Author: kannadanewsnow05

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಗೃಹಿಣಿ ಒಬ್ಬಳು ಬಲಿಯಾಗಿದ್ದಾಳೆ. ಶಿಡ್ಲಘಟ್ಟ ತಾಲೂಕಿನ ರಾಮಾಲಿಂಗಪುರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಶಿರಿಷ (21) ಎನ್ನುವ ಗ್ರಹಿಣಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶ್ರೀನಾಥ್ ಮತ್ತು ಶಿರಿಷ ಪ್ರೀತಿಸಿ ಮದುವೆ ಆಗಿದ್ದರು. ಪತಿ ಶ್ರೀನಾಥ್ ಹಾಗೂ ಅವರ ಪೋಷಕರ ವಿರುದ್ಧ ಇದೀಗ ಕೊಲೆ ಆರೋಪ ಕೇಳಿ ಬದಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದೆ. ಇನ್ನು ಎಫ್ಐಆರ್ ನಲ್ಲಿರುವ ಲೋಪ ಸರಿಪಡಿಸುವಂತೆ ಧರಣಿ ಕೈಗೊಂಡಿದ್ದಾರೆ ಪೊಲೀಸರ ವಿರುದ್ಧ ಮೃತ ಶಿರೀಶ ಪೋಷಕರು ಅಕ್ರೋಶ ಅವರ ಹಾಕಿದ್ದು ಪತಿ ಶ್ರೀನಾಥ್ ಮನೆಯ ಎದರು ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ ಶ್ರೀಡ್ಲಘಟ್ಟ ತಾಲೂಕಿನ ರಾಮಲಿಂಗಾಪುರದಲ್ಲಿ ಶ್ರೀನಾಥ ಮನೆ ಇದ್ದು ಮನೆಯಂಗಳದಲ್ಲಿ ಶಿವಸಂಸ್ಕಾರ ಮಾಡುವುದಾಗಿ ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ಎಚ್ ಡಿ ದೇವೇಗೌಡ ಅವರು ಡಿಸ್ಚಾರ್ಜ್ ಆಗಿದ್ದಾರೆ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಹೆಚ್ ಡಿ ದೇವೇಗೌಡ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ನೇರವಾಗಿ ಪದ್ಮನಾಭನಗರ ಮನೆಗೆ ಎಚ್ಡಿ ದೇವೇಗೌಡ ಆಗಮಿಸಿದ್ದಾರೆ. ಹೌದು ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

Read More

ಕೇರಳ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕೇರಳದಲ್ಲಿ ದುರಂತ ಒಂದು ಸಂಭವಿಸಿದ್ದು ಯುವಕನೊಬ್ಬನಿಗೆ ಆರ್ ಎಸ್ ಎಸ್ ಕಾರ್ಯಕರ್ತ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಕೇರಳದಲ್ಲಿ ಟೆಕ್ಕಿ ಆನಂದ್ ಎನ್ನುವ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಇನ್ಸ್ಟಾಗ್ರಾಮ್ ನಲ್ಲಿ ಯುವಕ ಆನಂದ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರ್ ಎಸ್ ಎಸ್ ಸದಸ್ಯರಿಂದ ಲೈಂಗಿಕ ಕಿರುಕುಳ ಎಂದು ಆರೋಪ ಮಾಡಿರುವ ಆತ ನಿರಂತರವಾಗಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಕೇರಳದ ತಿರುವನಂತಪುರ ಲಾಡ್ಜ್ ನಲ್ಲಿ ಆನಂದ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಕಳೆದ ಗುರುವಾರ ಸಂಜೆ ಈ ಒಂದು ಘಟನೆ ನಡೆದಿದೆ ಆನಂದ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಅದೇ ದಿನ ಇನ್ಸ್ಟಾಗ್ರಾಮ್ ನಲ್ಲಿ ಆನಂದ್ ಪೋಸ್ಟ್ ಕೂಡ ಮಾಡಿದ್ದಾನೆ. ಬಾಲ್ಯದಲ್ಲಿಯೇ ಆರ್ ಎಸ್ ಎಸ್ ನಿಂದ ದೌರ್ಜನ್ಯ ಅನುಭವಿಸಿದ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾನೆ.…

