Author: kannadanewsnow05

ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಇಂದು ನಸುಕಿನ ಜಾವ ವಸತಿ ಶಾಲೆಯಲ್ಲಿ 6 ವರ್ಷದ ಬಾಲಕ ಸಜೀವ ದಹನ ಆಗಿರುವ ಘಟನೆ ನಡೆದಿದ್ದು ಇನ್ನು ಶಾಲೆಯ ಇಬ್ಬರು ಬಾಲಕರು 51 ಮಕ್ಕಳನ್ನ ರಕ್ಷಣೆ ಮಾಡಿದ್ದಾರೆ. ಜೀವದ ಹಂಗು ತೊರೆದು ಬಾಲಕರು ರಕ್ಷಣೆ ಮಾಡಿದ್ದಾರೆ 10 ವರ್ಷದ ಬಬಿನ್ ಮತ್ತು 11 ವರ್ಷದ ಯಶ್ವಿನ್ ಸಾಹಸಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ. ಮಡಿಕೇರಿಯಲ್ಲಿರುವ ಹರಿಮಂದಿರ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ ಈ ಒಂದು ಘಟನೆ ಸಂಭವಿಸಿದ್ದು, 2ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಪುಷ್ಪಕ್ ಈ ಒಂದು ಘಟನೆಯಲ್ಲಿ ಸಾವನಪ್ಪಿದ್ದಾನೆ. ಹರಿ ಮಂದಿರದ ವಸತಿ ಶಾಲೆಯಲ್ಲಿ ಬೆಳಗಿನ ಜಾವ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು 4:15 ರ ಸುಮಾರಿಗೆ ಹೊಗೆಯಿಂದ ಬಬೀನ್ ಗೆ ಎಚ್ಚರವಾಗಿದೆ. ಬೆಂಕಿ ಬಿದ್ದ ವಿಚಾರ ಅರಿತು ಆತ ಯಶ್ವಿನ್ ಗೆ ಕರೆದಿದ್ದಾನೆ. ಆಗ ಎಲ್ಲ ಮಕ್ಕಳನ್ನು ಕಿರುಚಿ ಇಬ್ಬರು ಬಾಲಕರು ಎಬ್ಬಿಸಿದ್ದಾರೆ. ಬೆಂಕಿಯಿಂದಾಗಿ ಬಾಲಕರು ಬಾಗಿಲಿನತ್ತ ಓಡುವ…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು. ಇದೀಗ ನ್ಯಾ. ಎಂ. ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ತಮ್ಮ ತಪ್ಪನ್ನು ವಿಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಒಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅವಳು ನನ್ನ ಮೊಮ್ಮಗಳು ಇದ್ದಂತೆ ಚೆಕ್ ಮಾಡಿದೆ ಅಂತ ಹೇಳಿದ್ದಾರೆ. ಹಳೆಯ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಕೊಡಿಸುವಂತೆ ಬಂದಿದ್ದರು ಮಹಿಳೆ ತನ್ನ ಮಗಳ ಬಗ್ಗೆ ಬೇಕಿದ್ದರೆ ಚೆಕ್ ಮಾಡಿಕೊಳ್ಳಿ ಎನ್ನುತ್ತಿದ್ದರು. ಅದನ್ನೇ ಚೆಕ್ ಮಾಡಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯವನ್ನು ಒಪ್ಪಿಕೊಂಡಿಲ್ಲವೆಂದು ಸಿವಿ ನಾಗೇಶ್ ವಾದ ಮಂಡಿಸಿದರು. ಈ ವೇಳೆ ಪ್ರಾಜಿಕ್ಯೂಷನ್ ಪರವಾಗಿ ವಾದ ಮಂಡನೆಗೆ 15 ನಿಮಿಷ ಸಾಕು ಪ್ರೊ. ರವಿವರ್ಮ ಕುಮಾರ್ ಮನವಿ ಮಾಡಿದ್ದು, ಈ ವೇಳೆ ಯಡಿಯೂರಪ್ಪ ಅರ್ಜಿ ವಿಚಾರಣೆ ಹೈಕೋರ್ಟ್ ನಾಳೆ ಮುಂದೂಡಿತು.

