Author: kannadanewsnow05

ಮೈಸೂರು : ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹಾಗೂ ರೈತರಿಗೆ ಈ ವರ್ಷ ಭಾರಿ ಮಳೆ ಆಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಹಳ್ಳಕೊಳ್ಳ ನದಿ ಸೇರಿದಂತೆ ಎಲ್ಲಾ ಡ್ಯಾಮ್ ಗಳು ಭರ್ತಿಯಾಗಿ ತುಂಬಿವೆ. ಇದೀಗ ಕಬಿನಿ ಜಲಾಶಯ ಕೂಡ ತುಂಬಿದ್ದು ಇದೇ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಹೌದು ಜುಲೈ 29 ರಂದು ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಬಾಗಿನ ಅರ್ಪಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಬಿನಿ ಡ್ಯಾಮ್ ಗೆ ಸಿದ್ದರಾಮಯ್ಯ ಬಾಗಿನ ಅರ್ಪಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್,ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Read More

ಬೆಂಗಳೂರು : ಆಗ ತಾನೇ ಜನಿಸಿದ ಮಕ್ಕಳಿಗೆ ಆಹಾರ ತಿನ್ನಿಸಲು ತಾಯಂದಿರು ಸೆರೆಲಾಕ್ ಅನ್ನು ಬಳಸುತ್ತಾರೆ. ಆದರೆ ಈ ಒಂದು ಬಾಕ್ಸ್ ಇದೀಗ ಸಮಾಜದ ಘಾತುಕ ಕೆಲಸಕ್ಕೆ ಬಳಸಿದ್ದು, ಸೆರೆಲ್ಯಾಕ್ ಬಾಕ್ಸ್ ನಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವನ್ನನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸಪುರದ ಬಳಿಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬೆಂಗಳೂರಿನಲ್ಲಿ ಪೊಲೀಸರು ಎಷ್ಟೇ ಕರೀನಾ ಕಮ ಕೈಗೊಂಡರು ಕೂಡ ಶಾಲಾ ಕಾಲೇಜುಗಳಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಲೀಲಾಜಾಲವಾಗಿ ನಡೆಯುತ್ತಿದೆ. ಇದೀಗ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸೆರೆಲಾಕ್ ಬಾಕ್ಸ್ ಇಟ್ಟು ಆರೋಪಿಯೂ ಡ್ರಗ್ಸ್ ಮಾರುತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯಿಂದ 6 ಕೋಟಿ ಮೌಲ್ಯದ ನಾಲ್ಕು ಕೆಜಿ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸಪುರದ ಬಾಡಿಗೆ ಮನೆಯಲ್ಲಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ಸೆರೆಲಾಕ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡಲಾಗಿತ್ತು. ನಂತರ ಆರೋಪಿಯು ಸಣ್ಣ ಸಣ್ಣ ಪ್ಯಾಕ್ ಮಾಡಿ ಆರೋಪಿ…

Read More

ಬೆಂಗಳೂರು : ನಾನು 40 ವರ್ಷಗಳ ಕಾಲ ಕಳಂಕರಹಿತ ರಾಜಕೀಯ ಜೀವನ ನಡೆಸಿದಕ್ಕೆ ನನ್ನ ಮೇಲಿನ ಹೊಟ್ಟೆ ಕಿಚ್ಚಿನಿಂದ ವಿರೋಧ ಪಕ್ಷದವರು ವೈಯಕ್ತಿಕ ದಾಳಿ ಮಾಡಿ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮ೦ತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ, ಮುಡಾ ನಿವೇಶನ ಹಂಚಿಕೆ ಹಗರಣ ಮತ್ತು ವಾಲ್ಮೀಕಿ ನಿಗಮ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಪಕ್ಷಗಳು ಘೋಷಣೆಗಳನ್ನು ಕೂಗಿದವು. ಗದ್ದಲದ ನಡುವೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷಗಳ ಕಾಲ ಹಿತ ರಾಜಕೀಯ ಜೀವನ ನಡೆಸಿದ್ದೇನೆ ಇದರಿಂದಾಗಿ ವಿಪಕ್ಷಗಳು ಹೊಟ್ಟೆಕಿಚ್ಚಿನಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಿ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. 2016ರಲ್ಲಿ ನಾನು ಆಗಿದ್ದಾಗಲೂ ಸೈಟ್ ಪಡೆದಿರಲಿಲ್ಲ. 2021ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ 50:50 ಹಂಚಿಕೆ ನಿಯಮ ಮಾಡಿ, ಅವರ ಅವಧಿಯಲ್ಲೇ ನಮ್ಮ ಕುಟುಂಬಕ್ಕೆ ಸೈಟ್ ಹಂಚಿಕೆ ಮಾಡಲಾಗಿದೆ. ಇಂತಹ ಜಾಗದಲ್ಲೇ ಸೈಟ್ ಬೇಕು ಎಂದು ನಾನು ಕೇಳಿರಲಿಲ್ಲ. ಹಂಚಿಕೆಯು ಕಾನೂನು…

