Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ 2026 ನೇ ಸಾಲಿನ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಅಭ್ಯರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮನೆಮಾಡಿದ್ದ ಆತಂಕ ನಿವಾರಣೆಯಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಅಗ್ರ ಶ್ರೇಯಾಂಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಪ್ರಸಕ್ತ ಸಾಲಿನ ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಆರ್‌ವಿ ಪಿಯು ಕಾಲೇಜಿನ (RV College) ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅತ್ಯಂತ ಕಠಿಣ ಸ್ಪರ್ಧೆಯ ನಡುವೆಯೂ ಅಗ್ರಸ್ಥಾನ ಕಾಯ್ದುಕೊಂಡ ತನಿಷಾ ಅವರ ಈ ಯಶಸ್ಸು ಅವರ ಕಾಲೇಜು ಮತ್ತು ಕುಟುಂಬಕ್ಕೆ ಅಪಾರ ಹೆಮ್ಮೆ ತಂದಿದೆ. ತನಿಷಾ ಅವರ ಈ ಅಮೋಘ ಸಾಧನೆಗೆ ರಾಜ್ಯದಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಇನ್ನುಳಿದಂತೆ ಇಂಜಿನಿಯರಿಂಗ್ ವಿಭಾಗದ…

Read More

ಬೆಂಗಳೂರು : ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಇಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರ ಜೊತೆಗೆ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಬಳಿಕ ಅವರು ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿನ್ನೆ ಕಾಂಗ್ರೆಸ್ ನಾಯಕರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜಿವಾಲ ಮನವಿ ಮಾಡಿದ್ದಾರೆ. ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಸಿಎಂ ಡಿಕೆ ಶಿವಕುಮಾರ್ ಹಾಗೂ ಸುರ್ಜೆವಾಲಾ ಅವರನ್ನು ಭೇಟಿಯಾಗಿದ್ದೆ. ಸುರ್ಜೆವಾಲಾ ಅವರಿಗೆ ಎಲ್ಲವನ್ನು ನಾನು ತಿಳಿಸಿದ್ದೇನೆ. ಇಬ್ಬರು ಏನು ತೀರ್ಮಾನ ಮಾಡುತ್ತಾರೆ ನೋಡೋಣ. ನನಗೆ ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಜಲಸಂಪನ್ಮೂಲ ಖಾತೆಯನ್ನು ನಾನು ಕೇಳಿರಲಿಲ್ಲ ಸಚಿವ ಸ್ಥಾನ ಇಂತಹದ್ದೇ ಖಾತೆ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಮಾತು ಕೊಟ್ಟಂತೆ ನಡೆದುಕೊಳ್ಳಲಿಲ್ಲ ಅಂತ…

Read More

ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ. ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿದ್ದು, ಅಸಮಾಧಾನಿತ ನಾಯಕನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಿರಿಯ ನಾಯಕರಾಗಿರುವ ರೆಡ್ಡಿ ಅವರ ರಾಜೀನಾಮೆಯಿಂದ ಪಕ್ಷಕ್ಕಾಗುವ ಮುಜುಗರ ಹಾಗೂ ಹಾನಿಯನ್ನು ತಪ್ಪಿಸಲು ಸುರ್ಜೆವಾಲಾ ಹರಸಾಹಸ ಪಟ್ಟಿದ್ದಾರೆ. ರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾದ ಅಂಶಗಳನ್ನು ಆಲಿಸಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಭೇಟಿಯ ವೇಳೆ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆ ನಿರ್ಧಾರದ ಹಿಂದಿನ ಅಸಮಾಧಾನವನ್ನು…

