Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ, ಮೂರು ವರ್ಷದ ಬಾಲಕಿಯ ಬಾಯಿಯಲ್ಲಿ ಕ್ಯಾಂಡಿಯನ್ನು ಹೋಲುವ ವಸ್ತುವೊಂದು ಸ್ಫೋಟಗೊಂಡು ಜೀವಕ್ಕೆ ಅಪಾಯಕಾರಿಯಾದ ಗಾಯಗಳಾಗಿವೆ. ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಚೌಕಿಬಾಸ್ ಗ್ರಾಮದಿಂದ ವರದಿಯಾದ ಈ ಪ್ರಕರಣವು ಮಕ್ಕಳ ಸುರಕ್ಷತೆ ಮತ್ತು ಕ್ರಿಮಿನಲ್ ನಿರ್ಲಕ್ಷ್ಯದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಅಕ್ಷು ಎಂದು ಗುರುತಿಸಲಾದ ಮಗು ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಅಂಗಡಿಯ ಮಾಲೀಕನನ್ನು ವಶಕ್ಕೆ ತೆಗೆದುಕೊಂಡು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಫೆಬ್ರವರಿ 3 ರ ಮಂಗಳವಾರ ಬೆಳಿಗ್ಗೆ ಅಕ್ಷು ತನ್ನ ಆರು ವರ್ಷದ ಸಹೋದರಿ ಅಹಾನಾಳೊಂದಿಗೆ ಸಿಹಿತಿಂಡಿಗಳನ್ನು ಖರೀದಿಸಲು ಹತ್ತಿರದ ದಿನಸಿ ಅಂಗಡಿಗೆ ಹೋದಾಗ ಈ ಘಟನೆ ಸಂಭವಿಸಿದೆ. ದೂರಿನ ಪ್ರಕಾರ, ಅಂಗಡಿಯವ, ನಾಥೋ ಅವರ ಮಗ ಸುದಿಲ್ ಅಲಿಯಾಸ್ ಕಲಾ, ಮಗುವಿಗೆ ಕ್ಯಾಂಡಿಯಂತೆ ಕಾಣುವ ಆದರೆ ವಾಸ್ತವವಾಗಿ ಪಟಾಕಿಯನ್ನು ಹೋಲುವ ಸ್ಫೋಟಕ ವಸ್ತುವನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲವು ಕ್ಷಣಗಳ ನಂತರ, ಮಗು ಆ ವಸ್ತುವನ್ನು ತನ್ನ…
ಬೆಂಗಳೂರು : ಇತ್ತೀಚಿಗೆ ಬಿಎಂಟಿಸಿ ಕಂಡಕ್ಟರ್ ಗಳು ಸಂಸ್ಥೆಯ ಸ್ಕ್ಯಾನರ್ ಬದಲು ತಮ್ಮ ಸ್ಕ್ಯಾನರ್ ಹಾಕಿ ಲಕ್ಷಾಂತರ ರೂಪಾಯಿ ಮುಂಜಾನೆ ಅಸಗಿದ್ದ ಪ್ರಕರಣದ ಬೆನ್ನಲೆ ಇದೀಗ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೂಡ ಸಿಬ್ಬಂದಿಗಳು ಯುಪಿಐ ಸ್ಕ್ಯಾನರ್ ಮೂಲಕ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ ಎಸಗಿದ್ದು ಬೆಳಕಿಗೆ ಬಂದಿದೆ. ಹೌದು ರೋಗಿಗಳ ಅನುಕೂಲಕ್ಕಾಗಿ ಪರಿಚಯಿಸಲಾಗಿದ್ದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನೇ ದುರುಪಯೋಗಪಡಿಸಿಕೊಂಡು, ಆಸ್ಪತ್ರೆಯ ಕೆಲ ಕಳ್ಳ ಸಿಬ್ಬಂದಿಗಳು ಸುಮಾರು 23 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ದೋಚಿರುವುದು ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಅವರು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇತ್ತೀಚಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶುಲ್ಕ ಪಾವತಿಸಲು ಅನುಕೂಲ ಆಗಲಿ ಎಂದು ಯುಪಿಐ ವ್ಯವಸ್ಥೆ ಅಳವಡಿಸಲಾಗಿತ್ತು. ಸ್ಕ್ಯಾನರ್ ಲ್ಯಾಬ್ ಟೆಸ್ಟಿಂಗ್ ಸೇರಿದಂತೆ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸೇವೆಗಳಿಗೆ ಶುಲ್ಕ ಪಾವತಿಸಲು ಯುಪಿಐ ವ್ಯವಸ್ಥೆ…
