಲ್ ಸತ್ತಿಗೇರಿ ಎಂಬಾತ ತಿಂಗಳ ಹಿಂದೆಯೇ ಜಾಮೀನು ಮೇಲೆ ಹೊರಗಡೆ ಬಂದಿದ್ದ ಆರೋಪಿ ಮುಜಮಿಲ್ ಸತ್ತಿಗೇರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬೆಟ್ಟದಾಸನಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರನ ತಲೆಯ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದು ಕಣಿರಾಜ್ (28) ಸಾವನ್ನಪ್ಪಿದ್ದಾರೆ. ತ್ರಿಬಲ್ ರೈಡಿಂಗ್ ವೇಳೆ ಕನಿರಾಜ್ ಆಯತಪಿ ಕೆಳಗೆ ಬಿದ್ದಾಗ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ ಕಣಿರಾಜ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದರು. ಇದೀಗ ಬಳ್ಳಾರಿ ಗಕಭೆ ಪ್ರಕರಣದ 25 ಆರೋಪಿಗಳಿಗೆ ಬೆಂಗಳೂರಿನ 42ನೇ ACJM ಕೋರ್ಟ್ ಜಾಮಿನು ನೀಡಿದೆ. ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಸಾವನಪ್ಪಿದ್ದ. ಘಟನೆ ಸಂಬಂಧ ರಾಜ್ಯ ಸರ್ಕಾರ ಎಸ್ಪಿ ಪವನ್ ನಜ್ಜುರ್ ಅವರನ್ನು ಸಸ್ಪೆಂಡ್ ಮಾಡಿತ್ತು. ಅಲ್ಲದೆ ಡಿಐಜಿಪಿ ವರ್ತಿಕಾ ಕಟಿಯರವರನ್ನು ಸಹ ವರ್ಗಾವಣೆ ಮಾಡಿ…

Read More

ಹುಬ್ಬಳ್ಳಿ : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಕೆಸಿ ವೇಣುಗೋಪಾಲ್ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಎಂದು ಒಗ್ಗಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಪ್ರೀತಿ ಇದೆ. ಕೇರಳದಲ್ಲಿ ಕನ್ನಡದ ಮೇಲೆ ನಡೆಯುತ್ತಿರುವ ಪ್ರಹಾರಕ್ಕೆ ಮಾತನಾಡುತ್ತಿಲ್ಲ ಪವರ್ ಫುಲ್ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಮೌನವಾ… ಲಂಗಾಣ ನಮಗೆ ಸವಾಲು ಹಾಕಲು ನಮ್ಮ ನಾಯಕರೇ ಕಾರಣ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಉತ್ತರ ಕೊಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ವಾಲ್ಮೀಕಿ…

Read More

ಮೈಸೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೆ ಎಂಬ ಗ್ರಾಮದಲ್ಲಿ ನಡೆದಿದೆ. ರಿಪೀಸ್ ಪಟ್ಟಿಯಿಂದ ಹೊಡೆದು ಸುಧಾ (30) ರನ್ನು ಪತಿ ಮಹೇಶ್ ಕೊಲೆ ಮಾಡಿದ್ದಾನೆ. 13 ವರ್ಷದ ಹಿಂದೆ ಮಲ್ಲಹಳ್ಳಿ ಮಹೇಶ ಸುಧಾ ಅವರನ್ನು ವಿವಾಹವಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸುಧಾ ಮತ್ತು ಮಹೇಶ್ ದೂರವಾಗಿದ್ದರು. ಕಳಲೇ ಗ್ರಾಮದ ದೊಡ್ಡಬೀದಿಯಲ್ಲಿ ಮಹೇಶ್ ಪತ್ನಿ ಸುಧಾ ವಾಸವಿದ್ದರು. ನಿನ್ನೆ ರಾತ್ರಿ ಹೆಂಡತಿ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಪತಿ ಮಹೇಶ್ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಮೂರು ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದು ವಿದ್ಯಾಲಯದ ಇಮೇಲ್ ಐಡಿ ಗೆ ಸಂದೇಶ ಬಂದಿದೆ. ಸದಾಶಿವನಗರ ಠಾಣೆಗೆ ಕಾಲೇಜಿನ ಪ್ರಿನ್ಸಿಪಲ್ ಪಿಎಮ್ ಪ್ರಕಾಶ್ ದೂರ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಸದಾಶಿವನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆರ್ ಡಿ ಎಕ್ಸ್ ಬಾಂಬ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇದೊಂದು ಹೊಸ ಬೆದರಿಕೆ ಅನ್ನೋದು ಮೇಲ್ನೋಟಕ್ಕೆ ಪತ್ತೆಯಾಗಿದೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ಪೊಲೀಸರ ಅಮಾನತಿಗೆ ವಿಪಕ್ಷ ನಾಯಕ ಆರ್.ಅಶೋಕ್ ಗಡುವು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಹುಬ್ಬಳ್ಳಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಸಿಐಡಿಗೆ ಕೊಡಲು ಚರ್ಚೆ ನಡೆದಿದೆ. ಸಿಎಂ ಅನುಮತಿ ಪಡೆದು ಸಿಐಡಿ ತನಿಖೆಗೆ ಕೊಡ್ತೇವೆ. ಸಿಐಡಿ ತನಿಖೆಯ ನಂತರ ಸತ್ಯಾಸತ್ಯತೆ ಗೊತ್ತಾಗುತ್ತದೆ. ಮಹಿಳೆಯ ವಿವಸ್ತ್ರ ಪ್ರಕರಣದ ಬಗ್ಗೆ ಬಿಜೆಪಿಯವರು ಒಂದು, ನಮ್ಮವರು ಇನ್ನೊಂದು ರೀತಿ ಹೇಳುತ್ತಿದ್ದಾರೆ. ಹಾಗಾಗಿ, ಸಿಐಡಿ ತನಿಖೆಯಿಂದ ಎಲ್ಲವೂ ಹೊರಬರಲಿ ಎಂದರು. ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆ ನಂತರ ಸರ್ಕಾರ ಯಾರು ತಪ್ಪಿತಸ್ಥರು, ಯಾರ ನಿರ್ಲಕ್ಷ್ಯವಿದೆ ಎಲ್ಲವನ್ನೂ ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ…

Read More

ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇದಕ್ಕೂ ಮುನ್ನ ವಾದ ಮುಂದುವರೆಸಿದ ಕುಲಕರ್ಣಿ ಪರ ವಕೀಲರು, ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ. ಕೊಲೆಯಾದ ಸ್ಥಳದಲ್ಲಿಯೂ ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಜಾಮೀನು ರದ್ದುಪಡಿಸಿ ಆದೇಶಿಸುವುದಕ್ಕೂ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್​ ತಿಳಿಸಿಲ್ಲ. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಾತ್ರ ಜಾಮೀನು ರದ್ದುಮಾಡಿ ಆದೇಶಿಸಿದ್ದು, ಆದೇಶದಲ್ಲಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು ಬಾಕಿ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು…

Read More