Read More

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಖೈದಿಗಳ ಅಕ್ರಮ ಚಟುವಟಿಕೆಗಳು ಬೆಳಕಿಗೆ ಬಂದಿವೆ. ಜೈಲಿನ ಬ್ಯಾರಕ್‌ಗಳು ಹಾಗೂ ಕೈದಿಗಳ ಕೊಠಡಿಗಳ ಮೇಲೆ ಪೊಲೀಸರು ಶನಿವಾರ ದಿಢೀರ್ ದಾಳಿ ನಡೆಸಿದ್ದು, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಈ ತಪಾಸಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಖೈದಿ ಬಳಿ ಸಿಕ್ಕಿತು ಮೊಬೈಲ್ ಫೋನ್ ದಾಳಿಯ ವೇಳೆ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಜಾ ಬಂಧಿ ಕೈದಿಯೊಬ್ಬನ ಬಳಿ ಮೊಬೈಲ್ ಪತ್ತೆಯಾಗಿರುವುದು ಜೈಲಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಬಾಲು ಎಂಬ ಹೆಸರಿನ ಸಜಾ ಬಂಧಿಯ ಕೊಠಡಿಯನ್ನು ತಲಾಷ್ ಮಾಡಿದಾಗ ಆತನ ಬಳಿ ಅಕ್ರಮವಾಗಿ ಇಟ್ಟುಕೊಂಡಿದ್ದ ಮೊಬೈಲ್ ಫೋನ್ ಪತ್ತೆಯಾಗಿದ್ದು, ಪೊಲೀಸರು ತಕ್ಷಣವೇ ಅದನ್ನು ವಶಕ್ಕೆ ಪಡೆದಿದ್ದಾರೆ. ಜೈಲಿನ ಟವರ್ ಮೇಲೂ ರೇಡ್ ಕೇವಲ ಕೈದಿಗಳ ಕೊಠಡಿ ಮಾತ್ರವಲ್ಲದೆ, ಪೊಲೀಸರು ಜೈಲಿನ ಆವರಣದಲ್ಲಿರುವ ಟವರ್ ಒಂದರ ಮೇಲೆಯೂ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ವೇಳೆ ಟವರ್‌ನಲ್ಲಿ ಬಚ್ಚಿಡಲಾಗಿದ್ದ ಐದು ಮೊಬೈಲ್ ಫೋನ್‌ಗಳು, ಆಕ್ಟಿವೇಟ್ ಆಗಿದ್ದ ಸಿಮ್…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರಕೃತ್ಯ ನಡೆದಿದ್ದು, ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಮಹಿಳೆ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದಾಳೆ, ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ ಮಗು ಮೃತಪಟ್ಟ ಮೂರು ತಿಂಗಳ ಬಳಿಕ ಕೊಲೆ ಪ್ರಕರಣ ದಾಖಲಾಗಿದ್ದು ವೆನಿಲಾ ಎಂಬ ಆರು ವರ್ಷದ ಮಗುವಿನ ಕೊಲೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅನೈತಿಕ ಸಂಬಂಧ ಹಾಗೂ ಮಗುವಿನ ಬಣ್ಣದ ಕಾರಣಕ್ಕೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ ಪತ್ನಿ ಪ್ರಿಯಾಂಕ ಹಾಗೂ ಪ್ರಿಯಕರ ಮೋಹನ ವಿರುದ್ಧ ಪತಿ ದೂರು ನೀಡಿದು ಅವರ ದೂರಿನ ಮೇಲೆ ಇದೀಗ ಕೇಸ್ ದಾಖಲಾಗಿದೆ. 2007ರಲ್ಲಿ ದಾವಣಗೆರೆ ಪ್ರವೀಣ್ ಹಾಗು ಪ್ರಿಯಾಂಕ ಪ್ರಿಯಾಂಕ ಮದ್ವೆ ಆಗಿರುತ್ತದೆ. ಮದುವೆಯಾಗಿ ದಂಪತಿಗೆ 17 ವರ್ಷ ತುಂಬಿದ್ದು, ಆರು ವರ್ಷದ ಇಬ್ಬರು ಮಕ್ಕಳಿದ್ದರು. ಮದುವೆ ಬಳಿಕೆ ಪ್ರಿಯಾಂಕಾ ಗೆ ಗೆಳೆಯ ಮೋಹನ್ ಸಿಕ್ಕಿರುತ್ತಾನೆ. ಪ್ರಿಯಾಂಕ ಕಾಲೇಜು ದಿನಗಳ ಸ್ನೇಹಿತ ಆಗಿರುವ ಮೋಹನ್ ಇಬ್ಬರ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವರ ಖಾತೆ ಹಂಚಿಕೆ ಮತ್ತು ಅದರಿಂದ ಉಂಟಾಗಿದೆ ಎನ್ನಲಾದ ಅಸಮಾಧಾನದ ಬೆನ್ನಲ್ಲೇ, ಸಚಿವ ಯು.ಟಿ. ಖಾದರ್ ಅವರು ಅತ್ಯಂತ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. “ನನಗೆ ಖಾತೆ ಮುಖ್ಯವಲ್ಲ, ಮಾಡುವ ಕೆಲಸ ಮುಖ್ಯ. ಅಧಿಕಾರ ಯಾರಿಗೂ ಶಾಶ್ವತವಲ್ಲ, ಅದಕ್ಕೆ ನಾವು ಅಂಟಿಕೊಳ್ಳಬಾರದು” ಎಂದು ಹೇಳುವ ಮೂಲಕ ಸಚಿವರು ಎಲ್ಲರ ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಯಾವುದೇ ರೀತಿಯ ದೊಡ್ಡ ಮಟ್ಟದ ಭಿನ್ನಾಭಿಪ್ರಾಯಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. “ನಮಗೆ ದೇವರು ಏನು ತೀರ್ಮಾನ ಮಾಡಿದ್ದಾನೋ ಅದು ಬಂದೇ ಬರುತ್ತದೆ. ಒಂದು ವೇಳೆ ಸಿಗದೇ ಇದ್ದರೆ, ದೇವರು ನಮಗಾಗಿ ಬೇರೆ ಏನೋ ಒಳ್ಳೆಯದನ್ನು ಇಟ್ಟಿದ್ದಾನೆ ಎಂದೇ ಅರ್ಥ ಮಾಡಿಕೊಳ್ಳಬೇಕು” ಎಂದು ತತ್ವಜ್ಞಾನದ ಮಾತುಗಳಲ್ಲಿ ತಮ್ಮ ನಿಲುವನ್ನು ವ್ಯಕ್ತಪಡಿಸಿದರು. ಖಾತೆಗಳ ಗಾತ್ರ ಮತ್ತು ಪ್ರಾಮುಖ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಖಾದರ್, “ರಾಜಕಾರಣದಲ್ಲಿ ಸಣ್ಣ ಖಾತೆ, ದೊಡ್ಡ ಖಾತೆ ಎಂಬ ಭೇದಭಾವ ಇರುವುದಿಲ್ಲ. ಪ್ರತಿಯೊಂದು…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ದರ್ಜೆಯ ಖಾತೆ ಹಂಚಿಕೆ ಅಸಮಾಧಾನ ತೀವ್ರಗೊಂಡಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರ ಮತ್ತು ಅವರ ಮನವೊಲಿಕೆಗೆ ಹೈಕಮಾಂಡ್ ನಡೆಸುತ್ತಿರುವ ಕಸರತ್ತು ಈಗ ತೀವ್ರ ಕುತೂಹಲ ಕೆರಳಿಸಿದೆ. “ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೇ ನೀಡಬೇಕು, ಇಲ್ಲದಿದ್ದರೆ ನಾನು ಕೇವಲ ಶಾಸಕನಾಗಿ ಮುಂದುವರಿಯುತ್ತೇನೆ” ಎಂದು ಪಟ್ಟು ಹಿಡಿದು ನಿನ್ನೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಅಖಾಡಕ್ಕಿಳಿದಿದ್ದು, ಅಸಮಾಧಾನಿತ ಹಿರಿಯ ನಾಯಕನ ಮನವೊಲಿಸಲು ಸಂಧಾನ ಸೂತ್ರವೊಂದನ್ನು ಮುಂದಿಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಸುರ್ಜೆವಾಲಾ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬದಲಿಗೆ ಅತ್ಯಂತ ಪ್ರಮುಖವಾದ ‘ಜಲ ಸಂಪನ್ಮೂಲ’ ಖಾತೆಯನ್ನು ವಹಿಸಿಕೊಳ್ಳುವಂತೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 25 ನಿಮಿಷಗಳ ಕಾಲ ನಡೆದ…

