Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೆ ಬಿಬಿಎಂಪಿ ಆಸ್ತಿ ವಿಭಾಗದ ಅಧಿಕಾರಿ ಒಬ್ಬ ಲೈಂಗಿಕ ದೌರ್ಜನ್ ಎಸಯಾಗಿದ್ದು ತನ್ನ ಕೊಠಡಿಗೆ ಕರೆಸಿ ಬಾಯಿಗೆ ಬಂದ ಹಾಗೆ ಅವಾಚ್ಯಪದಗಳಿಂದ ನಿಂದಿಸಿರುವ ಆರೋಪ ಇದೀಗ ಮಹಿಳಾ ಸಿಬ್ಬಂದಿಗಳು ಆರೋಪಿಸುತ್ತಿದ್ದಾರೆ. ಹೌದು ಬಿಬಿಎಂಪಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ದೌರ್ಜನ್ಯ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬರುತ್ತಿದೆ. ರಜೆ ಹಾಕಿದರೆ ಎಚ್ಐವಿ ಬಂದಿದ್ಯ? ಅಂತ ಕೇಳುತ್ತಾನೆ. ನಿನ್ನನ್ನು ಯಾರಾದ್ರೂ ರೇಪ್ ಮಾಡಿ ಬಿಸಾಕಿದ್ರಾ? ಎಂದು ಮಹಿಳಾ ಸಿಬ್ಬಂದಿಗಿ ಕೆಟ್ಟ ಪದಗಳಿಂದ ನಿಂದಿಸುತ್ತಾನೆ. ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಪದಗಳಿಂದ ದೌರ್ಜನ ನಡೆಸುತ್ತಿದ್ದಾನಂತೆ. BBMP ಯ ಆಸ್ತಿ ವಿಭಾಗದ ಸಹಾಯಕ ಆಯುಕ್ತ ಶ್ರೀನಿವಾಸ್ ಮೂರ್ತಿ ಅಧಿಕಾರಿಂದ ಈ ಒಂದು ಕೃತ್ಯ ನಡೆದಿದ್ದು, ಆತನ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದೆ. ಐದು ದಿನ ರಜೆ ಹಾಕಿದ್ದಲ್ಲ ದಂಧೆ ನಡೆಸ್ತಾ…
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕನ್ನಡ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದು, ಈ ವಿಚಾರವಾಗಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಘಟನೆ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದು ಶಾಂತಿಯುತವಾಗಿ ಪರಿಹಾರ ಮಾಡುತ್ತಿದ್ದಾರೆ ಹಾಗಾಗಿ ಪ್ರತಿಭಟನೆ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತುಕತೆ ನಡೆಸುತ್ತಿದ್ದಾರೆ.ಶಾಂತಿಯುತ ಪರಿಹಾರ ಮಾಡುತ್ತಿದ್ದಾರೆ ಎಲ್ಲವೂ ಸರಿ ಹೋಗಲಿದೆ. ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಹಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದು ನಮ್ಮ ಜವಾಬ್ದಾರಿ ಅಲ್ಲ ಅದು ಪೊಲೀಸರ ಜವಾಬ್ದಾರಿಯಾಗಿದೆ. ಅದು ಪೊಲೀಸ್ ಅಧಿಕಾರಿ ಮಾಡಿದ ತಪ್ಪು ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ಹಾಕಿದ್ದಕ್ಕೆ ಇದು ದೊಡ್ಡದಾಗಿದೆ ಎಂದರು ಈಗಾಗಲೇ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿದೆ ಪೊಲೀಸ್ ಅಧಿಕಾರಿ ತಮ್ಮ ಮೇಲಾಧಿಕಾರಿಗಳ…