ಮೈಸೂರು : ಮೈಸೂರಿನಲ್ಲಿ ಕಾಡನೆ ದಾಳಿಗೆ ಇದೀಗ ಮತ್ತೊಂದು ಬಲಿಯಾಗಿದೆ. ಮಟಕೆರೆಯ ಎಸ್ ಟಿ ಕಾಲೋನಿಯಯಲ್ಲಿ ಕಾಡಾನೆ ದಾಳಿ ಮಾಡಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮಟಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಕಾಡನೇ ದಾಳಿಗೆ 62 ವರ್ಷದ ಮಾದ ಎಂಬ ವೃದ್ಧರು ಬಲಿಯಾಗಿದ್ದಾರೆ. ಬಹಿರ್ದೆಸೆಗೆ ಎಂದು ತೆರಳಿದ್ದ ವೇಳೆ ಮಾದ ಅವರ ಮೇಲೆ ಕಾಡಾನೆ ದಾಳಿ ಮಾಡಿದೆ. ಮಾದ ಚಿರಾಡುತ್ತಿದ್ದನ್ನು ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಕೂಡಲೇ ಗ್ರಾಮಸ್ಥರು ಕಾಡಾನೆಯನ್ನು ಹೆಮ್ಮೆಟ್ಟಿಸಿದ್ದಾರೆ. ಆದರೆ 62 ವರ್ಷದ ಮಾದ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ. ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೇಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ. ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ ,ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ…
ಉತ್ತರಕನ್ನಡ : ಕಳೆದ 2019ರಲ್ಲಿ ಇಲ್ಲಿನ ಕಸ್ತೂರಬಾ ನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಎಸ್ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಕಾರ್ಯಕರ್ತರಾಗಿದ್ದ ಆರು ಮಂದಿ ಆರೋಪಿಗಳಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಿರಣ ಕಿಣಿ ಅವರು, ಆರು ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿ 10 ವರ್ಷಗಳ ಶಿಕ್ಷೆ ವಿಧಿಸಿದರು. ಮೊಹಮ್ಮದ್ ಫಾರೂಕ್ (32) ಮೊಹಮ್ಮದ್ ಸಲೀಂ (36), ಸರ್ಫರಾಜ್ ಪಟೇಲ್ (35), ಮಹಮದ್ ಆರಿಫ್ (34), ನಿಸಾರ್ ಅಹಮದ್ ಶೇಖ್ (29) ಹಾಗೂ ಮೊಸಿನ್ ಅಬ್ದುಲ್ ಶೂಖರ್ (39) ಶಿಕ್ಷೆಗೆ ಒಳಗಾದವರು ಎಂದು ತಿಳಿದುಬಂದಿದೆ. ನ್ಯಾಯಾಲಯವು ಶಿಕ್ಷೆಯ ಜೊತೆಗೆ ಪ್ರತಿಯೊಬ್ಬ ಆರೋಪಿಗೆ 18 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ, ಗಾಯಾಳು ಅನೀಶ್ ತಹಶೀಲ್ದಾರ್ ಅವರಿಗೆ ಒಟ್ಟು 60 ಸಾವಿರ ರೂ.…
ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ ಮತ್ತೊಂದು ದಿನ ಕೊಡುತ್ತೇವೆ ಎಂದು ಹೇಳುತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ಖಂಡಿತವಾಗಿ ನಿಮ್ಮ ಹಣ ಮರಳಿ ಬರುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾರಿಗಾದರೂ ದೃಷ್ಟಿ ದೋಷ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಮನೆಯ ಹೆಣ್ಣುಮಕ್ಕಳು ಆಗಲಿ ಅಥವಾ ಗಂಡುಮಕ್ಕಳು ಆಗಲಿ ಯಾರಾದರೂ ಮಾಡಬಹುದು. ಈ ಉಪಾಯವನ್ನು ಬೆಳಿಗ್ಗೆಯಿಂದ ರಾತ್ರಿ ತನಕ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು, ಈ ಉಪಾಯ ಮಾಡುವುದಕ್ಕೆ ನಿಮಗೆ ಬೇಕಾಗಿರುವುದು ಒಂದು ಬಿಳಿಹಾಳೆ ಹಾಗೂ ಕೆಂಪು ಬಣ್ಣದ ಪೆನ್ನು. ಈ ಉಪಾಯವನ್ನು ಸ್ನಾನ ಮಾಡಿದ ನಂತರವೇ ಮಾಡಬೇಕು ಹಾಗೂ ಪರಿಪೂರ್ಣವಾದ ನಂಬಿಕೆ ಇದ್ದರೆ ಮಾತ್ರ ಮಾಡಬೇಕು. ಬಿಳಿ ಹಾಳೆಯ ಮೇಲೆ ಮೊದಲಿಗೆ ಕೆಂಪುಬಣ್ಣದ ಪೆನ್ನಿನಿಂದ 1- 2- 27- 9 ಸಂಖ್ಯೆಯನ್ನು ಬರೆಯಬೇಕು. 1-ಸೂರ್ಯನಿಗೆ ಸಂಬಂಧಪಟ್ಟಿದ್ದು 2-ಗ್ರಹಗಳಿಗೆ ಸಂಬಂಧಪಟ್ಟಿದ್ದು 27-ನಕ್ಷತ್ರಗಳಿಗೆ ಸಂಬಂಧಪಟ್ಟಿದ್ದು 9-ಸಂಖ್ಯೆಗೆ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಅಶೋಕ್ (40) ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಕರನಿಗಾಗಿ ಗಂಡನನ್ನೇ ಕೊಲ್ಲಲು ಹೆಂಡತಿ ಸುಪಾರಿ ನೀಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. 2 ಲಕ್ಷ ರೂಪಾಯಿಗೆ ಗಂಡ ಅಶೋಕನನ್ನ ಕೊಲೆ ಮಾಡಲು ಪತ್ನಿ ಪುಷ್ಪ ಸುಪಾರಿ ನೀಡಿದ್ದಾಳೆ. ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸಲು ಮುನೀಂದ್ರ ಎಂಬಾತನಿಗೆ ಡೀಲ್ ಕೊಟ್ಟಿದ್ದಳು. ಸದ್ಯ ನಾಲ್ವರು ಆರೋಪಿಗಳನ್ನು ಸೂಲಿಬೆಲೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪ, ಪ್ರಿಯಕರ ದೇವರಾಜ್ ಮುನೀಂದ್ರ ಹಾಗೂ ಸಿದ್ದಪ್ಪ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಎಣ್ಣೆ ಪಾರ್ಟಿಗೆ ಎಂದು ಕರೆದುಕೊಂಡು ಹೋಗಿ ಅಶೋಕ್ ನನ್ನು ಆರೋಪಿಗಳು ಕೊಲೆ ಮಾಡಿದ್ದಾರೆ. ಜನವರಿ 24 ರಂದು ರಾಡ್ ನಿಂದ ಹೊಡೆದು ಅಶೋಕ್ನನ್ನು ಕೊಲೆ ಮಾಡಿದ್ದರು. ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಸಮೀಪ ಈ ಒಂದು ಕೊಲೆ ನಡೆದಿತ್ತು. ಅಪಘಾತದಂತೆ ಆರೋಪಿಗಳು ಬಿಂಬಿಸಿದ್ದರು. ಆದರೆ ಅಶೋಕನ ಶವ ನೋಡಿ ಗ್ರಾಮಸ್ಥರು ಕೊಲೆ ಅಂತ…
ಬೆಂಗಳೂರು : ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತ ಎಂದು ವಂಚಿಸಿದ್ದ ವ್ಯಕ್ತಿಯ ವಿರುದ್ಧ ಮತ್ತೊಂದು fir ದಾಖಲಾಗಿದೆ. ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ.ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಆಧರಿಸಿ ಇದೀಗ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ರಾಜ್ಯಪಾಲರ ಸಹಿ ನಕಲು ಮಾಡಿ ವಿಟಿಯು ಕುಲಪತಿಗಳಿಗೆ ಪತ್ರ ಬರೆದಿದ್ದು ವಿದ್ಯಾರ್ಥಿಯೊಬ್ಬನಿಗೆ ವೈದ್ಯಕೀಯ ಸೀಟ್ ಮಂಜೂರು ಮಾಡುವಂತೆ ಸುಜಯೇಂದ್ರ ಎಂಬಾತ ಪತ್ರ ಬರೆದಿದ್ದಾನೆ. 