Read More

ನವದೆಹಲಿ: ಭಾರತೀಯ ಹಣಕಾಸು ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಒಂದು ಮಹತ್ವದ ಮತ್ತು ಕ್ರಾಂತಿಕಾರಿ ಬದಲಾವಣೆಯಾಗುವ ಮುನ್ಸೂಚನೆಗಳು ದಟ್ಟವಾಗಿವೆ. ನಾವು ದಿನನಿತ್ಯ ಬಳಸುವ ಕಾಗದದ ನೋಟುಗಳ ಜಾಗಕ್ಕೆ ಶೀಘ್ರದಲ್ಲೇ ಪಾಲಿಮರ್ ಅಥವಾ ಪ್ಲಾಸ್ಟಿಕ್ ನೋಟುಗಳು ಲಗ್ಗೆ ಇಡಲಿವೆ. ಈ ಕುರಿತಾದ ವಿಶೇಷ ಪ್ರಸ್ತಾಪವೊಂದನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗಂಭೀರವಾಗಿ ಪರಿಗಣಿಸಿದ್ದು, ದೇಶದ ಜನರಿಗೆ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲು ಆಂತರಿಕ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಆರ್ಥಿಕ ಅಗತ್ಯಗಳಿಗೆ ತಕ್ಕಂತೆ ಕರೆನ್ಸಿ ವ್ಯವಸ್ಥೆಯನ್ನು ನವೀಕರಿಸಲು ಆರ್‌ಬಿಐ ಮುಂದಾಗಿದೆ. ಈ ಬಗ್ಗೆ ಅಧಿಕೃತವಾಗಿ ಮಾತನಾಡಿರುವ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, “ದೇಶದಲ್ಲಿ ಪಾಲಿಮರ್ ನೋಟುಗಳನ್ನು ಜಾರಿಗೊಳಿಸುವ ಕುರಿತು ನಾವು ತೀವ್ರ ಚಿಂತನೆ ನಡೆಸುತ್ತಿದ್ದೇವೆ. ಪ್ರಸ್ತುತ ಇದರ ಸಾಧಕ-ಬಾಧಕಗಳು ಹಾಗೂ ತಾಂತ್ರಿಕ ಅಂಶಗಳ ಬಗ್ಗೆ ಆಳವಾದ ಪರಿಶೀಲನೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ಆದರೆ, ಈ ಪ್ರಸ್ತಾಪವು ಸದ್ಯಕ್ಕೆ ಪ್ರಾಥಮಿಕ ಹಂತದಲ್ಲಿದ್ದು, ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಮತ್ತು ನಿರ್ಧಾರವಾದ ಬಳಿಕ ಅಧಿಕೃತ…

