Author: kannadanewsnow05

ಬೆಂಗಳೂರು : ವಿಜಾಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6  ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕ್ರಮ ಕೈಗೊಂಡಿದೆ. ಇದರ ಬೆನ್ನಲ್ಲೆ ಬಿಜೆಪಿ ಶಾಸಕರಾದಂತಹ ಶಿವರಾಂ ಹೆಬ್ಬಾರ್​​ ಹಾಗೂ ಎಸ್ ಟಿ ಸೋಮಶೇಖರ್ ಅವರಿಗೂ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಇದೀಗ ಶಾಸಕ ಶಿವರಾಮ್ ಹೆಬ್ಬಾರ್​​ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಶಾಕಿಂಗ್ ಗ್ ಹೇಳಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್‌ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಇನ್ನು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಕೊಲೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರಿಗೇ ಆಗಲಿ ಕೊಲೆ ಬೆದರಿಕೆ ಹಾಕಬಾರದು. ಹಿಂದುತ್ವದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅತಿ ವೇಗವಾಗಿ ತೆರಳುತ್ತಿದ್ದ ವಾಟರ್ ಟ್ಯಾಂಕ್ ಒಂದು, ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಬೆಂಗಳೂರಿನ ದೋಮ್ಮಸಂದ್ರ ಬಳಿ ನಡು ರಸ್ತೆಯಲ್ಲಿಯೇ ವಾಟರ್ ಟ್ಯಾಂಕ್ ಒಂದು ಪಲ್ಟಿಯಾಗಿದೆ. ತಕ್ಷಣ ಸಾರ್ವಜನಿಕರು ವಾಟರ್ ಟ್ಯಾಂಕರ್ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಾಲಕ ಸೇರಿದಂತೆ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದಲ್ಲಿ ಯಾವುದೇ ರೀತಿಯಾದ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ಜಾತಿಗಣತಿ ಬಿಡುಗಡೆ ಮಾಡಿದ ಕೊಡಲೇ ಸರ್ಕಾರ ಬೀಳುತ್ತದೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದರು. ವರದಿ ಬಿಡುಗಡೆ ಮಾಡಿದರೆ ನೂರಕ್ಕೆ ನೂರು ಸರ್ಕಾರ ಪತನ ಆಗಲಿದೆ ಎಂದು ತಿಳಿಸಿದರಿ. ಜಾತಿ ಗಣತಿ ಅವೈಜ್ಞಾನಿಕವಾಗಿದ್ದು. ಇವರು ಯಾರ ಮನೆಗೆ ಬಂದು ಜಾತಿ ಗಣತಿ ಮಾಡಿದ್ದಾರೆ? ರಾಜ್ಯದಲ್ಲಿ ಜಾತಿ ಜನಗಣತಿ ಪಾರದರ್ಶಕವಾಗಿ ಮಾಡಿಲ್ಲ. ಜಾತಿ ಗಣತಿ ವರದಿಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದೆ. ಮುಸ್ಲಿಮರಿಗೆ 4 ಪರ್ಸೆಂಟ್ ಇದ್ದ ಮೀಸಲಾತಿ 8 ಪರ್ಸೆಂಟ್ ಮಾಡುತ್ತಿದ್ದಾರೆ.ಬಹು ಸಂಖ್ಯಾತರಾದ ಅವರಿಗೆ ಮೀಸಲಾತಿ ಏಕೆ ಬೇಕು? ಎಂದು ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನ ಒಡೆಯುವ ಕೆಲಸ ಮಾಡಿದ್ದಾರೆ. ಅವರದ್ದೇ ಸರ್ಕಾರದಲ್ಲಿ ಹಲವರು ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್, ಡಿಕೆ ಶಿವಕುಮಾರ್ ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ಮರಿ ಸಚಿವ ಎಂಪಿ ರೇಣುಕಾಚಾರ್ಯ ತಿಳಿಸಿದರು.

Read More

ಬೆಂಗಳೂರು : ಇಂದು ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನ ವಿಧಾನಸೌಧ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಗೆ ವಾಹನ ಸವಾರರು ಪರದಾಟ ನಡೆಸಿದರು. ಬೆಂಗಳೂರಿನ ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತ, ಕಾರ್ಪೊರೇಷನ್, ಶಾಂತಿನಗರ, ರಿಚ್ಮಂಡ್ ಟೌನ್, ಜಯನಗರ, ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದೇ ವೇಳೆ ವಿಧಾನಸೌಧದ ಬಳಿ ಪೆಂಡಾಲ್ ಕೆಳಗೆ ಜನರು ಆಶ್ರಯ ಪಡೆದರು. ಇಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಪೆಂಡಾಲ್ ಹಾಕಲಾಗಿತ್ತು. ಆ ಒಂದು ಪೆಂಡಾಲ್ ಆಶ್ರಯ ಪಡೆದರು.