Read More

ಬಾಗಲಕೋಟೆ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಿಯಾಂಕ ಅನ್ನೋ ಹೆಸರು ಗಂಡು ಅಥವಾ ಹೆಣ್ಣು ಎನ್ನುವುದರ ಕುರಿತು ನನಗೆ ಗೊತ್ತಾಗ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಮಾತನಾಡುವ ಮಾತುಗಳು ಅವರಿಗೆ ಸಂಬಂಧ ಇಲ್ಲದೆ ಇರುವುದನ್ನು ಮಾತನಾಡುತ್ತಾರೆ. ಆರ್ ಎಸ್ ಎಸ್ ಬ್ಯಾನ್ ಮಾಡಲು ಕಾಂಗ್ರೆಸ್ ಪಕ್ಷದ ಅಜ್ಜ ಮುತ್ತಜ್ಜರಿಗೆ ಸಾಧ್ಯ ಆಗಿಲ್ಲ. 1962ರಲ್ಲಿ ದೆಹಲಿಯಲ್ಲಿ ಜನವರಿ 26ರಂದು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನೆಹರು ಅವಕಾಶ ಮಾಡಿಕೊಟ್ಟಿದ್ದರು. ನೀವು ಅದನ್ನು ಬ್ಯಾನ್ ಮಾಡಲು ಹೊರಟಿದ್ದೀರಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದು ಇದೀಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಬಿಜೆಪಿಆರ್ ಎಸ್ ಎಸ್ ನ ಕೈಗೊಂಬೆ. ಆರ್ ಎಸ್ ಎಸ್ ಇಲ್ಲದೆ ಬಿಜೆಪಿ ಶೂನ್ಯ. ಧರ್ಮ ಇಲ್ಲದೆ ಆರ್ ಎಸ್ ಎಸ್ ಜೀರೋ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದರು. ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ‘RSS’ ವಿರೋಧಿ. ಕರಾವಳಿ ಮಲೆನಾಡಿನಲ್ಲಿ ಯಾರು ಬಲಿಯಾಗಿದ್ದಾರೆ ಮಾಹಿತಿ ತೆಗೆಯಿರಿ. ಬೇರೆ ಸಂಘಟನೆಗಳು ದೊಡ್ಡ ದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ಪುತ್ತಿರ? ಶಾಲೆಗಳಲ್ಲಿ ಆರ್ ಎಸ್ ಎಸ್ ನಿಂದ ನಡೆಯುತ್ತಿರುವ ಬ್ರೈನ್ ವಾಷ್ ನಿಲ್ಲಬೇಕು ಆರ್ಎಸ್ಎಸ್ ಲೈಂಗಿಕ ಕಿರುಕುಳದ ಬಗ್ಗೆ ಪುಸ್ತಕವನ್ನೇ ಬರೆದಿದ್ದಾರೆ ಹನುಮೇಗೌಡ ಎಂಬ ಪುಸ್ತಕ ಬರೆದಿದ್ದಾರೆ. ಬಿಜೆಪಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದು ಆರ್ ಎಸ್ ಎಸ್ ತೆಗೆದುಬಿಟ್ಟರೆ ಬಿಜೆಪಿ ಶೂನ್ಯ. ಇನ್ನು ಧರ್ಮವಿಲ್ಲದೆ…

