Author: kannadanewsnow05

ಬೆಳಗಾವಿ : ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನ ರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿ ಯಾದ ಗುಯಿಲಿನ್ ಬರೆ ಸಿಂಡೋಮ್ (GBS)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 64 ವರ್ಷದ ವೃದ್ದರೊಬ್ಬರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶನಿವಾರ ಈ ವೈರಸ್ ನಿಂದ ಸಾವಿಗೀಡಾಗಿದ್ದಾರೆ. ದೋನೆವಾಡಿ ಗ್ರಾಮದ ಯೆತಿಲ್ ಬಾಳಗೊಂಡ ಪಾಟೀಲ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.ಇದು ಈ ಕಾಯಿಲೆಗೆ ರಾಜ್ಯದವರು ಬಲಿಯಾದ ಮೊದಲ ಪ್ರಕರಣ. ಇದರೊಂದಿಗೆ ಕರ್ನಾಟಕ ಅಕ್ಕಪಕ್ಕದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿ ನಲ್ಲಿ ಈಗಾಗಲೇ ಈ ವ್ಯಾಧಿ ಕಾಣಿಸಿಕೊಂಡಿದೆ. ಇದು ಸಾಂಕ್ರಾಮಿಕ ಅಲ್ಲ, ಭಾರೀ ಪ್ರಮಾಣ ದಲ್ಲಿ ಮಾರಣಾಂತಿಕವೂ ಅಲ್ಲವಾದರೂ, ಸೊಂಕಿಗೆ ನಿಖರ ಕಾರಣ ಏನೆಂಬುದು ಇದು ವರೆಗೂ ಖಚಿತವಾಗದ ಹಿನ್ನೆಲೆ ವಿವಿಧ ರಾಜ್ಯ ಗಳಲಿ ಈ ಕುರಿತು ಆತಂಕ ಉಂಟಾಗಿದೆ.ಈಗಾಗಲೇ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಹಾಗೂ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳು ಜಿಬಿಎಸ್ ವೈರಸ್ ನಿಂದ…

Read More

ಕೊಡಗು : ಮದುವೆ ಆಗಿಲ್ಲ ಎಂದು ಮನನೊಂದಿದ್ದೆ ವ್ಯಕ್ತಿ ಒಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೊಯಿಕೇರಿ ಗ್ರಾಮದಲ್ಲಿ ಈ ಒಂದು ಆಘಾತಕಾರಿ ಘಟನೆ ನಡೆದಿದೆ. ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೋಯಿಕೆರಿ ಗ್ರಾಮದಲ್ಲಿ ದಿಲೀಪ್ (40) ಎನ್ನುವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಿಲೀಪ್ ಮದುವೆ ಆಗಿಲ್ಲ ಎಂದು ತೀವ್ರವಾಗಿ ಮನನೊಂದಿದ್ದರು ಎಂಬ ಮಾಹಿತಿ ಬಂದಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ನಿವೃತ್ತ ನೌಕರರೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ 10 ಲಕ್ಷ ರು. ಕಳೆದುಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಜಿಲ್ಲೆಯ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಕೆಬಿಜೆಎನ್ಎಲ್ ನಿವೃತ್ತ ನೌಕರರೊಬ್ಬರು ಡಿಜಿಟಲ್ ಸ್ಕ್ಯಾಮ್ ಗೆ ಒಳಗಾಗಿದ್ದಾರೆ. ಈ ಮೂಲಕ ಯಾದಗಿರಿ ಜಿಲ್ಲೆಯಲ್ಲಿ ಡಿಜಿಟಲ್ ಅರೆಸ್ಟ್‌ ಕುರಿತು ಮೊದಲ ಪ್ರಕರಣ ದಾಖಲಾದಂತಾಗಿದೆ. ಏನಿದು ಪ್ರಕರಣ…? ಜನವರಿ 26 ರಂದು ಕಲಬುರಗಿಯಲ್ಲಿ ತಮ್ಮ ಸಹೋದರಿಯ ಮನೆಯಲ್ಲಿದ್ದಾಗ ಮಧ್ಯಾಹ್ನ ಸುಮಾರು 12:30 ಗಂಟೆಗೆ ಅಪಚಿತ ವ್ಯಕ್ತಿಯಿಂದ ವಿಡಿಯೊ ಕಾಲ್ ಕರೆ ಬಂದಿದೆ. ಹಿಂದಿ ಭಾಷೆಯಲ್ಲಿ ಮಾತನಾಡಿ ನಾವು ಮುಂಬೈ ಕ್ರೈಂ ಬ್ರಾಂಚ್‌ನ ಆಫೀಸ‌ರ್ ಎಂದು ಪರಿಚಯಿಸಿಕೊಂಡಿದ್ದಾರೆ. ನಿಮ್ಮ ಮೇಲೆ ಮನಿ ಲಾಂಡರಿಂಗ್ ಪ್ರಕರಣ ದಾಖಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗಳು ಮನಿ ಲಾಂಡರಿಂಗ್‌ಗೆ ಬಳಕೆ ಆಗುತ್ತಿದೆ. ಎಫ್‌ಐಆರ್ ದಾಖಲಾಗಿದೆ ಎಂದು ಸುಳ್ಳು. ಹೇಳಿ ಭಯ ಹುಟ್ಟಿಸಿದ್ದಾರೆ. ಮುಖ್ಯ ಆರೋಪಿ ನರೇಶ್ ಗೋಯಲ್‌ನೊಂದಿಗೆ ನೀವೂ ಕೃತ್ಯದಲ್ಲಿ ಭಾಗಿಯಾಗಿರುವ ಸಂಶಯವಿದೆ ಎಂದು…