Read More

ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಈ ಒಂದು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ಸ್ ಅವರ ಮೃತಪಟ್ಟಿದ್ದರೆ, ಬೈಕ್ ನಿಂದ ಹಾರಿ ಸೇತುವೆಯ ಕೆಳಗೆ ಬಿದ್ದಿರುವ ಮಹಿಳೆ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬನ್ನೂರು ಸೇತುವೆ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿ ಡಿಕ್ಕಿಯ ರಭಸಕ್ಕೆ ಬೈಕ್ ನಿಂದ  ಹಾರಿ ಸೇತುವೆಯಿಂದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಬನ್ನೂರು ಸೇತುವೆಯಿಂದ ಕೆಳಗೆ ಬಿದ್ದ ಮಹಿಳೆಗಾಗಿ ಇದೀಗ ಹುಡುಕಾಟ ನಡೆಸಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೃತ ಬೈಕ್ ಸವಾರನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡು ರಾತ್ರಿ ಯುವತಿಯರಿಬ್ಬರರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದು ಯುವಕನೊಬ್ಬ ಯುವತಿಯನ್ನು ಗೋಡೆಗೆ ಒರಗಿಸಿ ಖಾಸಗಿ ಅಂಗ ಸ್ಪರ್ಶಿಸಿ, ಲೈಂಗಿಕ ಕಿರುಕುಳ ನೀಡಿ ಓಡಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಸುದ್ದಗುಂಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಪೊಲೀಸರು ಈತನನ್ನು ಕೇರಳದಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಸಂತೋಷ್ ಎಂಬಾತನನ್ನು ಬಂಧನ ಮಾಡಲಾಗಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಈತ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯ ನಿವಾಸಿಯಾಗಿದ್ದು, ವೈಟ್‌ಫೀಲ್ಡ್ ವ್ಯಾಪ್ತಿಯ ಕಾರು ಶೋರೂಮ್‌ವೊಂದರಲ್ಲಿ ಕಾರು ಚಾಲಕನಾಗಿದ್ದ. ಘಟನೆ ಹಿನ್ನೆಲೆ? ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ, ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ…

Read More

ಹೈದ್ರಾಬಾದ್ : ಹೈದ್ರಾಬಾದ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಅದರಲ್ಲೂ ಐಪಿಎಲ್ ಫ್ರಾಂಚೈಸಿ ತಂಡವಾದ ಸನ್ ರೈಸರ್ಸ್ ಹೈದರಾಬಾದ್ ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ತಂಡದ ಎಲ್ಲಾ ಆಟಗಾರರು ಸೇಫ್ ಆಗಿದ್ದಾರೆ ಎಂದು ವರದಿಯಾಗಿದೆ. ಹೌದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಈ ಘಟನೆ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಸನ್ ರೈಸರ್ಸ್ ಹೈದರಾಬಾದ್ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್ 14, ಇಂದು ಹೈದರಾಬಾದ್ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಪ್ರಸ್ತುತ ಹೋಟೆಲ್‌ನಲ್ಲಿ ತಂಗಿದೆ. ಎಲ್ಲಾ ಆಟಗಾರರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ. https://twitter.com/Orangearmyforvr/status/1911699096131477582?t=3AkCYV-w44dRMOIlhEodLw&s=19

Read More

ಧಾರವಾಡ : ಅತ್ಯಾಚಾರ ಪ್ರಕಾರಣಗಳಲ್ಲಿ ಕಠಿಣ ಶಿಕ್ಷೆ ಆದರೆ ಇಂತಹ ಘಟನೆ ಕಡಿಮೆಯಾಗುತ್ತವೆ ಈ ಸಂಬಂಧ ನ್ಯಾಯಾಂಗದಲ್ಲಿ ಬದಲಾವಣೆ ಬರಬೇಕು.ಅತ್ಯಾಚಾರ ಪ್ರಕರಣಗಳಲ್ಲಿ ಆದಷ್ಟು ಬೇಗ ಶಿಕ್ಷೆ ಆಗಬೇಕು ಎಂದು ನಿವೃತ್ತ ನ್ಯಾ.ಸಂತೋಷ ಹೆಗಡೆ ಅವರು ತಿಳಿಸಿದರು. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಗ ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತೆ ಎಂಬ ಭಾವನೆ ಬರುತ್ತದೆ ಇಂತಹ ಪ್ರಕರಣಗಳಲ್ಲಿ ಗಂಭೀರತೆಯನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಜನರಲ್ಲಿ ಎಲ್ಲೆಡೆ ಆಗುತ್ತೆ ಬಿಡಿ ಎಂಬ ಭಾವನೆ ಇದೆ. ಎನ್ಕೌಂಟರ್ ಮಾಡೋದು ಶಿಕ್ಷೆ ರೀತಿ ಅಲ್ಲ ಎಂದು ತಿಳಿಸಿದರು. ಅತ್ಯಾಚಾರ ಆರೋಪ ಸಾಬೀತಾದಾಗ ಶೀಘ್ರವೇ ಶಿಕ್ಷೆಯಾಗಬೇಕು ಗಂಭೀರವಾದ ಶಿಕ್ಷೆ ಕೊಟ್ಟರೆ ಸಮಾಜಕ್ಕೆ ಸಂದೇಶ ಹೋಗುತ್ತದೆ ಇಂಥ ತಪ್ಪು ಮಾಡಿದರೆ ಬೇಗ ಶಿಕ್ಷೆಯಾಗುತ್ತದೆ ಎಂಬ ಭಾವನೆ ಜನರಲ್ಲಿ ಬರುತ್ತದೆ ಎಂದು ಸಂತೋಷ್ ಹೆಗಡೆ ತಿಳಿಸಿದರು.

Read More

ವಿಜಯಪುರ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿತರಾಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅಷ್ಟು ಸುಲಭವಾದದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಗೆ ನನ್ನನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲು ಷಡ್ಯಂತ್ರ ಮಾಡಿದ್ದರೊ, ಅದೇ ರೀತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಅಷ್ಟು ಸುಲಭವಾಗಿ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಇದೀಗ ಬ್ಯಾಟಿಂಗ್ ಬೀಸಿದ್ದಾರೆ.

Read More

ಹುಬ್ಬಳ್ಳಿ : ಇಂದು ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಹಾರ ಮೂಲದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ. ಸರ್ಕಾರದ ಪರಿಹಾರದ ಬಗ್ಗೆ ಸಲೀಂ ಅಹಮದ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ…

Read More