Read More

ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ಕರಾವಳಿ ಭಾಗದಲ್ಲಿ ವರುಣನ ಅಬ್ಬರದಿಂದ ಭಾರಿ ಆವಾಂತರಗಳು ಸೃಷ್ಟಿಯಾಗುತ್ತಿವೆ ಈ ಹಿನ್ನಲೆಯಲ್ಲಿ ಇಂದು ಆರು ಜಿಲ್ಲೆಗಳಲ್ಲಿನ ಹಲವು ತಾಲೂಕಿನ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ 6 ತಾಲೂಕುಗಳಿಗೆ ರಜೆ ಘೋಷಿಸಿದ್ದು, ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹೊಳೆನರಸೀಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೆ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು,  ಹಾವೇರಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡದ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಉತ್ತರ ಕನ್ನಡದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಡಿಯ, ಹಳಿಯಾಳ, ಯಲ್ಲಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಲ್ಲಿ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ರಜೆ ಘೋಷಿಸಲಾಗಿದೆ.

Read More

ಉಡುಪಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ದಿನ ಕಳಿಯುತಿದ್ದಾರೆ. ಈಗಾಗಲೇ ಅವರ ಕುಟುಂಬಸ್ಥರು ಆಗಾಗ ಭೇಟಿ ನೀಡುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಕೂಡ ನಟ ದರ್ಶನ ಅವರಿಗೆ ಧೈರ್ಯ ಹೇಳುತ್ತಿದ್ದಾರೆ. ಅಲ್ಲದೆ ಕಾನೂನು ಹೋರಾಟದ ಕುರಿತು ವಕೀಲರೊಂದಿಗೂ ಚರ್ಚಿಸುತ್ತಿದ್ದಾರೆ. ಇದೀಗ ಗಂಡನನ್ನು ಬಿಡಿಸಿಕೊಳ್ಳಲು ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ತಾಯಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಬಂದು ವಿಜಯಲಕ್ಷ್ಮೀ ಅವರು ದರ್ಶನ ಪಡೆದಿದ್ದಾರೆ. ಶುಕ್ರವಾರ ಅಂದರೆ ಇಂದು ಬೆಳಗ್ಗೆ ಅವರು ನವ ಚಂಡಿಕಾ ಹೋಮ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್​ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಭೀಕರವಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಬಳಿ ಎಸ್‌ಬಿಐ ಬ್ಯಾಂಕ್ ಹತ್ತಿರ ಪಾತ್ರೆ ಅಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಪಾತ್ರೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ದಾಸ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ. ಹೌದು ಬೆಂಗಳೂರಲ್ಲಿ ರಾತ್ರೋರಾತ್ರಿ ಸಿಲಿಂಡರ್ ಸ್ಫೋಟವಾಗಿದ್ದು, ಸ್ಫೋಟದ ಭಯಾನಕದ ದೃಶ್ಯ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಾಂಬ್ ಬ್ಲಾಸ್ಟ್ ಎಂದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಹುಳಿಮಾವು ಏರಿಯಾದ ಎಸ್ ಬಿ ಐ ಬ್ಯಾಂಕ್ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಟೀಲ್ ಪಾತ್ರೆ ಅಂಗಡಿಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ 10.35 ಸುಮಾರಿಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಆ ಸ್ಪೋಟದಲ್ಲಿ ರಾಹುಲ್ ದಾಸ್ ಎಂಬತನಿಗೆ ಗಾಯವಾಗಿದೆ. ಶೆಟರ್ ಮುಚ್ಚಿ ಕೆಲಸಗಾರ ರಾಹುಲ್ ದಾಸ್ ಅಂಗಡಿ ಒಳಗಿದ್ದ ಎಂದು ಹೇಳಲಾಗುತ್ತಿದೆ. ತಕ್ಷಣ ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೋಟಕ್ಕೆ ಅಕ್ರಮ ಗ್ಯಾಸ್ ರಿಫಲಿಂಗ್ ಗೆ ಕಾರಣ? ಸ್ಪೋಟಕ್ಕೆ ಅಕ್ರಮ ಗ್ಯಾಸ್ ರಿಫಲಿಂಗ್ ಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಲಿಸುವ ರೈಲಿಗೆ ಅಡ್ಡಮಲಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡವನನ್ನು ಪಶ್ಚಿಮ ಬಂಗಾಳ ಮೂಲದ ಸುಶಾಂತ್ (40) ಎಂದು ಗುರುತಿಸಲಾಗಿದೆ. ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಮೇಲ್ವಿಚಾರ ಕನಾಗಿ ಕೆಲಸ ಮಾಡುತ್ತಿದ್ದ. ಗುರುವಾರ ಮಧ್ಯಾಹ್ನ ಕೆಎಸ್‌ಆ‌ರ್ ರೈಲು ನಿಲ್ದಾಣದ 8ನೇ ಅಂಕಣಕ್ಕೆ ಬಂದಿದ್ದ. ಇದೇ ಸಮಯಕ್ಕೆ ಬೆಂಗಳೂರಿನಿಂದ ಮೈಸೂರು ಕಡೆಗೆ ಒಡೆಯ‌ರ್ ಎಕ್ಸ್‌ಪ್ರೆಸ್ ರೈಲು ಹೊರಟ್ಟಿದೆ. ಈ ವೇಳೆ ಏಕಾಏಕಿ ಗೆ ಲಿವತ್ ಓಡಿ ಬಂದಿರುವ ಸುಶಾಂತ್ ಹಳಿಗೆ ಅಡ್ಡಲಾಗಿ ಮಲಗಿದ್ದಾನೆ. ಈ ವೇಳೆ ರೈಲು ಚಕ್ರ ಆತನ ಕುತ್ತಿಗೆ ಮೇಲೆ ಹರಿದ ಪರಿಣಾಮ ರುಂಡ ಮತ್ತು ಮುಂಡ ಬೇರ್ಪಟ್ಟು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗುರುವಾರ ಮಧ್ಯಾಹ್ನ ಸುಮಾರು 3.20ಕ್ಕೆ ಕೆಎಸ್‌ಆರ್ ರೈಲು ನಿಲ್ದಾಣದ 8ನೇ ಅಂಕಣ ದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಬಂಗಾಳದಲ್ಲಿರುವ…

