Author: kannadanewsnow05

ಬೆಂಗಳೂರು : ನಿನ್ನೆ ಅಕಾಲಿಕ ಮರಣ ಹೊಂದಿದ ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ನಟಿ ಲೀಲಾವತಿ ಅವರ ಸಾರ್ವಜನಿಕ ದರ್ಶನಕ್ಕೆ ಇಂದು ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರ ಇರಿಸಲಾಗಿದ್ದು ಇದೀಗ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನು ವಿಶೇಷ ಆಂಬುಲೆನ್ಸ್ ನಲ್ಲಿ ರವಾನಿಸಲಾಯಿತು. ಇದೆ ವೇಳೆ ಬೆಳಿಗ್ಗೆ 5:30 ರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುತ್ತಮುತ್ತಲಿನ ಹಳ್ಳಿಯ ಲೀಲಾವತಿಯವರ ಅಭಿಮಾನಿಗಳು ಹಾಗೂ ವಿನೋದ್ ರಾಜ್ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದುಕೊಂಡರು. ಅನೇಕ ಅಭಿಮಾನಿಗಳು ಸರಿನಲ್ಲಿ ನಿಂತು ಲೀಲಾವತಿಯವರ ಅಂತಿಮ ದರ್ಶನ ಪಡೆದು ಕೊಂಡು ಅಂತಿಮ ನಮನ ಸಲ್ಲಿಸಿದರು, ಇದೆ ವೇಳೆ ಪತ್ರ ವಿನೋದ್ ರಾಜ್  ಹಾಗೂ ಅವರ ಪತ್ನಿ ಮಗ ಕೂಡ ಬಹಳ ದುಃಖದಲ್ಲಿ ಇದ್ದದ್ದು ಕಂಡುಬಂದಿತು. ಲೀಲಾವತಿಯವರ ಪಾರ್ಥಿವ ಶರೀರ ರವಾನಿಯ ವೇಳೆ ಅವರ ಅಭಿಮಾನಿಗಳು ಜೈ ಘೋಷ ಕೂಗಿದರು. ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ತಿವ ಶರೀರವನ್ನು ರವಾನಿಸಲಾಗಿದ್ದು,…

Read More

ಬೆಳಗಾವಿ : ಪ್ರಸ್ತುತ ರಾಜ್ಯದಲ್ಲಿ 46,829 ಶಾಲೆಗಳ ಪೈಕಿ 23 ಶಾಲೆಗಳಲ್ಲಿ ಶೌಚಾಲಯವಿಲ್ಲ. ಉಳಿದ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇದೆ ಎಂದು ಹೇಳಿದರು. ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಕರ್ನಾಟಕದ 46,829 ಸರ್ಕಾರಿ ಶಾಲೆಗಳ ಪೈಕಿ 23 ಶಾಲೆಗಳಲ್ಲಿ ಮಾತ್ರ ಶೌಚಾಲಯವಿಲ್ಲ ಎಂದು ಸರ್ಕಾರ ಶುಕ್ರವಾರ ಅಧಿವೇಶನದಲ್ಲಿ ತಿಳಿಸಿದೆ. ರಾಜ್ಯದ 5,775 ಶಾಲೆಗಳಲ್ಲಿ ಹೊಸ ಶೌಚಾಲಗಳನ್ನು ನಿರ್ಮಿಸಲು ಡಿಸೆಂಬರ್ 1 ರಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿತು. ರಾಜ್ಯದ ಶೇ 85 ರಷ್ಟು ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಕಾಂಗ್ರೆಸ್ ಶಾಸಕ ಸಚಿವ ತನ್ವೀರ್ ಸೇಠ್ ಪ್ರಶ್ನಿಸಿದರು. ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಸುಧಾರಿಸುವ ಪ್ರಯತ್ನದ ಭಾಗವಾಗಿ, ಶಾಲೆಗಳಲ್ಲಿ ಹೊಸ…