Read More

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗುರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಸುರೇಶ ತುಪ್ಪದ (55) ಮತ್ತು ಮಹಾಂತಮ್ಮ (82) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತೂರು ಮತ್ತು ಗಾಯಾಳುಗಳು ಗದಗದ ನಿವಾಸಿಗಳು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಗದಗ ಕಡೆಗೆ ಕ್ರೂಜರ್ ವಾಹನ ತೆರಳುತ್ತಿತ್ತು.ಚಾಲಕನ ನಿರ್ಲಕ್ಷದಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿ ಚಾಲಕ ಮರಕೆ ಡಿಕ್ಕಿ ಹೊಡೆದು ಈ ಒಂದು ದುರಂತ ಸಂಭವಿಸಿದೆ. ಅಪಘಾತದ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷನ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಪ್ರಕರಣದಲ್ಲಿ ಶಿವರಾಜ್ ಪಾಟೀಲ್ A1ಆರೋಪಿ ಆಗಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಇಟ್ನಾಳದಲ್ಲಿ ಈ ಒಂದು ಘಟನೆ ನಡೆದಿದ್ದು ಅಕ್ಟೋಬರ್ 6 ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಟ್ನಾಳ್ ಗ್ರಾಮದ ಸರ್ವೆ ನಂಬರ್ 43/6 ಮತ್ತು 202/2 ಜಮೀನು ವಿಚಾರಕ್ಕೆ ಗಲಾಟೆ ನಡೆದಿದೆ. ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಮಾತ್ರ ಹಾರೋಗೇರಿ ಪೊಲೀಸ್ರು ಬಂಧಿಸಿದ್ದಾರೆ A1 ಆರೋಪಿ ಸರಿ ಪ್ರಮುಖ ಆರೋಪಿಗಳು ಬಂಧನಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಗೋಕಾಕ್ ಆಸ್ಪತ್ರೆಯಲ್ಲಿ ಸದ್ಯ ಮಹಿಳೆ ಮತ್ತು ವೃದ್ಧ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಉತ್ತರಕನ್ನಡ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿತು. ಗ್ಯಾರಂಟಿ ಯೋಜನೆ ಮಾಡಿ ಈಗ ಎರಡುವರೆ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ವಿಚಾರವಾಗಿ, ಕಾಂಗ್ರೆಸ್ ಶಾಸಕ ಆರ್. ವಿ ದೇಶಪಾಂಡೆ ಸ್ವಪಕ್ಷದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ.…

Read More

ಚಿಕ್ಕಬಳ್ಳಾಪುರ : ಪಕ್ಕದ್ ಮನೆಯ ಯುವಕನನ್ನು ಪ್ರೀತಿಸಿ ಲವ್ ಮ್ಯಾರೇಜ್ ಆದ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಂಗಟಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೌದು ಪಕ್ಕದ್ಮನೆ ಹುಡುಗ, ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಜಾತಿಯವರಾಗಿದ್ದು, ಮದುವೆಯಾಗಲು ಇಚ್ಚಿಸಿದ್ದರು. ಆದರೆ ಹುಡುಗಿ ಮನೆಯವರಿಗೆ ಈ ಮದುವೆ ಇಷ್ಟ ಇರಲಿಲ್ಲ. ಅವರ ವಿರೋಧದ ನಡುವೆ ಇಬ್ಬರೂ ಮದುವೆಯಾಗಿದ್ದಾರೆ. ಇದರಿಂದ ಕೆರಳಿದ ಹುಡುಗಿ ಮನೆಯವರು ಹುಡುಗನ ತಾಯಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಯ್ಯಮ್ಮ (48) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ ಐವತ್ತು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ವಲಯದ NCB ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಕೆಜಿ ಹೈಡ್ರೋಗಾಂಜ 6 ಕೆಜಿ ಸೈಲೋಸ್ ಸಿಬಿಲ್ ಅಣಬೆ ಜಪ್ತಿ ಮಾಡಿದ್ದಾರೆ. ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿ ಒಟ್ಟು 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ NCB ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದರು. ಮಾಹಿತಿಯಂತೆ ಅಕ್ಟೋಬರ್ 9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರಿಂದ ಸುಮಾರು 31 ಕೆಜಿ ಹೈಡ್ರೋಗಂಜ 4 ಕೆಜಿ ಸೈಲೋ ಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ. ಇಬ್ಬರ ವಿಚಾರಣೆ ವೇಳೆ ಹ್ಯಾಂಡ್ಲರ್ ಶ್ರೀಲಂಕಾದಿಂದ ಕೂಡ ಡ್ರಗ್ಸ್ ಬರುವ ಮಾಹಿತಿ ಕೂಡ ತಿಳಿದು ಬಂದಿದೆ. ಅದರಂತೆ ಶ್ರೀಲಂಕಾ ಪ್ರಜೆಯನ್ನು ಅಧಿಕಾರಿಗಳು ಕಾದು ಅರೆಸ್ಟ್ ಮಾಡಿದ್ದಾರೆ ಹ್ಯಾಂಡ್ಲರ್ ನಿಂದ ಸುಮಾರು 14…

Read More