Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ-ಮಗ ಇಬ್ಬರು ಸಾವನ್ನಪ್ಪಿರುವ ಘಟನೆ, ಜಿಲ್ಲೆಯ ಸಂಡೂರು ತಾಲೂಕಿನ ಚಿನ್ನುಬಸಪ್ಪ ಕ್ಯಾಂಪ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ಬೆಳ್ಳಿ ನಾಗರಾಜ್ (45) ದುರಗೇಶ (22) ಸಾವನ್ನಪ್ಪಿದ್ದಾರೆ. ಮೈನಿಂಗ್ ಕಂಪನಿಯಲ್ಲಿ ವಾಚ್ ಮೆನ್ ಆಗಿದ್ದ ಬೆಳ್ಳಿ ನಾಗರಾಜ ಪ್ಯಾರಾ ಮೆಡಿಕಲ್ ಓದುತ್ತಿದ್ದ ನಾಗರಾಜ ಪುತ್ರ ದುರಗೇಶ ತಂದೆಯನ್ನು ಕೆಲಸಕ್ಕೆ ಬಿತ್ತು ಬರಲು ಹೊರಟಿದ್ದ ದುರಗೇಶ. ವೇಗವಾಗಿ ಬಂದು ಮೈನಿಂಗ್ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳ್ಳಿ ನಾಗರಾಜ ಸ್ಥಳದಲ್ಲೇ ಸಾವನ್ನಪ್ಪಿದ್ದು, ದುರುಗೇಶ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜ್ಯದ ಯುವಜನರು, ವಿದ್ಯಾರ್ಥಿಗಳು ಹಾಗೂ ಬೆಂಗಳೂರಿನ ನಾಗರಿಕರ ಹಿತದೃಷ್ಟಿಯಿಂದ ಹಲವು ಮಹತ್ವದ ಮತ್ತು ಜನಪರ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, “ನಾವು ಪಡೆದಿರುವ ಈ ಅಧಿಕಾರವನ್ನು ಕೇವಲ ಅಧಿಕಾರವೆಂದು ಭಾವಿಸದೆ, ಜನಸೇವೆಯ ಭಾಗ್ಯವೆಂದು ತಿಳಿದು ಈ ನೂತನ ಕಾರ್ಯಕ್ರಮಗಳನ್ನು ನಾಡಿನ ಜನತೆಗೆ ಸಮರ್ಪಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ‘ಯುವ ಉದ್ಯೋಗ ಸೇತು’ ಸ್ಥಾಪನೆ ಮತ್ತು 56,000 ಹುದ್ದೆಗಳ ಭರ್ತಿ ರಾಜ್ಯದಲ್ಲಿ ತೀವ್ರವಾಗಿರುವ ನಿರುದ್ಯೋಗ ಸಮಸ್ಯೆಗೆ ಮುಕ್ತಿ ಹಾಡಲು ಸರ್ಕಾರ ಮೊದಲ ಆದ್ಯತೆ ನೀಡಿದೆ. ಇದರ ಅಂಗವಾಗಿ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳು ಮತ್ತು ಉದ್ಯೋಗ ಆಕಾಂಕ್ಷಿ ಯುವಕರ ನಡುವೆ ಕೊಂಡಿಯಾಗಿ ಕೆಲಸ ಮಾಡಲು ‘ಯುವ ಉದ್ಯೋಗ ಸೇತು’ ಎಂಬ ವಿಶೇಷ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಕೇಂದ್ರದ…
ಶಿವಮೊಗ್ಗ ಜೂ. 04; (ಕರ್ನಾಟಕ ವಾರ್ತೆ ): 2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ 8 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕನ್ನಡ, ಇಂಗ್ಲೀಷ್, ಗಣಿತ, ವಿಜ್ಞಾನ, ಹಿಂದಿ, ಸಮಾಜವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪಿ.ಯು.ಸಿ., ಡಿ.ಇಡಿ ಮತ್ತು ಟಿಇಟಿ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಿಎ/ಬಿಎಸ್ಸಿ, ಬಿ.