Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳ ಸರಬರಾಜುಗಾರರ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಕಳೆದ 2 ವಾರದ ಅವಧಿಯಲ್ಲಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಚರಣೆ ಕೈಗೊಂಡು ಇಬ್ಬರು ವಿದೇಶಿ ಪ್ರಜೆಗಳ ಸಹಿತ 9 ಆರೋಪಿಗಳನ್ನು ಬಂಧಿಸಿದ್ದಾರೆ. ಕೆ.ಎಸ್.ಲೇಔಟ್, ಅವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೋಲೇಔಟ್ ಹಾಗೂ ರಾಮಮೂರ್ತಿನಗರ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ಪದಾರ್ಥ ನಿಗ್ರಹ ದಳದ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಲಾಡ್ಜ್‌ವೊಂದರಲ್ಲಿ ಮಾದಕ ಪದಾರ್ಥಗಳ ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುತ್ತಿರುವುದು ಕಂಡುಬಂದಿದೆ. ಈ ಕಾರ್ಯಾಚರಣೆಯ ಮೂಲಕ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 50 ಎಲ್‌ಎಸ್‌ಡಿ ಸ್ಟ್ರಿಪ್ಸ್, 85 ಗ್ರಾಂ ಕೊಕೇನ್, 56 ಗ್ರಾಂ ಹೈಡ್ರೋಗಾಂಜಾ ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ ಪೆಡ್ಲರ್‌ಗಳೊಂದಿಗೆ ಲಾಡ್ಜ್ ಸಿಬ್ಬಂದಿ ಸಂಪರ್ಕ ಹೊಂದಿರುವುದು…

Read More

ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ. ಉಡುಪಿಯ ಪರ್ಕಳ ಮೂಲದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆ ಇವತ್ತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಾಟನೆ ರಾಜಾಜಿನಗರದ ಗಾಯತ್ರಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಲತಾ (25) ಎಂದು ತಿಳಿದುಬಂದಿದೆ. ಕಳೆದ 5 ವರ್ಷಗಳಿಂದ ರಂಜಿತ್ ಹಾಗು ಲತಾ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ಕುಟುಂಬ ಮದವರು ಸಹ ಮದುವೆಗೆ ಒಪ್ಪಿದ್ದರು. ಮೃತ ಲತಾ ಖಾಸಗಿ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮದುವೆ ವಿಚಾರವನ್ನ ಪದೇ ಪದೇ ರಂಜಿತ್ ಮುಂದೂಡುತ್ತಿದ್ದ. ಇದೆ ವಿಚಾರಕ್ಕೆ ಇಬ್ಬರ ಮಧ್ಯ ಹಲವು ಬಾರಿ ಗಲಾಟೆ ಆಗಿತ್ತು. ಮೃತ ಲತಾ ಹಾಗು ರಂಜಿತ್ ಇಬ್ಬರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ನಿನ್ನೆ ಕೂಡ ಇದೆ ವಿಚಾರವಾಗಿ ಇಬ್ಬರ ಮಧ್ಯ ಗಲಾಟೆ ಆಗಿತ್ತು. ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಲತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ಭೇಟಿ ಬೀದಿ ಪರಿಶೀಲನೆ ನಡೆಸುತ್ತಿದ್ದಾರೆ.a

Read More

ಮಂಡ್ಯ : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ಘಟನೆಗೆ ಖಂಡಿಸಿ ನಿನ್ನೆ ಹಿಂದೂ ಸಂಘಟನೆ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ಮಾಡಿದ್ದರು ಇವೇ ಪ್ರತಿಭಟನೆಯಲ್ಲಿ ಕೂಡ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದರು. ಇದೀಗ ಪ್ರತಿಭಟನೆ ವೇಳೆ ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಸೇರಿದಂತೆ ಪ್ರತಿಭಟನಾಕಾರರ ವಿರುದ್ಧ 2 ಪ್ರತ್ಯೇಕ ಎರಡು FIR ದಾಖಲಾಗಿದೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಖಂಡಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಬಾವುಟ ಬಂಟಿಂಗ್ಸ್ ಗಳನ್ನು ಕಿತ್ತು ಎಸೆದಿದ್ದರು. ಮೆರವಣಿಗೆ ವೇಳೆ ಮಸೀದಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದರು. ಆ ವೇಳೆ ಕಟ್ಟಡಕ್ಕೆ ಕಲ್ಲು ತೋರಿದ ವಿಚಾರವಾಗಿ ಮತ್ತೊಂದು FIR ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಮೇಲೆ ಹಲ್ಲೆ ಎಂದು ಕೇಸ್…