Read More

ಚಿಕ್ಕಮಗಳೂರು : ರೈತರೊಬ್ಬರ ಬಳಿ ಜಮೀನಿನೊಂದರ ಹಳೇ ನಕ್ಷೆ ಸರಿಯಿಲ್ಲದ್ದರಿಂದ ಹೊಸ ನಕ್ಷೆ ತಯಾರಿಸಲು 4 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಪರವಾನಗಿ ಪಡೆದ ಸರ್ವೆಯರ್ ಹಾಗೂ ಜಿಪಂ ಕೆಡಿಪಿ ನಾಮನಿರ್ದೇಶಿತ ಸದಸ್ಯ ಅಶೋಕ್ ಅವರನ್ನು ಖಚಿತ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಲ್ಲೆಹಳ್ಳಿ ವೆಂಕಟೇಶ್ ಎಂಬವರು ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಹೌದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲ್ಲೆ ಹಳ್ಳಿ ಗ್ರಾಮದ ವೆಂಕಟೇಶ್ ಜಮೀನಿನೊಂದರ ಹಳೇ ನಕ್ಷೆ ಸರಿಯಿಲ್ಲದ್ದರಿಂದ ಹೊಸ ನಕ್ಷೆ ತಯಾರಿಸಲು ಕಡೂರು ಎಡಿಎಲ್‍ಆರ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಜಮೀನಿನ ಸರ್ವೆ ಮಾಡುವ ಸಮಯದಲ್ಲಿ ಅಶೋಕ್ ಅವರು ವೆಂಕಟೇಶ್ ಅವರ ಸಹೋದರನಿಂದ 1200 ಪಡೆದು ಕಡತ ತಯಾರಿಸಲು 5 ಸಾವಿರಕ್ಕೆ ಬೇಡಿಕೆಯಿಟ್ಟಿದ್ದರು. ಕಡೆಗೆ 4 ಸಾವಿರ ನೀಡಲು ಪೋನ್ ಮಾಡಿಲು ಒತ್ತಾಯಿಸಿದ್ದರು ಎನ್ನಲಾಗಿದೆ. ಅದರಂತೆ ಸೋಮವಾರ ಸಂಜೆ ಅಶೋಕ್ ಅವರು 4 ಸಾವಿರ ರೂಪಾಯಿಗಳನ್ನು ಸರ್ವೆ ಇಲಾಖೆ ಕಚೇರಿಯಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶೀಘ್ರದಲ್ಲಿ 3 ತಿಂಗಳ ಹಣ ಫಾಲಾನುಭವಿಗಳ ಖಾತೆಗೆ ಹಾಕುತ್ತೆವೆ ಎಂದು ಭರವಸೆ ನೀಡಿದರು. ಈ ಕುರಿತು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ.ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹ ಪ್ರತಿಕ್ರಿಯಿಸಿದ್ದು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ…

Read More

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತವಾಗಿದ್ದು, ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಮೂಲದ ವಸಂತ್ (30) ಮತ್ತು ಚೇತನ್ (39) ಎಂದು ತಿಳಿದುಬಂದಿದೆ. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ‌ ವೇಳೆ ಮುಂದೆ ಹೋಗ್ತಿದ್ದ ವಾಹನ, ಒವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬರ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ‌ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣದ ಟಿಕೆಟ್ ದರ ಹಾಗೂ ಪೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇದರ ಮಧ್ಯ, ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಬಜೆಟ್ ನಂತರ ಮತ್ತೆ ಪ್ರತಿ ಲೀಟರ್ ಹಾಲಿನ ದರವನ್ನು 5 ರೂಗೆ ಹೆಚ್ಚಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಹೌದು ಹಾಲಿನ ದರವನ್ನು ಅಗಸ್ಟ್ 2023ರಲ್ಲಿ 2 ರು. ಹೆಚ್ಚಿಸಿ, ಲೀಟ‌ರ್ಗೆ 43 ರು.ಗೆ ಹೆಚ್ಚಿಸಲಾಯಿತು. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2ರು.ಹೆಚ್ಚಿಸಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ದರವನ್ನು ಪ್ರತಿ ಲೀಟರ್ ಗೆ 5 ರೂ. ಏರಿಕೆ ಮಾಡಲು ಒತ್ತಡವಿದೆ. ಹೀಗಾಗಿ ದರ ಏರಿಸುವಂತೆ ಕೆಎಂಎಫ್ ಸರ್ಕಾರಕ್ಕೆ ಕಳೆದ ವರ್ಷವೇ ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆ ಕುರಿತು ಕಳೆದ ತಿಂಗಳು ರಾಜ್ಯದ ಎಲ್ಲಾ…