ಇಡಿ ಹಾಗೂ ಟಿಇಟಿ ವಿದ್ಯಾರ್ಹತೆ ಕಡ್ಡಾಯವಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 10 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ ಅವರ ಇಲ್ಲಿನ ಸದಾಶಿವ ನಗರದ ನಿವಾಸಕ್ಕೆ ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಗುರುವಾರ ಆಗಮಿಸಿ, ಸಚಿವರ ಕುಟುಂಬ ಪರಿವಾರಕ್ಕೆ ಆಶೀರ್ವಚನ ಮಾಡಿ, ಹರಸಿದರು. ಬೆಳಿಗ್ಗೆಯಿಂದಲೇ ಶಾಸಕರು, ಕಾರ್ಯಕರ್ತರು, ಅಧಿಕಾರಿಗಳ ಆಗಮನ ಮತ್ತು ಅಭಿಮಾನಿಗಳ ಕಲರವದಿಂದ ತುಂಬಿದ್ದ ಸಚಿವರ ಸ್ವಂತ ನಿವಾಸಕ್ಕೆ ಆಗಮಿಸಿದ ಶ್ರೀಗಳನ್ನು ಸಚಿವರ ಕುಟುಂಬ ಪರಿವಾರ ಗೌರವದಿಂದ ಬರಮಾಡಿಕೊಂಡಿತು. ನಂತರ ಎಂ ಬಿ ಪಾಟೀಲ, ಅವರ ಪತ್ನಿ ಆಶಾ ಪಾಟೀಲ, ಮಕ್ಕಳಾದ ಬಸಂತ್ ಮತ್ತು ಧ್ರುವ ಪಾಟೀಲ ಎಲ್ಲರೂ ಸ್ವಾಮೀಜಿಗಳ ಪಾದಪೂಜೆ ನೆರವೇರಿಸಿದರು. ಅವರೆಲ್ಲರ ಭಕ್ತಿಯನ್ನು ಸ್ವೀಕರಿಸಿದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಕೆಲ ಹೊತ್ತು ಲೋಕಾಭಿರಾಮವಾಗಿ ಮಾತನಾಡಿ, ಬಳಿಕ ಆಶೀರ್ವಚನಗೈದು, ಒಳಿತನ್ನು ಹಾರೈಸಿದರು. ಈ ಸಂದರ್ಭದಲ್ಲಿ ಸಚಿವ ಪಾಟೀಲರು ಕೂಡ ತಮ್ಮ ಇದುವರೆಗಿನ ಸಾಧನೆಗಳ ನೆನಪಿನೊಂದಿಗೆ, ಇನ್ನು ಮುಂದೆಯೂ ಶ್ರೀಗಳ ಸಲಹೆ, ಮಾರ್ಗದರ್ಶನ ತಮಗೆ…
ಮುಂಬೈ: ಬಾಲಿವುಡ್ನ ಹಿರಿಯ ಹಾಗೂ ಪ್ರಖ್ಯಾತ ಚಲನಚಿತ್ರ ನಿರ್ಮಾಪಕ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ (76) ಅವರು ನಿಧನರಾಗಿದ್ದಾರೆ. ಅವರ ಸಾವು ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಬಾಲಿವುಡ್ಗೆ ದೊಡ್ಡ ಆಘಾತವನ್ನು ಉಂಟುಮಾಡಿದ್ದು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಿಹಲಾನಿ, ಕೇವಲ ನಿರ್ಮಾಪಕರಾಗಿ ಮಾತ್ರವಲ್ಲದೆ ಸಿನಿಮಾ ರಂಗದ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ಹೊತ್ತು ಯಶಸ್ವಿಯಾಗಿ ನಿಭಾಯಿಸಿದ್ದರು. ಮುಂಬೈನಲ್ಲಿ ನೆಲೆಸಿದ್ದ ಅವರು ಚಿತ್ರರಂಗದ ಬೆಳವಣಿಗೆಗೆ ತಮ್ಮದೇ ಆದ ವಿಶಿಷ್ಟ ಕೊಡುಗೆಯನ್ನು ನೀಡಿದ್ದಾರೆ. CBFC ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಪಹ್ಲಾಜ್ ನಿಹಲಾನಿ ಅವರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಅಧ್ಯಕ್ಷರಾಗಿ ದೇಶಾದ್ಯಂತ ಅಪಾರ ಗಮನ ಸೆಳೆದಿದ್ದರು. 2015 ರಿಂದ 2018 ರ ಅವಧಿಯಲ್ಲಿ ಅವರು ಸೆನ್ಸಾರ್ ಮಂಡಳಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಅವರ ಅಧಿಕಾರಾವಧಿಯಲ್ಲಿ ಚಲನಚಿತ್ರಗಳ ಪ್ರಮಾಣೀಕರಣ ಮತ್ತು ಸೆನ್ಸಾರ್ಶಿಪ್ಗೆ ಸಂಬಂಧಿಸಿದಂತೆ ಹಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ…
