Author: kannadanewsnow05

ಬಾಗಲಕೋಟೆ : ಶಾಲಾ ಅನುದಾನ ದುರ್ಬಳಕೆ ಹಿನ್ನೆಲೆ ಮುಖ್ಯ ಶಿಕ್ಷಕ ಅಮಾನತು ಕೋಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಸಸ್ಪೆಂಡ್ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೋಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಹೆಚ್ ಅಂಗಡಿ ಅವರನ್ನು ಅಮಾನತು ಮಾಡಿ ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಪತ್ರ ನೀಡಲು ವಿದ್ಯಾರ್ಥಿಗಳಿಂದ 100 ರೂಪಾಯಿ ವಸೂಲಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗೆ 100 ರೂ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅಟಲ್ ಟಿಂಕರಿಂಗ್ ಲ್ಯಾಬ್ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರಿಂದ ಈ ಒಂದು ಆದೇಶ ಬಂದಿದೆ

Read More

ಸವದತ್ತಿ : ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿ.ಎಂ.ಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿ.ಎಂ.ಸಿ ಹೀಗೆ ಒಟ್ಟಾರೆಯಾಗಿ 30.842 ಟಿ.ಎಂ.ಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ. ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆಬ್ರವರಿ 14ರ ವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು…

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿದರು. ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು. ಒಂಟಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ ಅರ್ಜಿ ಸಲ್ಲಿಸದೇ ಇರುವವರು ಕೂಡಲೆ ಪಾಲಿಕೆ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪಡೆದು 25ನೇ ಫೆಬ್ರವರಿ 2025ರ ಒಳಗಾಗಿ ಆಯಾ ವಲಯದ ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು. ಸಸಿಗಳಿಗೆ ಸಂಸ್ಕರಣ ನೀರು…

Read More

ಗದಗ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಎಷ್ಟೋ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ಗದಗ್ ನಲ್ಲಿ ಪೊಲೀಸರು ಹಲವು ಬಡ್ಡಿ ದಂಧೆಕೋರರ ಮನೆಯ ಮೇಲೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಜಪ್ತಿ ಮಾಡಿದ್ದರು. ಇದೀಗ ಗದಗದಲ್ಲಿರುವ ಸಂಗಮೇಶ್ ದೊಡ್ಡಣ್ಣವರ್ ಎನ್ನುವ ಬಡ್ಡಿ ದಂಧೆಕೋರನ ಮನೆಯ ಮೇಲೆ ದಾಳಿ ಮಾಡಿ 26 ಲಕ್ಷ ರೂಪಾಯಿ ಪೊಲೀಸರು ಜತ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಸಂಗಮೇಶ್ ದೊಡ್ಡಣ್ಣವರ ಮನೆಯಲ್ಲಿ 26.57 ಲಕ್ಷ ಹಣ ಜಪ್ತಿ ವಿಚಾರವಾಗಿ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮಗನ ಲಿವರ್ ಚಿಕಿತ್ಸೆಗೆ ತಂದಿಟ್ಟ ಹಣ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಣ ಜಪ್ತಿ ಮಾಡಿದ್ದಕ್ಕೆ ಸಂಗಮೇಶ್ ದೊಡ್ಡಣ್ಣವರ್ ಇದೀಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿ ನೇಣು ತೆಗೆದುಕೊಂಡು ಸಂಗಮೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗದಗ ನಗರದ ಕಾಶಿವಿಶ್ವನಾಥ ಕಾಲೋನಿ ಮನೆಯಲ್ಲಿ…

Read More

ಬಳ್ಳಾರಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿತ್ತು. ಇದೀಗ ಬಳ್ಳಾರಿಯಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಕಲಿ ಚಿನ್ನ ಇಟ್ಟು ಬ್ಯಾಂಕ್ ಸಿಬ್ಬಂದಿಗಳೇ ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ನಕಲಿ ಚಿನ್ನ ಇಟ್ಟು ವಂಚನೆ ಎಸಗಿರುವ ಆಕ್ಸಿಸ್ ಬ್ಯಾಂಕ್ ನ ಮೂವರು ಸಿಬ್ಬಂದಿಗಳ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಠಾಣೆಯಲ್ಲಿ ಮೂವರು ಸಿಬ್ಬಂದಿಗಳ ವಿರುದ್ಧ FIR ದಾಖಲಾಗಿದೆ. ಆಕ್ಸಿಸ್ ಬ್ಯಾಂಕ್ ನ ಅಡಮಾನ ವಿಭಾಗದ ಮುಖ್ಯಸ್ಥ ಕಾರ್ತಿಕ್, ಶ್ರೀನಿವಾಸ್ ಹಾಗೂ ಅಕ್ಕಸಾಲಿಗ ರಾಮನಗೌಡ ವಿರುದ್ಧ FIR ದಾಖಲಾಗಿದೆ. ಕಳೆದ ವರ್ಷ ಬೇರೆ ಶಾಖೆಗೆ ಆರೋಪಿಗಳು ವರ್ಗಾವಣೆಗೊಂಡಿದ್ದರು. ವರ್ಗಾವಣೆಯಾಗಿ ಒಂದು ವರ್ಷದ ಬಳಿಕ ಮೋಸ ಮಾಡಿರುವುದು ಪತ್ತೆಯಾಗಿದೆ. ಹೇಮಾವತಿ ಎಂಬುವರ…