Read More

ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗು ಪೊಲೀಸರು ಸುಮಾರು 21ಕ್ಕೂ ಅಧಿಕ ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ.ಇದೀಗ ಯಾವೆಲ್ಲ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾವೆಲ್ಲ ಕೇಸ್ ಗಳು ದಾಖಲಾಗಿವೆ ಎಂಬುದರ ಸಂಪೂರ್ಣ ಪಟ್ಟಿ ಇಲ್ಲಿದೆ. ಬಂಧಿತ 22 ಆರೋಪಿಗಳ ಹೆಸರು ಬಹಿರಂಗ ಮಹಮ್ಮದ್ ಆವೇಜ್ @ ಮುಳ್ಳು, ಮಹಮದ್ ಇರ್ಫಾನ್ @ ಮಿಯಾ, ನವಾಜ್ ಖಾನ್ @ ನವಾಜ್, ಇಮ್ರಾನ್ ಪಾಷಾ @ ಇಮ್ರಾನ್, ಉಮರ್ ಫಾರೂಕ್ @ ಉಮರ್, ಸೈಯದ್ ದಸ್ತಗಿರ್ @ ಸಯ್ಯದ್ ರಶೀದ್, ಖಾಸಿಫ್ ಅಹಮದ್ @ ಖಾಸಿಫ್, ಅಹಮದ್ ಸಲ್ಮಾನ್ @ ಮುಕ್ಕುಲ್ಲಾ, ಮುಸವೀರ್ ಪಾಷಾ @ ಒಡೆಯ, ಕಲಾಂದರ್ ಖಾನ್, ಮಹಮದ್ ಅಜೀಜ್, ಇನಾಯತ್ ಪಾಷಾ, ಸುಮೇರ್ ಪಾಷಾ, ಮಹಮದ್ ಖಲೀಂ @ ಕೈಫ್, ಸಕ್ಲೇನ್ ಪಾಷಾ, ಸಿಕಂದರ್ ಅಲಿಖಾನ್, ಸಾದಿಕ್ ಉಲ್ಲಾ, ಹರ್ಷದ್ ಖಾನ್, ಮೆಹಬೂಬ್ ಪಾಷಾ, ಪರ್ವಿಜ್ ಪಾಷಾ, ಇರ್ಫಾನ್ ಪಾಷಾ,.ಸುಹೇಬ್ ಖಾನ್…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ನನ್ನದೊಂದು ಮನವಿ ಇದೆ ಸ್ವಲ್ಪ ಪಾಯಿಸನ್ ಬೇಕು ಕೊಡಿ ಬಿಸಿಲು ನೋಡಿ ಒಂದು ತಿಂಗಳು ಆಯ್ತು ನನಗೆ ವಿಷ ಕೊಡಿ ಅಂತ ದರ್ಶನ್ ಮನವಿ ಮಾಡಿದ್ದಾರೆ ಅಂತ ಮಾಹಿತಿ ತಿಳಿದು ಬಂದಿದೆ. ಹಾಸಿಗೆ ದಿಂಬು ಮನೆಯ ಊಟ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದ್ದು ಅಲ್ಲದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಇವೆರಡರ ಕುರಿತು ಆದೇಶ ಹೊರಬೀಳಲಿದೆ. ಇದರ ಮಧ್ಯ ಬಿಸಿಲು ನೋಡಿ ಒಂದು ತಿಂಗಳಾಯಿತು ಕೈಯಲ್ಲ ಫಂಗಸ್ ಆಗಿದೆ. ಹಾಗಾಗಿ ವಿಷ ನೀಡಲು ಆದೇಶ ನೀಡುವಂತೆ ದರ್ಶನ್ ಮನವಿ ಮಾಡಿದ್ದಾರೆ.ಈ ವೇಳೆ…

Read More

ತುಮಕೂರು : ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರಿಗೆ ಬಿಜೆಪಿ ನಾಯಕರ ನಿಯೋಗ ಬೇಡಿ ವಿಚಾರವಾಗಿ ಬಿಜೆಪಿಯವರು ಹೋಗಲಿ ಯಾರು ಬೇಡ ಅಂತ ಹೇಳುತ್ತಾರೆ ಎಂದು ತುಮಕೂರಿನಲ್ಲಿ ಬಿಜೆಪಿ ವಿರುದ್ಧ ಡಾ. ಜಿ ಪರಮೇಶ್ವರ್ ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೋಗಲಿ ಅವರಿಗೆ ಯಾರು ಬೇಡ ಅಂತ ಹೇಳುತ್ತಾರೆ. ಈ ಸಂದರ್ಭದಲ್ಲಿ ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಪ್ರಚೋದನೆ ಮಾಡೋದೆಲ್ಲ ಮಾಡಿದರೆ ಸಹಿಸಲ್ಲ. ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ ಮುಸ್ಲಿಮರು ಇರಲಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