Read More

ಬೆಂಗಳೂರು : ಮೂರೂವರೆ ವರ್ಷಗಳ ಬಳಿಕ ತುಮಕೂರು ರಸ್ತೆಯ ಪೀಣ್ಯ ಮೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿರುವ ಸಂಚಾರ ವಿಭಾಗದ ಪೊಲೀಸರು, ಜು.29ರಂದು ಸೋಮವಾರ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇಲ್ಲೇತುವೆಗೆ ದುರಸ್ತಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಆರಂಭಿಸಿತ್ತು. ಈ ದುರಸ್ತಿ ಕಾರಣಕ್ಕೆ 2021ರ ಡಿಸೆಂಬರ್ ನಲ್ಲೇ ಮೇಲೇತುವೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದ ಪೊಲೀಸರು, ಕಾಮಗಾರಿ ಒಂದು ಹಂತ ಮುಗಿದ ಬಳಿಕ 2022ರ ಫೆ.27 ರಂದು ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ ಆದೇಶಿಸಿದ್ದರು. ಈಗ ಕಾಮಗಾರಿ ಭಾಗಶಃ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲ್ಲ ವಾಹನಗಳ ಓಡಾಟಕ್ಕೆ ಅವಕಾಶ ಸಿಕ್ಕಿದೆ. ಮೇಲೇತುವೆಯಲ್ಲಿ ಬಸ್‌ಗಳು ಸೇರಿದಂತೆ ಭಾರಿ ವಾಹನಗಳ ಓಡಾಟಕ್ಕೂ ಅವಕಾಶ ನೀಡುವಂತೆ ಎನ್‌ಎಚ್‌ಎ ಹಾಗೂ ಪೊಲೀಸರಿಗೆ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಮನವಿಗಳು ಸಲ್ಲಿಕೆಯಾಗಿದ್ದವು. ಈ ಮನವಿಗೆ ಕೊನೆಗೂ ಸ್ಪಂದಿಸಿದ ಪೊಲೀಸರು, 2.290 ಸೋಮವಾರ ಬೆಳಗ್ಗೆಯಿಂದ ಮೇಲೇತುವೆ ಯಲ್ಲಿ…

