Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ಗೆ ಲಾರಿ ಗುದ್ದಿ ಜೋಡಿ ಸಾವು!
ಗಂಗಾವತಿ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪ ನಡೆದಿದೆ. ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳು ಮರಳುತ್ತಿದ್ದರು. ಕವಿತಾರನ್ನು ತಮ್ಮ ಗಂಗಾವತಿಯ ಮನೆಗೆ ಬಿಟ್ಟು ಹೋಗಲು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿಯೊಂದು ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡು ಗಂಗಾವತಿ ಆಸತ್ರೆಯಲ್ಲಿ ಮೃತಪಟ್ಟಿದಾರೆ.
ಬೆಂಗಳೂರು : ರಾಜ್ಯಾದ್ಯಂತ ನಿನ್ನೆ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ ಪತ್ರಿಕೆ-1ಕ್ಕೆ ಶೇ.93.35 ಅಭ್ಯರ್ಥಿಗಳು ಹಾಗೂ ಪತ್ರಿಕೆ-2ಕ್ಕೆ ಶೇ.94.79 ಅಭ್ಯರ್ಥಿಗಳು ಹಾಜರಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ 903 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 3.35 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಹಾವೇರಿಯ ಇಜಾರಿಲಕಮಾಪುರ ಪಿಯು ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಟಿಇಟಿ (ಪರೀಕ್ಷೆ)ಗೆ ಹಾಜರಾಗಲು ಬಂದಿದ್ದ ಮಹಿಳಾ ಅಭ್ಯರ್ಥಿಗಳ ಗಾಜಿನ ಬಳೆ, ಕಿವಿ ಓಲೆ, ಕಾಲು ಚೈನು ತೆಗೆದಿರಿಸಿ ಪರೀಕ್ಷಾ ಕೊಠಡಿಗೆ ಬರುವಂತೆ ಸಿಬ್ಬಂದಿ ಸೂಚನೆ ನೀಡಿದರು. ಈ ರೀತಿಯ ನಿಯಮ ಇಲ್ಲದಿದ್ದರೂ ಬಳೆ, ಕಿವಿಯೋಲೆ ತೆಗೆಸಿದ್ದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು. ಆದರೆ, ಇದನ್ನು ಅಲ್ಲಗಳೆದಿರುವ ಡಿಡಿಪಿಐ ಮೋಹನ ದಂಡಿನ್, ನಮ್ಮ ಸಿಬ್ಬಂದಿಗೆ ನಿಯಮದ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ಈ ರೀತಿಯ ಘಟನೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ : ಮಹಿಳೆ ಮೇಲೆ 2 ರಾಟ್ವೀಲರ್ ನಾಯಿಗಳು ಭೀಕರ ದಾಳಿ ಮಾಡಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ನಾಯಿಗಳ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಶೈಲೇಶ್ ಕುಮಾರ್ ಬಂಧಿತರಾಗಿದ್ದು, ನಾಯಿಗಳನ್ನು ಜಿಲ್ಲೆಯ ಹೊನ್ನೂರು ಕ್ರಾಸ್ ಬಳಿ ಬಿಟ್ಟು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೈಲೇಶ್ ಅವರು ನಾಯಿಗಳನ್ನು ಆಟೋ ರಿಕ್ಷಾದಲ್ಲಿ ತಂದು ರಸ್ತೆ ಬದಿ ಬಿಟ್ಟು ಹೋಗಿದ್ದ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿ ಆತನನ್ನು ಬಂಧಿಸಿದ್ದಾರೆ. ಬುಧವಾರ ರಾತ್ರಿ ಶೈಲೇಶ್ ತಮ್ಮ 2 ರಾಟ್ವೀಲರ್ ನಾಯಿಗಳನ್ನು ಬಿಟ್ಟು ಕಾಲ್ಕಿತ್ತಿದ್ದರು. ಈ ನಾಯಿಗಳು ಅಮಲು ಬಂದಂತೆ ವರ್ತಿಸಿ, ರಸ್ತೆ ಬದಿ ಹಾದು ಹೋಗುತ್ತಿದ್ದ ಅನಿತಾ ಅವರ ಮೇಲೆ ದಾಳಿ ಮಾಡಿ, ಭೀಕರವಾಗಿ ದಾಳಿ ಮಾಡಿತ್ತು. ಗುರುವಾರ ಸ್ಥಳೀಯರು ಅನಿತಾರನ್ನು ಕಂಡು ಆಸ್ಪತ್ರೆಗೆ ಸೇರಿಸುವಾಗ ಅವರು ಅಸುನೀಗಿದ್ದರು.
