Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರೆ ನಿಮ್ಮ ಮೊಬೈಲ್ ಏನಾದರೂ ಎಸ್ಐಟಿ ಅಧಿಕಾರಿಗಳಿಗೆ ಕೊಟ್ಟರೆ ನೂರಕ್ಕೆ ನೂರರಷ್ಟು ನೀವು ಪ್ರಜ್ವಲ್ ರೇವಣ್ಣ ತರ ಜೈಲಿಗೆ ಹೋಗುತ್ತೀರಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಅವರು ಸ್ಫೋಟಕವಾದ ಮಾಹಿತಿ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರೇ ನಿಮ್ಮ ಮೊಬೈಲ್ ಸೀಜ್ ಮಾಡಿದ್ದಾರಲ್ಲ ಆ ಮೊಬೈಲನ್ನು ಎಸ್ಐಟಿಗೆ ಕೊಟ್ಟರೆ ನೂರಕ್ಕೆ ನೂರು ಪ್ರಜ್ವಲ್ ರೇವಣ್ಣ ತರ ಜೈಲಿಗೆ ಹೋಗುತ್ತಿರಿ. ಪ್ರಜ್ವಲ್ ರೇವಣ್ಣ ಹೇಗೆ ಜೈಲಿಗೆ ಹೋಗಿದ್ದಾರೋ ಅದೇ ರೀತಿ ನೀವು ಜೈಲಿಗೆ ಹೋಗುತ್ತೀರಿ. ನಿಮಗೆ ಯೋಗ್ಯತೆ ಇದೆಯಾ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡೋಕೆ? ಮೈಸೂರಿಗೆ ನಿಮ್ಮ ಕೊಡುಗೆ ಏನು ಹೇಳಿ ಅದನ್ನು ಬಿಟ್ಟು ಬಾಯಿ ಬಡಿಕೊಳ್ಳುವುದು ನಿಲ್ಲಿಸಿ ಎಂದು ತಿಳಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸಿದ್ದರಾಮಯ್ಯ ಅವರಿಗೆ ಹೋಲಿಸಿದ ವಿಚಾರವಾಗಿ ಮಾತನಾಡಿದ ಅವರು, ಮಹಾರಾಜರು ಮೈಸೂರಿಗೆ ಅನೇಕ ಕೊಡುಗೆ ಕೊಟ್ಟಿದ್ದಾರೆ. ಅದೇ…
ಬಿಹಾರ್ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ರಾಹುಲ್ ಕುಮಾರ್ (25) ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2ನೇ ವರ್ಷದ ಬಿಎಸ್ಸಿ ನರ್ಗಿಂಗ್ ವ್ಯಾಸಂಗ ಮಾಡುತ್ತಿದ್ದ. 4 ತಿಂಗಳ ಹಿಂದಷ್ಟೇ ಅದೇ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ತನ್ನು ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ. ರಾಹುಲ್ ಅಂತರ್ಜಾತಿ ಅನ್ನೋ ಕಾರಣಕ್ಕೆ ಕುಟುಂಬದವರಿಂದ ಭಾರೀ ವಿರೋಧ ಇತ್ತು ಅಂತ ತಿಳಿದುಬಂದಿದೆ. ಸಂಜೆ ಹೂಡಿ ಧರಿಸಿದ್ದ ವ್ಯಕ್ತಿಯೊಬ್ಬ ರಾಹುಲ್ನ ಬಳಿಗೆ ಬಂದಿದ್ದ. ಹತ್ತಿರ ಬಂದಾಗ ಅದು ನನ್ನ ತಂದೆ ಅನ್ನೋದು ಗೊತ್ತಾಯ್ತ. ಅವರ ಕೈಯಲ್ಲಿ ಬಂದೂಕು ಇತ್ತು. ನನ್ನ ಕಣ್ಮುಂದೆಯೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದ್ರು. ನನ್ನ ಗಂಡ ನನ್ನ ಮಡಿಲಲ್ಲಿ ಪ್ರಾಣ ಬಿಟ್ಟರು ಅಂತ ತನ್ನು ಕಣ್ಣೀರಿಟ್ಟಿದ್ದಾಳೆ.ನನ್ನ ಇಡೀ ಕುಟುಂಬ ಈ ಸಂಚಿನಲ್ಲಿ ಭಾಗಿಯಾಗಿದೆ. ನನ್ನ ಸಹೋದರ ಮತ್ತು…