ಹಾಸನ : ಇತ್ತೀಚಿಗೆ ಸರ್ಕಾರಿ ಶಾಲೆಗಳೆಂದರೆ ಪೋಷಕರು ಮೂಗು ಮುರಿಯುತ್ತಿದ್ದಾರೆ. ಏಕೆಂದರೆ ಖಾಸಗಿ ಶಾಲೆಗಳಲ್ಲಿನ ಮೂಲ ಸೌಲಭ್ಯಗಳು ಹಾಗೂ ಶಿಕ್ಷಣ ವ್ಯವಸ್ಥೆ ಸರ್ಕಾರಿ ಶಾಲೆಗಳಲ್ಲಿ ಕಂಡುಬರುವುದಿಲ್ಲ ಎನ್ನುವುದು ಪೋಷಕರ ಆರೋಪವಾಗಿದೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಬಿಟ್ಟು ಪೋಷಕರು ಇದೀಗ ಹೆಚ್ಚಿಗೆ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಮೂಲ ಸೌಲಭ್ಯಗಳ ಕೊರತೆಯಿಂದ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷದಿಂದ ಇದೀಗ 10ಕ್ಕಿಂತ ಕಡಿಮೆ ಸಂಖ್ಯೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಹೌದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಶಾಲೆಗಳಿಗೆ ಇದೀಗ ಆಪತ್ತು ಎದುರಾಗಿದೆ. 10ಕ್ಕೂ ಕಡಿಮೆ ವಿದ್ಯಾರ್ಥಿಗಳಿಗೆ ಇರುವ ಶಾಲೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹಾಸನ ಜಿಲ್ಲೆಯ 579 ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 10ಕ್ಕಿಂತ ಕಡಿಮೆ ಇದೆ. 681 ಸರ್ಕಾರಿ ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮಕ್ಕಳ ಸಂಖ್ಯೆ ಇದೆ. 2023-24ನೇ ಸಾಲಿನಲ್ಲಿ 86,231 ಮಕ್ಕಳು ಪ್ರವೇಶ ಪಡೆದಿದ್ದಾರೆ. ಅದೇ 2024-25 ನೇ ಸಾಲಿನಲ್ಲಿ 79,283 ಕ್ಕೆ ಸರ್ಕಾರಿ ಮಕ್ಕಳ…
BREAKING : ಬೆಂಗಳೂರಿನಲ್ಲಿ ‘ಬೆಡ್ ಶೀಟ್’ ಗ್ಯಾಂಗ್ ನಿಂದ ‘ATM’ ದರೋಡೆ : ಕೇವಲ 6 ನಿಮಿಷದಲ್ಲಿ 30 ಲಕ್ಷ ದೋಚಿ ಪರಾರಿ
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಆಕ್ಟಿವ್ ಆದ ಬೆಡ್ ಶೀಟ್ ಗ್ಯಾಂಗ್ ನಿಂದ ಎಟಿಎಂ ದರೋಡೆ ನಡೆಸಿದ್ದು, ATM ಗೆ ಹೋಗಿ ಬೆಡ್ ಶೀಟ್ ಗ್ಯಾಂಗ್ ಕಳ್ಳತನ ನಡೆಸಿದೆ. ಹೊಸಕೋಟೆಯ ಸೂಲಿಬೆಲೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಎಟಿಎಂ ಕಳ್ಳತನ ನಡೆಸಿದೆ. ಸೂಲಿಬೆಲೆಯ ಎಸ್ಬಿಐ ಎಟಿಎಂ ನಲ್ಲಿ ಈ ಒಂದು ಬೆಡ್ಶೀಟ್ ಗ್ಯಾಂಗ್ ಕಳ್ಳತನ ಮಾಡಿದೆ. ಆಂಧ್ರಪ್ರದೇಶ ಮೂಲದ ಕಪ್ಪು ಬಣ್ಣದ ಕ್ರೇಟಾ ಕಾರಿನಲ್ಲಿ ಬೆಡ್ ಶೀಟ್ ಹೊಂದಿಕೊಂಡೆ ಕಾರಿನಿಂದ ಇಳಿದ ಕಳ್ಳರು, ಮೊದಲು ಎಟಿಎಂ ನ ಸಿಸಿ ಕ್ಯಾಮೆರಾ ಗಳಿಗೆ ಸ್ಪ್ರೇಯನ್ನು ಹೊಡೆಯುತ್ತಾರೆ. ಕಾರಿನಲ್ಲಿದ್ದ ಇತರರು ಬಂದು ಎಟಿಎಂ ಒಳಗೆ ನುಗ್ಗಿ ಗ್ಯಾಸ್ ಕಟರ್ ಬಳಸಿ ಎಟಿಎಂ ಮಷೀನ್ ಒಡೆದು ಕಳ್ಳತನ ನಡೆಸಿದ್ದಾರೆ. ರಸ್ತೆ ಬದಿ ಇರುವ SBI ಎಟಿಎಂನಲ್ಲಿ ರಾಜಾರೋಷವಾಗಿ ಕಳ್ಳತನ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಬೆಡ್ ಶೀಟ್ ಗ್ಯಾಂಗ್ ಈ ಒಂದು ದರೋಡೆ ನಡೆಸಿದೆ. ಕೇವಲ…
BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್, ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಐವರ ದುರ್ಮರಣ!