Read More

ಕಲಬುರ್ಗಿ : ಪಿಎಸ್ಐ ನೇಮಕಾತಿ ಹಾಗೂ ಕೆಇಎ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದೆಲ್ಲೆಡೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನ ವೀಲಿನಗೊಳಿಸಿ ಒಂದೇ ಕಡೆ ವಿಚಾರಣೆ ನಡೆಸಲು ಆರೋಪಿ ಆರ್‌.ಡಿ. ಪಾಟೀಲ್ ಮನವಿ ಮಾಡಿದ್ದರು. ಅಲ್ಲಿವರೆಗೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಪಡೆದಿದ್ದರು. ಇದೀಗ ಆರ್‌.ಡಿ. ಪಾಟೀಲ್‌ಗೆ ನೀಡಲಾಗಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದೆ ಎಂದು ತಿಳಿದುಬಂದಿದೆ. ಎಲ್ಲಾ ಎಫ್‌ಐಆರ್‌ಗಳಿಗೆ ದಾಖಲಾದ ಪ್ರಕರಣಗಳನ್ನ ಒಂದೇ ಕಡೆ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಕಿಂಗ್‌ಪಿನ್ ಆರ್‌.ಡಿ. ಪಾಟೀಲ್ ಮೇಲ್ಮನವಿಗೆ ಹೈಕೋರ್ಟ್ ಪೀಠ ಪ್ರತಿಕ್ರಿಯೆ ನೀಡಿದೆ. ಸದ್ಯ ತಡೆಯಾಜ್ಞೆ ತೆರವು ಹಿನ್ನಲೆ ಪಿಎಸ್​ಐ ಕೇಸ್ ನಲ್ಲೂ ವಿಚಾರಣೆ ಸಾಧ್ಯತೆ ಇದೆ. ಈಗಾಗಲೇ ಆರ್.ಡಿ.ಪಾಟೀಲ್ ಕೆಇಎ ಪರೀಕ್ಷಾ ಅಕ್ರಮದ ವಿಚಾರಣೆ ಎದುರಿಸುತ್ತಿದ್ದಾರೆ. ಕಲಬುರಗಿ ಹೈಕೋರ್ಟ್ ಪೀಠ ಕಿಂಗ್‌ಪಿನ್ ಆರ್‌.ಡಿ. ಪಾಟೀಲ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ರಾಜ್ಯದೆಲ್ಲೆಡೆ ತನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನ ವೀಲಿನಗೊಳಿಸಿ ಒಂದೇ ಕಡೆ ವಿಚಾರಣೆ ನಡೆಸಲು…

Read More

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು ವಿಪಕ್ಷ ನಾಯಕರು ಸಭಾ ತ್ಯಾಗ ಹಾಗೂ ಧರಣಿ ಕುರಿತಂತೆ ಗೊಂದಲಗಳ ಕುರಿತು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ಸ್ಪಷ್ಟನೆ ನೀಡಿದ್ದು, ವಿಧಾನಸಭೆಯಲ್ಲಿ ಗುರುವಾರ ಸಭಾತ್ಯಾಗ ಮಾಡಬೇಕೋ ಅಥವಾ ಧರಣಿ ಮಾಡಬೇಕೋ ಎಂಬ ವಿಷಯದಲ್ಲಿ ಗೊಂದಲ ಇರಲಿಲ್ಲ. ಸಮನ್ವಯ ಕೊರತೆ ಇರುವುದರಿಂದ ಈ ರೀತಿ ಆಗಿದೆ ಎಂದು ಹೇಳಿದರು. ಸಭಾತ್ಯಾಗ ತೀರ್ಮಾನದ ಕುರಿತು ಬಿಜೆಪಿ ನಾಯಕರಲ್ಲಿ ಅಸಮಾಧಾನ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು, ನಾನು, ಯತ್ನಾಳ, ಅಶ್ವತ್ಥನಾರಾಯಣ, ವಿಜಯೇಂದ್ರ ಎಲ್ಲರೂ ಸೇರಿ ಸಭಾತ್ಯಾಗ ಮಾಡುವ ತೀರ್ಮಾನ ಮಾಡಿದ್ದೆವು. ಎಲ್ಲ ಹಿರಿಯರಿಗೂ ಇದು ಗೊತ್ತಿತ್ತು. ನಮ್ಮ ನಿರ್ಧಾರಗಳು ಹಿಂದಿನ ಸಾಲಿನಲ್ಲಿ ಇದ್ದವರಿಗೆ ಸರಿಯಾಗಿ ತಲುಪಿರಲಿಲ್ಲ ಎಂದರು. ನೀವು ಹೊಂದಾಣಿಕೆ ರಾಜಕಾರಣ (ಅಡ್ವಸ್ಟ್‌ಮೆಂಟ್ ಪಾಲಿಟಿಕ್ಸ್) ಮಾಡುತ್ತೀರಿ’ ಎಂದು ವಿಶ್ವನಾಥ್ ಆಪಾದಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಯಾರೋ ಏನೋ ಹೇಳಿದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರನ್ನು ಕರೆಯಿಸಿ ಮಾತನಾಡುತ್ತೇನೆ ಎಂದು ಅಶೋಕ…