ಬೆಂಗಳೂರು : ಕಳೆದೊಂದು ವಾರದಿಂದ ಇಂಡಿಗೋ ವಿಮಾ ನಯಾನ ಸಮಸ್ಯೆ ಮುಂದುವರಿದಿದ್ದು, ಭಾನುವಾರ ಇಲ್ಲಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 150 ವಿಮಾನಗಳು ರದ್ದಾಗಿದ್ದವು. ನಿಲ್ದಾಣಕ್ಕೆ ಬರುವ 76 ವಿಮಾನಗಳು ಹಾಗೂ ಇಲ್ಲಿಂದ ಹೊರಡಬೇಕಿದ್ದ 74 ವಿಮಾ ನಗಳ ಸಂಚಾರವನ್ನು ಇಂಡಿಗೋ ರದ್ದುಗೊ ಳಿಸಿತು. ಹಲವು ವಿಮಾನಗಳು ವಿಳಂಬವಾಗಿ ಆಗಮಿಸಿ, ಹೊರಟವು. ದೆಹಲಿ, ಹೈದರಾಬಾದ್, ಇಂದೋರ್, ರಾಯಪುರ್, ಕೊಲ್ಕತ್ತಾ, ಮಂಗಳೂರು ಕೊಚ್ಚಿ, ಶ್ರೀನಗರ, ಭೂಪಾಲ್, ಸೇರಿದಂತೆ ಹಲವಡೆ ತೆರಳಬೇ ಕಿದ್ದ ವಿಮಾನಗಳು ಸಂಚರಿಸುವುದಿಲ್ಲ ಎಂದು ನಿಲ್ದಾಣದ ಸಿಬ್ಬಂದಿ ಮಾಹಿತಿ ನೀಡಿದರು. 12 ಗಂಟೆ ಆಸುಪಾಸಿನಲ್ಲಿ ಹೊರಡಬೇಕಿದ್ದ ವಿಮಾನಗಳು ಹಾರಾಡಲಿಲ್ಲ. 11.50ರ ಕೊಲ್ಕತ್ತಾ, 12.40ರ ಮಂಗಳೂರು, 1 ಗಂಟೆಗೆ ದೆಹಲಿ, 1.5ಕ್ಕೆ ಕೊಚ್ಚಿ ಹಾಗೂ 1.20 ರ ನಾಸಿಕ್ ವಿಮಾನ ಸೇರಿ ವಿಮಾನಗಳು ರದ್ದಾಗಿದ್ದವು. ಟ್ರಾವೆಲ್ ಏಜೆಂಟರೊಬ್ಬರು ಮಾತನಾಡಿ, ವಿಮಾನ ರದ್ದತಿಯಿಂದ ನಮಗೆ ಸಾಕಷ್ಟು ತೊಂದರೆ ಆಗಿದೆ. ನಮ್ಮಲ್ಲಿ ಬುಕ್ ಮಾಡಿರುವ ಪ್ರಯಾಣಿಕರ ಸಂಚಾರ ವ್ಯತ್ಯಯಗೊಂಡು ಪ್ರವಾರ ರದ್ದುಪಡಿಸಿದರು. ಡಿಸೆಂಬರ್ತಿಂಗಳು ಪ್ರವಾಸದ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಬಂದೂಕಿನಿಂದ ಫೈರಿಂಗ್ ನಡೆಸಲಾಗಿದೆ. ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತಿಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರಾದ ಸತೀಶ್ (28) ಹಾಗೂ ಮಿಟ್ಟು (25) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗುಂಡು ಹಾರಿಸಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನೆಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ 63% ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಉಪ ಲೋಕಾಯುಕ್ತ ಬಿ ವೀರಪ್ಪ ಅವರು ಇದೀಗ ಸ್ಪಷ್ಟನೆ ನೀಡಿದ್ದಾರೆ. ವಿಚಾರವಾಗಿ ಉಪ ಲೋಕಾಯುಕ್ತ ಬಿ ವೀರಪ್ಪ ಮಾತನಾಡಿದ್ದು ನನ್ನ ಹೇಳಿಕೆಯನ್ನು ತಿರುಚಲಾಗಿದೆ ಹೈಕೋರ್ಟ್ ಸಭಾಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭವಿತ್ತು. ಈ ವೇಳೆ ದೇಶಾದ್ಯಂತ ಇರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದೇನೆ. ಸಂಪೂರ್ಣವಾಗಿ ನನ್ನ ಭಾಷಣ ಆರಿಸದೆ ತಪ್ಪಾಗಿ ತಿರುಸಲಾಗಿದೆ ಎಂದು ಬೆಂಗಳೂರಿನಲ್ಲಿ ಒಬ್ಬ ಲೋಕಾಯುಕ್ತ ನ್ಯಾ ಬಿ.ವಿರಪ್ಪ ಸ್ಪಷ್ಟಪಡಿಸಿದರು.
