Author: kannadanewsnow05

ಚಿಕ್ಕಬಳ್ಳಾಪುರ : ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಆಹಾರ ಇಲಾಖೆಯಲ್ಲಿ ಹೊಸ ತೀರ್ಮಾನ ತೆಗೆದುಕೊಂಡಿದ್ದು, ಅದರಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಹೊಸದಾಗಿ 3500 ಹೊಸ ನ್ಯಾಯಬೆಲೆ ಅಂಗಡಿ ನೀಡಲು ತೀರ್ಮಾನಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಆಹಾರ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಹಂತದಲ್ಲಿ ಪರಿಷ್ಕರಣೆ ಮಾಡಿ ಒಂದೂವರೆ ತಿಂಗಳ ಒಳಗಾಗಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ರಾಜ್ಯದಲ್ಲಿ ಈಗಾಗಲೇ 20,000 ನ್ಯಾಯಬೆಲೆ ಅಂಗಡಿಗಳಿದ್ದು, ಅದರ ಜತೆಗೆ 3,500 ನ್ಯಾಯಬೆಲೆ ಅಂಗಡಿ ಸೇರಿಸಬೇಕು ಎಂದು ಸಿಎಂ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾವಂತ ನಿರುದ್ಯೋಗಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಹೇಳಿದರು.

Read More

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಟ್ರಕ್ ಹರಿದು ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ವಿಸರ್ಜನೆ ನಡೆಯುತ್ತಿದ್ದ ಮೆರವಣಿಗೆಗೆ ನುಗ್ಗಿದೆ. ಜನರ ಮೇಲೆ ವಾಹನ ಹರಿದ ಪರಿಣಾಮ ಭಾರೀ 6 ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದರೆ. 20 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, 7 ಜನರಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಮೊಸಳೆ ಹೊಸಹಳ್ಳಿ, ಹಿರೇಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು ಎನ್ನಲಾಗಿದೆ. ಏಕಾಏಕಿ…

Read More

ಬೆಂಗಳೂರು : ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ದುರಂತಗಳಲ್ಲಿ ಒಟ್ಟು 380 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಮಾಚಲ ಪ್ರದೇಶಕ್ಕೆ ಸಹಾಯಹಸ್ತ ನೀಡಿದ್ದು, 5 ಕೋಟಿ ರೂ. ಹಣ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ. ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ. ವಿಪತ್ತಿಗೀಡಾದ ಹಿಮಾಚಲ…

Read More

ಬೆಂಗಳೂರು : ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯಾ ಗಿದ್ದ ವಿಧೇಯಕಗಳ ಪೈಕಿ ಮೂರು ವಿಧೇಯಕಗಳನ್ನು ಅನುಮೋದನೆಗಾಗಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿ ದ್ದಾರೆ. ಉಳಿದ 15 ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿಧೇಯಕಕ್ಕೆ ಒಂದೇ ಬಾರಿಗೆ ಅನುಮೋದನೆ ನೀಡಿರುವುದು ಇದೇ ಮೊದಲಾಗಿದೆ. ಕೆರೆಗಳ ವಿಸ್ತೀರ್ಣ ಆಧರಿಸಿ ಸಂರಕ್ಷಿತ ವಲಯವನ್ನು ಮರು ನಿಗದಿ ಮಾಡುವ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮತ್ತು ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕಗಳನ್ನು ರಾಜ್ಯಪಾಲರು ಒಪ್ಪಿಗೆ ನೀಡದೆ, ತಮ್ಮ ಪರಿಶೀಲನೆಗೊಳಪಡಿಸಿದ್ದಾರೆ. ಆಗಸ್ಟ್‌ನಲ್ಲಿ ನಡೆದ ಮಳೆಗಾಲದ ಅಧಿವೇಶನದಲ್ಲಿ ಒಟ್ಟಾರೆ 39 ಮಸೂದೆಗಳನ್ನು ಮಂಡಿಸಲಾಗಿತ್ತು. ಅದರಲ್ಲಿ 2 ವಿಧೇಯಕಗಳನ್ನು ಜಂಟಿ ಆಯ್ಕೆ ಸಮಿತಿಗೆ ಪರಿಶೀಲನೆಗೆ ಒಪ್ಪಿಸಲಾಗಿತ್ತು. ಮತ್ತು ಉಳಿದ 37 ಮಸೂದೆಗಳಿಗೆ ಅನುಮೋದನೆ ನೀಡಲಾಗಿತ್ತು. ಆ ಮಸೂದೆಗಳ ಪೈಕಿ ಸೆ.2ರಂದು ಎರಡು ಮಸೂದೆ ಹಾಗೂ ಸೆ.9ರಂದು 15 ಮಸೂದೆಗಳಿಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಜ್ಯ ಪತ್ರ ಪ್ರಕಟಿಸಿದ್ದರು. ಇದೀಗ ಶುಕ್ರವಾರ ಉಳಿದ 20…

