Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಜಿಮ್ ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿ ಅನಂತನಗರದ ಜಮ್ಮನಹಳ್ಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಎಂಬಲ್ಲಿ ಸಪ್ಟೆಂಬರ್ 23 ರಂದು ನಡೆದಿರುವ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ನಿವಾಸಿ ಜಿಮ್ ಟ್ರೈನರ್ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಏಕಾಏಕಿ ಸಂದೀಪ್ ಮೇಲೆ ಗ್ಯಾಂಗ್ ಒಂದು ಹಲ್ಲೆ ನಡೆಸಿದೆ. ಅನಂತನಗರದ ಜಿಮ್ ಟ್ರೈನರ್ ಆಗಿದ್ದ ಸಂದೀಪ್ ಮೇಲೆ ಅರುಣ್, ಗೌತಮ್, ಅನುಷಾ ಮತ್ತು ಮೇಘನಾ ಸೇರಿ ಐವರಿಂದ ಹಲ್ಲೆ ನಡೆಸಲಾಗಿದೆ. ಜಿಮ್ ನಲ್ಲಿ ಅನುಷಾ ಟ್ರೈನರ್ ಸಂದೀಪ್ ಕ್ಲೈಂಟ್ ಆಗಿದ್ದಳು. ಸ್ನೇಹಿತರಾಗಿ ವಾಟ್ಸಪ್ ನಲ್ಲಿ ಚಾಟಿಂಗ್ ಕೂಡ ಮಾಡುತ್ತಿದ್ದರು. ಈ ವೇಳೆ ಅನುಷಾ ಸಹೋದರರಾದ ಗೌತಮ್ ಮತ್ತು ಅರುಣ್ ಮೊಬೈಲ್ ಚೆಕ್ ಮಾಡಿದ್ದಾರೆ. ಅನುಷಾ ಮೊಬೈಲ್ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ…

Read More

ದಕ್ಷಿಣಕನ್ನಡ : ಮಹೇಶ್ ಶೆಟ್ಟಿ ತಿಮ್ಮರೊಡಿಗೆ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಸಿಕ್ಕಿದರು ಕೂಡ ಮಹೇಶ್ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್ ಇಲ್ಲದಂತಾಗಿದೆ. ಏಕೆಂದರೆ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ ಮಹೇಶ ಶೆಟ್ಟಿ ತಿಮರೋಡಿ ಬಂಧನದ ಭೀತಿಯಲ್ಲಿ ಇದ್ದಾರೆ. ಈಗಾಗಲೇ ತಿಮರೋಡಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 4ಕ್ಕೆ ವಿಚಾರಣೆ ಮುಂದೂಡಿದೆ.ದಕ್ಷಿಣ ಕನ್ನಡ ಜಿಲ್ಲಾ ಸೆಕೆಂಡ್ಸ್ ಕೋರ್ಟ್ ಈ ಒಂದು ಅರ್ಜಿಯ ವಿಚಾರಣೆ ಮುಂದೂಡಿತ್ತು. ಈಗಾಗಲೇ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮಹೇಶ ಶೆಟ್ಟಿ ತಿಮರೋಡಿಗೆ ನೋಟಿಸ್ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೋಲಿಸರು ತಿಮರೋಡಿಗೆ ಮೂರು ಬಾರಿ ನೋಟಿಸ್ ನೀಡಿದ್ದಾರೆ. ಆದರೆ ಮಹೇಶ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ. ನಿರೀಕ್ಷಣಾ ಜಾಮೀನು ಸಿಕ್ಕ ಬಳಿಕವೇ ತಿಮ್ಮರೋಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಮುಂಬೈನಲ್ಲಿ…

Read More

ಹಾಸನ : ಮೊನ್ನೆ ತಡರಾತ್ರಿ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ರವಾನೆ ಮಾಡಲಾಗಿತ್ತು. ಸೋಮವಾರ ರಾತ್ರಿ 8:30 ರ ಸಮಯದಲ್ಲಿ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಎರಡು ಸಿಲಿಂಡರ್‌ ಹಾಗೂ ಗೀಸರ್‌ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ.ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Read More

