Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ನಿನ್ನೆ ತಾನೆ ಮೈಸೂರಿನಲ್ಲಿ ಉದ್ಯಮಿಯೊಬ್ಬ ಹೆಂಡತಿ, ಮಗ ಹಾಗು ತಾಯಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ, ಮೈಸೂರಿನಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ಮೈಸೂರಿನ ವಿಜಯನಗರ ಮೈದಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ಫು, ಇಬ್ಬರೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಆದರೆ ಮೃತ ಪುರುಷ ಹಾಗೂ ಮಹಿಳೆಯ ಗುರುತು ಇದುವರೆಗೂ ಪತ್ತೆಯಾಗಿಲ್ಲ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ 10 ವರ್ಷ ಸಿಎಂ ಆಗಿರಲಿ ಎಂದು ಕೆಲ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಿದಂತೆ ನಮಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಕೆಲ ನಾಯಕರು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರು ಇಂದು ದೆಹಲಿಗೆ ದಿಢೀರ್ ಎಂದು ಪ್ರಯಾಣ ಬೆಳೆಸಿದ್ದು, ಕಾಂಗ್ರೆಸ್ ನಲ್ಲಿ ಬಣ ರಾಜಕೀಯದ ನಡುವೆ ಇದೀಗ ಗೃಹ ಸಚಿವರ ಈ ಒಂದು ನಡೆ ತೀವ್ರ ಕುತೂಹಲ ಮೂಡಿಸಿದೆ. ಹೌದು ಇಂದು ಬೆಂಗಳೂರಿನಿಂದ ದೆಹಲಿಗೆ ತೆರಳಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಗೃಹ ಸಚಿವ ಜಿ.ಪರಮೇಶ್ವರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ತೆರೆಮರೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ಬಣ ಬಡಿದಾಟ ಇದೀಗ ಹೊರಬೀಳುತ್ತಿದೆ. ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಶೋಷಿತರ ಸಮಾವೇಶ ಕುರಿತು ಡಿ.ಕೆ.ಶಿವಕುಮಾರ್ ಹಾಗೂ…
ಬೆಂಗಳೂರು : ಮರಕ್ಕೆ ಕಾರುಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ತಡರಾತ್ರಿ ಈ ಒಂದು ಘಟನೆ ಸಂಭವಿಸಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಹಳ್ಳಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಮೃತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಪ್ಪಳ : ಕೊಪ್ಪಳದಲ್ಲಿ ಶಾಕಿಂಗ್ ಘಟನೆ ನಡೆದಿದ್ದು, ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಆಟವಾಡುತ್ತಿದ್ದಾಗ ಕುಸಿದು ಬುದ್ದು ಅಲಿಯಾ (5) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯ ಮೊಹಮ್ಮದ್ ರಿಯಾಜ್ ಸಾವನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಬೆಂಗಳೂರು : ಕಾಂಗ್ರೆಸ್ಸಿನ ಕೆಲವು ನಾಯಕರು ಇನ್ನೂ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಇದರ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಕೆಲ ಅಭಿಮಾನಿಗಳು ಮಹಾ ಕುಂಭಮೇಳದಲ್ಲಿ 2028 ರಲ್ಲಿ ಸತೀಶ್ ಜಾರ್ಕಿಹೊಳಿ ಸಿಎಂ ಆಗೇ ಆಗುತ್ತಾರೆ ಎಂದು ಹರಕೆ ಹೊತ್ತಿದ್ದಾರೆ. ಹೌದು ಮಹಾ ಕುಂಭಮೇಳದಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು 2028ರಲ್ಲಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಈ ಒಂದು ಹರಕೆ ಹೊತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸತೀಶ್ ಫೋಟೋ ಸಮೇತ ಮಹಾ ಕುಂಭ ಮೇಳದಲ್ಲಿ ಮಿಂದೆದ್ದು ಹರಕೆ ಹೊತ್ತಿದ್ದಾರೆ. 