Read More

ಬೆಂಗಳೂರು : ರಾಜ್ಯದ ಭೋವಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 120 ಫಲಾನುಭವಿಗಳ ಹೆಸರಿನಲ್ಲಿ ಸಾಲ ಮಂಜೂರಾತಿ ಮಾಡಿ 60 ಕೋಟಿ ರೂ.ಅವ್ಯವಹಾರ ನಡೆಸಿದ್ದು, ಈ ಹಣವನ್ನು 100ಕ್ಕೂ ಹೆಚ್ಚಿನ ಖಾತೆಗಳಿಗೆ ವರ್ಗಾಯಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ಸೇರಿದಂತೆ 27 ಮಂದಿ ಜೇಬಿಗಿಳಿಸಿಕೊಂಡಿರುವ ಮಹತ್ವದ ಸಂಗತಿ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ)ದ ತನಿಖೆಯಲ್ಲಿ ಬಯಲಾಗಿದೆ. ಹೌದು ಇತ್ತ ಬಿಜೆಪಿ ವಾಲ್ಮೀಕಿ ಹಗರಣ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಸಿಎಂ ಸಿದ್ದರಾಮಯ್ಯ ಬಿಜೆಪಿ ಅವಧಿಯ ಕಾಲದಲ್ಲಿನ ಹಗರಣಗಳನ್ನು ಒಂದೊಂದಾಗಿ ಬಿಚ್ಚಿಡುತ್ತಾ ಹೋದರು. ಬಿಜೆಪಿ ಕಾಲದಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಬೇಟೆಯನ್ನು ಕಾಂಗ್ರೆಸ್‌ ಆರಂಭಿಸಿದೆ. ಆ ಸಂಬಂಧ ಭೋವಿ ಹಗರಣ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದೆ. ಹಗರಣ ಸಂಬಂಧ ಭೋವಿ ಅಭಿವೃದ್ಧಿನಿಗಮದಲ್ಲಿ ಸಂಗ್ರಹಿಸಿದ ದಾಖಲೆಗಳು ಹಾಗೂ ಬಂಧಿತ ಆರೋಪಿಯಾಗಿರುವ ನಿಗಮದ ಕಚೇರಿಯ ಅಧೀಕ್ಷಕ ಸುಬ್ಬಪ್ಪ ವಿಚಾರಣೆ ವೇಳೆ ಹೇಳಿದ ಮಾಹಿತಿ ಆಧರಿಸಿ ಅಕ್ರಮವು 60 ಕೋಟಿ ರು. ಎನ್ನುವುದು ಖಚಿತವಾಗಿದೆ. ದಾಖಲೆ ಶೋಧ ಮುಂದುವರೆದಿದ್ದು,…

Read More

ನವದೆಹಲಿ : ಖನಿಜಗಳ ಮೇಲಿನ ರಾಯಧನವು (ರಾಯಲ್ಟಿ) ತೆರಿಗೆ ಅಲ್ಲ. ಗಣಿಗಳು ಹಾಗೂ ಖನಿಜ ಹೊಂದಿರುವ ಭೂಮಿಗಳ ಮೇಲೆ ತೆರಿಗೆ ಹೇರುವ ಶಾಸನಾತ್ಮಕ ಅಧಿಕಾರವನ್ನು ರಾಜ್ಯಗಳು ಮಾತ್ರ ಹೊಂದಿವೆ’ ಎಂದು ಸುಪ್ರೀಂಕೋರ್ಟ್‌ 8:1 ಬಹುಮತದ ತೀರ್ಪು ನೀಡಿದೆ. 9 ಸದಸ್ಯ ಬಲದ ಸಾಂವಿಧಾನಿಕ ಪೀಠದ ಈ ತೀರ್ಪಿನಿಂದಾಗಿ ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಜಾರ್ಖಂಡ್‌ ಹಾಗೂ ಒಡಿಶಾದಂತಹ ಖನಿಜ ಸಂಪತ್ತಿನ ರಾಜ್ಯಗಳಿಗೆ ಈ ತೀರ್ಪು ಮತ್ತಷ್ಟು ಆದಾಯದ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಖನಿಜಗಳ ಮೇಲಿನ ರಾಯಧನ ಎಂಬುದು ತೆರಿಗೆಯೇ? ಖನಿಜಗಳನ್ನು ಹೊರತೆಗೆಯುವುದಕ್ಕೆ ತೆರಿಗೆ ಹೇರುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆಯೇ? ಅಥವಾ ರಾಜ್ಯಗಳೂ ಅದರಲ್ಲಿ ಅಧಿಕಾರ ಹೊಂದಿವೆಯೇ? ಅಥವಾ ತಮ್ಮ ವ್ಯಾಪ್ತಿಯಲ್ಲಿ ಖನಿಜ ಹೊಂದಿರುವ ಭೂಮಿಗಳ ಮೇಲೆ ತೆರಿಗೆ ಹೇರುವ ಅಧಿಕಾರ ರಾಜ್ಯಗಳಿಗೆ ಇದೆಯೇ? ಎಂಬುದು ಬಹಳ ಬಿಕ್ಕಟ್ಟಿನ ವಿಷಯವಾಗಿತ್ತು. ಈ ಕುರಿತು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ಇತರೆ ಏಳು ನ್ಯಾಯಮೂರ್ತಿಗಳು ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ.…

Read More