Read More

ಮಂಡ್ಯ : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ನಿರ್ಧರಿಸಿದ್ದಾರೆ. ಇಂದು ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ ಮದ್ದೂರು ವಕೀಲರ ಸಂಘ ನಿರ್ಧಾರ ಕೈಗೊಂಡಿದೆ. ಹೌದು ಮದ್ದೂರು ತಾಲೂಕು ವಕೀಲರಿಂದ ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದಾರೆ. ಮದ್ದೂರು ತಾಲೂಕು ವಕೀಲರಿಂದ ಒಮ್ಮತದ ಸಂಘದ ಸಭೆಯಲ್ಲಿ ವಕೀಲರು ನಿರ್ಧಾರ ತೆಗೆದುಕೊಂಡಿದ್ದಾರೆ. ಇದೆ ವೇಳೆ ಮಂಡ್ಯದ ಜಿಲ್ಲಾ ವಕೀಲರ ಸಂಘಕ್ಕು ಮನವಿ ಮಾಡಲಾಗಿದೆ ಎಂದು ಮದ್ದೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ಶಿವಣ್ಣ ಹೇಳಿಕೆ ನೀಡಿದ್ದಾರೆ. ಮದ್ದೂರು ಗಣೇಶ ಗಲಾಟೆ ಪ್ರಕರಣಕ್ಕೆ ಸಂಬಂಧಸಿದಂತೆ ಮದ್ದೂರು ಕೋರ್ಟ್ ಅನ್ನು ವಕೀಲರು ಬಹಿಷ್ಕಿರಿಸಿದ್ದಾರೆ. ಆರೋಪಿಗಳ ಪರ ವಕಾಲತ್ತಿಗೆ ವಕೀಲರ ಹಿಂದೇಟು ಹಾಕಿದ್ದು, ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ನಿರ್ಧಾರ ಕೈಗೊಂಡಿದ್ದಾರೆ.

Read More

ಬೆಳಗಾವಿ : ಪ್ರೀತಿ ವಿಚಾರಕ್ಕೆ ಬುದ್ಧಿವಾದ ಹೇಳಿದಕ್ಕೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ. ಕಣ್ಣಿಗೆ ಕಾರದಪುಡಿ ಎರಚಿ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.ಮಡಿವಾಳಪ್ಪ ಬೊಗಟಿಗೆ ದರ್ಶನ್ ಮೇಟಿ (20) ಎಂಬ ಯುವಕ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಮಡಿವಾಳಪ್ಪಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗಿ ವಿಚಾರಕ್ಕೆ ಕರೆದು ಮಡಿವಾಳಪ್ಪ ಬುದ್ಧಿವಾದ ಹೇಳಿದ್ದ. ಯುವತಿ ಒಬ್ಬಳ ಜೊತೆಗೆ ದರ್ಶನ್ ದೇವಸ್ಥಾನಕ್ಕೆ ಹೋಗಿದ್ದ ಯುವತಿ ಕುಟುಂಬಸ್ಥರ ಸಮುಖದಲ್ಲಿ ಮಡಿವಾಳಪ್ಪ ಬುದ್ಧಿವಾದ ಹೇಳಿದ್ದ. ಇದರಿಂದ ಕುಪಿತಗೊಂಡು ದರ್ಶನ್ ಕಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೀದರ್ : ಔರಾದ್ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲಗೆ ಸೈಬರ್ ವಂಚಕರು ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ. ಸಿಬಿಐ, ಇಡಿ ಮತ್ತು ಜಡ್ಜ್ ಹೆಸರಿನಲ್ಲಿ ವಂಚಕರು ವಿಡಿಯೋ ಕಾಲ್ ಮಾಡಿದ್ದಾರೆ. ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ಪಡೆದು ವಂಚನೆ ಎಸಗಿದ್ದಾರೆ. ಈ ಕುರಿತು ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಒಬ್ಬ ಖದಿಮ cbi ಅಧಿಕಾರಿ ಎಂದು ಕರೆ ಮಾಡಿದ್ದಾನೆ. ನೀವು ನರೇಶ ಗೋವಿಲ್ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಭಾಗಿಯಾಗಿದ್ದಾರೆ ಎಂದು ಕರೆ ಮಾಡಿದ್ದಾನೆ ಆಗಸ್ಟ್ 13ರಂದು ಸಿಬಿಐ ಡಿಸಿಪಿ ಅಂತ ಮಾಡಿ ಶಾಸಕರಿಗೆ ಮತ್ತೊಬ್ಬ ಕರೆ ಮಾಡಿದ್ದಾನೆ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಕಾಲ್ ಕಟ್ ಮಾಡಬೇಡಿ ಅಂತ ಹೇಳಿದ್ದಾನೆ. ಬಳಿಕ ಆನ್ಲೈನ್ ಮೂಲಕ ಫೇಕ್ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಕೋರ್ಟ್ ಹಾಲ್ ಥರ ದೃಶ್ಯ ಕ್ರಿಯೇಟ್ ಮಾಡಿ ನಂಬಿಕೆ ಹುಟ್ಟಿಸಿದ್ದಾರೆ. ನಿಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡಿ…

Read More