2028ಕ್ಕೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಸಿಎಂ ಆದರೆ ಇದೇ ಸ್ಥಳಕ್ಕೆ ಬಂದು ಹರಕೆ ತೀರಿಸುವುದಾಗಿ ಅಭಿಮಾನಿಗಳ ಬೇಡಿಕೆಯಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ತಿಂಗಳು 3 ಕಂತಿನ ಹಣ ಫಾಲಾನುಭವಿಗಳ ಖಾತೆಗೆ ಹಾಕುತ್ತೆವೆ ಎಂದು ಭರವಸೆ ನೀಡಿದರು. ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ, ಹಣ ಜಮೆ ಆಗದ ವಿಚಾರವಾಗಿ ಬೆಂಗಳೂರಿನ ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯಾಗಿ ಹಣಕಾಸಿನ ಸಮಸ್ಯೆ ಇಲ್ಲ.ಎರಡು ಮೂರು ತಿಂಗಳಿಂದ ವಿಳಂಬ ಆಗಿದೆ ಆದರೆ ಯೋಜನೆಗಳನ್ನು ನಿಲ್ಲಿಸಲ್ಲ. ಈ ತಿಂಗಳು ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುತ್ತೆ ಎರಡು ಮೂರು ತಿಂಗಳ ಹಣ ಒಂದೇ ಬಾರಿ ಖಾತೆಗಳಿಗೆ ಜಮೆ ಮಾಡುತ್ತೇವೆ ಎಂದು ತಿಳಿಸಿದರು. ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ…
ಗದಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಲವು ಭಾಗಗಳಲ್ಲಿ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದರ ಮಧ್ಯ ಮುಸುಕುಧಾರಿ ಗ್ಯಾಂಗ್ ಹಾವಳಿ ಕೂಡ ಹೆಚ್ಚಾಗಿತ್ತು. ಇದೀಗ ಗದಗ ನಗರಕ್ಕೂ ಈ ಒಂದು ಮುಸುಕುಧಾರಿ ಗ್ಯಾಂಗ್ ಕಾಲಿಟ್ಟಿದ್ದು, ಕಳೆದ ಒಂದೇ ದಿನಗಳಲ್ಲಿ ಸುಮಾರು 8 ಅಂಗಡಿಗಳ ದೋಚಿ ಮುಸುಕುಧಾರಿ ಗ್ಯಾಂಗ್ ಪರರಿಯಾಗಿದೆ. ಹೌದು ಗದಗ ಜಿಲ್ಲೆಗೂ ಎಂಟ್ರಿಕೊಟ್ಟ ಖತರ್ನಾಕ್ ಮುಸುಕುದಾರಿ ಗ್ಯಾಂಗ್ ಗದಗ-ಬೆಟಗೇರಿ ಅವಳಿ ನಗರದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಶೆಟರ್ ಮುರಿದು ಅಂಗಡಿಗಳಲ್ಲಿ ಇದ್ದ 25000 ಹಣ ದೋಚಿ ಪರಾರಿಯಾಗಿದ್ದಾರೆ. ಗದಗ-ಬೆಟಗೇರಿ ಅವಳಿ ನಗರದ ಹಾತಲಗೇರಿ, ಕೆ ಸಿ ರಾಣಿ ರೋಡ್, ಹಾಳಕೇರಿ ಮಠದ ಬಳಿ ಹಲವು ಕಿರಣಿ ಅಂಗಡಿಗಳಲ್ಲಿ ಮುಸುಕುದಾರಿ ಗ್ಯಾಂಗ್ ಕಳ್ಳತನ ಮಾಡಿದೆ. ಫೆಬ್ರವರಿ 16ರ ಮಧ್ಯರಾತ್ರಿ 8 ಅಂಗಡಿಗಳಿಗೆ 6 ಕಳ್ಳರ ಗ್ಯಾಂಗ್ ಕನ್ನ ಹಾಕಿದೆ, ಪೊಲೀಸ್ ಸೆಕ್ಯೂರಿಟಿ ಇದ್ದರೂ ಕೂಡ ಮುಸಕುದಾರಿ ಗ್ಯಾಂಗ್ ಈ ಒಂದು ಕೃತ್ಯ…