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೈಲಿಗೆ ಹೋಗುವ ದಿನ ಹತ್ತಿರ ಬಂದಿದೆ ಅವರು ಜೈಲಿಗೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಜೈಲಿಗೆ ಹಾಕಿಸಬೇಕು ಎಂದು HD ಕುಮಾರಸ್ವಾಮಿ ಕುಟುಂಬ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ HD ಕುಮಾರಸ್ವಾಮಿ ಮೊದಲಿನಿಂದಲೂ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವಿರುದ್ಧ ಅವರ ಕುಟುಂಬದಿಂದ ದೊಡ್ಡ ಷಡ್ಯಂತರ ನಡೆದಿದೆ.ಜೈಲಿಗೆ ಹೋಗೋ ದಿನ ಹತ್ತಿರ ಬಂದಿದೆ ಎಂದಿದ್ದಾರೆ. ಹಬ್ಬ ಆಗಲಿ ಅವರು ಏನೇನು ಹೇಳುತ್ತಾರೆ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಮೊದಲಿನಿಂದಲೂ ಕೂಡ ಅವರ ಕುಟುಂಬ ನನ್ನ ಮೇಲೆ ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಇದು ಇವತ್ತಿಂದಲ್ಲ ಈ ಹಿಂದೆ ನನ್ನ ತಂಗಿ ಮೇಲೆ, ತಮ್ಮನ ಮೇಲೆ, ಎಲ್ಲರ ಮೇಲು ಈ ರೀತಿ ಷಡ್ಯಂತ್ರ ನಡೆಸಿದ್ದಾರೆ. ಚೀಫ್ ಮಿನಿಸ್ಟರ್ ಆದಾಗ ಜೈಲಿಗೆ ಹಾಕಿಸೋಕೇ ಪ್ರಯತ್ನ ಮಾಡಿದರು.…

Read More

ಚಾಮರಾಜನಗರ : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ನೋಡಲು ದೇಶ ವಿದೇಶಗಳಿಂದ ಜನರು ಆಗಮಿಸುತ್ತಾರೆ. ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ದಸರಾ ನೋಡಲು ತೆರಳಿದ್ದ ವೇಳೆ ಉದ್ಯಮಿಯೊಬ್ಬರ ಮನೆ ಕಳ್ಳತನ ಆಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಘಟನೆ ನಡೆದಿದೆ. ದಸರಾ ಲೈಟಿಂಗ್ಸ್ ನೋಡಲು ಮೈಸೂರಿಗೆ ಕುಟುಂಬಸ್ ಹೋಗಿದ್ದರು. ಉಮೇಶ್ ಅವರು ಹೆಂಡತಿ ಸವಿತಾ ಮತ್ತು ಇಬ್ಬರು ಮಕ್ಕಳು ಮೈಸೂರು ದಸರಾ ಲೈಟಿಂಗ್ ನೋಡಲು ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಖದೀಮರು ಮನೆ ಬಾಗಿಲು ಮುರಿದು ಬೀರುವಿನಲ್ಲಿದ್ದ ಸುಮಾರು 29 ಲಕ್ಷ ರೂ. ನಗದು ಮತ್ತು ಚಿನ್ನದ ತಾಳಿಸರ, ನೆಕ್ಷೇಸ್, ಬಳೆಗಳು, ಸಣ್ಣ ಚೈನ್ ಗಳು, ಓಲೆಗಳು, ಮುತ್ತಿನ ಸರ ಸೇರಿದಂತೆ ಒಟ್ಟು 300 ಗ್ರಾಂ ಚಿನ್ನಾಭರಣ (12 ಲಕ್ಷ ಮೌಲ್ಯ) ಹಾಗೂ 2 ಕೆ.ಜಿ ಬೆಳ್ಳಿ ನಾಣ್ಯ, 2 ರೇಷ್ಮೆ ಸೀರೆ ಮತ್ತು 2…

Read More

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲಾಸ್ಪತ್ರೆ ಹೊಸ ಕಟ್ಟಡದಲ್ಲಿ ಮಹಡಿ ಶೀಟ್ ಗಳು ಕುಸಿತವಾಗಿವೆ. ಕಳಪೆ ಕಾಮಗಾರಿಯಿಂದ ಕಟ್ಟಡ ಮೇಲ್ಭಾಗದ ಸಿಮೆಂಟ್ ಶೀಟ್ ಗಳು ಕುಸಿದಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಘಟನೆ ಸಂಭವಿಸಿದೆ. ಸುಮಾರು 198.27 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣವಾಗಿದ್ದು, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ ಈ ಒಂದು ಜಿಲ್ಲಾಸ್ಪತ್ರೆ ಬರುತ್ತದೆ. ಸುಮಾರು 4 ಅಂತಸ್ತಿನ ಎರಡನೇ ಮಹಡಿಯಲ್ಲಿದ್ದ ಶೀಟ್ ಗಳು ಕುಸಿತವಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 1979ರಲ್ಲಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆ ಕಟ್ಟಡ ಶಿಥಿಲವಾಗಿರುವ ಹಿನ್ನೆಲೆಯಲ್ಲಿ ಉದ್ಘಾಟನೆಗೂ ಮೊದಲೇ ಮೊದಲ ಮಹಡಿಯಿಂದ ಹೆರಿಗೆ ವಾರ್ಡ್ ಮತ್ತು NICU ನಲ್ಲಿರುವ ರೋಗಿಗಳನ್ನು ಶಿಫ್ಟ್ ಮಾಡಲಾಗಿತ್ತು. ಹಾಗಾಗಿ ಭಾರಿ ಅನಾಹುತ ಒಂದು ತಪ್ಪಿದೆ.

Read More

ಬಾಗಲಕೋಟೆ: ಹಿಂದೂಗಳು ಆತ್ಮ ರಕ್ಷಣೆಗಾಗಿ ತಮ್ಮ ಶಸ್ತ್ರ, ಆಯುಧ ಇಟ್ಕೊಳಿ ಎಂದು ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ವಿವಾದದ ಹೇಳಿಕೆ ನೀಡಿದ್ದಾರೆ. ಎಲ್ಲಾ ಕಡೆಯೂ ಪೊಲೀಸರು ಬರುವುದಕ್ಕೆ ಆಗುವುದಿಲ್ಲ. ಆಯುಧ ಇದ್ದರೆ ಅನ್ಯಾಯದ ವಿರುದ್ಧ ಎತ್ತಲಿಕ್ಕೆ ಬರುತ್ತದೆ ನಮ್ಮನೆ ರಕ್ಷಣೆ ಮಾಡಿಕೊಳ್ಳದಿದ್ದರೆ ದೇಶದ ರಕ್ಷಣೆ ಹೇಗೆ ಆಗುತ್ತದೆ? ಎಂದು ಹೇಳಿಕೆ ನೀಡಿದ್ದಾರೆ. ಆಯುಧ ಪೂಜೆ ದಿನ ಎಲ್ಲರೂ ಪೂಜೆ ಮಾಡಬೇಕು. ಆಯುಧ ಪೂಜೆಯ ದಿನ ಕಾರು ಜೀಪು ಪೂಜೆ ಮಾಡುವುದಲ್ಲ. ಆಯುಧ ಪೂಜೆಯಲ್ಲಿ ಶಾಸ್ತ್ರ ಮತ್ತು ಶಸ್ತ್ರ ಎರಡು ಬೇಕು. ಆಯುಧ ಮನೆಯಲ್ಲಿ ಇತ್ತು ಅಂದರೆ ಅನ್ಯಾಯದ ವಿರುದ್ಧ ಎತ್ತಲಿಕ್ಕೂ ಶಸ್ತ್ರ ಬಳಗಾಗುತ್ತದೆ. ಹಾಗಾಗಿ ಆಯುಧ ಬೇಕೆ ಬೇಕು. ನಮ್ಮನ್ನ ನಾವು ಸಂರಕ್ಷಣೆ ಮಾಡಿಕೊಳ್ಳಬೇಕು. ಯಾರೋ ಬಂದು ನಮ್ಮನ್ನು ರಕ್ಷಣೆ ಮಾಡುತ್ತಾರೆ ಎನ್ನುವುದನ್ನು ತಲೆಯಿಂದ ತೆಗೆದುಹಾಕಿ. ಎಲ್ಲಾ ಕಡೆಗೂ ಪೊಲೀಸರು ಬರುವುದಕ್ಕೂ ಸಾಧ್ಯವಿಲ್ಲ ಇರಲು ಸಾಧ್ಯವಿಲ್ಲ. ನಾವು ಅನ್ಯಾಯ ಮಾಡುವುದಿಲ್ಲ. ನನ್ನ ಮೈ ಮೇಲೆ ಬಂದಾಗ ನಾನು ಸ್ವಯಂ ರಕ್ಷಣೆಗಾಗಿ ಮಾಡಬೇಕಲ್ವಾ…