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾದ ಸಂಭವಿಸಿದ್ದು, ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಎಂಬ ಗ್ರಾಮದಲ್ಲಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಂಡ್ಯ ಮೂಲದ ಐವರು ಕಾರಿನಲ್ಲೆ ಸಾವನಪ್ಪಿದ್ದರೆ, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದೆ ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಈ ಒಂದು ಕಾರು ತೆರಳುತ್ತಿತ್ತು ಅಪಘಾತದ ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಚಾಕುವಿನಿಂದ ಇರಿದು ನೇಪಾಳ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡನ್ನು ಕೊಲೆ ಮಾಡಲಾಗಿದೆ. ಬ್ಯಾಟರಾಯನಪುರದ ಟಿಂಬರ್ ಗಾರ್ಡನ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಬ್ಯಾಟರಾಯನಪುರದ ಗಾರ್ಮೆಂಟ್ ನಲ್ಲಿ ಗಣೇಶ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಕೊಲೆ ಆರೋಪಿಗಳಿಗಾಗಿ ಸದ್ಯ ಪೋಲಿಸಲು ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಪ್ಲಾಸ್ಟಿಕ್ ನಲ್ಲಿ ಇಡ್ಲಿ ತಯಾರಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಅದಾದ ಬಳಿಕ ಮಹಿಳೆಯರು ತಮ್ಮ ಸೌಂದರ್ಯಕ್ಕೆ ಬಳಸುವ ಲಿಪ್ಸ್ಟಿಕ್, ಲಿಪ್ ಕೇರ್ ಹಾಗೂ ಕಾಸ್ಮೆಟಿಕ್ ಗಳಲ್ಲಿ ಕೂಡ ಹಲವು ಪರಿಣಾಮಕಾರಿ ಅಂಶಗಳು ಪತ್ತೆಯಾಗಿವೆ. ಅಲ್ಲದೆ ಟ್ಯಾಟೂನಿಂದ ಚರ್ಮರೋಗ ಬರುವ ಸಾಧ್ಯತೆ ಇದೆ ಎಂದು ಶೀಘ್ರದಲ್ಲಿ ಅದನ್ನು ಕೂಡ ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಇದೀಗ ಮೆಹಂದಿಯಲ್ಲಿ ಕೂಡ ಕೃತಕ ಬಣ್ಣ ಬಳಸಿರುವ ಆರೋಪ ಕೇಳಿ ಬರುತ್ತಿದೆ. ಹೌದು ಲಿಪ್ಸ್ಟಿಕ್ ಟ್ಯಾಟು ಬಳಿಕ ಇದೀಗ ಮೆಹಂದಿಯು ಡೆಂಜರ್ ಎನ್ನಲಾಗುತ್ತಿದೆ. ಮದರಂಗಿಗೆ ಅಪಾಯಕಾರಿ ಕಲರ್ ಬಳಕೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ಕೈಯಲ್ಲಿ ದೀರ್ಘಕಾಲ ಉಳಿಯಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೆಹಂದಿಯಲ್ಲಿ ಕೃತಕವನ್ನು ಬಳಸುತ್ತಿರುವ ಕುರಿತು ದೂರು ಬಂದಿದೆ. ಹಾಗಾಗಿ ಬೆಂಗಳೂರಿನಲ್ಲಿ ಸ್ಯಾಂಪಲ್ ಸಂಗ್ರಹಕ್ಕೆ ಆರೋಗ್ಯ…