ಬೆಂಗಳೂರು : ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಇದೀಗ ಘಟನೆಗೆ ಸಂಬಂಧಿಸಿದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ನಿವೃತ್ತ ನ್ಯಾಯಮೂರ್ತಿ ಮೈಖಲ್ ಕುನ್ಹಾ ಅವರ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ರದ್ದುಪಡಿಸುವಂತೆ ಕೋರಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಸುನಿಲ್ ಮ್ಯಾಥ್ಯೂ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ನ್ಯಾಯಪೀಠವು ಸರ್ಕಾರಕ್ಕೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಅವರನ್ನು ಉದ್ದೇಶಿಸಿದ್ದ ನ್ಯಾಯಪೀಠ, ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದೇ ಎಂದು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ಸಂಬಂಧ ಸರ್ಕಾರದಿಂದ ಮಾಹಿತಿ ಪಡೆದು ಪೀಠಕ್ಕೆ ತಿಳಿಸಲಾಗುವುದು…
ಹಾವೇರಿ : ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಚಿರತೆ ಕಂಡುಬಂತು. ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಮತ್ತು ಬಲೆ ಬಳಸಿ ಸೆರೆ ಹಿಡಿಯುವ ಪ್ರಯತ್ನ ಸಾಗುತ್ತಿದೆ. ಕಾರ್ಯಾಚರಣೆ ತಂಡ ಅರಿವಳಿಕೆ ತಜ್ಞರನ್ನು ಕಾಯುತ್ತಿದ್ದು, ಡಿಎಫ್ಒ ಅಬ್ದುಲ್ ಅಜಿಜ್ ಶೇಖ್ ಈ ಕುರಿತು ಪ್ರತಿಕ್ರಿಯಿಸಿದರು. 25ಕ್ಕೂ ಅಧಿಕ ಸಿಬ್ಬಂದಿ, ವಲಯ ಅರಣ್ಯಾಧಿಕಾರಿ, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಡ್ರೋನ್ ಬಳಸಲಾಗುತ್ತಿದೆ. ಸುತ್ತಲೂ ಬಲೆ ಹಾಕಲಾಗಿದೆ. ಬೋನು ಇರಿಸಲಾಗಿದೆ. ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿಯುತ್ತೇವೆ. ಅರಿವಳಿಕೆ ತಜ್ಞರು ಧಾರವಾಡದಿಂದ ಬರುತ್ತಿದ್ದಾರೆ. ಜನರೂ ಸಹಕರಿಸಬೇಕು ಎಂದು ಅವರು ಹೇಳಿದರು.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶಬಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ನೂರಾರು ಹೆಣ್ಣು ಮಕ್ಕಳನ್ನು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದು ಇತ್ತೀಚಿಗೆ ಮನುಷ್ಯನ ತಲೆ ಬುರುಡೆ ಸಿಕ್ಕಿತ್ತು. ಇದೀಗ FSL ತಜ್ಞರು ಈ ಒಂದು ರಹಸ್ಯ ಬಯಲು ಮಾಡಿದ್ದಾರೆ. ಹೌದು ಸುಮಾರು 30 ರಿಂದ 35 ವರ್ಷದ ಪುರುಷನ ತಲೆ ಬುರುಡೆ ಎಂದು FSL ತಜ್ಞರು ಮಾಹಿತಿ ನೀಡಿದ್ದಾರೆ. ಸಾವಿನ ಅಸಲಿಯತ್ತು ತಿಳಿಯಲು ಬೆಂಗಳೂರಿಗೆ ಬುರುಡೆ ರವಾನಿಸಲಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎಫ್ ಎಸ್ ಎಲ್ ತಲುಬುಡೆ ಕಳುಹಿಸಿತ್ತು. ಧರ್ಮಸ್ಥಳ ಪೊಲೀಸ್ ರಿಗೆ ಹೆಣ್ಣಿನ ಬುರುಡೆ. ಎಂದು ದೂರುದಾರ ಹೇಳಿಕೆ ನೀಡಿದ್ದ. ಈ ರೀತಿ ನೂರಾರು ಹೆಣ್ಣುಮಕ್ಕಳ ಶವಗಳನ್ನು ಕೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದ.ಇದೀಗ ಸುಮಾರು 30-35 ವರ್ಷದ ಪುರುಷನ ತಲೆ ಬುರುಡೆ ಎಂದು ಮಾಹಿತಿ ತಿಳಿದು ಬಂದಿದೆ. ಅತ್ಯಾಚಾರ ಎಸಗಿರುವ ಹೆಣ್ಣು ಮಕ್ಕಳ ಶವ ಹೂತ್ತಿಟ್ಟಿದ್ದೇನೆ ನನಗೆ ಪಾಪ ಪ್ರಜ್ಞೆ…
ಬೆಂಗಳೂರು : ಇಂದು ವಿಕ್ಟೊರಿಯ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಿಡಿರ್ ಎಂದು ಭೇಟಿ ನೀಡಿದರು. ಬೆಂಗಳೂರಿನ ಕೆಆರ್ ಮಾರ್ಕೆಟ್ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಎಂದು ಭೇಟಿಯಾಗಿದ್ದಾರೆ. ಇದೆ ವೇಳೆ ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸಾಥ್ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಹೊರ ರೋಗಿಗಳ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದರು. ಇವಳೇ ಬಹಳ ರೋಗಿಯೊಬ್ಬರು ಅಳುತ್ತಲೇ ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿ ಅಳಲು ತೋಡಿಕೊಂಡರು ಈ ವೇಳೆ ಸಿಎಂ ಗೆ ವೈದಿಕ ಶಿಕ್ಷಣ ಸಚಿವ ಶರಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಸಚಿವರು ಅಧಿಕಾರಿಗಳು ಸಾಥ್ ನೀಡಿದರು.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ 13 ವರ್ಷದ ಬಾಲಕನನ್ನು ಅಪಹರಣ ಮಾಡಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಇದೀಗ ಬಿಗ್ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಹೌದು ಪೊಲೀಸರು ಆರೋಪಿಗಳ ವಿಚಾರಣೆ ಮಾಡುವಾಗ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಸೈಕೋ ಗುರುಮೂರ್ತಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಬಾಲಕನ ಗಂಟಲಿಗೆ ಚಾಕು ಚುಚ್ಚಿ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದನು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿ ನಿನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದೇವೆ, 5 ಲಕ್ಷ ಹಣ ಕೊಟ್ಟು ಮಗನನ್ನು ಬಿಡಿಸಿಕೊಂಡು ಹೋಗಿ ಎಂದು ಡಿಮ್ಯಾಂಡ್ ಮಾಡಿ ಕಥೆ ಕಟ್ಟಿದ್ದನು. ಪ್ರಕರಣ ಹಿನ್ನೆಲೆ? ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಅಚ್ಯುತ್ ರೆಡ್ಡಿ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು…
