Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದೇ ತುರ್ತು ವಿಚಾರಣೆ ಮಾಡುವಂತೆ ಅರ್ಜಿದಾರರ ಪರವಾಗಿ ವಕೀಲರು ಮನವಿ ಮಾಡಿದ್ದಾರೆ ಹಾಗಾಗಿ ಮಧ್ಯಾಹ್ನ 2:30 ನಂತರ ಹೈಕೋರ್ಟ್ ಅಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಈ ಒಂದು ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಇಂದು ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸಿದೆ. ಇನ್ನು ಅರ್ಜಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲಿ…
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರ ಹಾಕಿದ್ದು, ನಿಯಮ ಉಲ್ಲಂಘನೆ ನೆಪದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದಾರೆ. ಹಾಗಾದರೆ ನಿಮ್ಮ ಸರಕಾರದ ಆರಂಭಿಸಿ% ಕಮಿಷನ್ ದಂತೆಗೆ ನೀವು ಯಾವಾಗ ಬೇಗ ಹಾಕಿಸುತ್ತೀರಾ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಅವರ ಹಾಕಿದೆ. ಟ್ವೀಟ್ ನಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸ್ತೀರಿ? ರಸ್ತೆಗುಂಡಿ ಯಾವಾಗ ಬಂದ್ ಮಾಡಿಸುತ್ತೀರಿ ಸಿಎಂ, ಡಿಸಿಎಂ ಅವರೇ, ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಿ? ಲೂಟಿ ಹೊಡೆಯುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಸರ್ಕಾರದ 60% ಕಮಿಷನ್ ದಂದೇ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಪುಡಾರಿಗಳು ನಡೆಸುತ್ತಿರುವ…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಊಟಕ್ಕೆ ಎಂದು ಮನೆಗೆ ಕರೆಸಿ, ವಿದ್ಯಾರ್ಥಿನಿಗೆ ಕಾಲೇಜು ಎಚ್ಒಡಿ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ವರದಿಯಾಗಿದೆ. ನಿನಗೆ ಫುಲ್ ಮಾರ್ಕ್ಸ್ ಕೊಡುತ್ತೇನೆ ನಾನು ಹೇಳಿದಂತೆ ಕೇಳು ನನಗೆ ಸಹಕರಿಸು ಎಂದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ತಿಲಕ್ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ, ಆರೋಪಿ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊಡ್ಡಿ ಉಪನ್ಯಾಸಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ವಿದ್ಯಾರ್ಥಿನಿಯನ್ನು ಅಕ್ಟೋಬರ್ 2 ರಂದು ತನ್ನ ಮನೆಗೆ ಕರೆಸಿಕೊಂಡಿದ್ದಾರೆ. ತನ್ನ ಕುಟುಂಬದೊಂದಿಗೆ ಜತೆಯಾಗಿ ಊಟ ಮಾಡೋಣ ಎಂದು ವಿದ್ಯಾರ್ಥಿನಿಯನ್ನು ಕರೆಸಿಕೊಂಡಿದ್ದಾರೆ.…
ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ಅರ್ಜಿ ಸಲ್ಲಿಸಲಿದ್ದಾರೆ. ಇಂದೇ ತುರ್ತು ವಿಚಾರಣೆಗೆ ಮನವಿ ಸಲ್ಲಿಕೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆ ಸಾದ್ಯತೆ ಇದೆ ಎನ್ನಲಾಗಿದೆ. ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಈ ಒಂದು ಕ್ರಮವನ್ನು ಪ್ರಶ್ನೆಸಿ ಹೈಕೋರ್ಟ್ ಗೆ ಇಂದು ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಬೆಂಗಳೂರು : ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹೌಸ್ಗೆ ಇದೀಗ ಸಂಕಷ್ಟ ಎದುರಾಗಿದ್ದು, ಕೆಲವೇ ಹೊತ್ತಿನಲ್ಲಿ ಬಿಗ್ ಬಾಸ್ ಹೌಸ್ ಗೆ ಬೀಗ ಮುದ್ರೆ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗಮುದ್ರೆ ಬೀಳಲಿದೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದ ಅಧಿಕಾರಿಗಳು ಸ್ಟುಡಿಯೋಸ್ ಬಳಿ ದೌಡಾಯಿಸುತ್ತಿದ್ದು, ವೇಲ್ಸ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಬಿಗಮುದ್ರೆ ಬೀಳಲಿದೆ ಎನ್ನಲಾಗುತ್ತಿದೆ. ಹೌದು ಬಿಗ್ ಬಾಸ್ ಹೊಸ ವಿಡಿಯೋದಿಂದ ಬೀಗ ಮುದ್ರೆ ಬೀಳಲಿದೆ. ಬಿಗ್ ಬಾಸ್ ಬಂದ್ ಮಾಡುವಂತೆ ನಿನ್ನೆ ನೋಟಿಸ್ ನೀಡಿದ್ದರು. ಆದರೆ ನೋಟಿಸ್ ಪಡೆಯಲು ಜಾಲಿವುಡ್ ವೀಡಿಯೋಸ್ ಹಿಂದಿಟು ಹಾಕಿದೆ. ಹಾಗಾಗಿ ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಪೊಲೀಸರು ಆಗಮಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬಿಗ್ ಬಾಸ್ ಮನೆಗೆ ಬೀಗ ಜಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಅಧಿಕಾರಿಗಳು ಸದ್ಯಕ್ಕೆ ಜಾಲಿವುಡ್ ಸ್ಟುಡಿಯೋಸ್ ಬಳಿ ಆಗಮಿಸುತ್ತಿದ್ದು ಈ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋಗೆ ಅನುಮತಿ ಪಡೆದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ನೀಡಿದ್ದು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದ ಶೋ ನಡೆಸಬೇಕು. ಹೊರಗೆ ಶೂಟಿಂಗ್ ವೇಳೆ ಇಲಾಖೆಯಿಂದ NOC ಪಡೆಯಬೇಕು. ಆದರೆ ಒಳಾಂಗಣ ಶೋ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪರವಾನಿಗೆ ಪಡೆದಿಲ್ಲ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಕಾನೂನು ವ್ಯವಸ್ಥೆಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಒಳಾಂಗಣದಲ್ಲಿ ಗೇಮ್ಸ್ ಆಡಿಸುವ ಬಗ್ಗೆ NOC ಪಡೆದಿಲ್ಲ ಏನಾದರೂ ಅವಘಡ ಆದರೆ ಸಂಬಂಧಪಟ್ಟವರೆ ವಿರುದ್ಧ ಕ್ರಮ ಆಗುತ್ತದೆ ಎಂದು ರಾಮನಗರದಲ್ಲಿ ಎಸ್ಪಿ ಶ್ರೀನಿವಾಸ್ ಗೌಡ ಪ್ರತಿಕ್ರಿಯಿಸಿದರು.
