Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದರು. ಇದಕ್ಕೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಏಕನಾಥ ಶಿಂಧೆಗೆ ತಿರುಗೇಟು ನೀಡಿದ್ದು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮಾಜಿ ಆಗ್ತಾರೆ ‘ಮಹಾ’ ಸರ್ಕಾರವೇ ಬೀಳುತ್ತದೆ ಎಂದು ಭವಿಷ್ಯ ನುಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳುದ ಶಿಂಧೆ, ಪಕ್ಷಾಂತರ ನಿಷೇಧ ಕಾಯ್ದೆಯನ್ನು ಓದಲಿ.ನಮ್ಮ ಪಕ್ಷದಲ್ಲಿ ಅಂತಹ ಶಾಸಕರಿಲ್ಲ. ಬೇರೆ ಪಕ್ಷದ ಐದಾರು ಮಂದಿ ನಮ್ಮ ಜೊತೆಗಿದ್ದಾರೆ. ನಮ್ಮ ಜೊತೆ ಬಹಿರಂಗವಾಗಿ ಕೆಲವರು ಗುರ್ತಿಸಿಕೊಂಡಿದ್ದಾರೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಹೇಳಿಕೆ ನೀಡಿರುವ ಏಕನಾಥ್ ಶಿಂಧೆ ಅವರ ಸರ್ಕಾರ ಪತನವಾಗಲಿದೆ ಎಂದರು. ಕರ್ನಾಟಕದಲ್ಲಿ 89 ಶಾಸಕರು ಹೋದರೆ ಸರ್ಕಾರ ಬೀಳಬಹುದು. ಆದರೆ ಬಿಜೆಪಿ,ಜೆಡಿಎಸ್ ನಿಂದ 15, 20 ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ನಮ್ಮ ಸಂಪರ್ಕದಲ್ಲಿ ಅವರಿದ್ದಾರೆ. ಇದರ…
ಹುಬ್ಬಳ್ಳಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಕಳೆದ ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹಿರೇಮಠ್ ಹತ್ಯೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸದ್ಯದಲ್ಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದೆ. ಈ ಸಂಬಂಧ ಆರೋಪಿ ಯುವಕ ಫಯಾಜ್ನನ್ನು ಪೊಲೀಸರು ಬಂಧಿಸಿದ್ದರು.ಆರಂಭದಲ್ಲಿ ಆರೋಪಿ ಫಯಾಜ್ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದ ಸಿಐಡಿ ಅಧಿಕಾರಿಗಳ ತಂಡ ಕೊಲೆ ನಡೆದ ಸ್ಥಳ, ಚಾಕು ಖರೀದಿಸಿದ ಸ್ಥಳ ಹಾಗೂ ಕ್ಯಾಂಪಸ್ನಲ್ಲಿ ದ್ವಿಚಕ್ರವಾಹನ ನಿಲ್ಲಿಸಿದ್ದ ಸ್ಥಳ ಸೇರಿದಂತೆ ಹಲವು ಕಡೆ ಕರೆದೊಯ್ದು ಸ್ಥಳ ಮಹಜರು ನಡೆಸಿತ್ತು. ಜೊತೆಗೆ ವಿದ್ಯಾರ್ಥಿನಿ ನೇಹಾಳ ಪೋಷಕರ ವಿಚಾರಣೆಯನ್ನೂ ನಡೆಸಲಾಗಿತ್ತು. ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ, ಹೋರಾಟ ನಡೆಸಿದ್ದವು. ಘಟನೆಯು ಸಾರ್ವಜನಿಕ ವಲಯದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆ…
ದಾವಣಗೆರೆ : ದಾವಣಗೆರೆಯಲ್ಲಿ ಒಂದು ಮನಕಲಕುವ ಘಟನೆ ನಡೆದಿದ್ದು, ತನ್ನ ತಂದೆಯ ಸಾವಿನಿಂದ ಮನನೊಂದ ಮಗನೊಬ್ಬ ಮನನೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಸಮೀಪದ ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಹೌದು, ಚೀಲಾಪುರ ಗ್ರಾಮದ ಚಂದ್ರನಾಯ್ಕ (65) ಗುರುವಾರ ಬೆಳಗ್ಗೆ ಮೃತಪಟ್ಟಿದ್ದರು. ಇದರಿಂದ ಬೇಸತ್ತು ಪುತ್ರ ಶಿವಕುಮಾರ್ (32) ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 8 ವರ್ಷಗಳ ಹಿಂದೆ ಕಬ್ಬು ಕಟಾವು ಮಾಡುವ ವೇಳೆ ಶಿವಕುಮಾರ್ ಕೈ ತುಂಡಾಗಿತ್ತು. ಹಾಗಾಗಿ ಅವರ ತಂದೆ ಶಿವಕುಮಾರ್ ಗಾಗಿ ಎಲ್ಲಕಡೆಗೂ ಆಸ್ಪತ್ರೆಗೆ ತೋರಿಸಿ ಸಾಲ ಸೋಲ ಮಾಡಿ ಆತನ ಆರೈಕೆ ಮಾಡಿದ್ದರು. ಹೀಗಾಗಿ ತಂದೆಯ ಸಾವಿನ ನಂತರ ತನ್ನ ಮುಂದಿನ ಭವಿಷ್ಯ ಏನು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಿವಕುಮಾರ ಸಹೋದರ ರವಿಕುಮಾರ್ ತಿಳಿಸಿದ್ದಾರೆ.