Read More

ಬೆಂಗಳೂರು : ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್,ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ಬಗ್ಗೆ ಪರಿಶೀಲನೆ ನಡೆದಿದೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎಂಬ ಮಾಹಿತಿ ತರಿಸಿಕೊಂಡಿದ್ದೇವೆ. ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಆದೇಶ ಪ್ರಕಟಿಸುತ್ತೇವೆ ಎಂದರು. ಇನ್ನು ಸಂಪುಟ ಪುನಾರಚನೆ ಬಗ್ಗೆ ಸಚಿವ ಜಮೀರ್ ಹೇಳಿಕೆಗೆ, ಅದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಇದೆಲ್ಲವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಮಗೆ ಗೊತ್ತು ಸಹ ಆಗುವುದಿಲ್ಲ. ಕೆಲವರು ಅವರ…

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಮರ್ಡರ್ ಆಗಿದ್ದು, ಟವೆಲ್ ನಿಂದ ಕತ್ತು ಬಿಗಿದು ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೇ ವರದಿಯಾಗಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ತಿಂಡ್ಲು ಬಳಿ ಈ ಒಂದು ಕೊಲೆ ನಡೆದಿದೆ. ಟವೆಲ್ ನಿಂದ ಕತ್ತು ಬಿಗಿದು ರಾಮ್ ಕುಮಾರ್ (40) ಎನ್ನುವ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ. ಕಗ್ಗನೂರು ಚೆಕ್ ಪೋಸ್ಟ್ ನ ರಸ್ತೆ ಬದಿಯ ಪೊದೆಯಲ್ಲಿ ಶವ ಪತ್ತೆಯಾಗಿದೆ. ಹಗ್ಗದಿಂದ ಕೈಗಳನ್ನು ಕಟ್ಟಿ ಬಳಿಕ ಟವೆಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿದ್ದು, ಕಲ್ಯಾಣ ಕರ್ನಾಟಕದಲ್ಲಿ ಇಂದು ಸಿಎಂ ಸಿದ್ದರಾಮಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಗು ಮುನ್ನ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಕಲಬುರ್ಗಿಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವರು ಸಾಥ್ ನೀಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್, ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಕಲಬುರ್ಗಿ ಏರ್ಪೋರ್ಟ್ ನಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ವಿಜಯಪುರ ಯಾದಗಿರಿ ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶವನ್ನು ವೀಕ್ಷಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಕಲ್ಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Read More