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕುರಿಕುಪ್ಪ ಬಳಿ 2400 ಸತ್ತ ಕೋಳಿ ಮಾದರಿಯಲ್ಲಿ ಹಕ್ಕಿ ಜ್ವರ ದೃಢವಾಗಿದೆ. ಪ್ರಯೋಗಾಲಯದಲ್ಲಿ ಸತ್ತ ಕೋಳಿಗಳ ಮಾದರಿಯಲ್ಲಿ ಹಕ್ಕಿ ಜ್ವರ ಇದೀಗ ದೃಢವಾಗಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಭೂಪಾಲ್ನ ಲ್ಯಾಬ್ ನೀಡಿದ ವರದಿಯಲ್ಲಿ ಹಕ್ಕಿ ಜ್ವರ ಇರುವುದು ದೃಢವಾಗಿದೆ. ಹಕ್ಕಿ ಜ್ವರ ದೃಢವಾದ ಹಿನ್ನೆಲೆಯಲ್ಲಿ ಬಳ್ಳಾರಿಯ ಜನ ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಕರ್ನಾಟಕ ಪಕ್ಕದ ರಾಜ್ಯಗಳದ ಆಂಧ್ರಪ್ರದೇಶ ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೂಚನೆ ನೀಡಿದೆ. ಕುರಿಕೊಪ್ಪ ಸುತ್ತಲೂ ಒಂದು ಕಿಲೋಮೀಟರ್ ಅಪಾಯಕಾರಿಯ ವಲಯ ಎಂದು ಘೋಷಣೆ ಮಾಡಲಾಗಿದೆ. ತೋರಣಗಲ್ಲು, ಕುರೆಕೊಪ್ಪ, ವಡ್ಡು, ತಾಳೂರ, ಬಸಾಪುರ, ದರೋಜಿ ಹಾಗು ದೇವಲಾಪುರ ಗ್ರಾಮವನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಬೆಳಗಾವಿ : ಎಂತೆಂತ ಚಿಕ್ಕ ಪುಟ್ಟ ವಿಚಾಗಳಿಗೆ ಹಲ್ಲೆ ನಡೆಯುತ್ತೆ ನೋಡಿ, ಕೇವಲ ಮೊಬೈಲ್ನಲ್ಲಿರುವ ಸಿಮ್ ಕಾರ್ಡ್ಗಾಗಿ ವ್ಯಕ್ತಿಯೋರ್ವನಿಗೆ ಚಾಕು ಇರಿದ ಘಟನೆ ಬೆಳಗಾವಿ ನಗರದ ಬೋಗಾರವೇಸ್ನಲ್ಲಿರುವ ಹನುಮಂತ ದೇವಸ್ಥಾನದ ಬಳಿ ನಡೆದಿದೆ. ಹಲ್ಲೆ ಒಳಗಾದ ವ್ಯಕ್ತಿಯನ್ನು ಸುರೇಶ ವಾರಂಗ್ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿದವರನ್ನು ನಿಖಿಲ್ ಕುರಣೆ ಎಂದು ತಿಳಿದುಬಂದಿದೆ. ಆರೋಪಿ ನಿಖಿಲ್ ಸುರೇಶ್ ಬಳಿ ಕರೆ ಮಾಡಿ ಕೊಡುತ್ತೇನೆ ಎಂದು ಫೋನ್ ತೆಗೆದುಕೊಂಡಿದ್ದಾನೆ. ಈ ವೇಳೆ ಮೊಬೈಲ್ ಕವರ್ನಲ್ಲಿಟ್ಟಿದ್ದ 4,000 ರೂ.ನಲ್ಲಿ 1500 ರೂ. ಹಣವನ್ನು ನಿಖಿಲ್ ಎಗರಿಸಿದ್ದಾನೆ. ಅಲ್ಲದೆ ಮೊಬೈಲ್ನಲ್ಲಿದ್ದ ಸಿಮ್ಕಾರ್ಡ್ ಸಹ ತೆಗೆದುಕೊಂಡಿದ್ದಾನೆ. ಸಿಮ್ಕಾರ್ಡ್ ಮತ್ತು ಹಣ ವಾಪಸ್ ಕೇಳಲು ಹೋಗಿದ್ದಾಗ ನಿಖಿಲ್ ಮತ್ತು ಆತನ ಗ್ಯಾಂಗ್ ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ಸುರೇಶ್ ವಾರಂಗ್ ಆರೋಪಿಸಿದ್ದಾರೆ.ಸುರೇಶ್ ತೊಡೆಯ ಭಾಗಕ್ಕೆ ತೀವ್ರವಾಗಿ ಹಲ್ಲೆಯಾಗಿದ್ದು, ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನವದೆಹಲಿ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧ ಕುರಿತ ಪ್ರಕರಣಗಳ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಅದೇಶಿಸಲಾಯಿತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ಗಳು ದಾಖಲಾಗಿವೆ. ಪ್ರಕರಣಗಳಿಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ಅವರಿದ್ದ ಸುಪ್ರೀಂಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು.ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿದ ಬಳಿಕ ಮಾರ್ಚ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಪೀಠದಿಂದ ಆದೇಶ ಹೊರಡಿಸಲಾಗಿದೆ.