ವಿಜಯಪುರ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ 6 ಜನರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸೇರಿ ಆರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹತ್ಯಾಕಾಂಡ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇಂದು ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮೇ 29ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು . ಚಂದ್ರಕಾಂತ ನಿರಾಳೆ ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ, ನಿರಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬೀರ್ ಅತ್ತಾರ್ ಕೊಲೆಯಾಗಿದ್ದು ಜೂನ್ 1 ರಂದು ಕಲ್ಲನಗೌಡ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿತ್ತು. ತನಿಖೆಯ ವೇಳೆ ಇನ್ನಷ್ಟು ಆರೋಪಿಗಳ ಪಾತ್ರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ಮತ್ತೆ ಆರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಸದ್ಯ ಹೆಚ್ಚಿನ ವಿವರಣೆಗಾಗಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.…
ತಪ:ಶಕ್ತಿಯಿಂದ ಸಾಧನೆಗೈದು ಜನರ ಬದುಕು ಬದಲಿಸಿದ ಅನೇಕ ಸಾಧಕರಾದ, ಸಮರ್ಥ ರಾಮದಾಸರಿಂದ ಹಿಡಿದು ಶಂಕರಾಚಾರ್ಯರು- ರಮಣ ಮಹರ್ಷಿಗಳು, ಶ್ರೀಧರ ಸ್ವಾಮಿಗಳು, ನಾರಾಯಣ ಗುರು, ಕನಕ- ಪುರಂದರರು, ಉತ್ತರ ಭಾರತದ ಯೋಗಿನಾಥರು, ಭಕ್ತ ಕಬೀರ, ತುಕಾರಾಂ ಮಹಾರಾಜರು, ರಾಮಕೃಷ್ಣರು, ಶಿರಡಿ ಸಾಯಿಬಾಬಾ, ಶಂಕರ ದೇವ, ಇನ್ನು ಹಲವು ಸಾಧು ಸಂತರು ಭಕ್ತರ ಕಷ್ಟ ನಿವಾಣೆ ಗೆ ಸದಾ ಕರುಣೆಯಿಂದ ನಡೆದುಕೊಂಡವರು. ಇವರಂತೆ ಕಲಿಯುಗದ ಕಲ್ಪತರು “ರಾಘವೇಂದ್ರ ಸ್ವಾಮಿಗಳು” ಇವರು ಕಷ್ಟಕಾಪಣ್ಯದಿಂದ ಬಳಲುತ್ತಿರುವವರ ತೊಂದರೆಗಳನ್ನು ನಿವಾರಿಸಿ, ಪವಾಡಗಳ ಮೂಲಕ ಅವರ ಬದುಕಿಗೆ ಬೆಳಕು ತೋರಿದ ಗುರುವರೇಣ್ಯರು ರಾಘವೇಂದ್ರರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…
ಬೀದರ್ : ಮನೆಯಲ್ಲಿ ನೇಣು ಬಿಗಿದುಕೊಂಡು ಗ್ರಾಮ ಆಡಳಿತ ಅಧಿಕಾರಿ ಆತ್ಮಹತ್ಯೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಮಹದೇವ (28) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂದು ವರ್ಷದ ಹಿಂದೆ ಅಷ್ಟೇ ಗ್ರಾಮ ಆಡಳಿತ ಅಧಿಕಾರಿ ಸೇವೆಗೆ ಸೇರಿದರು ಮಹದೇವ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಂಟಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಆತಂಕವನ್ನು ಮೂಡಿಸುವಂತಹ ಘಟನೆಯೊಂದು ವರದಿಯಾಗಿದೆ. ಬೆಳ್ಳಂಬೆಳಗ್ಗೆಯೇ ಯುವತಿಯೊಬ್ಬಳ ಮೇಲೆ ಕಾಮುಕನೊಬ್ಬ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿರುವ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಈ ಘಟನೆಯು ಸಿಲಿಕಾನ್ ಸಿಟಿಯ ಭದ್ರತೆಯ ಬಗ್ಗೆ ಮತ್ತೊಮ್ಮೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಸಂತ್ರಸ್ತ ಯುವತಿ ಬೆಂಗಳೂರಿನ ವೈಟ್ಫೀಲ್ಡ್ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ (PG) ಒಂದರಲ್ಲಿ ವಾಸವಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ ಎನ್ನಲಾಗಿದೆ. ಎಂದಿನಂತೆ ಘಟನೆ ನಡೆದ ದಿನದಂದು ಬೆಳಗಿನ ಜಾವ ವಿದ್ಯಾರ್ಥಿನಿ ಟೀ ಕುಡಿಯಲೆಂದು ಪಿಜಿಯಿಂದ ಹೊರಗೆ ಬಂದು, ಹತ್ತಿರದಲ್ಲೇ ಇದ್ದ ಟೀ ಅಂಗಡಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಳು. ಬೆಳಗಿನ ಜಾವ ರಸ್ತೆಯಲ್ಲಿ ಜನರ ಓಡಾಟ ವಿರಳವಾಗಿದ್ದ ಸಮಯವನ್ನು ಹೊಂಚು ಹಾಕಿ ಕಾಯುತ್ತಿದ್ದ ಕಾಮುಕನೊಬ್ಬ, ಯುವತಿ ಒಂಟಿಯಾಗಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಏಕಾಏಕಿ ಆಕೆಯ ಮೇಲೆ ಮುಗಿಬಿದ್ದ ಆತ, ಯುವತಿಯನ್ನು ಬಲವಂತವಾಗಿ ಎತ್ತಿಕೊಂಡು ನಿರ್ಜನ ಪ್ರದೇಶದ ಕಡೆಗೆ ಒಯ್ದು ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ಹಠಾತ್…
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಂಡಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಹತ್ವದ ರಾಜಕೀಯ ಬೆಳವಣಿಗೆಯ ಬೆನ್ನಲ್ಲೇ ಆಡಳಿತ ಯಂತ್ರದಲ್ಲೂ ತಲ್ಲಣಗಳು ಆರಂಭವಾಗಿದ್ದು, ಸರ್ಕಾರದ ಡಿಜಿಟಲ್ ಮುಖಪುಟಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಗೋಚರಿಸುತ್ತಿವೆ. ನೂತನ ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ, ಇಲಾಖೆಗಳ ಆನ್ಲೈನ್ ವ್ಯವಸ್ಥೆಯನ್ನು ಅಪ್ಡೇಟ್ ಮಾಡುವ ಕೆಲಸ ಯುದ್ಧೋಪಾದಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರದ ಎಲ್ಲಾ ಪ್ರಮುಖ ಇಲಾಖೆಗಳ ಅಧಿಕೃತ ಆನ್ಲೈನ್ ಪೋರ್ಟಲ್ಗಳು ಮತ್ತು ವೆಬ್ಸೈಟ್ಗಳಲ್ಲಿ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಅಪ್ಲೋಡ್ ಮಾಡಲಾಗಿದೆ. ತಂತ್ರಜ್ಞಾನ ಇಲಾಖೆಯು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಈ ಬದಲಾವಣೆಗಳನ್ನು ತಂದಿದೆ. ಭಾವಚಿತ್ರಗಳ ಬದಲಾವಣೆ ವೆಬ್ಸೈಟ್ಗಳಲ್ಲಿ ಕೇವಲ ಹೆಸರು ಮಾತ್ರವಲ್ಲದೆ, ಇಲಾಖೆಗಳ ಮುಖ್ಯ ಪುಟಗಳಲ್ಲಿದ್ದ (ಹೋಮ್ ಪೇಜ್) ಭಾವಚಿತ್ರಗಳನ್ನು ಸಹ ಬದಲಾಯಿಸಲಾಗಿದೆ. ಇದುವರೆಗೆ ರಾರಾಜಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋಗಳನ್ನು…














