Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ಮೇಘರಾಜ್ (31) ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದು ರಾಜರಾಜೇಶ್ವರಿ ನಗರದಲ್ಲಿರುವ 1522 ಪಬ್ನಲ್ಲಿ ಈ ಒಂದು ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದಲ್ಲಿರುವ ಪಬ್ ಗೆ ಮೂರು ಸ್ನೇಹಿತರ ಜೊತೆಗೆ ಮೇಘರಾಜ್ ಹೋಗಿದ್ದ. ರಾತ್ರಿಯೆಲ್ಲರೂ ಕುಡಿದು ಪಾರ್ಟಿ ಮಾಡಿ ಊಟ ಮಾಡಿದ್ದರು. ಮನೆಗೆ ಹೋಗುವಾಗ ಎಲ್ಲರೂ ಬಂದಿದ್ದರು ತುಂಬಾ ಹೊತ್ತಾದರೂ ಮೇಘರಾಜ್ ಹೊರಬಾರದ ಹಿನ್ನೆಲೆಯಲ್ಲಿ, ಬಾತ್ರೂಮ್ಗೆ ಹೋಗಿ ಪರಿಶೀಲಿಸಿದಾಗ ಮೇಘರಾಜ ಶವವಾಗಿ ಪತ್ತೆಯಾಗಿದ್ದಾನೆ. ಆರ್ ಆರ್ ನಗರ ಠಾಣೆ ಪೋಲೀಸರಿಂದ ತನಿಖೆ ಮುಂದುವರೆದಿದೆ.
ಬೆಂಗಳೂರು : ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಪಿ ಶ್ರೀನಾಥ್ ಜೋಶಿಗೆ ಮತ್ತೊಂದು ಶಾಕ್ ಎದುರಾಗಿದ್ದು, ತನಿಖೆಯ ವೇಳೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ದೃಢಪಟ್ಟಿದೆ. ಲೋಕಾಯುಕ್ತ ಅಧಿಕಾರಿಗಳು ಈ ಕುರಿತು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇಲಾಖೆಯ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿ ಎಸ್ಪಿ ಶ್ರೀನಾಥ್ ಜೋಶಿ ಹಣವನ್ನು ವಸೂಲಿ ಮಾಡುತ್ತಿದ್ದರು. ಬಳಿಕ ಹಣವಸೂಲಿ ಮಾಡಿದ್ದು ಅಲ್ಲದೆ ಪಡೆದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಮಾಡಿದ್ದಾರೆ. ತನಿಖೆ ಮಾಹಿತಿ ಪತ್ರದಲ್ಲಿ ಲೋಕಾಯುಕ್ತ ADGP ಉಲ್ಲೇಖಿಸಿದ್ದಾರೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಸೈಟ್ಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಕೋಟಿ ಕೋಟಿ ಮೌಲ್ಯದ ಮುಟ್ಟುಗೋಲು ಹಾಕಿಕೊಂಡಿದ್ದು, ಇಡಿ ಪಡೆದಿರುವ ಸೈಟ್ಗಳ ದಾಖಲೆ ಇದೀಗ ಬೆಚ್ಚಿ ಬೀಳಿಸುತ್ತೆ. ಸುಮಾರು 59ಕ್ಕೂ ಹೆಚ್ಚು ಸೈಟ್ಗಳನ್ನು ಇಡಿ ತಂಡ ವಶಕ್ಕೆ ಪಡೆದುಕೊಂಡಿದೆ. 60 ಕೋಟಿ ಮೌಲ್ಯದ ಸೈಟ್ ಗಳನ್ನ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದೆ. ಕಾಂಗ್ರೆಸ್ ಮುಖಂಡ ಪಾಪಣ್ಣ ಅವರಿಂದ 31 ಸೈಟ್, ಮೈಸೂರಿನ ವಿಜಯನಗರದ 4ನೇ ಹಂತದಲ್ಲಿರುವ ಸೈಟ್ 59 ಸೈಟ್ ಗಳನ್ನ ಮುಟ್ಟುಗೊಲು ಹಾಕಿಕೊಂಡಿದೆ. ಅಲ್ಲದೆ ಮನೆ ಕೆಲಸದವನ ಹೆಸರಿನಲ್ಲೂ ಕೂಡ ಕೋಟಿ ಕೋಟಿ ಆಸ್ತಿ ಮಾಡಿದ್ದ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ, ಅತ್ತೆ, ಮಾವ ಬಾಮೈದ ಹೆಸರಿನಲ್ಲಿ ಕೂಡ ಕೋಟಿ ಕೋಟಿ ಆಸ್ತಿ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಮುಡಾ ಮಾಜಿ ಅಧ್ಯಕ್ಷ ಮರಿಗೌಡಗು ಕೂಡ ಸೈಟ್ ಗಳು ಮಂಜೂರಾಗಿವೆ. ಈ ಕುರಿತು ಕೋರ್ಟಿಗೆ ಇಡಿ ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮುಟ್ಟಗ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಮೂರ್ತಿಯನ್ನು ಕಿಡಿಗೇಡಿಗಳು ಭಗನಗೊಳಿಸಿರುವ ಘಟನೆ ವರದಿಯಾಗಿದೆ ಕಲೆನಿಂದ ಮೂರ್ತಿಯ ಕೈ ಕಟ್ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಮುತ್ತಗಿ ಗ್ರಾಮದಲ್ಲಿ ಸದ್ಯಕ್ಕೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಭಧ್ರತೆ ಕೈಗೊಂಡಿದ್ದಾರೆ. ಘಟನೆ ಕುರಿತಂತೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅಂಬಿಗರ ಚೌಡಯ್ಯ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಜೊತೆಗೆ ಆಟೋ ಚಾಲಕ ಕಿರಿಕ್ ಮಾಡಿಕೊಂಡಿದ್ದಾನೆ. ಯುವತಿಯ ಆಮೇಲೆ ಆಟೋ ಚಾಲಕ ಹಲ್ಲಿಗೆ ಯತ್ನಿಸಿದ್ದಾನೆ ಅವಾಚ್ಯ ಶಬ್ದಗಳಿಂದ ಯುವತಿಯನ್ನು ಆಟೋ ಚಾಲಕ ನಿಂದಿಸಿರುವ ಘಟನೆ ವರದಿಯಾಗಿದೆ. ಯುವತಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು ಕೂಡ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಪದೇಪದೇ ಹಲ್ಲೆ ಮಾಡಿದ್ದಾನೆ. ಉಬರ್ ಆಟೋ ಚಾಲಕ ಈ ಒಂದು ಕೃತ್ಯ ಎಸಗಿದ್ದು, ಅಕ್ಟೋಬರ್ 2ರಂದು ನಡೆದಂತಹ ಘಟನೆ ತಡವಾಗಿ ಬಳಕೆಗೆ ಬಂದಿದೆ ಅಕ್ಟೋಬರ್ 2ರ ಸಂಜೆ 7.30 ರ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಅವಾಚ್ಯವಾಗಿ ನಿಂದಿಸಿ ಯುವತಿಯ ಮೇಲೆ ಹಲ್ಲೆಗೂ ಆಟೋ ಚಾಲಕ ಮುಂದಾಗಿದ್ದಾನೆ. 2 ಆಪ್ ನಲ್ಲಿ ಯುವತಿ ಆಟೋ ಬುಕ್ ಮಾಡಿದ್ದಾಳೆ. ಪಿಕಪ್ ಮಾಡಲು ಎರಡು ಆಟೋಗಳು ಒಟ್ಟಿಗೆ ಬಂದಿವೆ ಈ ಪೈಕಿ ಒಂದು ಆಟೋ ಮಾತ್ರ ಆಯ್ಕೆ ಮಾಡಿದ್ದಳು . ಇದರಿಂದ ರೊಚ್ಚಿಗೆದ್ದ ಚಾಲಕ ಯುವತಿಗೆ ಅವಾಚ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ವಿಡಿಯೋ ಮಾಡಿ ಇನ್ಸ್ಟಾಗ್ರಾಮ್ ಗೆ…
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ. ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ. ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ದಾವಣಗೆರೆ : ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಬಸ್ ಘಟಕವನ್ನು ಉದ್ಘಾಟನೆ ಮಾಡಿ ಮಾತನಾಡಿದ ಸಚಿವರು 4 ಎಕರೆ ಜಮೀನಿನಲ್ಲಿ 8 ಕೋಟಿ ರೂ ವೆಚ್ಚದಲ್ಲಿ ಚನ್ನಗಿರಿ ತಾಲೂಕು ಬಸ್ ಘಟಕ ನಿರ್ಮಾಣ ಮಾಡಲಾಗಿದ್ದು, ಈಗಾಗಲೇ ಸಿಬ್ಬಂದಿ ಮತ್ತು ಬಸ್ಸುಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ ಬೇಡಿಕೆ ಈಡೇರಿದ್ದು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಮಾನ್ಯ ಶಾಸಕ ಶ್ರೀ.ಬಸವರಾಜ ವಿ. ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆ ಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ ಎಂದು ತಿಳಿಸಿದ ಶಾಸಕರು, ಸಾರಿಗೆ ಸಚಿವರು ಶೀಘ್ರದಲ್ಲಿಯೇ ಅನುಮತಿ ನೀಡುವುದಾಗಿ ತಿಳಿಸಿದರು. ಅದೇ ರೀತಿ…
ಮೈಸೂರು : ಮೈಸೂರಿನಲ್ಲಿ ಅತ್ಯಾಚಾರ ಎಸಗಿ 9 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಒಂದರ ಹಿಂದೆ ಒಂದು ಕೊಲೆಯಾಗುತ್ತಿದೆ ಮೈಸೂರಿನಲ್ಲಿ ಏನಾಗಿದೆ? ಮೈಲಾರಿ ದೋಸೆ ತಿನ್ನಲು ಅಷ್ಟೇ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರದ ಯಾರೊಬ್ಬರೂ ಸಹ ಯಾಕೆ ಧ್ವನಿ ಎತ್ತಿಲ್ಲ? ರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್ ರಷ್ಯಾ ಯುದ್ಧದ ಬಗ್ಗೆ ಕಮೆಂಟ್ ಮಾಡುತ್ತಾರೆ. ಕಾಂಗ್ರೆಸ್ ಅವರು ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೋಲೆ ಪ್ರಕರಣದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಪ್ರಿಯಾಂಕ್ ಖರ್ಗೆ ಸಂತೋಷ ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರ? ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತು ಏಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ನೀವು ಸಿಎಂ ಆಗಿದ್ದೀರಾ? ಪೊಲೀಸರಿಗೆ ದಕ್ಷತೆ ಇದೆ ಕೆಲಸ ಮಾಡಲು…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು 5 ಲಕ್ಷ ಹಣ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಖಾನಾಪುರ ತಾಲೂಕಿನ ನಂದಗಡದ ಅಶ್ವಿನಿ ಪಾಟೀಲ್ ಎನ್ನುವ ಅಂಗನವಾಡಿ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ನಿವಾಸಿ ಎಂದು ತಿಳಿದುಬಂದಿದೆ. ಅಂಗನವಾಡಿ ಶಿಕ್ಷಕಿ ಅಶ್ವಿನಿ ಜೊತೆಗೆ ಶಂಕರ್ ಪಾಟೀಲ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಆತನಿಗೆ 5 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅಶ್ವಿನಿ ಗೌಡ ಬಳಿ 5 ಲಕ್ಷ ರೂಪಾಯಿ ಶಂಕರಗೌಡ ಪಾಟೀಲ್ ಸಾಲ ಪಡೆದಿದ್ದ. ಆದರೆ ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಕೋಪಗೊಂಡಿದ್ದ ಶಂಕರ್ ಪಾಟೀಲ್ ಜಾತ್ರೆಗೆ ಅಂತ ಕರೆದುಕೊಂಡು ಹೋಗಿ ಅಶ್ವಿನಿ ಪಾಟೀಲ್ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಶಂಕರ್ ಪಾಟೀಲ್ ಅನ್ನು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 2 ರಂದು ಹತ್ಯೆಗೈದು ನಾಟಕ ಮಾಡಿದ್ದ. ಕಕ್ಕೇರಿ ಬಿಷ್ಟಾದೇವಿ ಜಾತ್ರೆಗೆ ಅಕ್ಟೋಬರ್ 2ರಂದು ಅಶ್ವಿನಿ ತೆರಳಿದ್ದರು. ಜಾತ್ರೆಗೆ ಹೋಗಿ ಮನೆಗೆ ಅಶ್ವಿನಿ…
ರೇಣುಕಾ ಸ್ವಾಮಿ ಕೊಲೆ ಕೇಸ್ : ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ಸಿಗುತ್ತಾ? : ಕೋರ್ಟ್ ನಿಂದ ಇಂದು ಆದೇಶ ಪ್ರಕಟ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆದರೆ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಖುದ್ದು ಪರಿಶೀಲ ನಡೆಸುವಂತೆ ಮನವಿ ಮಾಡಿದ್ದರು.ವಾದ ಪ್ರತಿವಾದ ಆಲಿಸಿದ ಬಳಿಕ ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಕಾಯ್ದಿರಿಸಿತ್ತು ಇದೀಗ ಎಂದು ಆದೇಶ ಪ್ರಕಟಸಲಿದೆ ಈ ಅರ್ಜಿ ಕುರಿತು ನೆನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಸಿಕ್ಯೂಶನ್ ವಾದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಡ್ಜ್ ಕುರಿತು ಪರಿಶೀಲಿಸಿದರೆ ಪ್ರಾಜೆಕ್ಯೂಷನ್ಗೆ ಭಯ ಏಕೆ? ಸವಲತ್ತು ನೀಡಿದೆಯೋ ಇಲ್ಲವೋ ಎಂದು ಕೋರ್ಟ್ ಪರಿಶೀಲಿಸಬೇಕು ಎಂದು ದರ್ಶನ್ ಪರವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲೇಖಿಸಿ ವಾದಿಸಿದರು. ಅರ್ಜಿಗೆ ಎಸ್ ಪಿ ಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು ಅರ್ಜಿ ಊರ್ಜಿತವಲ್ಲ ಎಂದು ಪರಿಗಣಿಸಿ ವಜಾಗೊಳಿಸಲು ಪ್ರಸನ್ನ ಕುಮಾರ್ ಮನವಿ ಮಾಡಿದರು. ಅಪರಾಧ…














