Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಎಂಟ್ರಿ ಆಗಿದ್ದು ಈಗಾಗಲೇ ಬೆಂಗಳೂರಲ್ಲಿ ಒಂದೇ ಕಡೆಗೆ ಸುಮಾರು 71 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಇದೀಗ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊರೋನಾ ತಡೆಗಟ್ಟುವ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೋವಿಡ್ ಹೆಲ್ಪ್ಲೈನ್ ತೆರೆಯಿರಿ. ಕಳೆದ ಬಾರಿ ಆದಂತೆ ಈ ಬಾರಿ ಯಾವುದೇ ಸಮಸ್ಯೆ ಆಗಬಾರದು. ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಮಖಂಡಿ : ಮೇವು ತರಲು ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಂಕನವಾಡಿ ಗ್ರಾಮದ ಕಲ್ಲಪ್ಪ ದೊರೆಪ್ಪ ಅಂಬಿ (65 ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಗುಹೇಶ್ವರ ನಡುಗೆ ಮೇವು ತರಲು ತೆರಳುತ್ತಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರು ಈಜುತ್ತಾ ಕೃಷ್ಣಾ ನದಿ ದಾಟಲು ಕಲ್ಲಪ್ಪ ದೊರೆಪ್ಪ ಅಂಬಿ ಮುಂದಾಗಿದ್ದಾರೆ. ನದಿ ಮಧ್ಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೈ ಸೋತು ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಮನೆಯಲ್ಲಿದ್ದ 40 ವರ್ಷದ ಒಂಟಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಮನೆಯಲ್ಲಿ ಇದ್ದಂತಹ ಮಹಿಳೆ ಲತಾ ಎನ್ನುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲತಾ ಅವರನ್ನು ಹತ್ಯೆಗೈದಿ ದರೋಡೆ ನಡೆಸಲಾಗಿದೆ. ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ದುಷ್ಕರ್ಮಿಗಳು, ಪರಾರಿಯಾಗಿದ್ದಾರೆ. ಹೋಲ್ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎನ್ನುವವರ ಪತ್ನಿ ಲತಾ ಅವರ ಕೊಲೆಯಾಗಿದೆ. ಲತಾ ಅವರನ್ನು ಕೊಲೆಗೈದು ದುಷ್ಕರ್ಮಿಗಳು 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನವದೆಹಲಿ : ವೈರಿ ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವ್ಲಾಗರ್ ಜ್ಯೋತಿ ಮಲ್ಹೋತ್ರಾಗೆ ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಹರಿಯಾಣದ ಹಿಸಾರ್ ಕೋರ್ಟ್ ಆದೇಶ ಹೊರಡಿಸಿದೆ. 9 ದಿನಗಳ ಪೊಲೀಸ್ ಕಸ್ಟಡಿ ಬಳಿಕ ಜ್ಯೋತಿ ಮಲ್ಹೋತ್ರಾಳನ್ನು ಇಂದು ಹರಿಯಾಣದ ಹಿಸಾರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಗಾಗಲೇ ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ಜ್ಯೋತಿಯನ್ನು ವಿಚಾರಣೆಯನ್ನು ನಡೆಸಲಾಗಿದೆ. ಇಂದು ಜ್ಯೋತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನಕೆ ನೀಡಿ ಕೋರ್ಟ್ ಆದೇಶಿಸಿದೆ. ಗೂಢಚರ್ಯೆಯ ಶಂಕೆಯ ಮೇಲೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ 12 ಜನರಲ್ಲಿ ಮಲ್ಹೋತ್ರಾ ಕೂಡ ಒಬ್ಬಳಾಗಿದ್ದಾಳೆ. ಈ 12 ಜನರು ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಮೇ 16 ರಂದು ಅಧಿಕೃತ ರಹಸ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿ ಬಂಧಿಸಲಾಯಿತು. ನವೆಂಬರ್ 2023 ರಿಂದ ಪಾಕಿಸ್ತಾನಿ ಹೈಕಮಿಷನ್ನ ಉದ್ಯೋಗಿ ಎಹ್ಸಾನ್-ಉರ್-ರಹೀಮ್ ಅಲಿಯಾಸ್…
ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೇಕೆ ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು ಯುವಕ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗುರುಪುರ ಎಂಬ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಹರೀಶ್ (28) ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಹರೀಶ್ ಸಾವನಪ್ಪಿದ್ದಾನೆ. ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ನಲ್ಲಿ ಈ ಒಂದು ಘಟನೆ ನಡೆದಿದೆ.
