Author: kannadanewsnow05

ಮೈಸೂರು : ಮೈಸೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು ಪೂಜೆ ಮಾಡುವ ವೇಳೆ ಕುಸಿದು ಬಿದ್ದು ಅರ್ಚಕರು ಒಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ತಡರಾತ್ರಿ ನಡೆದಿದೆ. ಪೂಜೆ ವೇಳೆ ಶ್ರೀಕಂಠೇಶ್ವರ ದೇವಾಲಯದ ಸಹಾಯಕ ಶಂಕರ ಉಪಾಧ್ಯಾಯ (55) ಮೃತರು ಎಂದು ತಿಳಿದು ಬಂದಿದೆ. ಅರ್ಚಕ ಕುಸಿದು ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಂಧಕಾಸುರ ವಧೆ ಪೂಜೆ ಸಮಯದಲ್ಲಿ ಕುಸಿದು ಬಿದ್ದು ಅರ್ಚಕ ಸಾವನಪ್ಪಿದ್ದಾರೆ. ಪ್ರತಿ ವರ್ಷ ನಂಜನಗೂಡಿನಲ್ಲಿ ಅಂಧಕಾಸುರ ವಧೆ ನಡೆಯುತ್ತದೆ. ಈ ವೇಳೆ ಅರ್ಚಕ ಉಪಾಧ್ಯಾಯ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಿನ್ನೆ ರಾತ್ರಿ ದೇವಾಲಯದ ಮುಂದೆ ಪ್ರತಿ ವರ್ಷ ನಡೆಯುವ ಸಂಪ್ರದಾಯದಂತೆ ಅಂಧಕಾಸುರನ ವಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಿತ್ತು. ನೆಲದ ಮೇಲೆ ರಂಗೋಲಿಯಲ್ಲಿ ಬಿಡಿಸಲಾಗಿದ್ದ ಅಂಧಕಾಸುರನ ಭಾವಚಿತ್ರದ ಮೇಲೆ ಪಲ್ಲಕ್ಕಿಯಲ್ಲಿ ವಿರಾಜಮಾನನಾದ ಶ್ರೀಕಂಠೇಶ್ವರನ ಉತ್ಸವಮೂರ್ತಿಯನ್ನು ಹೊತ್ತ ಅರ್ಚಕರ ತಂಡ ಎಂದಿನ ಆಚರಣೆಯಂತೆ…

Read More

ಮೈಸೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು ಪೂಜೆ ಮಾಡುವ ವೇಳೆ ಕುಸಿದು ಬಿದ್ದು ಅರ್ಚಕರು ಒಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ತಡರಾತ್ರಿ ನಡೆದಿದೆ. ಪೂಜೆ ವೇಳೆ ಅರ್ಚಕ ಉಪಾಧ್ಯಾಯ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಅರ್ಚಕ ಕುಸಿದು ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಂಧಕಾಸುರ ವಧೆ ಪೂಜೆ ಸಮಯದಲ್ಲಿ ಕುಸಿದು ಬಿದ್ದು ಅರ್ಚಕ ಸಾವನಪ್ಪಿದ್ದಾರೆ. ಪ್ರತಿ ವರ್ಷ ನಂಜನಗೂಡಿನಲ್ಲಿ ಅಂಧಕಾಸುರ ವಧೆ ನಡೆಯುತ್ತದೆ. ಈ ವೇಳೆ ಅರ್ಚಕ ಉಪಾಧ್ಯಾಯ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ.