ಘಟನೆ ಕುರಿತಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ ವಿಜಯಪುರದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರಿನ ಸಂಸ್ಕರಣ ಘಟಕದಲ್ಲಿ ಕಾಣೆಯಾಗಿದೆ ಮೂವರು ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ಶವಗಳು ಪತ್ತೆ ಆಗಿವೆ. ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9) ವಿಜಯ ಅನಿಳ ದಹಿಂಡೆ (7) ಮತ್ತು ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಬಾಲಕರು ಎಂದು ಹೇಳಲಾಗುತ್ತಿದೆ. ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಗಾಗಿ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಟಿಟಿಸಿವಿಯಲ್ಲಿ ಸೆರೆಯಾಗಿದ್ದು, ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರಣ…
ಬೆಂಗಳೂರು : ಮಹಾರಾಷ್ಟ್ರದ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಕೂಡ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಹಿಂದೆ ಹೇಳಿಕೆ ಇದೀಗ ಬಾರಿ ಸಂಚಲನ ಸೃಷ್ಟಿಸಿದೆ. ಈ ಒಂದು ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ್ ಉತ್ತರಿಸಿದ್ದಾರೆ. ಬಿವೈ ವಿಜಯೇಂದ್ರ ಹೇಳಿದ್ದೇನು? ಇನ್ನು ಇದೇ ವಿಷಯವಾಗಿ ಬಿವೈ ವಿಜಯೇಂದ್ರ ಮಾತನಾಡಿದ್ದು ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇವೆ ಸರ್ಕಾರ ಬಿಡಿಸುವ ಕೆಲಸ ನಾವು ಮಾಡುವುದಿಲ್ಲ ಆದರೆ ಚುನಾವಣಾ ರಿಸಲ್ಟ್ ಸರಕಾರದ ಮೇಲೆ ಪರಿಣಾಮ ಬೀರುತ್ತದೆ ಯಾವ ರೀತಿ ಪರಿಣಾಮ ಬೀಳುತ್ತೆ ಎಂಬುದಕ್ಕೆ ನಾವು ಹೊಣೆಗಾರರಲ್ಲ. ವಿರೋಧ ಪಕ್ಷದಲ್ಲೇ ನಾವು ಜವಾಬ್ದಾರಿಯಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಅಶ್ವಥ್ ನಾರಾಯಣ ಹೇಳಿದ್ದೇನು? ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಯುತ್ತಿದ್ದು ಇದೀಗ ವಿಚಾರಣೆಯನ್ನು ಕೋರ್ಟ್ 2.45ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಾಹ್ನ 2:45 ಕ್ಕೆ ವಿಚಾರಣೆಯನ್ನು ಮುಂದೂಡಿತು. ಕಳೆದ ಎರಡು ಗಂಟೆಯಿಂದ ಎಚ್ಡಿ ರೇವಣ್ಣ ಅವರ ಜಾಮಿನ್ ಅರ್ಜಿ ವಿಚಾರಣೆ ನಡೆಯುತ್ತಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಮತ್ತು ಪ್ರತಿವಾದ ನಡೆಯುತ್ತಿದೆ. ಶಾಸಕ ಎಚ್ ಡಿ ರೇವಣ್ಣ ಪರ ಸಿ ಎಸ್ ನಾಗೇಶ್ ಅವರು ವಾದ ಮಾಡುತ್ತಿದ್ದಾರೆ. ಎಸ್ ಐ ಟಿ ಪರ ಎಸ್ಪಿಪಿ ಜಾಯ್ನ ಕೊಥರಿ ಅವರು ವಾದ ಮಾಡುತ್ತಿದ್ದಾರೆ.