ರಾಯಚೂರು : ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಆಸ್ಪತ್ರೆಯ ಬಳಿಯಿದ್ದ ಆಂಬುಲೆನ್ಸ್ ಅನ್ನು ಇದೀಗ ಧ್ವಂಸ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಸ್ಕಿಯ ಖಾಸಗಿ ನರ್ಸಿಂಗ್ ಹೋಮ್ ಬಳಿ ಬಾಣಂತಿ ಸಾವಿಗೆ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮೃತ ಬಾಣಂತಿ ಸಿದ್ದಮ್ಮ ಅವರ ಸಂಬಂಧಿಕರು ಅಂಬುಲೆನ್ಸ್ ದ್ವಂಸ ಮಾಡಿದ್ದಾರೆ. ಸ್ತ್ರೀರೋಗ ತಜ್ಞೆ ಸೌಮ್ಯ ಗುಂಡಳ್ಳಿ ವಿರುದ್ಧ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಖಾಸಗಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಬಳಿ ಆಂಬುಲೆನ್ಸ್ ಗಳನ್ನು ಸಾಮಾಜಿಕರು ದ್ವಂಸ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದ್ದು ಮಸ್ಕಿಯ ಖಾಸಗಿ ನರ್ಸಿಂಗ್ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗಳಿಗೆ ಸೇರಿದ ಸುಮಾರು 26.27 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ದಾರಿ ನಿರ್ದೇಶನಲಯ ಮುಟ್ಟುಗಳು ಹಾಕಿಕೊಂಡಿದೆ. ಹೌದು ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೊಲು ಹಾಕಿಕೊಂಡಿದೆ. ಜಾರಿ ನಿರ್ದೇಶನಲಯ ಇದೀಗ ಆರೋಪಿಗಳ ಸ್ಥಿರಾಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ. ಪ್ರಸ್ತುತ ಮಾರುಕಟ್ಟೆಯ ದರದಲ್ಲಿ ಈ ಆಸ್ತಿಯ ಮೌಲ್ಯ 40 ಕೋಟಿಗೆ ಏರಿಕೆಯಾಗಿದೆ. ಪ್ರಕರಣದ ಆರೋಪಿಗಳಾದ ಬಿಕೆ ನಾಗರಾಜಪ್ಪ, ಆರ್ ಲೀಲಾವತಿ ಮತ್ತು ಇತರೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೊಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕಾಯಿದೆಯ ಅಡಿ ಆರೋಪಿಗಳ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ. ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಇಡಿ ನಡಿಸುತ್ತಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿ 150 ಕೋಟಿ ರೂಪಾಯಿ ಹಗರಣ ಆರೋಪದ ಹಿನ್ನೆಲೆಯಲ್ಲಿ ಇದೀಗ ಇಡಿ ಅಧಿಕಾರಿಗಳು ಆರೋಪಿಗಳ ಸ್ಥಿರಾಸ್ತಿಯನ್ನು ಮುಟ್ಟುಗೊಲು ಹಾಕಿಕೊಂಡಿದೆ. https://twitter.com/dir_ed/status/1926935019798352374?t=Z0zewT3VXOjBCq7v4YZ12A&s=19
ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನುವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್ ಆದೇಶ ಹೊರಡಿಸಿದೆ. 5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್ ಟೆಸ್ಟ್ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು. ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ. ಇ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ ನೀತಿಗಳನ್ನು ಪಾಲಿಸುತ್ತೇವೆ ಅಂತಾ ಹೇಳುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ @siddaramaiah ಸಿದ್ದರಾಮಯ್ಯನವರೇ? ನಿಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ನಿಮಗೆ ಯಾಕೆ ಸಂಕೋಚ? ಡಿಕೆ ಶಿವಕುಮಾರ್ ರವರೇ @DKShivakumar? ನಿಮ್ಮ ಸರ್ಕಾರದ ದುರಾಡಳಿತವನ್ನು, ಭ್ರಷ್ಟತೆಯನ್ನು, ಸುಭೀಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿದ್ದನ್ನು, ಮಿತಿಮೀರಿದ ಓಲೈಕೆ ರಾಜಕಾರಣದ ಬಗ್ಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ ಬಗ್ಗುವುದು ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ @BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ. ಸಿಎಂ @siddaramaiah ನವರೇ ಹಾಗೂ ಡಿಸಿಎಂ @DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. @INCKarnataka…