Read More

ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ (ಕವಿವಿ) ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಯ ಜೊತೆ ಅಕ್ರಮ ಸಂಬಂಧ ಹೊಂದಿ, ಆಕೆ ಹೋದ ನಂತರ ಮತ್ತೊಬ್ಬ ವಿದ್ಯಾರ್ಥಿಗೆ ಕಿರುಕುಳ ನೀಡುತ್ತಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ ತಂಗುದೊರೈ ಎಂಬುವವರ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಪ್ರೊಫೆಸರ್‌ನ ಈ ವರ್ತನೆಯಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆರೋಪಿತ ಪ್ರೊಫೆಸರ್ ದೇವರಾಜ ತಂಗುದೊರೈ, ತನ್ನ ಬಳಿ ಪಿಎಚ್‌ಡಿ ಮಾಡಲು ಬಂದಿದ್ದ ವಿಜಯಪುರ ಮೂಲದ ವಿದ್ಯಾರ್ಥಿನಿಯೊಬ್ಬರ ಜೊತೆ ಕಳೆದ ಕೆಲವು ವರ್ಷಗಳಿಂದ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈ ವಿಷಯವು ವಿದ್ಯಾರ್ಥಿನಿಯ ಮನೆಯವರಿಗೆ ತಿಳಿಯುತ್ತಿದ್ದಂತೆ, ಅವರು ಆಕೆಯ ಪಿಎಚ್‌ಡಿಯನ್ನು ಅರ್ಧಕ್ಕೆ ನಿಲ್ಲಿಸಿ ಆಕೆಯನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದಾರೆ. ವಿದ್ಯಾರ್ಥಿನಿ ತನ್ನಿಂದ ದೂರಾದ ಬಳಿಕ ಪ್ರೊಫೆಸರ್ ಮಾನಸಿಕವಾಗಿ ವಿಚಿತ್ರವಾಗಿ ವರ್ತಿಸಲು ಆರಂಭಿಸಿದ್ದಾನೆ ಎಂದು ಹೇಳಲಾಗಿದೆ. ಇದೇ ವೇಳೆ, ವಿಜಯಪುರ ಮೂಲದ ವೇದವ್ಯಾಸ್ ಚೌಹಾಣ್ ಎಂಬ…

Read More

ಕಲಬುರ್ಗಿ : ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸುತಿದ್ದವರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಕಲ್ಬುರ್ಗಿ ನಗರದಲ್ಲಿ ಅಂತರಾಜ್ಯ ಇಬ್ಬರೂ ವಂಚಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರೇಮಶಾಮ ಕುಮಾರ್ ಹಾಗೂ ಗಣೇಶ್ ಕುಮಾರ್ ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿರುದ್ಯೋಗಿಗಳನ್ನು ಟಾರ್ಗೆಟ್ ಮಾಡಿ ಇಬ್ಬರು ವಂಚನೆ ಮಾಡುತ್ತಿದ್ದರು. ಬಂಧಿತ ಆರೋಪಿಗಳಾದ ಪ್ರೇಮ್ ಮತ್ತು ಗಣೇಶ್ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ್ದಾರೆ. 5 ಲಕ್ಷ ಹಣ ಕೊಟ್ಟರೆ ನೌಕರಿ ಕೊಡಿಸುವುದಾಗಿ ನಿರುದ್ಯೋಗಿ ಯುವಕ ಯುವತಿಯರಿಗೆ ನಂಬಿಸಿ ವಂಚನೆ ಎಸಗಿದ್ದು, ಕಲ್ಬುರ್ಗಿಯಲ್ಲಿ ನೌಕರಿ ಕೊಡುಸುವುದಾಗಿ ವಂಚನೆಗೆ ಮುಂದಾಗಿದ್ದರು.ಆದರೆ ಇದೀಗ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.

Read More