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್ ಐ ಟಿ ಅಧಿಕಾರಿಗಳು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು ಈ ಒಂದು ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮೊಬೈಲ್ಗಳಲ್ಲಿ ಯಾವುದೇ ಕಾರಣಕ್ಕೂ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಎಂದು ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಯುತ್ತಿರುವಾಗ ಆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹೇಳಿಕೆಯನ್ನು ನೀಡಿದರು. ಯಾರು ಏನು ಮಾಡಿದ್ದಾರೆ ಅಂತ ತನಿಖೆಯ ಮೂಲಕ ಗೊತ್ತಾಗುತ್ತದೆ ಯಾವುದೇ ಕಾರಣಕ್ಕೂ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಳ್ಳಬೇಡಿ ಫಾರ್ವರ್ಡ್ ಮಾಡಬೇಡಿ ಅಂತ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ. ಇಂದಿನವರೆಗೂ ಜವಾಬ್ದಾರಿಯುತ ವ್ಯಕ್ತಿಯಾಗಿ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು. ಈ ರೀತಿ ಆದರೆ ಒಂದುವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು.…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆ ಚಟ್ನಳ್ಳಿ ಬಳಿ ನಡೆದಿದೆ.ಆದರೆ ಡಿಕ್ಕಿ ಹೊಡೆದ ಕ್ಯಾಂಟರ್ ಚಾಲಕ ನೋಡಿಯೂ ನೋಡದಂತೆ ಪರಾರಿಯಾಗಿದ್ದಾನೆ. ಗಾನವಿ (17) ಮೃತ ದುರ್ದೈವಿ ಎಂದು ಹೇಳಲಗುತ್ತಿದೆ. ಘಟನೆಯಲ್ಲಿ ಈಕೆಯ ತಾಯಿ ಹಾಗೂ ಅಜ್ಜಿ ಗಾಯಗೊಂಡಿದ್ದಾರೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಕಾಲೇಜಿನ ಎದುರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ವೇಗವಾಗಿ ಬಂದ ಕ್ಯಾಂಟರ್ ಆಟೋಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಎಡಕ್ಕೆ ಬಿದ್ದಿದೆ. ಆಟೋ ಎಡ ಭಾಗದಲ್ಲಿದ್ದ ಗಾನವಿ ಮೊದಲು ನೆಲಕ್ಕೆ ಬಿದ್ದಿದ್ದಾಳೆ. ಇದರಿಂದ ಆಕೆಯ ಹೊಟ್ಟೆ ಭಾಗಕ್ಕೆ ತೀವ್ರವಾಗಿ ಹೊಡೆತ ಬಿದ್ದಿದೆ. ಪರಿಣಾಮ ರಕ್ತಸ್ರಾವದಿಂದ ಗಾಯಗೊಂಡಿದ್ದ ಗಾನವಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ. ಈಕೆಯ ತಾಯಿ ಹಾಗೂ ಅಜ್ಜಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತಂತೆ ಚೀಲೂರಿನಲ್ಲಿ ಪೊಲೀಸರು ಕ್ಯಾಂಟರ್ ಹಾಗೂ ಚಾಲಕನನ್ನು ವಶಕ್ಕೆ…
ಚಿಕ್ಕಮಗಳೂರು : ಜಿಲ್ಲೆಯ ಆಲ್ದೂರು ಸಮೀಪದ ಕಂಚಿನಕಲ್ಲು ದುರ್ಗದ ಖಾಸಗಿ ಕಾಫಿತೋಟದಲ್ಲಿ ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ಲದೆ ಮೃತ ಪಟ್ಟಿರುವ ಆನೆ ಆಲ್ದೂರು ಸಮೀಪ ಕಾರ್ಮಿಕ ಮಹಿಳೆಯೋರ್ವರನ್ನು ತುಳಿದು ಸಾಯಿಸಿತ್ತು. ಮನುಷ್ಯರ ಮೇಲೆ ದಾಳಿ ಮಾಡಿ ಸಾಯಿಸುತ್ತಿದ್ದ ಆನೆಯೇ ಈಗ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಆನಂದ ಪೂಜಾರಿ ಎಂಬುವರನ್ನು ಕಾಡಾನೆ ತುಳಿದು ಸಾಯಿಸಿತ್ತು. ಕೆಲ ತಿಂಗಳ ಹಿಂದೆಯೂ ಇದೇ ಭಾಗದಲ್ಲಿ ಕಾರ್ಮಿಕರೊಬ್ಬರನ್ನು ತುಳಿದು ಸಾಯಿಸಿತ್ತು. ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆ ಸಾವನ್ನಪ್ಪಿರುವ ಜಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ವಿದ್ಯುತ್ ಲೈನ್ ಪಕ್ಕದಲ್ಲಿ ಹಲಸಿನ ಮರವೂ ಇದೆ. ಆನೆ ಹಲಸಿನ ಹಣ್ಣು ತಿನ್ನುವ ಪ್ರಯತ್ನದಲ್ಲಿ ವಿದ್ಯುತ್ ತಂತಿಗೆ ದೇಹ ತಾಗಿ ಮೃತಪಟ್ಟಿದೆ. ಪಕ್ಕದಲ್ಲಿರುವ ಹಲಸಿನ ಮರದ ಕೊಂಬೆ ಮುರಿದು ಬಿದ್ದಿದೆ.ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ NCB ಅಧಿಕಾರಿಗಳು ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಸುಮಾರು 15 ಕೋಟಿಗೂ ಮೌಲ್ಯದ ಅಧಿಕ ಗಾಂಜಾವನ್ನು ಇದೀಗ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಜಪ್ತಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ NCB ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು. ಹಾಗಾಗಿ ಖಚಿತವಾದಂತ ಮಾಹಿತಿಯನ್ನು ಪಡೆದುಕೊಂಡು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಹಾಗೂ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.