Read More

ಮಹಾರಾಷ್ಟ್ರ : ಈಗಾಗಲೇ ಹಲವು ರಾಜ್ಯಗಳಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಯಲು ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದೀಗ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.ಈ ಮೂಲಕ ಲವ್ ಜಿಹಾದ್ ವಿರುದ್ಧ ಮಹಾರಾಷ್ಟ್ರ ಸಮರ ಸಾರಿದೆ. ಹೌದು ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ತಡೆಗೆ ಕಾನೂನು ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ಇದೀಗ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರ ರಚಿಸಿದ ಸಮಿತಿಯಲ್ಲಿ, ಮಹಾರಾಷ್ಟ್ರದ ಡಿಜಿಪಿ ಜೊತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ ಮತ್ತು ವಿಶೇಷ ಸಹಾಯ ಇಲಾಖೆಯ ಕಾರ್ಯದರ್ಶಿಗಳು ಮತ್ತು ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೂಡ ಇದ್ದಾರೆ. ಈ ಸಂಬಂಧ…

Read More

ಚಿಕ್ಕಮಗಳೂರು : ನಿನ್ನೆ ರಾತ್ರಿ ಚಿಕ್ಕಮಂಗಳೂರಿನಲ್ಲಿ ಕಿಡಿಗೇಡಿಗಳು ಘೋಷಣೆ ಕೂಗಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಮನೆಯ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಹಾಕಿರುವ ಘಟನೆ ನಡೆದಿದೆ. ಹೌದು ಚಿಕ್ಕಮಗಳೂರಿನ ಮಹೇಶ್ ಎಂಬುವರ ಮನೆ ಮೇಲೆ ತಡರಾತ್ರಿ ಕಲ್ಲು ತೂರಲಾಗಿದೆ. ಕಲ್ಲು ತೂರಾಟ ನಡೆಸಿ, ಘೋಷಣೆ ಕೂಗಿ ಯುವಕರು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮನೆ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಸವನಹಳ್ಳಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ರಾತ್ರಿ ಮನೆಯ ಮೇಲೆ ಕಲ್ಲು ಎಸೆದಿದ್ದು ಮನೆಯ ಕಿಟಕಿಯ ಗಾಜು ಒಡೆದಿದ್ದಾರೆ. ಮನೆ ಮೇಲೆ ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಈ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪತ್ತೆಹಚ್ಚಲಾಗುತ್ತದೆ ಎಂದು ಚಿಕ್ಕಮಂಗಳೂರು ಎಸ್ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಇನ್ನು ಬಾಡಿಗೆದಾರ ಉಮೇಶ್ ಎನ್ನುವವರು ಮಾತನಾಡಿ,ರಾತ್ರಿ 10 ರಿಂದ 12 ಗಂಟೆಗೆ ಕಲ್ಲು ಎಸೆದಿದ್ದಾರೆ. ನಾನು ಮನೆಯಿಂದ ಹೊರಗಡೆ…

Read More

ತೆಲಂಗಾಣ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತು ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹುಟ್ಟಿನಿಂದ ಹಿಂದುಳಿದ ವರ್ಗದವರು ಅಲ್ಲ ಆದರೂ ಮೋದಿ ತಾವು ಓಬಿಸಿ ವರ್ಗದವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿವಾದಿತ ಹೇಳಿಕೆ ನೀಡಿದರು. ಮೋದಿ ಸಿಎಂ ಆಗುವ ಮುನ್ನ ಉನ್ನತ ಜಾತಿಯವರಾಗಿದ್ದರು. ವಾಸ್ತವಿಕವಾಗಿ ಪ್ರಧಾನಿ ನರೇಂದ್ರ ಮೋದಿ ಓಬಿಸಿ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಪರಿವರ್ತಿತ ಹಿಂದುಳಿದ ವರ್ಗದವರಾಗಿದ್ದಾರೆ. ಹುಟ್ಟಿನಿಂದಲೇ ನರೇಂದ್ರ ಮೋದಿ ಉನ್ನತ ಜಾತಿಗೆ ಸೇರಿದವರಾಗಿದ್ದಾರೆ.ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಉನ್ನತ ಜಾತಿಯಲ್ಲಿದ್ದವರು. 2001ರಲ್ಲಿ ಸಿಎಂ ಆದ ಬಳಿಕ ಅವರ ಜಾತಿಯನ್ನು ಒಬಿಸಿಗೆ ಸೇರಿಸಿದರು ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

Read More