Read More

ಕೊಪ್ಪಳ : ಕಿರ್ಲೋಸ್ಕರ್ ಕಾರ್ಖಾನೆಯ ಮೇಲಾಧಿಕಾರಿಗಳ ನಿಂದನೆ ಹಿನ್ನೆಲೆಯಲ್ಲಿ ಕೆಮಿಕಲ್ ಸೇವಿಸಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ತಾಲೂಕಿನ ಗಿಣಿಗೇರ ಬಳಿಯ ಕಿರ್ಲೊಸ್ಕರ್ ಕಾರ್ಖಾನೆಯಲ್ಲಿ ನಡೆದಿದೆ. ಬಸವರಾಜ ಅಡಗಿ ಆತ್ಮಹತ್ಯೆಗೆ ಎಬ್ಬಿಸಿದ ಸಹಾಯಕ ಇಂಜಿನಿಯರ್ ಎಂದು ತಿಳಿದುಬಂದಿದೆ ನಿನ್ನೆ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಷೀನ್ ಸಮಸ್ಯೆ ಆಗಿತ್ತು ಬಸವರಾಜ ಕೆಲಸ ಮಾಡುವ ವೇಳೆ ಬಸವರಾಜ್ ಅವರನ್ನು ಬೈದಿದ್ದಾರೆ ನೀನು ಸರಿಯಾಗಿ ಕೆಲಸ ಮಾಡಿಲ್ಲವೆಂದು ಬೈದಿದ್ದಾರೆ ಇದರಿಂದ ಮಾನವೊಂದು ಕೆಮಿಕಲ್ ಸೇವಿಸಿ ಬಸವರಾಜ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ರಸ್ತೆಯಲ್ಲಿಯೇ ಮಾರಕಾಯಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ರಾಜ್ಯ ಸರ್ಕಾರ ಇದೀಗ ಅರ್ಜಿ ಸಲ್ಲಿಸಿದೆ. ಈ ವೇಳೆ ಭೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಪೊಲೀಸರು ಕೋಕಾ ಕಾಯಿದೆ ಹಾಕಿದ್ದಾರೆ. ಸಂಘಟಿತ ಅಪರಾಧಕ್ಕೆ ಮಾತ್ರ ಕೋಕ ಕಾಯ್ದೆ ಹಾಕಬಹುದು. ಕೋಕ ಕಾಯಿದೆಯ ಅಡಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲ. ಮಧ್ಯಂತರ ರಕ್ಷಣೆ ತೆರೆವುಗೊಳಿಸಿದರೆ ನಿರೀಕ್ಷಣ ಜಾಮೀನಿಗೂ ಅವಕಾಶ ಇಲ್ಲ. ರಾಜಕೀಯ ದ್ವೇಷದಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ವತಂತ್ರ ನಿಖಾ ಸಂಸ್ಥೆಯಿಂದ ತನಿಖೆ ಕೋರಲು ಚಿಂತಿಸುತ್ತಿದ್ದೇವೆ. ಹೀಗಾಗಿ ಮಧ್ಯಂತರ ರಕ್ಷಣೆ ತೆರವುಗೊಳಿಸಿದಂತೆ ಮನವಿ ಮಾಡಿದರು. ಭೈರತಿ ಬಸವರಾಜ್ ಪರ ವಕೀಲರ ವಾದಕೆ ಎಸ್ ಪಿ ಪಿ ಬಿ ಎನ್…

Read More

ಬೆಂಗಳೂರು : ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ SBI ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ. ಸದ್ಯಕ್ಕೆ 9 ಕೆಜಿ ಚಿನ್ನ 86.31 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಡಚಣ SBI ಬ್ಯಾಂಕ್ ದರೋಡೆಗೆ ಆರೋಪಗಳಿಗೆ ನೇರವಾಗಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ರಾಕೇಶ್ ಕುಮಾರ್ ಸಹಾನಿ (22) ರಾಜಕುಮಾರ ಪಾಸ್ವನ್ (21) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಡ್ಯ : ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲ ರಾಕೇಶ್ ಕಿಶೋರ್ ಹಾಗೂ ಭಾಸ್ಕರ್ ರಾವ್ ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಅವಕಾಶ ವಂಚಿತ ಸಮುದಾಯಗಳ ವೇದಿಕೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಸಿದ್ದು, ಭಾತರದ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ ಎಂದು ರಾಕೇಶ್ ಕಿಶೋರ್ ಹಾಗೂ ಭಾಸ್ಕರ್ ರಾವ್ ಗಲ್ಲಿಗೇರಿಸಲು ಒತ್ತಾಯಿಸಲಾಯಿತು. ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಖಂಡನೀಯ. ಇಂತಹ ಘಟನೆ ನಡೆಯಬಾರದಿತ್ತು. ಈ ರೀತಿಯ ಕೃತ್ಯದಲ್ಲಿ ಭಾಗಿಯಾದ ವಕೀಲನ ಮೇಲೆ ಕಾನೂನು ಕ್ರಮ ಆಗಬೇಕು. ಕಾನೂನು ಮೂಲಕ ಕಠಿಣ ಕ್ರಮ ಕೈಗೊಂಡು ಗಲ್ಲಿಗೇರಿಸಲು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವೆಂಕಟಗಿರಿಯ್ಯಯ್ಯ, ಗಂಗರಾಜು, ದೊಡ್ಡಯ್ಯ, ಬಾಲರಾಜು, ಸಂದೇಶ್, ಲವ, ಹರೀಶ್, ತಾಳಶಾಸನ್ ಮೋಹನ್ ಸೇರಿ ಹಲವರು ಭಾಗಿಯಾಗಿದ್ದರು.