2025ರಲ್ಲಿ ರಾಜ್ಯಪಾಲರ ನಕಲಿ ಸಹಿ ಮಾಡಿ ಪತ್ರ ಬರೆದಿದ್ದ. ಲೋಕಭವನದ ಲೆಟರ್ ಹೆಡ್ ದುರ್ಬಳಕೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಕಲಿ ಸಹಿ ಮಾಡಿದ್ದ ಸುಜಯೇಂದ್ರ ವಿರುದ್ಧ FIR ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸದ್ಯ ವಿಧಾನಸೌಧ ಠಾಣೆಯಿಂದ ವಿಜಯನಗರ ಠಾಣೆಗೆ ಕೇಸ್ ವರ್ಗಾವಣೆ ಆಗಿದೆ. ಈ ಹಿಂದೆ ಜಮ್ಮು ಕಾಶ್ಮೀರ ವೈದ್ಯರೊಬ್ಬರಿಗೆ sujayendra ವಂಚನೆ ಎಸಗಿದ್ದ. ಬರೋಬ್ಬರಿ 2.5 ಕೋಟಿ ವಂಚನೆ ಎಸಗಿದ್ದ ವಂಚನೆ ಕೇಸ್ನಲ್ಲಿ…
ಬೆಂಗಳೂರು : ಲೋಕಾಯುಕ್ತ ಪೊಲೀಸರಿಂದ ಪಿ.ಐ ಗೋವಿಂದರಾಜು ಟ್ರ್ಯಾಕ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೆಪಿ ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಅಮಾನತು ಮಾಡಲಾಗಿದೆ. ಪಿ ಐ ಗೋವಿಂದರಾಜು ಅಮಾನತು ಮಾಡಿ ಇಲಖಾ ತನಿಖೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಲಾಗಿದೆ. ಪ್ರಕರಣ ಸಂಬಂಧಪಟ್ಟ ಗೋವಿಂದರಾಜ ಮತ್ತು ದೂರುದಾರನ ಆಡಿಯೋ ವೈರಲ್ ಆಗಿತ್ತು. ಚೀಟಿ ವ್ಯವಹಾರ ಪ್ರಕರಣ ಸಂಬಂಧ ನಾಲ್ಕು ಲಕ್ಷ ರೂಪಾಯಿ ಈ ಲಂಚಕ್ಕೆ ಕೆ ಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಡಿಮ್ಯಾಂಡ್ ಮಾಡಿದ್ದ. ಈ ಕುರಿತು ಆಡಿಯೋದಲ್ಲಿ ಹಿರಿಯ ಅಧಿಕಾರಿಗಳ ಹೆಸರುಗಳನ್ನು ಗೋವಿಂದರಾಜು ಹೇಳಿದ್ದ. ಲಂಚ ಪಡೆಯಲು ಹಿರಿಯ ಪೊಲೀಸ್ ಅಧಿಕಾರಿಗಳ ಬೆಂಬಲ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ಲಿಖಿತ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ಮಾಡಿ ವರದಿ ನೀಡಲು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.
ಬೆಂಗಳೂರು : ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದು, ಬೆಂಗಳೂರಿನ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕಾನೂನು, ಕನ್ನಡ ಮತ್ತು ಸಂಸ್ಕೃತಿ, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ತೋಟಗಾರಿಕೆ, ಪ್ರವಾಸೋದ್ಯಮ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಒಳಾಳಡಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆ ಜೊತೆ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಭವನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ತಿಳಿಸಿದರು.