ಬೆಂಗಳೂರು : ಕುಡಿತದ ಚಟಕ್ಕೆ ದಾಸನಾಗಿದ್ದರಿಂದ ಬೈದು ಬುದ್ಧಿ ಹೇಳಿದ ತಂದೆಯ ಎದೆಗೆ ಮಗನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಕೆರೆ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಸಂಜೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಚನ್ನಬಸವಯ್ಯ (61) ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪಾಪಿ ಮಗನನ್ನು ಅಮಿತ್ (21) ಎಂದು ತಿಳಿದುಬಂದಿದೆ.ಪ್ರತಿ ದಿನ ಇದೇ ವಿಚಾರಕ್ಕೆ ಅಪ್ಪ – ಮಗನ ನಡುವೆ ಗಲಾಟೆ ನಡೆಯುತ್ತಿತ್ತು. ಸೋಮವಾರ ಸಹ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಮಗನಿಗೆ ಈ ಚಟದಿಂದ ಮುಕ್ತಿಹೊಂದಿ ಚೆನ್ನಾಗಿ ದುಡಿ ಎಂದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಮಗ ಅಮಿತ್ ತಂದೆ ಚನ್ನಬಸವಯ್ಯ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯೇ ಚನ್ನಬಸವಯ್ಯ ಸಾವನ್ನಪ್ಪಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಬ್ಯಾಡರಹಳ್ಳಿ ಪೊಲೀಸರು ಅಮಿತ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಮುಸ್ಲಿಂ ಮುಖಂಡ ಮುಸ್ತಾಕ್ ಪ್ರಚೋದನಾಕಾರಿ ಭಾಷಣ ಕೇಳಿ ಕೆಲವರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಪೊಲೀಸರು ಮುಸ್ಲಿಂ ಮುಖಂಡ ಮುಸ್ತಾಕ್ ಅನ್ನು ಬಂಧಿಸಿಲ್ಲ. ಹೌದು ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದು ಇಷ್ಟು ದಿನಗಳಾದರೂ ಕೂಡ ಪೊಲೀಸರು ಮುಸ್ತಾಕ್ಕನ್ನು ಅರೆಸ್ಟ್ ಯಾಕೆ ಮಾಡಿಲ್ಲ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಈತ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ನಿವಾಸಿ ಎಂದು ತಿಳಿದುಬಂದಿದೆ. ಮೈಸೂರಿನಲ್ಲಿ ಮುಸ್ತಾಕ್ ಮಕ್ಬೋಲಿ, ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. ಮೈಸೂರಿನ ರಾಜೀವ ನಗರದ ಶಿವಣ್ಣವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಸದ್ಯ ಮುಸ್ತಾಕ್ ಮೈಸೂರಿನ ಸಾಡೇ ರಸ್ತೆ ದರ್ಗಾ ಮಸೀದಿಯಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿ ಯಾರ ಮಸೀದಿ ಪಕ್ಕದಲ್ಲಿ ಇದ್ದು ಕಷ್ಟ ಎಂದು ಬಂದವರಿಗೆ ನಿಂಬೆಹಣ್ಣು ಮಂತ್ರಿಸಿ ಮುಸ್ತಾಕ್…
ನವದೆಹಲಿ : 1984 ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಇಂದು ದೆಹಲಿಯ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಒಂದು ಶಿಕ್ಷೆ ಪ್ರಕಟಿಸಲಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಇಂದು ತೀರ್ಪು ಹೊರಬೀಳಲಿದೆ. ಇಂದು ಸಜ್ಜನ್ ಕುಮಾರ್ ಗೆ ಶಿಕ್ಷೆಯ ಪ್ರಮಾಣ ಪ್ರಕಟಸಲಿರುವ ಕೋರ್ಟ್, 1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಈ ಒಂದು ಕೊಲೆ ನಡೆದಿತ್ತು. ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು.. 1984ರ ನವೆಂಬರ್ 1 ರಂದು ತಂದೆ ಮಗನ ಕೊಲೆ ಆಗಿತ್ತು. ತಂದೆ ಜಸ್ವಂತ್ ಸಿಂಗ್ ಹಾಗೂ ಮಗ ತರುಣ ದೀಪ ಸಿಂಗ್ ಕೊಲೆ ಆಗಿತ್ತು. ಈ ಕುರಿತು ಸಜ್ಜನ್ ಕುಮಾರ್ ನೇತೃತ್ವದ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಂಜಾಬಿ ಬಾಗ್ ಪೊಲೀಸ್…