Read More

ಕೋಲಾರ : ಕೋಲಾರದಲ್ಲಿ ಎಂದಿನಂತೆ ಜನರು ತಮ್ಮ ನಿತ್ಯ ಕಾರ್ಯಗಳಲ್ಲಿ ತೊಡಗಿದರು ಈ ವೇಳೆ ಏಕಾಏಕಿ ಭಯಾನಕ ಶಬ್ದವನ್ನು ಕೇಳಿದ್ದರಿಂದ ಮನೆಯಲ್ಲಿದ್ದವರು ಮನೆಯಿಂದ ಹೊರಗಡೆ ಓಡಿ ಬಂದಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಟೇಕಲ್ ಸುತ್ತಮುತ್ತ ಭಯಾನಕ ಶಬ್ದ ಕೇಳಿದ ಅನುಭವ ಆಗಿದ್ದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಈ ಒಂದು ಭಯಾನಕ ಶಬ್ದ ಕೇಳಿ ಬಂದಿದೆ ಶಬ್ದ ಕೇಳುತ್ತಿದ್ದಂತೆ ಜನರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.ಈ ವೇಳೆ ಆಕಾಶದಲ್ಲಿ ಜೆಟ್ ವಿಮಾನ ಕಂಡು ಬಂದಿದೆ. ಜೆಟ್ ವಿಮಾನದ ಶಬ್ದವಾ? ಯಾವುದಾದರೂ ಸ್ಫೋಟ ಸಂಭವಿಸಿದೆ ಎಂಬ ಆತಂಕ ಹುಟ್ಟಿಕೊಂಡಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಸಾರ್ವಜನಿಕರು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರು ಮುತ್ತೈದೆಯರ ಜೊತೆಗೆ ಪೂಜಾ ಸಾಮಗ್ರಿಗಳನ್ನು ತಂದಿದ್ದಾರೆ. ಅರ್ಚಕರಿಂದ ಪೂಜೆ ನೆರವೇರಿಸಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಈ ವೇಳೆ ಆಡಿ ಚುಂಚನಗಿರಿ ಮಠದ. ಪೀಠಾಧ್ಯಕ್ಷ ನಿರ್ಮಲಾನಂದನಾಥ್ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ ಎಸ್.ಪಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಅಕ್ಟೊಬರ್ 23 ವೆರೆಗೆ ಹಾಸನಾಂಬೆ ದೇವಿ ಜಾತ್ರೆ ನಡೆಯಲಿದೆ. ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿ.

Read More

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ CM ಬದಲಾವಣೆ ಕುರಿತು ಯಾವುದೇ ಸಚಿವರು ಶಾಸಕರು ಮಾತನಾಡಬಾರದು ಇನು ಖಡಕ್ ಎಚ್ಚರಿಕೆ ನೀಡಿದ್ದರು ಸಹ ಇದೀಗ ಇಕ್ಬಾಲ್ ಹುಸೇನ್ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ CM ಆಗ್ತಾರೆ ಅನ್ನೋದು ನನ್ನ ಅಭಿಲಾಷೆ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಸ್ಪಷ್ಟ ಅಭಿಪ್ರಾಯವನ್ನು ಹೈ ಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಕಾಂಗ್ರೆಸ್ ಶಿಸ್ತಿನ ಪಕ್ಷ ಹೈ ಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರು ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅನಿಸಿಕೆ, ಅಭಿಲಾಷೆಯನ್ನ ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಹಿಂದೆ ಕೂಡ ಹೇಳಿದ್ದೆ, ಈಗಲೂ ಹೇಳುತ್ತೇನೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಕೊಪ್ಪಳದಲ್ಲಿ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರು.

Read More