Read More

ಮಂಡ್ಯ : ಮಂಡ್ಯ ಜಿಲ್ಲೆಯ ಅಗಸರ ಹಳ್ಳಿ ಬಳಿ,ಉಚಿತವಾಗಿ ಎಣ್ಣೆ ಕೊಡದಿದ್ದಕ್ಕೆ ಪುಂಡರು ಬಾರ್ ಗೆ ಬೆಂಕಿ ಇಟ್ಟಿರುವ ಘಟನೆ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ಪರಮೇಶ್ ಎಂಬವರಿಗೆ ಸೇರಿದ ಈಗಲ್ ಬಾರ್ ಮತ್ತು ರೆಸ್ಟೋರೆಂಟ್ ಗೆ ಪುಂಡರು ಬೆಂಕಿ ಇಟ್ಟಿದ್ದಾರೆ. ಮುರುಕನಹಳ್ಳಿಯ ರಕ್ಷಿತ ಹಾಗೂ ಆತನ ಸ್ನೇಹಿತರಿಂದ ಬಾರ್ ನಲ್ಲಿ ಗಲಾಟೆ ಮಾಡಿದ್ದಾರೆ. ಉಚಿತವಾಗಿ ಮದ್ಯ ಕೊಡಬೇಕು ಎಂದು ರಕ್ಷಿತ್ ಮತ್ತು ಆತನ ಸ್ನೇಹಿತರು ಬೇಡಿಕೆ ಇಟ್ಟಿದ್ದರು. ಈ ವೇಳೆ ಮದ್ಯ ಕೊಡದಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಬಳಿಕ ಬಾರ್ ಹಾಗೂ ಮಾಲೀಕ ಪರಮೇಶ್ ಕಾರಿಗೆ ಬೆಂಕಿ ಹಾಕಿ ಗಲಾಟೆ ಮಾಡಿದ್ದಾರೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೆಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹುಬ್ಬಳ್ಳಿ ನಗರದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಒಂದು ವಾರದಲ್ಲಿ ಪರಿಚಯಸ್ಥ ಮೂವರು ಬಾಲಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕಳೆದ ವಾರ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ನೊಂದ ಬಾಲಕಿ ಮತ್ತು ಆಕೆಯ ತಾಯಿ ದೂರು ನೀಡಿದ್ದು ಮೂವರು ಅಪ್ರಾಪ್ತ ಬಾಲಕರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ಯಾಚಾರದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. ಬಾಲಕರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬಳ್ಳಾರಿಯಲ್ಲಿ ಗಲಾಟೆ ಹಾಗು ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ SP ಪವನ್ ನಜ್ಜುರ್ ಸಸ್ಪೆಂಡ್ ಆಗಿದ್ದರು. ಇದರಿಂದ ನೊಂದ ಅವರು ತುಮಕೂರಲ್ಲಿ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಾಸಿದ್ದರು ಎಂದು ಹೇಳಲಾಗಿತ್ತು. ಇದೀಗ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್‌ ಆತ್ಮಹತ್ಯೆಗೆ ಯತ್ನಿಸಿದ್ದ ವರದಿ ಸುಳ್ಳು ಎಂದಿದ್ದಾರೆ.ಸರ್ಕಾರ ಅಮಾನುತು ಆದೇಶ ಪ್ರಕಟಿಸಿದ ಬಳಿಕ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್‌ ನಿಜ್ಜೂರ್‌ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ (ಜ.2) ರಾತ್ರಿ ಅಮಾನತು ಮಾಡಿ ಆದೇಶ ಪ್ರಕಟಿಸಿತ್ತು. ರಾತ್ರಿ…

Read More

ತುಮಕೂರು : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್ ಮಾಡಲಾಗಿತ್ತು ಇದೀಗ ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೌದು ಸಸ್ಪೆಂಡ್ ಆಗಿದ್ದ ಎಸ್ಪಿ ಪವನ್ ನಜ್ಜುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ ತುಮಕೂರು ಜಿಲ್ಲೆಯ ಶಿರದ ಬರಗೂರಿನ ಫಾರ್ಮರ್ಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಪವನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Read More

ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳ ಸರಣಿ ಮುಂದುವರಿದಿದ್ದು, ಕಳೆದ ಕೆಲವು ದಿನಗಳ ಹಿಂದೆ ಇಬ್ಬರು ಹಿಂದೂಗಳ ಹತ್ಯೆ ಬೆನ್ನಲ್ಲೆ, ಕಿಡಿಗೇಡಿಗಳ ದಾಳಿಯಿಂದ ಪವಾಡ ಸದೃಶವಾಗಿ ಪಾರಾಗಿ ಜೀವ ಉಳಿಸಿಕೊಂಡಿದ್ದ ಉದ್ಯಮಿ ಕೊಂಕನ್ ಚಂದ್ರ (50) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಇದೀಗ ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕೇಔರ್‌ಬಂಗಾ ಪ್ರದೇಶದಲ್ಲಿ ಮೆಡಿಕಲ್‌ ಶಾಪ್‌ ಮುಚ್ಚಿ ಬುಧವಾರ (ಡಿ.31) ರಾತ್ರಿ 9 ಗಂಟೆ ಸುಮಾರಿಗೆ ಮನೆ ಕಡೆ ಬರುತ್ತಿದ್ದ ಕೊಂಕನ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದರು. ಹಲವು ಬಾರಿ ಹೊಟ್ಟೆಗೆ ಇರಿದು, ಪೆಟ್ರೋಲ್‌ಹಾಕಿ ಬೆಂಕಿ ಹಚ್ಚಿದ್ದರು. ದೃಷ್ಟವಶಾತ್ ಪಕ್ಕದಲ್ಲೇ ಇದ್ದ ನೀರಿದ್ದ ಕೆರೆಗೆ ಜಿಗಿದು ಕೊಂಕನ್ ಪ್ರಾಣ ಉಳಿಸಿಕೊಂಡಿದ್ದರು. ನಂತರ ಕೆಲ ಸ್ಥಳೀಯರು ರಕ್ಷಿಸಿ ಢಾಕಾ ಮಡಿಕಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಕೊಂಕನ್ ಚಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಬಾಂಗ್ಲಾ ಮಾಧ್ಯಮಗಳು ವರದಿ ಮಾಡಿವೆ.

Read More

ಬಳ್ಳಾರಿ : ಬ್ಯಾನರ್​ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್​ ರೆಡ್ಡಿ ಅವರ ಆಪ್ತರಾದ ಸತೀಶ್​ ರೆಡ್ಡಿ, ಚಾನಾಳ ಶೇಖರ್, ಲೋಕೇಶ್​ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ. ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಸಂಬಂಧ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ 40 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಗಲಾಟೆ ನಡೆದ ವಿಡಿಯೋ ಆಧರಿಸಿ ವಶಕ್ಕೆ ಪಡೆದುಕೊಂಡಿದ್ದು, ಎರಡು ಕಡೆಯ ಒಟ್ಟು 40 ಜನರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಗುಂಡು ಹಾರಿಸಿದರು. ಗನ್ ಮ್ಯಾನ್ ಗಳು ಐದು ಗನ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ ಸತೀಶ ರೆಡ್ಡಿ ಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಲಕನ ನಿರ್ಲಕ್ಷದಿಂದ ಬಸ್ ಹರಿದು, ಸ್ವಲ್ಪದರಲ್ಲೇ 13 ವರ್ಷದ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇದೀಗ ವರದಿಯಾಗಿದೆ. ಶಾಲಾ ಬಾಲಕಿ ಸೈಕಲ್ ಮೇಲೆ ತೆರಳುವಾಗ ಖಾಸಗಿ ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿದೆ. ಸಾವಿನ ಮನೆ ಕದ ತಟ್ಟಿ ವಾಪಸ್ ಬಂದ 13 ವರ್ಷದ ಬಾಲಕಿ, ಬೆಳಗಾವಿ ಜಿಲ್ಲೆಯ ಗೋಕಾಕ್ನ ಮಲ್ಲಾಪುರ ಪಿಜಿ ಬಳಿ ಇ ಒಂದು ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಗುದ್ದಿದ ಬಳಿಕ ಬಾಲಕಿ ಬಸ್ ಕೆಳಗೆ ಇದ್ದಾಳೆ ಆದರೆ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More