Read More

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಮನಹಳ್ಳಿಯಲ್ಲಿ ಅವರು ಅಸ್ವಸ್ಥರಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಈ ವೇಳೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳಿದಿದ್ದಾರೆ. ಲೀಲಾವತಿ ಅವರ ಅಕಾಲಿಕ ನಿಧನಕ್ಕೆ ನಿರ್ಮಾಪಕ ಕೆ.ಮಂಜು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ಪಾರ್ಥಿವ ಶರೀರವನ್ನು ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇರಿಸಲಾಗಿದ್ದು ಈ ವೇಳೆ ಕೆ.ಮಂಜು ಸುದ್ದಿಗಾರರೊಂದಿಗೆ ಮಾತನಾಡಿ,ಲೀಲಮ್ಮ ಚಿತ್ರ ರಂಗಕ್ಕೆ ಅಮ್ಮ ಇದ್ದಂಗೆ ಎಂದು ನಿರ್ಮಾಪಕ ಕೆ ಮಂಜು ಹೇಳಿಕೆ ನೀಡಿದ್ದು, ಅವರೂ ಚಿತ್ರ ಮಾಡಬೇಕಾದರೆ ನಾನು ಹುಟ್ಟಿಯೇ ಇರಲಿಲ್ಲ. ಕೇವಲ ನಾನು ನಿರ್ಮಾಪಕನ ರೀತಿ ಅವರಿಗೆ ಪರಿಚಯ ಆಗಿಲ್ಲ. ಅವರು ನನ್ನನ್ನು ಮಗನಾಗಿ ನೋಡಿದ್ದರು ಎಂದು ಹೇಳಿದರು. ಯಾರಿಗೂ ಕೂಡ ಕೆಟ್ಟದ್ದನ್ನು ಬಯಸದಂತಹ ಒಂದು ಜೀವ ಅಂದ್ರೆ ಅದು ಲೀಲಮ್ಮ.ಇಂತಹ ತಾಯಿ ಮಗನನ್ನ ನಾನು ಎಲ್ಲಿಯೂ ನೋಡಿಲ್ಲ.ಸಿನಿಮಾ ರಂಗ, ಕೃಷಿ, ಮತ್ತು ಸಮಾಜಮುಖಿ ಕೆಲಸ ಇವು ಅಷ್ಟೇ ಅವರ ಕಾರ್ಯ…

Read More

ಬೆಂಗಳೂರು : ನಿನ್ನೆ ವಯೋಸಹಜ ಅನಾರೋಗ್ಯದಿಂದ ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅಂತಿಮ ದರ್ಶನದ ನಂತ್ರ, ಸಂಜೆ 4ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ. ಇದೆಲ್ಲದರ ಮಧ್ಯ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಪುತ್ರ ವಿನೋದ್ ರಾಜ್ ಒಂದೆಡೆ ಇದ್ದರೆ, ಪ್ರತಿದಿನ ಲೀಲಾವತಿ, ವಿನೋದ್ ರಾಜ್ ಸೋಲದೇವನ ಹಳ್ಳಿಯಲ್ಲಿರುವ ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಆದರೆ ಇದೀಗ ಬೀದಿ ನಾಯಿಗಳು ಮಾಲೀಕ ಊಟ ತರುತ್ತಾನೆ ಎಂದು ಕಾದು ಕುಳಿತಿರುವ ದೃಶ್ಯ ಮನ ಕಲಕುವಂತಿದೆ. ಕಳೆದ ಹಲವು ವರ್ಷಗಳ ಹಿಂದೆ ಲೀಲಾವತಿ ಹಾಗೂ ಪತ್ರ ವಿನೋದ್ ರಾಜ್ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಿ ಬಡವರಿಗೆ ಅನುಕೂಲವಾಗಲಿ ಎಂದು ಸಮಾಜ ಸೇವೆ ಮಾಡುತ್ತಾ ಬಂದಿದ್ದರು. ಅಲ್ಲದೇ ಇತ್ತೀಚಿಗೆ ಕೆಲವು ದಿನಗಳ ಹಿಂದೆ ಪಶು ವೈದ್ಯಕೀಯ ಶಾಲೆಯನ್ನು ಕೂಡ ನಿರ್ಮಾಣ ಮಾಡಿದ್ದೂ ಡಿಸಿಎಂ ಡಿ ಕೆ ಶಿವಕುಮಾರ್ ಅದನ್ನು ಉದ್ಘಾಟಿಸಿದರು.…