Read More

ದಕ್ಷಿಣಕನ್ನಡ : ಮುಖ್ಯಮಂತ್ರಿಯ ಫೋಟೋ ಬಳಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀವಿ ವಿಕ್ರಂ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ಪಿಎಸ್ಐ ಕೃಷ್ಣಪ್ಪ ಅವರ ದೂರಿನಡಿ ಸ್ವಯಂಪ್ರೇರಿತ ಎಫ್‌ಐಆರ್ ದಾಖ ಲಿಸಲಾಗಿತ್ತು. ಬಂಧಿತ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರು ಪಡಿಸಿದ್ದು, ಸೋಮವಾರದವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ. ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜರ್‌ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸಲ್ಲ ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್, ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮು ಗಲಭೆ ಸೃಷ್ಟಿಸುವ ಹಾಗೂ ಸಮಾಜದ…

Read More

ಬೆಂಗಳೂರು : ನಗರದ ರಸ್ತೆಗಳು, ಕಾಲುವೆಗಳು ಹಾಗು ಬ್ಲಾಕ್ ಸ್ಟಾಟ್‌ಗಳಿಗೆ ಕಸ ಎಸೆದರೆ ಇನ್ನು ಮುಂದೆ 2 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಘನತಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ. ಬೆಂಗಳೂರಿನ ವಸಂತ ನಗರದಲ್ಲಿರುವ ಘನತಾಜ್ಯ ನಿರ್ವಹಣಾ ಕಂಪನಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೊಟ್ಟು ನಡೆಸಿ ಮಾತನಾಡಿದ ಅವರು, ಈವರೆಗೆ ರಸ್ತೆಗೆ ಕಸ ಎಸೆದರೆ ಮೊದಲ ಬಾರಿಗೆ 500ರೂ. ಎರಡನೇ ಬಾರಿಗೆ 1 ಸಾವಿರ ರೂ. ಮೂರನೇ ಬಾರಿಗೆ 2 ರೂ. ಸಾವಿರ ದಂಡ ಹಾಕಲಾಗುತ್ತಿತ್ತು. ಇನ್ನು ಮುಂದೆ 2 ಸಾವಿರ ರು. ದಂಡ ವಿಧಿಸುವುದಕ್ಕೆ ತೀರ್ಮಾನಿಸಲಾಗಿದೆ. ಹಾಗಾಗಿ, ನಗರದ ಪ್ರತಿಯೊಬ್ಬರು ಹಸಿ ಮತ್ತು ಹಸಿ ಕಸ ಮತ್ತು ಒಣ ಕಸ ಬೆರ್ಪಡಿಸಿ ಆಟೋಗಳಿಗೆ ನೀಡುವಂತೆ ಮನವಿ ಮಾಡಿದರು. ಕಳೆದ ಆಗಸ್ಟ್‌ನಲ್ಲಿ ನಗರದಲ್ಲಿ 1483 ಬ್ಲಾಕ್ ಸ್ಟಾಟ್ ಗಳಿ ಕುರಿತು ದೂರು ಬಂದಿದ್ದವು, ಈ ಪೈಕಿ 1454 ಸ್ಪಾಟ್ ಗಳನ್ನು ಸ್ವಚ್ಛಗೊಳಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ 515 ದೂರು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಟ್ರಕ್ ಹರಿದು ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದು, 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ…

Read More

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಟ್ರಕ್ ಹರಿದು ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ವಿಸರ್ಜನೆ ನಡೆಯುತ್ತಿದ್ದ ಮೆರವಣಿಗೆಗೆ ನುಗ್ಗಿದೆ. ಜನರ ಮೇಲೆ ವಾಹನ ಹರಿದ ಪರಿಣಾಮ ಭಾರೀ 6 ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದರೆ. 20 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, 7 ಜನರಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಮೃತರನ್ನು ಬಳ್ಳಾರಿ ಮೂಲದ ಇಂಜಿನಿಯರ್ ವಿದ್ಯಾರ್ಥಿ ಪ್ರವೀಣ್ ಕುಮಾರ್, ಹೊಳೆನರಸೀಪುರ ತಾಲೂಕಿನ ಕೆ.ಬಿ ಪಾಳ್ಯದ…