Read More

ಬೆಂಗಳೂರು : ಬಿಜೆಪಿ ಎಂಎಲ್ಸಿ ಶಶಿಲ್ ನಮೋಶಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಪ್ರಕರಣವನ್ನು ರದ್ದು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ವಂಚನೆ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2009 ಮತ್ತು 2018ರ ನಡುವೆ ಸೊಸೈಟಿ ಆಡಳಿತ ಮಂಡಳಿ ಸದಸ್ಯರಾಗಿದ್ದ ನಮೋಶಿ ಮತ್ತಿತರರು ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ಟೈಫಂಡ್ ಮೊತ್ತವನ್ನು ಪಾವತಿಸಿಲ್ಲ ಮತ್ತು ಉಳಿಕೆ ಸೀಟುಗಳ ಶುಲ್ಕವನ್ನು ಮರು ಪಾವತಿಸಿಲ್ಲ ಎಂದು 2024 ಆಗಸ್ಟ್ ನಲ್ಲಿ HKES ಸದಸ್ಯ ಪ್ರದೀಪ್ ದುಬೈಟಿ ದೂರು ನೀಡಿದ್ದರು. ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವಂಚನೆ ಆರೋಪ ಸಂಬಂಧದ ಪ್ರಕರಣಗಳಲ್ಲಿ ನೋಂದ ವ್ಯಕ್ತಿ ಇಲ್ಲದೇ ಇತರರು 15 ವರ್ಷಗಳ ಬಳಿಕ ದೂರು ದಾಖಲಿಸುವುದಕ್ಕೆ ಅವಕಾಶವಿಲ್ಲ. ಆರೋಪ ಬೆಳಕಿಗೆ ಬಂದು 6 ವರ್ಷಗಳ ಬಳಿಕವೂ ಯಾವುದೇ ವಿದ್ಯಾರ್ಥಿ ತನಗೆ ಸ್ಟೈಫಂಡ್ ಬಂದಿಲ್ಲ ಎಂಬುದಾಗಿ ದೂರು ದಾಖಲಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದಾಗ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗಳು ಹಾಗೂ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಓರ್ವ ದ್ವಿಚಕ್ರ ವಾಹನ ಸವಾರನಿಗೆ ಗಂಭೀರವಾದ ಗಾಯಗಳಾಗಿವೆ. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿ ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದಲ್ಲಿ ಇಬ್ಬರು ಗಾಯಾಳುಗಳಿಗೆ ವೈದೇಹಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಟಿಟಿ ವಾಹನ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಬೆಂಗಳೂರು ಮಹಿಳೆ ಒಬ್ಬರು ಸಾವನ್ನಪ್ಪಿದ್ದು, ಇನ್ನೂಳಿದ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶ ಕಟ್ನಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಗಾಯಗೊಂಡ ಐವರನ್ನು ಮಧ್ಯಪ್ರದೇಶದ ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Read More

ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರದ ಮದಿನಾನ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ ಹರಿಜನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿತ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳಾದ ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟ್ಯಾ, ರಾಹುಲ್ ತಳಕೇರಿ, ಮಣಿಕಂಠ ಬೆನಕಪ್ಪ ಹಾಗೂ ಸುದೀಪ್ ಕಾಂಬಳೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಹಿನ್ನೆಲೆ ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್​ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್​ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್​​ನಿಂದ ಕೊಚ್ಚಿ…

Read More

ಕೊಪ್ಪಳ : ಪೊಲೀಸರ ಸೋಗಿನಲ್ಲಿ ಬಂದ ವಂಚಕರನ್ನು ಅರಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಯಾಮಾರಿಸಲಾಗಿದೆ.ಮಹಿಳೆ ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.ಇಬ್ಬರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ಇಬ್ಬರೂ ಕಳ್ಳರ ಮೈ ಮೇಲೆ ಪೊಲೀಸ್ ಸಮವಸ್ತ್ರ ಇಲ್ಲದಿರುವುದನ್ನು ನೋಡಿ ಪ್ರಶ್ನಿಸಿದ್ದಾಳೆ. ಆಗ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ.ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ…

Read More