Read More

ಬೆಂಗಳೂರು : ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಹೊರ ರಾಜ್ಯದ ಡ್ರಗ್ಸ್‌ ಪೆಡ್ಲರ್‌ನನ್ನು ಸಂಪಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಜಯರಾಮ್ ದೇವಾಸಿ (37) ಬಂಧಿತ. ಈತನಿಂದ 2.80 ಲಕ್ಷ ರೂ. ಮೌಲ್ಯದ 1 ಕೆ.ಜಿ. 850 ಗ್ರಾಂ ತೂಕದ ಅಫೀಮು, ತೂಕದ ಯಂತ್ರ ಹಾಗೂ ಚೀಲವನ್ನು ಜಪ್ತಿ ಮಾಡಿದ್ದಾರೆ. ಇತ್ತೀಚೆಗೆ ಮಿಷನ್ ರಸ್ತೆಯ ಶ್ರೀನಿವಾಸ ಕಾಲನಿ ಕಡೆಯಿಂದ ಸಿಕೆಸಿ ಗಾರ್ಡನ್ ಕಡೆಗೆ ಹೋಗುವ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಯಲಹಂಕದಲ್ಲಿ ನೆಲೆಸಿದ್ದ. 6 ತಿಂಗಳಿಂದ ರಾಜಸ್ಥಾನ ಜೋಧಪುರ ಜಿಲ್ಲೆಯಿಂದ ಅಫೀಮು ಖರೀದಿಸಿ ಬೆಂಗಳೂರಿಗೆ ತಂದು ಗ್ರಾಹಕರನ್ನು ಹುಡುಕಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

Read More

ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ (85)ಅವರು ನಿನ್ನೆ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿನ್ನೆ ಅವರು ನಿಧನ ಹೊಂದಿದ್ದಾರೆ ಈ ನೆಲೆಯಲ್ಲಿ ಅವರ ಪುತ್ರ ವಿನೋದ್ ರಾಜ್ ಅವರ ಸೂಚನೆಯಂತೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿರುವ ತೋಟದ ಮನೆಯ ಗೇಟ್ ಮುಂಭಾಗದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಈಗಾಗಲೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಳೆದ 30 ವರ್ಷಗಳಿಂದ ತೋಟದ ಮನೆಯಲ್ಲಿ ಲೀಲಾವತಿ ನೆಲೆಸಿದ್ದರು ಎನ್ನಲಾಗುತ್ತಿದೆ.ಅಂತ್ಯಕ್ರಿಯೆಗೆ ತೋಟದ ಮನೆಯ ಗೇಟ್ ಮುಂಭಾಗ ಸ್ಥಳ ನಿಗದಿಪಡಿಸಲಾಗಿದೆ. ಪುತ್ರ ವಿನೋದ್ ರಾಜ್ ಸೂಚನೆಯಂತೆ ತೋಟದ ಮನೆಗೇಟ್ ಎದುರುಗಡೆ ಸಮಾಧಿ ಮಾಡಲಾಗುತ್ತದೆ. ಹಿಂದೂ ಸಂಪ್ರದಾಯದಂತೆ ಲೀಲಾವತಿಯವರ ಅಂತ್ಯಕ್ರಿಯೆ ನಡೆಯಲಿದೆ.ಅಂತ್ಯಕ್ರಿಯ ಸ್ಥಳದಲ್ಲಿ ಬ್ಯಾರಿಕೆಡ್ ಗಳನ್ನು ಅಳವಡಿಕೆ ಮಾಡಲಾಗುತ್ತಿದ್ದು, ಬರುವ ಗಣ್ಯರಿಗೆ ಪೊಲೀಸರಿಂದ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಕೆ ಲೀಲಾವದಿ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಲಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ…

Read More

ಬೆಂಗಳೂರು: ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.ಹುಳಿಮಾವು ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಳಿಮಾವು ಬಿ.ಜಿ. ರಸ್ತೆಯಲ್ಲಿರುವ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್ ಗಾಯಗೊಂಡವ. ವಿದ್ಯಾರ್ಥಿ ಕೈಗೆ ಆರು ಹೊಲಿಗೆ ಹಾಕಲಾಗಿದೆ ಎಂದು ತಿಳಿದುಬಂದಿದೆ.ಶಾಲಾ ಆಡಳಿತ ಮಂಡಳಿಯಿಂದ ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಸಿದಂತೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಹುಳಿಮಾವು ಪೊಲೀಸರು ತಿಳಿಸಿದ್ದಾರೆ. ದೂರು ಪರಿಶೀಲಿಸಿ ಕ್ರಮ ಶಾಲೆಯೊಂದರ ಶಿಕ್ಷಕಿ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಬಗ್ಗೆ ದೂರು ಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗುರುವಾರ ಮಾಹಿತಿ ಬಂದಿದೆ. ವಿಚಾರಣೆಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಶಾಲೆಗೆ ನೋಟಿಸ್‌ ಕೊಡಲಾಗುವುದು. ಶಾಲೆಯಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು…

Read More

ಮಂಗಳೂರು : ಸದಾ ಮುಸ್ಲಿಂ ಧರ್ಮದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡುತ್ತಿದ್ದ ಹಿಂದೂ ಸಂಘಟನೆಗಳಲ್ಲಿ ಭಜರಂಗ ದಳ ಕೂಡ ಒಂದು.ಆದರೆ ಇದೀಗ ಭಜರಂಗ ದಳದ ಕಾರ್ಯಕರ್ತನೊಬ್ಬ ತನ್ನ ಪಕ್ಕದ ಮನೆಯಲ್ಲಿರುವ ಮುಸ್ಲಿಂ ಯುವತಿಯನ್ನು ವಿವಾಹವಾಗಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತನನ್ನೇ ಮುಸ್ಲಿಂ ಯುವತಿಯೊಬ್ಬಳು ವರಿಸಿದ ವಿದ್ಯಮಾನ ನಡೆದಿದೆ. ಲವ್ ಜಿಹಾದ್ ವಿರುದ್ಧ ಧ್ವನಿ ಎತ್ತಿರುವ ಬಜರಂಗದಳದಲ್ಲೇ ಅಂತರ್ಧರ್ಮಿಯ ವಿವಾಹ ನಡೆದ ಬಗ್ಗೆ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಫೋಟೋ ಸಹಿತ ವೈರಲ್ ಆಗಿದೆ. ಮಂಗಳೂರಿನ ಸುರತ್ಕಲ್‌ನಲ್ಲಿ ಈ ಹಿಂದೂ-ಮುಸ್ಲಿಂ ಲವ್ ಸ್ಟೋರಿ ನಡೆದಿದೆ. ಸುರತ್ಕಲ್‌ನ ಪ್ರಶಾಂತ್ (31) ಎಂಬಾತನು ತನ್ನ ನೆರೆಮನೆಯ ಮುಸ್ಲಿಂ ಯುವತಿ ಆಯೇಷಾ (19) ಎಂಬಾಕೆಯನ್ನು ವಿವಾಹವಾಗಿದ್ದಾರೆ ಎಂದು ಪ್ರಶಾಂತ್‌ನ ಸ್ನೇಹಿತರು ಜಾಲತಾಣಗಳಲ್ಲಿ ಫೋಟೋ ಸಹಿತ ವೈರಲ್ ಮಾಡಿದ್ದಾರೆ. ಈ ನಡುವೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆಯೇಷಾ ನಾಪತ್ತೆಯಾಗಿರುವ ಬಗ್ಗೆ ಆಕೆಯ ಪೋಷಕರು ದೂರು ದಾಖಲಿಸಿದ್ದಾರೆ. ನ.30ರಂದು ಆಯೇಷಾ ಜೊತೆ ತೆರಳಿದ್ದ ಪ್ರಶಾಂತ್ ಆಕೆಯನ್ನು ವಿವಾಹವಾಗಿದ್ದರು.…

Read More