ಹಾಸನ : ಅಕ್ಟೋಬರ್ 9ರಿಂದ ಹಾಸನಾಂಬೆ ಉತ್ಸವ ಆರಂಭವಾಗಲಿದೆ ಅಕ್ಟೋಬರ್ 15ರಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಕಳೆದ ವರ್ಷ 20 ಲಕ್ಷ ಭಕ್ತರು ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ಈ ವರ್ಷ 25 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ ಎಂದು ಹಾಸನದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು. ಹಾಸನ ಜಿಲ್ಲಾ ಆಡಳಿತದಿಂದ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿನಿತ್ಯ ಒಂದರಿಂದ ಒಂದುವರೆ ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ವಿಐಪಿ ಗಳಿಗೆ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ವಿಐಪಿ ಗಳು ಬಂದಾಗ ಸಾಮಾನ್ಯ ಭಕ್ತರ ದರ್ಶನಕ್ಕೆ ಅಡ್ಡಿ ಆಗುವುದಿಲ್ಲ. ಜಾನಪದ ಜಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮ, ಫಲ ಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ, ಟೂರಿಸಂ ಮೇಳ ಹೀಗೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ವಿಶೇಷ ಚೇತನರು 80 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ…
ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರು ದಾಖಲಾಗಿದ್ದಾರೆ. ಹೌದು ಇಂದು ಎಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡು ಬಂದಿತ್ತು. ತಕ್ಷಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಚಿಕಿತ್ಸೆಯ ಬಳಿಕ ಎಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಸಹೋದರರು ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಪಟ್ಟಣ ಸಮೀಪದ ಹಂಪಿನಕಟ್ಟೆ ಗ್ರಾಮದ ಕೂಲಿಕಾರ್ಮಿಕ ರಾಜಾಭಕ್ಷಿ (30) ಮತ್ತು ಅವರ ತಮ್ಮ ಬೀದರ್ ಜಿಲ್ಲೆ ಹುಮನಬಾದ್ನಲ್ಲಿ ಗ್ರಾಮ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದ ಬಾರಿ ಇಮಾಂ(26) ಮೃತರು. ಇಬ್ಬರೂ ಅವಿವಾಹಿತರು ಎನ್ನಲಾಗಿದ್ದು, ಭಾನುವಾರ ಮನೆಯಲ್ಲಿ ಗ್ಯಾರ್ವಿ ಹಬ್ಬ ಆಚರಿಸಿಕೊಂಡಿದ್ದರು. ಸೋಮವಾರ ಸಂಜೆ ಕುಟುಂಬದ ಇತರೆ ಏಳು ಜನ ಸದಸ್ಯರೊಂದಿಗೆ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರ ಪ್ರದೇಶಕ್ಕೆ ವನಭೋಜನಕ್ಕೆ ತೆರಳಿದ್ದರು. ಈಜು ಬಾರದ ಇಬ್ಬರು ನದಿಗೆ ಇಳಿದಿದ್ದಾಗ ಕಾಲು ಜಾರಿ ಬಿದ್ದು ಮುಳುಗಿದ್ದಾರೆ. ನಂತರ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರತೆಗೆದರು ಎಂದು ತಿಳಿದುಬಂದಿದೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳ್ಳದ ಕಾರಣದಿಂದ ಸಮೀಕ್ಷೆಯನ್ನು ಅಕ್ಟೋಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದ್ದು ಅಲ್ಲದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬ ರಜೆಯನ್ನು ಅಕ್ಬರ್ 18 ರವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇನ್ನೊಂದು ಕಡೆಗೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೆಗೆ ಬರುವಂತಿಲ್ಲ. ಬೆಂಗಳೂರಿನಲ್ಲಿ 6700 ಜನ ಟೀಚರ್ಸ್ ಸರ್ವೆಯಲ್ಲಿ ಭಾಗಿಯಾಗಿದ್ದು, ಒಟ್ಟು ಬೆಂಗಳೂರಿನಲ್ಲಿ 27 ಸಾವಿರ ಗಣಿತದಾರರು ಇದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳು ಇವೆ. ಹಾಗಾಗಿ ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೇಗೆ ಬರುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ರಜೆ ವಿಸ್ತರಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಖಾಸಗಿ ಶಾಲೆಗಳಿಗೆ ರಜೆ ವಿಸ್ತರಣೆ ಅನ್ವಯ…