Read More

ಬೆಂಗಳೂರು : ಸೆಪ್ಟೆಂಬ್ 15 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಸೆಪ್ಟೆಂಬರ್ 15, 16 ಮತ್ತು 17ರಂದು ಬೆಂಗಳೂರಿನ ನಗರದಲ್ಲಿ ಕಾವೇರಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಕಾವೇರಿ 5ನೇ ಹಂತದ ಪಂಪಿಂಗ್ ಸ್ಟೇಷನ್ ನಿಂದ ನೀರು ಪೂರೈಕೆ ಬಂದ್ ಆಗಲಿದೆ. ಸೆಪ್ಟೆಂಬರ್ 15 ರಂದು ರಾತ್ರಿ 1 ಗಂಟೆಯಿಂದ ಸೆಪ್ಟೆಂಬರ್ 17 ಮಧ್ಯಾಹ್ನ 1 ಗಂಟೆಯವರೆಗೆ ಕಾವೇರಿ ನೀರು ಪೂರೈಕೆ ಬಂದ್ ಆಗಲಿದೆ ಕಾವೇರಿ 5ನೇ ಹಂತದಲ್ಲಿ 60 ಗಂಟೆಗಳ ಕಾಲ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.ಕಾವೇರಿ 1,2,3 ಹಾಗು 4ನೇ ಹಂತದಲ್ಲಿ 24 ಗಂಟೆ ನೀರು ಪೂರೈಕೆ ಸ್ಥಗಿತಗೋಳ್ಳಲಿದೆ ಇನ್ನು ಸೆಪ್ಟೆಂಬರ್ 16 ಬೆಳಿಗ್ಗೆ 6 ರಿಂದ 17 ರಂದು ಬೆಳಿಗ್ಗೆ ನೀರು ಪೂರೈಕೆ ಬಂದ್ ಆಗಲಿದೆ ಅಗತ್ಯ ನೀರನ್ನು ಸಂಗ್ರಹಿಸಿಕೊಳ್ಳುವಂತೆ ಜಲಮಂಡಳಿ ಮನವಿ ಮಾಡಿಕೊಂಡಿದೆ.

Read More

ಬೆಂಗಳೂರು : ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಯೂಟ್ಯೂರ್ ಸಮೀರ್ ಎಂ.ಡಿ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಸಮೀರ್ ಎಂಡಿ ಹೊಸ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ನನಗೆ ವಿದೇಶದಿಂದ ಯಾವುದೇ ಹಣ ಬಂದಿಲ್ಲ ಎಂದು ಬ್ಯಾಂಕ್ ದಾಖಲೆಯನ್ನು ತೋರಿಸಿದ್ದಾರೆ. ಬ್ಯಾಂಕ್ ದಾಖಲೆ ತೋರಿಸಿ ಸಮೀರ್ ಹೊಸ ವಿಡಿಯೋ ಮಾಡಿದ್ದಾರೆ ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನನಗೆ ಯಾವುದೋ ಟೆರರಿಸ್ಟ್ ಗುಂಪಿನಿಂದ ಇಸ್ಲಾಮಿಕ್ ಕಂಟ್ರಿಯಿಂದ ಹಣ ಬಂದಿದೆ ಅಂತ ಆರೋಪ ಕೇಳಿ ಬಂದಿದ್ದು ಆ ಕುರಿತು ವಿಡಿಯೋ ಮಾಡುತ್ತಿದ್ದೇನೆ ನಾನೊಬ್ಬ ಮುಸ್ಲಿಂ ಎಂಬ ಕಾರಣಕ್ಕೆ ಈ ರೀತಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಅವತ್ತು ಕೇಳುತ್ತಿದ್ದೇನೆ ನನಗೆ ಯಾವುದೇ ರೀತಿಯಾದಂತಹ ವಿದೇಶಿ ಕಂಟ್ರಿಗಳಿಂದ ಕಂಡುಬಂದಿಲ್ಲ. ಹಾಗ ಏನಾದರೂ ಬಂದಿದ್ದರೆ ತನಿಖೆಯಲ್ಲಿ ಇಷ್ಟೊತ್ತಿಗೆ ಹೊರಗಡೆ ಬರಬೇಕಾಗಿತ್ತು. ಎಸ್ ಐ ಟಿ ಅಧಿಕಾರಿಗಳ ವಿಚಾರಣೆಗೆ ಕರೆದಾಗ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ಸಲ್ಲಿಸಿದ್ದೇನೆ. ಈಗಾಗಲೇ ತನಿಖೆ ನಡೆಯುತ್ತಿದೆ. ಆಪ್ ಪ್ರಮೋಷನ್,…

Read More