ಬೆಂಗಳೂರು : ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಕೆಜೆ ಜಾರ್ಜ್ ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಸಚಿವ ಕೆಜೆ ಜಾರ್ಜ್ ವಿರುದ್ಧದ ಖಾಸಗಿ ದೂರಿನ ವಿಚಾರಣೆಗೆ ಇದೀಗ ಹೈಕೋರ್ಟ್ ತಡೆ ನಡೆ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಈಗ ಹೈಕೋರ್ಟ್ ತಡೆ ನೀಡಿದೆ. ಸಚಿವ ಕೆಜೆ ಜಾರ್ಜ್ ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಕೋರ್ಟ್ ಲೋಕಾಯುಕ್ತ ಪೊಲೀಸರಿಂದ ವರದಿ ಕೇಳಿದೆ 17A ಅಡಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಆದೇಶ ಹೊರಡಿಸಿದ್ದು, ಬಿಎನ್ಎಸ್ ನಿಯಮ ಉಲ್ಲಂಘನೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ವಾದಿಸಿದರು. ಮಧ್ಯಂತರ ರಿಲೀಫ್ ನೀಡಿ ನೀಡಿ ನಾ. MI ಅರುಣ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ದೂರುದಾರನ ಪರವಾಗಿ ಸ್ಥಳೀಯ 6 ಜನರು ಇದೀಗ ಎಸ್ಐಟಿ ಮುಂದೆ ಹಾಜರಾಗಿದ್ದಾರೆ. ಸ್ಥಳೀಯ 6 ಜನರು ಬಾಲಕಿಯ ಶವ ಹೂತಿರುವುದನ್ನು ನೋಡಿದ್ದಾಗಿ ಸಾಕ್ಷಿ ಹೇಳಲು ಇದೀಗ SIT ಮುಂದೆ ಬಂದಿದ್ದಾರೆ. ಶೋಧ ಕಾರ್ಯಕ್ಕೆ ಸಹಾಯ ಮಾಡುತ್ತೇವೆ ಎಂದು ಆಗಮಿಸಿದ್ದಾರೆ ಆದರೆ ಈ ಕುರಿತು ಎಸ್ಐಟಿ ಅಧಿಕಾರಿಗಳು ಇನ್ನೂ ಕೂಡ ಖಚಿತಪಡಿಸಿಲ್ಲ ಆರು ಜನರ ಹೇಳಿಕೆ ಸತ್ಯಾಸತ್ಯ ಬಗ್ಗೆ ಚರ್ಚೆ ನಡೆಯುತ್ತಿದ್ದು ಅಧಿಕಾರಿಗಳು ಇದುವರೆಗೂ ಇದನ್ನು ಖಚಿತಪಡಿಸಿಲ್ಲ.
ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಸಿಂಚನಹಳ್ಳಿಯ ಸುಶ್ಮಿತಾ (23) ಎನ್ನುವ ಗರ್ಭಿಣಿ ವೈದ್ಯರ ನಿರ್ಲಕ್ಷಕ್ಕೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ಸುಶ್ಮಿತಾ ಕಠಾರಿ ಆಸ್ಪತ್ರೆಯಲ್ಲಿ ಸುಶ್ಮಿತಾ ಸಾವನಪ್ಪಿದ್ದಾರೆ. ನಿನ್ನೆ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡು ಹೋಗಿದ್ದರು. ಈ ವೇಳೆ ಆಸ್ಪತ್ರೆ ಆಗಿದ್ದರೂ ನಾಳೆ ಹರಿಗೆ ಮಾಡುತ್ತೇವೆ ಅಂತ ವೈದ್ಯರು ಗರ್ಭಿಣಿಗೆ ತಿಳಿಸಿದ್ದರು. ಬೆಳಗ್ಗೆ ಆಸ್ಪತ್ರೆಗೆ ಹೆರಿಗೆ ಅಂತ ಬಂದಾಗ ಸುಶ್ಮಿತಾ ಸಾವನ್ನಪ್ಪಿದ್ದಾರೆ. ವೈದ್ಯರು ಆಸ್ಪತ್ರೆಗೆ ಬರುವ ಗರ್ಭಿಣಿ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಸದ್ಯ ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ಅವರ ಹಾಕಿದ್ದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.