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮುಖಾಂತರ ಫುಲ್ ಸ್ಟಾಪ್ ಹಾಕಿದ್ದಾರೆ. ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ ಬಿನಾಭಿಪ್ರಾಯಗಳಿಲ್ಲ ನಾವು ಅಣ್ಣ ತಮ್ಮ ಇದ್ದಂಗೆ ಅಂತ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ. ಇದೀಗ ಸಿಎಂ ವಿಚಾರಕ್ಕೆ ಸಂಬಂಧಪಟ್ಟಂತೆ ಮೈಸೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ ಆದರೆ ಹೈಕಮಾಂಡ್ ಈ ವಿಚಾರವಾಗಿ ಎಲ್ಲವನ್ನು ನಿರ್ಧರಿಸುತ್ತದೆ. ಈ ವಿಚಾರದಲ್ಲಿ ನನ್ನನ್ನು ಯಾಕೆ ಹೇಳಿದೆ ತರುತ್ತಾ ಇದ್ದೀರಾ ನನಗೆ ಆಸೆ ಇದೆ ಆದರೆ ಸಮಯ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಮೈಸೂರಿನಲ್ಲಿ ಸಚಿವ ಧನಿಷ್ಠ ಹೇಳಿಕೆ ನೀಡಿದರು.
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು. ಇದೇ ವೇಳೆ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಯುವತಿಯನ್ನು ಪ್ರೀತಿಸಿದ್ದಾನೆ ಎನ್ನುವ ಒಂದೇ ಒಂದು ಕಾರಣಕ್ಕೆ, ನಡು ರಸ್ತೆಯಲ್ಲಿಯೇ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಯಲಹಂಕ-ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಪವನ್ ಕುಮಾರ್ (30) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಪರಿಶೀಲಿಸಿದ್ದಾರೆ. ಡಿವೈಎಸ್ಪಿ ಪಾಡುರಂಗ ಮತ್ತು ನಗರ ಠಾಣೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶಗೌಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮೃತ ವ್ಯಕ್ತಿ ಜಾಲಪ್ಪ ಕಾಲೇಜಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದರು. ಕಾಲೇಜಿನ ವಸತಿ ಗೃಹದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದರು. ಗುರುವಾರ ರಾತ್ರಿ 9 ಗಂಟೆ ಸಮಯದಲ್ಲಿ ಫೋನ್ ಮಾಡಿ ಹೊರಗೆ ಕರೆಸಿಕೊಂಡಿದ್ದಾರೆ. ಆಟೋದಲ್ಲಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಆಟೋವನ್ನು…
ನವದೆಹಲಿ : ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದೆಹಲಿಯ ರಾಜಘಾಟ್ ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ಮೋದಿ ಹಾಗೂ ಪುಟಿನ್ ನಡುವೆ ದ್ವಿಪಕ್ಷಿಯ ಮಾತುಕತೆ ನಡೆಯಲಿದೆ. ಈ ವೇಳೆ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಟಿನ್ ಅವರು ಪುಷ್ಪ ನಮನ ಸಲ್ಲಿಸಿ ಗಾಂಧೀಜಿ ಸಮಾಧಿಗೆ ನಮಿಸಿದರು. ಬಳಿಕ ವಿಸಿಟರ್ ನಲ್ಲಿ ಶಾಂತಿಗಾಗಿ ಮಹಾತ್ಮ ಗಾಂಧೀಜಿ ಹೊಸ ಸಂದೇಶ ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಆದರ್ಶಗಳು ಇಂದಿಗೂ ಜೀವಂತವಾಗಿವೆ. ಗಾಂಧೀಜಿ ಆದರ್ಶದಿಂದ ಭಾರತ ಮತ್ತು ರಷ್ಯಾ ಉತ್ತಮ ಸಂಬಂಧ ಹೊಂದಿದೆ. ಮಹಾತ್ಮ ಗಾಂಧೀಜಿ ಇಡೀ ವಿಶ್ವಕ್ಕೆ ಆದರ್ಶರಾಗಿದ್ದಾರೆ. ಇಡೀ ಜಗತ್ತು ಸಮಾನತೆ, ಗೌರವ ಅಹಿಂಸೆಯ ತತ್ವ ಬಯಸಿದೆ ಎಂದು ವಿಸಿಟರ್ ಪುಸ್ತಕದಲ್ಲಿ ಪುಟಿನ್ ಬರೆದಿದ್ದಾರೆ. ಇಂದು ರಷ್ಯಾ ಅಧ್ಯಕ್ಷ ಪುಟಿನ್ ಅವರು ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿ…














